ಬೆಂಗಳೂರು
ಮುಡಾ ‘ಹಗರಣ’: ಸದನದಲ್ಲೇ ಮಲಗಿ ಪ್ರತಿಪಕ್ಷಗಳ ಅಹೋರಾತ್ರಿ ಧರಣಿ; ಭಜನೆ, ಅಂತ್ಯಾಕ್ಷರಿ ಹಾಡಿದ ಶಾಸಕರು – BJP JDS Night Long Protest

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/07/1200-675-22041361-thumbnail-16x9-ran111-1000x600.jpg&description=ಮುಡಾ ‘ಹಗರಣ’: ಸದನದಲ್ಲೇ ಮಲಗಿ ಪ್ರತಿಪಕ್ಷಗಳ ಅಹೋರಾತ್ರಿ ಧರಣಿ; ಭಜನೆ, ಅಂತ್ಯಾಕ್ಷರಿ ಹಾಡಿದ ಶಾಸಕರು – BJP JDS Night Long Protest', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/07/1200-675-22041361-thumbnail-16x9-ran111-1000x600.jpg&description=ಮುಡಾ ‘ಹಗರಣ’: ಸದನದಲ್ಲೇ ಮಲಗಿ ಪ್ರತಿಪಕ್ಷಗಳ ಅಹೋರಾತ್ರಿ ಧರಣಿ; ಭಜನೆ, ಅಂತ್ಯಾಕ್ಷರಿ ಹಾಡಿದ ಶಾಸಕರು – BJP JDS Night Long Protest', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಹಾಗೂ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಶಾಸಕರು ಜಂಟಿಯಾಗಿ ಬುಧವಾರ ಅಹೋರಾತ್ರಿ ಧರಣಿ ನಡೆಸಿದರು. ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಹಾಸಿಗೆ, ದಿಂಬುಗಳ ಸಮೇತವಾಗಿ ಪ್ರತಿಭಟಿಸಿ ಇಡೀ ರಾತ್ರಿ ಸೋಫಾ ಮತ್ತು ನೆಲದ ಮೇಲೆ ನಿದ್ರಿಸಿದರು.
ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಬುಧವಾರ ಸದನದಲ್ಲಿ ಬಿಜೆಪಿ ಸದಸ್ಯರು ನಿಲುವಳಿ ಮಂಡಿಸಿದರು. ಸ್ಪೀಕರ್ ನಿಲುವಳಿಯನ್ನು ತಿರಸ್ಕರಿಸಿದರು. ಇದರಿಂದ ಕೆರಳಿದ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ರಾಜ್ಯ ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಲು ಆರಂಭಿಸಿದರು. ಆಗ ಸ್ಪೀಕರ್ ಕಲಾಪವನ್ನು ಮುಂದೂಡಿದರು. ಹೀಗಾಗಿ ಸರ್ಕಾರದ ವಿರುದ್ಧ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪಾಲ್ಗೊಂಡರು.
ಇದಕ್ಕೂ ಮುನ್ನ ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಶಾಸಕರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ಇದಕ್ಕೊಪ್ಪದ ಶಾಸಕರು ಧರಣಿ ಮುಂದುವರಿಸಿದರು.
‘ಹಗರಣದ ಹಣದಲ್ಲಿ ಊಟ ಮಾಡುವುದಿಲ್ಲ’: ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರತಿಭಟನಾನಿರತ ಸದಸ್ಯರಿಗೆ ಭೋಜನದ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಆಗ ಆರ್.ಅಶೋಕ್, ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣದಲ್ಲಿ ನಾವು ಊಟ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಇಡೀ ರಾತ್ರಿ ಎಲ್ಲ ಶಾಸಕರು ಸದನದಲ್ಲೇ ಕಳೆದರು.
ನಿದ್ರೆಗೆ ಜಾರುವ ಮುನ್ನ ಒಟ್ಟಿಗೆ ಕುಳಿತು ಅಂತ್ಯಾಕ್ಷರಿ ಹಾಡಿದರು. ಹನುಮಾನ್ ಚಾಲೀಸಾ ಮತ್ತು ಭಜನೆ ಪಠಿಸುವ ಮೂಲಕವೂ ಗಮನ ಸೆಳೆದರು. ಸಭಾಪತಿ ಹೊರಟ್ಟಿ ಬಂದಾಗಲೂ ಶಾಸಕರು ಹಾಡುಗಳನ್ನು ಹಾಡಿದರು. ಹಾಡುಗಳನ್ನು ಕೇಳುತ್ತಾ ಹೊರಟ್ಟಿ, “ಇನ್ಮುಂದೆ ಶಾಸಕರ ದಿನಾಚರಣೆ ಮಾಡೋಣ” ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದಾದ ಬಳಿಕ ಶಾಸಕರು ದಿಂಬು, ಹಾಸಿಗೆಗಳನ್ನು ಹೊದ್ದು ನಿದ್ರೆಗೆ ಜಾರಿದರು.
