Connect with us

ಬಿಬಿಎಂಪಿ

ಸಿಲಿಕಾನ್ ಸಿಟಿ 5 ಭಾಗ; ವಿಧಾನಸಭೆಯಲ್ಲಿ ಇಂದು ವಿಧೇಯಕ ಮಂಡನೆ.. BBMP ರದ್ದಾಗುತ್ತಾ?

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಗ್ರೇಟರ್​ ಬೆಂಗಳೂರಾಗಿ ಬದಲಾಗಲು ಸಜ್ಜಾಗಿದೆ.. ಅದೆಷ್ಟೋ ಜನರಿಗೆ ಬದುಕು ಕಟ್ಟಿಕೊಟ್ಟ ಬೆಂದಕಾಳೂರಿಗೆ ಹೊಸ ರೂಪು ರೇಷೆ ನೀಡಲು ಸರ್ಕಾರ ಸಜ್ಜಾಗಿದೆ. ಇಂದು ವಿಧಾನಸಭೆಯಲ್ಲಿ ಗ್ರೇಟರ್​ ಬೆಂಗಳೂರು ಆಥಾರಿಟಿ ವಿಧೇಯಕ ಮಂಡಿಸೋ ಮೂಲಕ ಹೊಸ ಮನ್ವಂತರಕ್ಕೆ ಸರ್ಕಾರ ಭಾಷ್ಯ ಬರೆಯಲಿದೆ.

ಬೆಂದಕಾಳೂರು.. ನಾಡಪ್ರಭು ಕೆಂಪೇಗೌಡರು ಕಟ್ಟಿದ ಭವ್ಯ ನಗರ.. ಅದೆಷ್ಟೋ ಜನರಿಗೆ ಜೀವನ ಕಟ್ಟಿಕೊಟ್ಟ ದೇಗುಲ.. ತುತ್ತು ಅನ್ನ ಹೊತ್ತು ನಿದ್ರೆ ನೀಡಿ ತನ್ನ ಮಡಿಲಿನಲ್ಲಿ ಕೋಟ್ಯಾಂತರ ಜನರನ್ನ ಸಾಕಿ ಸಲಹುತ್ತಿರೋ ಪುಣ್ಯಭೂಮಿ.. ಇಂತದೊಂದು ಮಹಾನಗರ ಸದ್ಯ 5 ಜಿಲ್ಲೆಗಳಾಗಿ ವಿಭಜನೆಯಾಗೋ ಸಮಯ ಒದಗಿ ಬಂದಿದೆ. ಬೆಂಗಳೂರು ವಿಭಜಿಸುವ ವಿಧೇಯಕಕ್ಕೆ ಸಂಪುಟ ಅನುಮೋದನೆ

ಉದ್ಯಾನನಗರಿ ಬೆಂಗಳೂರನ್ನ 5 ಜಿಲ್ಲೆಗಳಾಗಿ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಂಗಳೂರನ್ನ 5 ವಿಭಾಗಗಳಾಗಿ ವಿಭಜಿಸುವ ವಿಧೇಯಕ ಇದಾಗಿದೆ. ಈ ಮೂಲಕ ಬೆಂಗಳೂರನ್ನು 5 ಜಿಲ್ಲೆಗಳಾಗಿ ವಿಭಜಿಸಿ, ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ನೀಡಲಾಗಿದೆ. ಇಂದು ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆಯಾಗಲಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ!

  • GBAಗೆ ಯೋಜನೆ & ಹಣಕಾಸು ಅಧಿಕಾರ ನಿರ್ವಹಣೆಯ ಅಧಿಕಾರ
  • ಸುಮಾರು‌1400 Sq ಕಿ.ಲೋ ಮೀಟರ್ GBA ವ್ಯಾಪ್ತಿಗೆ ಬರಲಿದೆ
  • 1-10 ಕಾರ್ಪೊರೇಷನ್​​ಗಳು 950 Sq ಕಿ.ಲೋ ಮೀಟರ್ ವ್ಯಾಪ್ತಿಗೆ
  • ಸದ್ಯ ಇರುವ 708 Sq ಕಿ.ಲೋ ಮೀಟರ್ ಬಿಬಿಎಂಪಿ ರದ್ದಾಗುತ್ತಾ?
  • ಕರಡು ಮಸೂದೆಯಲ್ಲಿ ಸುಮಾರು 400 ವಾರ್ಡ್​ಗಳ ರಚನೆಗೆ ಪ್ರಸ್ತಾಪ
  • ಬೃಹತ್ ಮೂಲಸೌಕರ್ಯ ಯೋಜನೆಗಳ ಕಾಮಗಾರಿ ಮಾತ್ರ ಬಿಡಿಎಗೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷ!

