Connect with us

ಕ್ರೀಡೆ

ASIA CUP ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ ಮಹಿಳೆಯರು ತಂಡ

ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್‍ನ ಎ ಗುಂಪಿನ ಪಂದ್ಯದಲ್ಲಿ ನೇಪಾಳ ತಂಡದ ವಿರುದ್ಧ ಭಾರತ ತಂಡವು 82 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ,
ನೇಪಾಳ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು, ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ನೇಪಾಳ ತಂಡ ಅಂತಿಮವಾಗಿ 20 ಓವರ್‍ಗಳಲ್ಲಿ 9 ವಿಕೆಟ್ ಕಳೆದುಕೊಂಡು 96 ರನ್ ಗಳಿಸಲಾಷ್ಟೆ ಶಕ್ತವಾಯಿತು,
ಟೀಮ್ ಇಂಡಿಯಾ 82 ರನ್ ಗಳಿಂದ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ, ಇನ್ನು ಮೊದಲ ಸೆಮಿ ಫೈನಲ್ ಪಂದ್ಯ ಜುಲೈ 26 ರಂದು ನಡೆಯಲಿದೆ,

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

ಕ್ರೀಡೆ

2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ

Continue Reading

ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.

ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Trending