Connect with us

ಕ್ರೀಡೆ

10 ವರ್ಷಗಳಲ್ಲಿ ಭಾರತ ಕ್ರೀಡಾ ರಾಷ್ಟ್ರ ಆಗಲಿದೆ  ಸುನಿಲ್​ ಗವಾಸ್ಕಾರ್

10 ವರ್ಷಗಳಲ್ಲಿ ಭಾರತ ಕ್ರೀಡಾ ರಾಷ್ಟ್ರ ಆಗಲಿದೆ  ಸುನಿಲ್​ ಗವಾಸ್ಕಾರ್
10 ವರ್ಷಗಳಲ್ಲಿ ಭಾರತ ಕ್ರೀಡಾ ರಾಷ್ಟ್ರ ಆಗಲಿದೆ  ಸುನಿಲ್​ ಗವಾಸ್ಕಾರ್

National Sports Day 2023: ಭಾರತದಲ್ಲಿ ಎಲ್ಲಾ ಕ್ರೀಡೆಗಳಿಗೂ ಮಾನ್ಯತೆ ದೊರೆಯುತ್ತಿದೆ. ಇದರಿಂದ ಮುಂದಿನ ವರ್ಷಗಳಲ್ಲಿ ದೇಶ ಅಮೆರಿಕ- ಆಸ್ಟ್ರೇಲಿಯಾದ ರೀತಿ ಕ್ರೀಡಾ ರಾಷ್ಟ್ರವಾಗಲಿದೆ ಎಂದಿದ್ದಾರೆ ಸುನಿಲ್​ ಗವಾಸ್ಕಾರ್​

ಮುಂಬೈ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಉದಯೋನ್ಮುಖ ಚೆಸ್ ಆಟಗಾರ ಆರ್ ಪ್ರಜ್ಞಾನಂದ ಮತ್ತು ಬ್ಯಾಡ್ಮಿಂಟನ್ ತಾರೆ ಎಚ್‌ಎಸ್ ಪ್ರಣಯ್ ಅವರ ಸಾಧನೆಗಳನ್ನು ಶ್ಲಾಘಿಸಿರುವ ಹಿರಿಯ ಬ್ಯಾಟ್ಸ್‌ಮನ್ ಸುನೀಲ್ ಗವಾಸ್ಕರ್, ಮುಂದಿನ 10-15 ವರ್ಷಗಳಲ್ಲಿ ಭಾರತವು ಕ್ರೀಡಾ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದಿದ್ದಾರೆ.

ಚೋಪ್ರಾ ಭಾನುವಾರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಆಗಿದ್ದರೆ, 18 ವರ್ಷದ ಪ್ರಜ್ಞಾನಂದ ಕಳೆದ ವಾರ ಚೆಸ್​ ವಿಶ್ವಕಪ್‌ನ ಫೈನಲ್‌ನಲ್ಲಿ ರನ್ನರ್​ ಅಪ್​ ಆಗಿ ಇತಿಹಾಸವನ್ನು ಸೃಷ್ಟಿಸಿದರು. ಪ್ರಣಯ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು. ಸೆಮಿಫೈನಲ್​ನಲ್ಲಿ ವಿಶ್ವದ ನಂಬರ್ ಒನ್ ವಿಕ್ಟರ್ ಆಕ್ಸೆಲ್‌ಸೆನ್ ಅವರನ್ನು ಸೋಲಿಸಿದ್ದರು.

ಈಗ ಇತರ ಕ್ರೀಡೆಗಳಿಗೂ ಸಾಕಷ್ಟು ಕವರೇಜ್ ಸಿಕ್ಕಿದೆ: ಗವಾಸ್ಕರ್ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,”ಮೊದಲು ಕೆಲವು ಕ್ರೀಡೆಗಳನ್ನು ಮಾತ್ರ ಚರ್ಚಿಸಲಾಗುತ್ತಿತ್ತು. ಅವಕ್ಕೆ ಮಾತ್ರ ಮಾಧ್ಯಮಗಳಲ್ಲಿ ಪ್ರಸಾರ ಮತ್ತು ಪ್ರಚಾರ ಸಿಗುತ್ತಿತ್ತು. ಈಗ ಎಲ್ಲಾ ಕ್ರೀಡೆಗಳೂ ಮಾಧ್ಯಮಗಳಲ್ಲಿ ಮಾನ್ಯತೆ ಪಡೆಯುತ್ತಿವೆ, ಅಲ್ಲದೇ ಅವಕ್ಕೆ ಕವರೇಜ್​ ಸಿಗುತ್ತಿದೆ. ಈ ಕ್ರೀಡೆಗಳಲ್ಲಿ ಹೊಸ ಸ್ಟಾರ್ ಆಟಗಾರರನ್ನು ಪಡೆಯುತ್ತಿದ್ದೇವೆ” ಎಂದರು. ಇದೇ ವೇಳೆ ಬುಡಾಪೆಸ್ಟ್‌ನಲ್ಲಿ ವಿಶ್ವ ಚಾಂಪಿಯನ್ ಆಗಿರುವ ಚೋಪ್ರಾ ಅವರನ್ನು ಭಾರತದ ಮಾಜಿ ನಾಯಕ ಗವಾಸ್ಕರ್ ಅಭಿನಂದಿಸಿದ್ದಾರೆ.

ಮೇರೆ ದೇಶ್ ಕಿ ಧರ್ತಿ ಸೋನಾ ಉಗ್ಲೇ” ಚೋಪ್ರಾ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದದ್ದು ನನಗೆ ನೆನಪಿದೆ, ಭಾರತ ಮತ್ತು ಇಂಗ್ಲೆಂಡ್ ನಡುವೆ ಸರಣಿ ನಡೆಯುತ್ತಿತ್ತು. ಆಗ ನಾನು ಇಂಗ್ಲೆಂಡ್‌ನಿಂದ ವೀಕ್ಷಿಸಿದ್ದೆ. ಚೋಪ್ರಾ ಚಿನ್ನದ ಪದಕವನ್ನು ಗೆದ್ದಾಗ ‘ಮೇರೆ ದೇಶ್ ಕಿ ಧರ್ತಿ ಸೋನಾ ಉಗ್ಲೇ’ ಎಂಬ ಹಾಡನ್ನು ಹಾಡಲು ಪ್ರಾರಂಭಿಸಿದೆ. ನಿನ್ನೆಯೂ ನನಗೆ ಹಾಗೆಯೇ ಅನಿಸಿತು. ಕಳೆದ ವರ್ಷ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವರು ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಅವರಿಗೆ ಚಿನ್ನದ ಪದಕ ಗೆಲ್ಲುವುದು ಮುಖ್ಯವಾಗಿತ್ತು ಮತ್ತು ಅದರಲ್ಲಿ ಅವರು ಯಶಸ್ವಿಯಾದರು”ಎಂದು ಗವಾಸ್ಕರ್ ಹೇಳಿದರು.

10 ವರ್ಷಗಳಲ್ಲಿ ಭಾರತ ಕ್ರೀಡಾ ರಾಷ್ಟ್ರ ಆಗಲಿದೆಇದೇ ವೇಳೆ ಬ್ಯಾಡ್ಮಿಂಟನ್​ ಮತ್ತು ಚೆಸ್​ನಲ್ಲಿ ಸಾಧನೆ ಮಾಡಿದ ಪ್ರಣಯ್, ಪ್ರಜ್ಞಾನಂದ ಅವರ ಬಗ್ಗೆ ಮಾತನಾಡಿದರು. “ಬ್ಯಾಡ್ಮಿಂಟನ್‌ನಲ್ಲಿ ಪ್ರಣಯ್ ಸೆಮಿಫೈನಲ್ ತಲುಪಿ ವಿಕ್ಟರ್ ಅಕ್ಸೆಲ್ಸೆನ್ ಅವರನ್ನು ಸೋಲಿಸಿದರು. ಅಮೆರಿಕ ಮತ್ತು ಆಸ್ಟ್ರೇಲಿಯಾವನ್ನು ಕ್ರೀಡಾ ರಾಷ್ಟ್ರಗಳೆಂದು ಪರಿಗಣಿಸಿದರೆ, 10-15 ವರ್ಷಗಳಲ್ಲಿ ಭಾರತ ಕ್ರೀಡಾ ರಾಷ್ಟ್ರವಾಗಿರಲಿದೆ. ಪ್ರಜ್ಞಾನಂದ ಅವರು ರನ್ನರ್ ಅಪ್ ಆಗಿದ್ದರು. ಅವರಿಗೆ ಈಗ ಕೇವಲ 18 ವರ್ಷ ಮತ್ತು ಭವಿಷ್ಯದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆಲ್ಲಬಹುದು” ಎಂದು ಹೇಳಿದರು.

ಕ್ರಿಕೆಟ್ ಕುರಿತು ಮಾತನಾಡಿ ಅವರು, ಏಷ್ಯಾಕಪ್​ನಲ್ಲಿ ಶ್ರೀಲಂಕಾವನ್ನು ಕಡೆಗಣಿಸುವಂತಿಲ್ಲ ಎಂದಿದ್ದಾರೆ. ಏಷ್ಯಾಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪೈಪೋಟಿಯ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಈ ಟೂರ್ನಿಯಲ್ಲಿ ಶ್ರೀಲಂಕಾ ಕೂಡ ಇದೆ ಎಂಬುದನ್ನು ಮರೆಯಬಾರದು. ಈ ಮೂರು ದೇಶಗಳ ನಡುವಿನ ಪೈಪೋಟಿ ಯಾವಾಗಲೂ ವಿಶೇಷವಾಗಿದೆ ಎಂದು ಗವಾಸ್ಕರ್ ಹೇಳಿದರು.

Continue Reading

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

ಕ್ರೀಡೆ

2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ

Continue Reading

ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.

ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Trending