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ.

5-10 ಕಾರ್ಪೋರೇಷನ್ ಇರಲಿದ್ದು, ಒಂದೊಂದು ಕಾರ್ಪೋರೇಷನ್​ಗೆ ಒಬ್ಬ ಆಯುಕ್ತ ಇರಲಿದ್ದಾರೆ. ಜಲಮಂಡಳಿ, ಬಿಡಿಎ, ಬೆಸ್ಕಾಂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರಲಿದೆ. ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ, ಕೇಂದ್ರ ಸೇರಿದಂತೆ ಇನ್ನಷ್ಟು ಬಿಬಿಎಂಪಿ ಆಗಿ ವಿಂಗಡಣೆ ಮಾಡಲಾಗುತ್ತದೆ.

ಯಾವೆಲ್ಲ ಪ್ರದೇಶ ಗ್ರೇಟರ್​ಗೆ ಸೇರುತ್ತೆ?

ಇನ್ನೂ 5 ಜಿಲ್ಲೆಗಳಾಗಿ ವಿಭಜನೆಯಾಗುವ ಗ್ರೇಟರ್ ಬೆಂಗಳೂರು ಅಥಾರಿಟಿಗೆ ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ರಾಮನಗರ, ಕನಕಪುರ, ಆನೇಕಲ್, ಬೆಂಗಳೂರು ಗ್ರಾಮಾಂತರ ಪ್ರದೇಶಗಳು ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಬರಲಿದೆ.

ಸಿಲಿಕಾನ್​ ಸಿಟಿ ಬೆಂಗಳೂರು 5 ಜಿಲ್ಲೆಗಳಾಗಿ ಬೇರ್ಪಟ್ಟು ಗ್ರೇಟರ್​ ಬೆಂಗಳೂರು ಅಥಾರಿಟಿಗೆ ಒಳಪಡುವ ಮೂಲಕ ಮತ್ತಷ್ಟು ಗ್ರೇಟ್​ ಆಗಲು ಸಜ್ಜಾಗಿದೆ.. ಇಂದು ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆಯಾದ ಬಳಿಕ ಗ್ರೇಟರ್​ ಬೆಂಗಳೂರು ಅಥಾರಿಟಿಯ ರೂಪುರೇಷೆ ಸಿದ್ಧವಾಗಲಿದೆ

ಬಿಬಿಎಂಪಿ

ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್‌ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ

ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್‌ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.

ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.


🧹 ಬದಲಾವಣೆ ಉದ್ದೇಶ ಏನು?

  • ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
  • ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
  • ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.

🤝 ಸಾರ್ವಜನಿಕರ ಸಹಕಾರಕ್ಕೆ ಕರೆ:

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

ಬಿಬಿಎಂಪಿ

2025ರ ಅಂತ್ಯಕ್ಕೆ ಬಿಬಿಎಂಪಿ ಚುನಾವಣೆ ಸಾಧ್ಯತೆ: ಆರು ವರ್ಷದ ನಿರೀಕ್ಷೆಗೆ ತೆರೆ ಹಾಕಲು ಕಾಂಗ್ರೆಸ್ ಸಿದ್ಧತೆ

ಬೆಂಗಳೂರು, ಜುಲೈ 27 – ಬೆಂಗಳೂರಿನ ಬೃಹತ್ ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದೇ ಇರುವ ಸ್ಥಿತಿಗೆ ಕೊನೆಗೂ ತೆರೆ ಬೀಳುವ ಸೂಚನೆ ನೀಡಲಾಗಿದೆ. ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಹಾಗೂ ಹೊಸದಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.