ಸರ್ಕಾರದ ಉಪಚಾರ ತಿರಸ್ಕಾರ: ರಾತ್ರಿ ಧರಣಿ ಆರಂಭಿಸಿದ ಬಳಿಕ ಮಾತನಾಡಿದ ಆರ್.ಅಶೋಕ್, “ಮುಡಾ ಹಗರಣದ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೊಡದೇ ಈಗ ನಮ್ಮ ಅಹೋರಾತ್ರಿ ಧರಣಿ ವೇಳೆ ಊಟೋಪಚಾರದ ವ್ಯವಸ್ಥೆ ಮಾಡಲು ಸ್ಪೀಕರ್ ಮುಂದಾಗಿದ್ದರು. ನಾವು ಅವರ ಉಪಚಾರವನ್ನು ತಿರಸ್ಕರಿಸಿದ್ದೇವೆ” ಎಂದು ತಿಳಿಸಿದರು.
”ಸ್ಪೀಕರ್ ನಮ್ಮನ್ನು ಕರೆದಿದ್ದರು. ಧರಣಿ ಸಮಯದಲ್ಲಿ ಊಟ, ತಿಂಡಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಸದನದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಈಗ ಇವರ ಊಟ, ತಿಂಡಿ ಕಟ್ಟುಕೊಂಡು ನಮಗೆ ಏನಾಗಬೇಕು?, ಲೂಟಿ ಹೊಡೆದ ದಲಿತರ ಹಣದಲ್ಲಿ ನಾವು ಊಟ ಮಾಡಬೇಕಿಲ್ಲ. ಹಾಗಾಗಿ ನಮ್ಮ ಊಟದ ವ್ಯವಸ್ಥೆ ನಾವೇ ಮಾಡಿಕೊಳ್ಳುತ್ತೇವೆ. ಅವರ ಊಟ, ತಿಂಡಿ ವ್ಯವಸ್ಥೆ ತಿರಸ್ಕಾರ ಮಾಡಿದ್ದೇವೆ. ಇದು ದಲಿತ ವಿರೋಧಿ ಸರ್ಕಾರ” ಎಂದು ಟೀಕಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ 14 ತಿಂಗಳಲ್ಲಿ ಎರಡು ದೊಡ್ಡ ಹಗರಣ ನಡೆದಿದೆ. ಮುಡಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಚದರಡಿ ಭೂಮಿ ಕಬ್ಜ ಮಾಡಿದ್ದಾರೆ. ಇದು ಸ್ವಜನ ಪಕ್ಷಪಾತ. ವಾಲ್ಮೀಕಿ ಹಗರಣದ ಬಗ್ಗೆ ಸಿಬಿಐ, ಇಡಿ, ಎಸ್ಐಟಿ ತನಿಖೆ ನಡೆಯುತ್ತಿದೆ. ದಲಿತರ ಹಣ ಲೂಟಿಯಾಗಿದೆ. ಎಸ್ಸಿಪಿ-ಟಿಎಸ್ಪಿ ಹಣದಲ್ಲಿ 25 ಸಾವಿರ ಕೋಟಿ ಹಣ ಲೂಟಿ ಮಾಡಿದ್ದಾರೆ. ಇದೇ ಈ ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ಮುಖ್ಯಮಂತ್ರಿಗಳು ನಮಗೆ ಭಯ ಇಲ್ಲ ಅಂತಿದ್ದಾರೆ. ಭಯ ಇಲ್ಲದ ಮೇಲೆ ಚರ್ಚೆಗೆ ಹೆದರೋದೇಕೆ?, ಸಿಎಂ ಹಾಗೂ ಇಡೀ ತಂಡ ಹೆದರಿ ಓಡುತ್ತಿದ್ದಾರೆ. ಸದನದಲ್ಲಿ ಉತ್ತರ ಕೊಡಲು ಹೆದರುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
