Connect with us

ಬೆಂಗಳೂರು

ಶಕ್ತಿ’ ಯೋಜನೆಯಿಂದ ಲಾಭದತ್ತ ಸಾರಿಗೆ ನಿಗಮಗಳು: ನಿರ್ವಹಣೆ, ಡೀಸೆಲ್​ ದರ ಹೆಚ್ಚಳದಿಂದ ಲಾಭ ತೋರಿಸುತ್ತಿಲ್ಲ: ರಾಮಲಿಂಗಾರೆಡ್ಡಿ – Shakti Scheme

ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಾದ ನಂತರ ಆದಾಯ ಹೆಚ್ಚಾಗಿದ್ದು, ಸಾರಿಗೆ ನಿಗಮಗಳು ಲಾಭದತ್ತ ಬರುತ್ತಿವೆ. ಇದೇ ವೇಳೆ, ನಿರ್ವಹಣೆ, ಡೀಸೆಲ್ ​ದರ ಹೆಚ್ಚಳವಾಗಿದೆ. ಆದರೆ ಟಿಕೆಟ್ ದರ ಹೆಚ್ಚಿಸಿಲ್ಲದ ಕಾರಣದಿಂದಾಗಿ ಲಾಭವನ್ನು ತೋರಿಸಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಗಮಗಳಿಗೆ ಲಾಭವಾಗುತ್ತಿದೆ. ಬಿಎಂಟಿಸಿ 10 ವರ್ಷದಿಂದ ಟಿಕೆಟ್ ದರ ಹೆಚ್ಚಿಸಿಲ್ಲ. ‘ಶಕ್ತಿ’ ಯೋಜನೆ ಜಾರಿ ನಂತರ ಆದಾಯ ಹೆಚ್ಚಾದರೂ ನಿರ್ವಹಣೆ, ಡೀಸೆಲ್, ವೇತನದ ಕಾರಣಕ್ಕೆ ಲಾಭ ತೋರಿಸಲಾಗುತ್ತಿಲ್ಲ. 2020ರಲ್ಲಿ ಉಳಿದ ಮೂರು ಸಾರಿಗೆ ನಿಗಮಗಳಿಂದ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಇದರ ನಡುವೆ ಡೀಸೆಲ್ ದರ ಹೆಚ್ಚಳವಾಗಿದೆ. ಹಾಗಾಗಿ ಲಾಭ ತೋರಿಸಲಾಗಿಲ್ಲ. ಆದರೂ ಮುಂದಿನ ದಿನಗಳಲ್ಲಿ ಲಾಭಕ್ಕೆ ಸಾರಿಗೆ ನಿಗಮಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2024ರ ಜೂನ್​ವರೆಗೆ ‘ಶಕ್ತಿ’ ಯೋಜನೆಯಡಿ 4,453.50 ಕೋಟಿ ಬಿಡುಗಡೆ ಮಾಡಿದ್ದು 1,413.47 ಕೋಟಿ ಬಾಕಿ ಇದೆ. ಯೋಜನೆಗೆ 5,015 ಕೋಟಿ ಹಣವನ್ನು ಈ ಬಾರಿ ಬಜೆಟ್​ನಲ್ಲಿ ಇಡಲಾಗಿದೆ. ಈ ವರ್ಷ ಸ್ವಲ್ಪ ಕೊರತೆಯಾಗಬಹುದು. ಇದನ್ನು ಸರಿಪಡಿಸಲು ಸಿಎಂ ಗಮನಕ್ಕೆ ತರಲಾಗಿದೆ. ಪೂರಕ ಬಜೆಟ್​ನಲ್ಲಿ ಒದಗಿಸುವ ಭರವಸೆ ಇದೆ ಎಂದರು.