ಸರ್ಕಾರದ ಶ್ರದ್ಧೆ ಹಾಗೂ ಕೋರ್ಟ್‌ನಲ್ಲಿ ಮುಂದುವರಿದಿರುವ ವಿಚಾರಣೆ:

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ಅವರ ಪರವಾಗಿ ವಕೀಲ ಡಿ.ಎಲ್. ಚಿದಾನಂದ ಪ್ರತಿನಿಧಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೂರ್ಯಕಾಂತ್ ಮತ್ತು ಜೋಯ್ ಮಾಲ್ಯ ಬಾಗ್ಚಿ ಅವರ ಪೀಠ ಸೋಮವಾರ ನಡೆಸಲಿದೆ.

ಚುನಾವಣೆಯ ಹಿನ್ನಲೆ – ಏಳು ವರ್ಷದ ವಿಳಂಬ:

  • ಬಿಬಿಎಂಪಿ ಸದಸ್ಯರ ಅವಧಿ 2019ರಲ್ಲೇ ಕೊನೆಗೊಂಡಿತ್ತು.
  • ಹೈಕೋರ್ಟ್ 6 ವಾರಗಳಲ್ಲಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದರೂ, ಸುಪ್ರೀಂ ಕೋರ್ಟ್ ಆ ಆದೇಶವನ್ನು ಅಮಾನತುಗೊಳಿಸಿತು.
  • 2023 ರಲ್ಲಿ ವಾರ್ಡ್ ಮರುರಚನೆ ನಡೆಸಿ ವಾರ್ಡ್‌ಗಳ ಸಂಖ್ಯೆ 198 ರಿಂದ 225 ಕ್ಕೆ ಹೆಚ್ಚಿಸಲಾಯಿತು.
  • ಈ ಮರುರಚನೆಯ ವಿರುದ್ಧ ಸಾರ್ವಜನಿಕ ಹಾಗೂ ಪ್ರತಿಪಕ್ಷಗಳಿಂದ ಗಂಭೀರ ವಿರೋಧ ವ್ಯಕ್ತವಾಯಿತು.
  • ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ ಮತ್ತು ಮುಂದಿನ ಆಯೋಜನೆ:
  • 2025 ರಲ್ಲಿ ಕಾಂಗ್ರೆಸ್ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ ಮಂಡಿಸಿದ್ದು, ಬೆಂಗಳೂರನ್ನು ಐದು ಹೊಸ ನಗರ ಪಾಲಿಕೆಗಳಾಗಿ ವಿಭಜಿಸಿ “ಗ್ರೇಟರ್ ಬೆಂಗಳೂರು” ಎಂದು ಹೆಸರಿಸಲಾಗಿದೆ. ಈ ಹೊಸ ಪಾಲಿಕೆಗಳಿಗೆ ಸಂಬಂಧಿಸಿದ ವಾರ್ಡ್‌ಗಳ ಗಡಿ ಹಾಗೂ ರೂಪರೇಖೆಯ ಕರಡು ಅಧಿಸೂಚನೆ ಹೊರಬಿದ್ದಿದ್ದು, ನವೆಂಬರ್ 2024 ವೇಳೆಗೆ ಅಂತಿಮ ಅಧಿಸೂಚನೆ ಹೊರಬರುವ ಸಾಧ್ಯತೆ ಇದೆ.
  • ರಾಜಕೀಯ ಬಿಕ್ಕಟ್ಟು ಮತ್ತು ಸಾರ್ವಜನಿಕ ಒತ್ತಡ:
  • ಬಿಬಿಎಂಪಿ ಚುನಾವಣೆ ಮುಂದೂಡುತ್ತಿರುವ ಬಗ್ಗೆ ಕೆಲವು ಶಾಸಕರ ನಿರಾಸಕ್ತಿ ಹಾಗೂ ಅಧಿಕಾರದಲ್ಲಿ ಮುಂದುವರಿಯುವ ಔತ್ಸುಕರತೆ ಕಾರಣಗಳಾಗಿದ್ದವು. ಹಲವಾರು ಪ್ರಭಾವಿ ಮುಖಂಡರು ಈ ಹಿನ್ನೆಲೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
Continue Reading

Trending