”ಸ್ಪೀಕರ್ ನಡೆ ಕೂಡ ಪ್ರಶ್ನೆ ಮಾಡುವಂತಿದೆ. ಬೋವಿ ನಿಗಮದ ಹಗರಣ ಬಗ್ಗೆ ಸ್ಪೀಕರ್ ಕರೆದು ಕರೆದು ಚರ್ಚೆ ಮಾಡಿಸಿದ್ದರು. ಅದು ಮೂರ್ನಾಲ್ಕು ವರ್ಷಗಳ ಹಿಂದಿನದ್ದು. ಮುಡಾ ವಿಷಯ ಚರ್ಚೆ ಬಂದ ತಕ್ಷಣ ಚರ್ಚೆಗೆ ಅವಕಾಶ ಕೊಡಲಿಲ್ಲ. ಚರ್ಚೆಗೆ ಅವಕಾಶ ಕೊಡದೆ ಪಲಾಯಾನ ಮಾಡುತ್ತಿದ್ದಾರೆ. ನಾವು ಹೋರಾಟವನ್ನು ಕಾಟಾಚಾರಕ್ಕೆ ಮಾಡುತ್ತಿಲ್ಲ. ಹಗಲು ರಾತ್ರಿ ಹೋರಾಟ ಮಾಡಿ, ಜನರಿಗೆ ನ್ಯಾಯ ಕೊಡಿಸುತ್ತೇವೆ” ಎಂದು ಹೇಳಿದರು.
ಶಾಸಕರನ್ನು ತಡೆದ ಡಿಸಿಪಿ: ಸಂಜೆ ವಿಧಾನಸೌಧದ ಮುಂಭಾಗದ ಲಾಂಜ್ಗೆ ಬಂದ ಬಿಜೆಪಿ ಶಾಸಕ ಧೀರಜ್ ಮುನಿರಾಜು ವಾಪಸ್ ಸದನದ ಪ್ರತಿಪಕ್ಷದ ಮೊಗಸಾಲೆಗೆ ತೆರಳಲು ಮುಂದಾದಾಗ ಲಾಂಜ್ ದ್ವಾರದಲ್ಲಿ ಅವರನ್ನು ಡಿಸಿಪಿ ತಡೆದರು. ಶಾಸಕರು ಎಂದು ತಿಳಿಯದೆ ಡಿಸಿಪಿ, ”ವಿಧಾನಸೌಧದ ಪೂರ್ವ ಬಾಗಿಲು ಮುಚ್ಚಿದ್ದ ಹಿನ್ನೆಲೆಯಲ್ಲಿ ಒಳಗೆ ಹೋಗಲು ಬಾಗಿಲು ಬಡಿಯುತ್ತಿದ್ದಾಗ ಸದನದ ಮೊಗಸಾಲೆಯ ಒಳಗೆ ಬಿಡುವುದಿಲ್ಲ. ಆ ಕಡೆ ಹೋಗಿ” ಎಂದು ಸೂಚಿಸಿದ್ದಾರೆ.
ಬಳಿಕ ಶಾಸಕರು ಅಂತಾ ಗೊತ್ತಾದ ಮೇಲೆ ಕ್ಷಮೆ ಕೇಳಿದ ಡಿಸಿಪಿ, ಶಾಸಕರ ಪ್ರವೇಶಕ್ಕೆ ಅವಕಾಶ ನೀಡಿದರು. ಇದೇ ವೇಳೆ, ಡಿಸಿಪಿಗೆ ಎಚ್ಚರಿಕೆ ನೀಡಿದ ಶಾಸಕ ಧೀರಜ್ ಮುನಿರಾಜು, ಒಳಪ್ರವೇಶಿಸಿ ಪ್ರತಿಪಕ್ಷದ ನಾಯಕ ಅಶೋಕ್ ಅವರಿಗೆ ಮಾಹಿತಿ ನೀಡಿದರು. ಆಗ ಹೊರಗೆ ಬಂದ ಅಶೋಕ್, ”ಈ ಬಾಗಿಲು ತೆರೆದಿದ್ದೀರಿ, ಬಾಗಿಲ ಬಳಿ ಕಾಯಿರಿ. ಶಾಸಕರು ಯಾವ ಕಡೆ ಬಂದರೂ ಬಿಡಬೇಕು” ಎಂದು ತಾಕೀತು ಮಾಡಿದರು.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.
“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.
ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.
ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