ದೇಶ
ಹೆಸರಿಸದೇ ಹೋದರೆ, ಸರ್ಕಾರದ ನ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ?’: ಪ್ರತಿಪಕ್ಷಗಳಿಗೆ ನಿರ್ಮಲಾ ತಿರುಗೇಟು!

ನವದೆಹಲಿ: ‘ಪ್ರತಿ ರಾಜ್ಯವನ್ನು ಬಜೆಟ್ ನಲ್ಲಿ ಹೆಸರಿಸಲು ಸಾಧ್ಯವಿಲ್ಲ, ಆಯಾ ರಾಜ್ಯಗಳಿಗೆ ಸಿಗಬೇಕಾದ ಮನ್ನಣೆ ಸಿಗುತ್ತದೆ. ಹೆಸರಿಸದೇ ಹೋದರೆ, ಸರ್ಕಾರದ ನ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ? ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
ಕೇಂದ್ರ ಬಜೆಟ್ 2024ರಲ್ಲಿ ತಮ್ಮ ರಾಜ್ಯಕ್ಕೆ ಮನ್ನಣೆ ಸಿಕ್ಕಿಲ್ಲ ಎಂದು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ತಕರಾರು ಎತ್ತಿರುವಂತೆಯೇ ಇದಕ್ಕೆ ರಾಜ್ಯಸಭೆಯಲ್ಲಿ ಉತ್ತರ ನೀಡಿರುವ ನಿರ್ಮಲಾ ಸೀತಾರಾಮನ್, ”ಪ್ರತಿ ಬಜೆಟ್ನಲ್ಲಿ, ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ನಿಮಗೆ ಅವಕಾಶ ಸಿಗುವುದಿಲ್ಲ… ಸಚಿವ ಸಂಪುಟವು ಮಹಾರಾಷ್ಟ್ರದ ವಂದಾವನ್ ಬಂದರು ಕುರಿತು ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಆದರೆ ನಿನ್ನೆಯ ಬಜೆಟ್ನಲ್ಲಿ ಮಹಾರಾಷ್ಟ್ರದ ಹೆಸರನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇದರರ್ಥ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ ಎಂದರ್ಥವೇ? ಎಂದು ಹೇಳಿದರು.
ಅಂತೆಯೇ ಬಜೆಟ್ ಭಾಷಣದಲ್ಲಿ ನಿರ್ದಿಷ್ಟ ರಾಜ್ಯವನ್ನು ಹೆಸರಿಸದೇ ಹೋದರೆ, ಕೇಂದ್ರ ಸರ್ಕಾರದ ನ ಕಾರ್ಯಕ್ರಮಗಳು ಈ ರಾಜ್ಯಗಳಿಗೆ ಹೋಗುವುದಿಲ್ಲ ಎಂದು ಅರ್ಥವೇ? ಇದು ನಮ್ಮ ರಾಜ್ಯಗಳಿಗೆ ಏನನ್ನೂ ನೀಡಿಲ್ಲ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಇದೊಂದು ಅತಿರೇಕದ ಆರೋಪ ಎಂದು ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದಾರೆ.