ಬೆಂಗಳೂರು
ಹಗರಣದಲ್ಲಿ ಸಿಎಂ ಭಾಗಿ, ಕಳಚಿದ ಸಿದ್ದರಾಮಯ್ಯ ಮುಖವಾಡ- ಅಶೋಕ್ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ್ದಕ್ಕೇ ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿದ್ದು ಈ ಮೂಲಕ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿಕೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನೇರವಾಗಿ ಆಪಾದನೆ ಮಾಡಿದರು,
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತ ಹಗರಣ ಬಿಟ್ಟು ಸಿಎಂ ಬೇರೆಲ್ಲಾ ವಿಷಯಗಳ ಬಗ್ಗೆ ಮಾತಾಡುತ್ತಾರೆ, ತಾವು ಹಗರಣಕ್ಕೆ ಸಂಬಂಧಿಸಿ 40 ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡಿಲ್ಲ, ಪ್ರಕರಣ ಮುಚ್ಚಿಹಾಕುವ ಪ್ರಯತ್ನ ರಾಜ್ಯ ಸರ್ಕಾರದ ಮಾಡುತ್ತಿದೆ, ಒಂದೆಡೆ ಹಗರಣ ಹೊಣೆಯನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು,
ಹಣ ಅಕ್ರಮ ವರ್ಗಾವಣೆಯಲ್ಲಿ ಸಚಿವರ ತಪ್ಪಿಲ್ಲ ಎಂದ ಮೇಲೆ ನಾಗೇಂದ್ರ ಅವರ ರಾಜೀನಾಮೆ ಯಾಕೆ ಕೊಡಬೇಕಾಯಿತು ಎಂದು ಪ್ರಶ್ನಿಸಿರುವ ಅಶೋಕ್, ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಲ ಶ್ರಮ ವಹಿಸಿದ್ದಾರೆ, ಆ ಹಣವನ್ನು ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು,
ಬಿಜೆಪಿ ಆಡಳಿತದ ಅವಧಿಯಲ್ಲಿ ಹಗರಣಗಳ ನಡೆದಿವೆ ಎನ್ನುವ ಸಿಎಂ ಅಧಿಕಾರಕ್ಕೆ ಕಾಂಗ್ರೆಸ್ ಬಂದು 15 ತಿಂಗಳು ಕಳೆದಿವೆ, ಅಂದು ನಮ್ಮ ಸರ್ಕಾರದ ವಿರುದ್ಧ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ಇನ್ನು ಇವರು ಮುಗಿಸಿಲ್ಲ ಎಂದು ವ್ಯಂಗ್ಯವಾಡಿದರು,