ಧರ್ಮರಾಯಸ್ವಾಮಿ ದೇಗುಲ ಒತ್ತುವರಿ ತೆರವಿಗೆ ಕ್ರಮ: ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಧರ್ಮರಾಯಸ್ವಾಮಿ ದೇವಾಲಯದ ಜಾಗವನ್ನು ತೆರವುಗೊಳಿಸಲು ಕೋರ್ಟ್​ನಿಂದ ಇದ್ದು, ನ್ಯಾಯಾಲಯದ ತಡೆಯಾಜ್ಞೆ ತೆರವಿಗೆ ಕ್ರಮ ವಹಿಸಿ, ಆದಷ್ಟು ಬೇಗ ಒತ್ತುವರಿ ತೆರವು ಮಾಡಿ ದೇವಾಲಯದ ಜಾಗ ಉಳಿಸುವ ಕೆಲಸ ಮಾಡಲಾಗುತ್ತದೆ ಎಂದು ಮುಜಿರಾಯಿ ಸಚಿವರೂ ಆದ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿ‌ ಸದಸ್ಯ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಧರ್ಮರಾಯಸ್ವಾಮಿ ದೇವಾಲಯದ ಜಾಗ 15.12 ಎಕರೆ ಇದ್ದು, 211 ಜನ 6 ಎಕರೆ ಒತ್ತುವರಿ ಮಾಡಿದ್ದಾರೆ. ಇವರ ವಿರುದ್ಧ ಭೂ ಒತ್ತುವರಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, ಇನ್ನು ತೀರ್ಪು ಬಂದಿಲ್ಲ. ಒತ್ತುವರಿ ವೇಳೆ ಆರು ಜನ ಅಧಿಕಾರಿಗಳು ಇದ್ದರೂ ಒತ್ತುವರಿ ತೆರವು ಮಾಡಿಸಲು ಆಗಿಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಆಗಿಲ್ಲ. ಕೋರ್ಟ್​ನಲ್ಲಿ ತಡೆ ತೆರವಾಗಬೇಕು. ಆಗ ಎಲ್ಲ ಸಮಸ್ಯೆ ಪರಿಹಾರವಾಗಲಿದೆ. ಎಜಿ ಜೊತೆ ಮಾತನಾಡಿ, ತಡೆ ತೆರವಿಗೆ ಕ್ರಮ ವಹಿಸಲಾಗುತ್ತದೆ. ತಡೆ ತೆರವಾದರೆ ನಾವು ಕಾಂಪೌಂಡ್ ಹಾಕುವ ಕೆಲಸ ಮಾಡಬಹುದು. ಈ ಜಾಗ ದೇವಾಲಯಕ್ಕೆ ಉಳಿಯಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತದೆ ಎಂದರು.

ಈ ವಿಚಾರದಲ್ಲಿ ಲೋಪ ಆಗಿರುವುದು ನಿಜ, 30-35 ವರ್ಷದ ಹಿಂದೆ ಒತ್ತುವರಿ ಆಗಿದೆ. ಆಗಲೇ ಕಾಂಪೌಂಡ್ ಹಾಕಿದ್ದರೆ, ಈ ಸಮಸ್ಯೆ ಇರುತ್ತಿರಲಿಲ್ಲ. ಮುಂದಿನ ಅಧಿವೇಶನದ ಒಳಗಾದರೂ ಸೀನಿಯರ್ ಕೌನ್ಸಿಲ್ ನೇಮಿಸಿ ತಡೆ ತೆರವು ಮಾಡಿ ಕಾಂಪೌಂಡ್ ಹಾಕುವ ಕೆಲಸ ಮಾಡಲಾಗುತ್ತದೆ. ರಾಜ್ಯದಲ್ಲಿ 35 ಸಾವಿರ ದೇವಾಲಯವಿದೆ. ಎಲ್ಲ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಸರ್ಕಾರದ ಉತ್ತರ ಖಂಡಿಸಿ ಬಾವಿಗಿಳಿದ ರವಿಕುಮಾರ್ ಧರಣಿ ನಡೆಸಿದರು. ರವಿಕುಮಾರ್ ನಿಲುವು ಬೆಂಬಲಿಸಿದ ಜೆಡಿಎಸ್​ನ ಭೋಜೇಗೌಡ, 35 ವರ್ಷ ಎನ್ನುವ ಒಂದೇ ಅಂಶದಿಂದ ಒತ್ತುವರಿದಾರರ ಪರವಾಗಿ ತೀರ್ಪು ಬರುವ ಸಾಧ್ಯತೆ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಪತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಸಹ 35 ವರ್ಷ ಎಂಬ ಹೇಳಿಕೆಯು ಸರ್ಕಾರಕ್ಕೆ ವಿರುದ್ಧವಾಗಲಿದೆ. ದಾವೆದಾರರಿಗೆ ಅನುಕೂಲಕರ ಉತ್ತರವಾಗಲಿದೆ. ಹಾಗಾಗಿ ಇದನ್ನು ವಾಪಸ್ ಪಡೆಯಬೇಕು ಒತ್ತಾಯಿಸಿದರು.

ನಂತರ ರಾಮಲಿಂಗಾರೆಡ್ಡಿ ಮಾತನಾಡಿ, 211 ಜನ ಒತ್ತುವರಿದಾರರ ಮೇಲೆ ದೂರು ನೀಡಲಾಗಿದೆ. ಇದು ತೀರ್ಮಾನವಾಗಬೇಕಿದೆ. 2020ರಲ್ಲಿ ತಡೆ ತರಲಾಗಿದೆ. ಅದು ತೆರವಾಗಬೇಕು. ಎಲ್ಲ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಬೆಂಗಳೂರು

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.

ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.

ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.

ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.

ಪ್ರವೇಶ ಶುಲ್ಕ:

  • ಸಾಮಾನ್ಯ ದಿನ: ₹80
  • ರಜಾದಿನಗಳು ಮತ್ತು ವಾರಾಂತ್ಯ: ₹100

ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending