ಬೆಂಗಳೂರು
ವಿಧಾನಸಭೆಯಲ್ಲಿ ಸಿಎಂ ಪ್ರಸ್ತಾಪಿಸಿರುವ ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ : ಡಿಸಿಎಂ ಡಿ ಕೆ ಶಿವಕುಮಾರ್ – BJP scams

ಬೆಂಗಳೂರು : ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ ಎಂದು ತಿಳಿಸಿದರು.
ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ. ಅವರ ಕಾಲದ ಅಕ್ರಮಗಳಲ್ಲಿ ಸಿಎಂ ಆಗಿದ್ದ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ. ಈಗಲೂ ಬಿಜೆಪಿಯವರು ಈ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ. ಕುಮಾರಸ್ವಾಮಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಯಾರಾದರೂ ಚರ್ಚೆಗೆ ಬರಲಿ, ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದು ಸವಾಲೆಸೆದರು.
ಷಡ್ಯಂತರ ರೂಪಿಸಿ ಪಾದಯಾತ್ರೆ : ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ಇದಕ್ಕೂ ಮುನ್ನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆಶಿ, ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ. ಇದು ಆತ್ಮಹತ್ಯೆ ಪ್ರಯತ್ನವಾಗಿದೆ. ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಅವರು ಏನಾದರೂ ಮಾಡಲಿ, ನಾವು ನಮ್ಮದೇ ಆದ ರೀತಿ ಉತ್ತರ ನೀಡುತ್ತೇವೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ, ನಮ್ಮ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದು, ಹಲವರನ್ನು ಬಂಧಿಸಿ, ಅಕ್ರಮವಾಗಿ ಸಾಗಾಟ ಮಾಡಿದ್ದ ಹಣವನ್ನು ವಾಪಸ್ ಪಡೆದಿದ್ದೇವೆ. ಪ್ರತಿಪಕ್ಷಗಳು ಪ್ರಚಾರ ಪಡೆಯಲು ಬೇರೆ ತನಿಖಾ ಸಂಸ್ಥೆಗಳನ್ನು ಕರೆತಂದು ನಮ್ಮವರಿಗೆ ಕಿರುಕುಳ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕಾನೂನು ಪ್ರಕಾರ ಅವರು ಪ್ರಯತ್ನ ಮಾಡಲಿ ಎಂದು ತಿಳಿಸಿದರು.
ಈ ವಿಚಾರವಾಗಿ ಚರ್ಚೆ ಮಾಡಲು ಸದನದಲ್ಲಿ ಅವಕಾಶ ನೀಡಿದ್ದೆವು. ಆದರೆ, ಅವರು ಮುಖ್ಯಮಂತ್ರಿಗಳಿಗೆ ಉತ್ತರ ನೀಡಲು ಅವಕಾಶವನ್ನೇ ನೀಡಲಿಲ್ಲ. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಸಿ. ಟಿ ರವಿ ಸೇರಿದಂತೆ ಅವರ ಪಕ್ಷದ ನಾಯಕರು ಮಾತನಾಡುವಾಗ ತಾಳ್ಮೆಯಿಂದ ಕೇಳಿಸಿಕೊಂಡಿದ್ದೇವೆ. ನಮ್ಮ ಮುಖ್ಯಮಂತ್ರಿಗಳು ಬಿಜೆಪಿಯ ಆಡಳಿತ ಅವಧಿಯಲ್ಲಿ ಇದೇ ಮಾದರಿಯಲ್ಲಿ ನಡೆದಿರುವ ಅಕ್ರಮಗಳನ್ನು ಬಯಲು ಮಾಡಿದರು. ಅವರ ಅಕ್ರಮಗಳ ಬಗ್ಗೆ ಸಿಎಜಿ ವರದಿಗಳಿವೆ. ಇವುಗಳ ಬಗ್ಗೆ ಚರ್ಚೆ ಮಾಡಲು ವಿರೋಧ ಪಕ್ಷಗಳು ಅವಕಾಶ ನೀಡಲಿಲ್ಲ ಎಂದು ಹೇಳಿದರು.
”ಅದೇ ರೀತಿ ಮುಡಾ ವಿಚಾರದಲ್ಲೂ ಅವರು ಪ್ರಚಾರ ಪಡೆಯಲು ಮುಂದಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂಬ ಕಾರಣಕ್ಕೆ ಇಬ್ಬರೂ ಒಂದಾಗಿ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ಅವರ ಕಾಲದಲ್ಲಿ ಯಾರು ಅಕ್ರಮವಾಗಿ ಎಷ್ಟು ನಿವೇಶನಗಳನ್ನು ಪಡೆದಿದ್ದಾರೆ ಎಂಬುದನ್ನು ನಾವು ಬಹಿರಂಗಪಡಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
“ಮುಖ್ಯಮಂತ್ರಿಗಳ ಕುಟುಂಬದ ಜಮೀನನ್ನು ನೋಟಿಫಿಕೇಶನ್ ಮಾಡದೇ ಮೂಡಾದವರು ಕಬಳಿಸಿದ್ದರು. ಅದಕ್ಕೆ ಪರಿಹಾರವಾಗಿ ಈ ನಿವೇಶನಗಳನ್ನು ನೀಡಲಾಗಿದೆ. ನಿಯಮಾವಳಿ ಪ್ರಕಾರ ನೋಟಿಫಿಕೇಶನ್ ಮಾಡದೇ ಭೂಮಿಯನ್ನು ಬಳಸಿಕೊಂಡರೆ ಪರಿಹಾರ ನೀಡಲು ಅವಕಾಶವಿದೆ. ಅದೇ ರೀತಿ ಇಲ್ಲೂ ಆಗಿದೆ. ಕೆಲವು ಕಡೆ 50:50 ಅನುಪಾತದಲ್ಲಿ ನೀಡಿದರೆ, ಮತ್ತೆ ಕೆಲವು ಕಡೆ ಶೇ.100 ರಷ್ಟು ಮತ್ತೆ ಕೆಲವು ಕಡೆ ಶೇ.30 ರಷ್ಟು ನೀಡುತ್ತಾರೆ. ಮುಖ್ಯಮಂತ್ರಿಗಳ ಕುಟುಂಬದವರು ನಮಗೆ ಇಂತಹದೇ ಜಾಗದಲ್ಲಿ ನಿವೇಶನ ನೀಡಿ ಎಂದು ಕೇಳಿಲ್ಲ. ಮುಡಾ ಅಧಿಕಾರಿಗಳು ಕೊಟ್ಟ ನಿವೇಶನವನ್ನು ಪಡೆದಿದ್ದಾರೆ” ಎಂದು ವಿವರಿಸಿದರು.
“ಬಿಜೆಪಿ ಅಧಿಕಾರದಲ್ಲಿದ್ದಾಗ ಈ ನಿವೇಶನ ಹಂಚಿಕೆ ಮಾಡಲಾಗಿದೆ. ಬೇರೆಯವರ ನಿವೇಶನ ಹಂಚಿಕೆ ವಿಚಾರವಾಗಿ ಸಂಬಂಧಪಟ್ಟ ಮಂತ್ರಿಗಳು ಮಾತನಾಡುತ್ತಾರೆ. ನಾನು ಕೂಡ ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಮುಖ್ಯಮಂತ್ರಿಗಳ ಕುಟುಂಬ ಕೇವಲ ಪರಿಹಾರ ಪಡೆದಿದೆ. ಕಾನೂನು ಚೌಕಟ್ಟಿನಲ್ಲಿ ಈ ಪ್ರಕ್ರಿಯೆ ನಡೆದಿವೆ. ಈಗ ಮುಖ್ಯಮಂತ್ರಿಗಳ ಘನತೆಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಮಾಡುತ್ತಿದ್ದಾರೆ” ಎಂದರು.
“ದೇಶದಲ್ಲಿ ಪಾದಯಾತ್ರೆ ಮಾಡುವುದನ್ನು ಆರಂಭಿಸಿದ್ದೇ ಕಾಂಗ್ರೆಸ್. ಮಹಾತ್ಮಾ ಗಾಂಧಿ ಅವರ ನಾಯಕತ್ವದಲ್ಲಿ ಪಾದಯಾತ್ರೆ ಆರಂಭವಾಗಿತ್ತು. ಸ್ವಾತಂತ್ರ್ಯ ಹೋರಾಟದಿಂದ ಭಾರತ ಜೋಡೋ, ಬಳ್ಳಾರಿ, ಮೇಕೆದಾಟು, ಪಾದಯಾತ್ರೆ ಮಾಡಿದ್ದೇವೆ. ಪಾದಯಾತ್ರೆ ನಮ್ಮ ಸ್ವತ್ತು. ಬಿಜೆಪಿ ಹಗರಣಗಳ ಸರದಾರರು. ಅವರ ಅಕ್ರಮಗಳನ್ನು ಬಿಚ್ಚಿಡುತ್ತೇವೆ. ಯಾರು ಎಷ್ಟು ನಿವೇಶನಕ್ಕೆ ಅರ್ಜಿ ಹಾಕಿದ್ದರು. ಎಷ್ಟು ನಿವೇಶನ ಪಡೆದಿದ್ದಾರೆ ಎಂಬುದನ್ನು ಬಹಿರಂಗ ಮಾಡುತ್ತೇವೆ” ಎಂದು ತಿಳಿಸಿದರು.
ಬೆಂಗಳೂರು
ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಚಿನ್ನಸ್ವಾಮಿ ಸ್ಟೇಡಿಯಂ ಸೇನೆ ಜಾಗ, ವಶಕ್ಕೆ ಪಡೆಯಿರಿ! ಪ್ರಧಾನಿಗೆ ಪತ್ರ ಬರೆಯಲು ಮುಂದಾದ ಸಂಘಟನೆ!

ಬೆಂಗಳೂರು: ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಘಟನೆಯಲ್ಲಿ 11 ಜನರ ಸಾವಿನ ದುರಂತ ಇಡೀ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ, ಇನ್ನೊಂದೆಡೆ ಪ್ರತಿಪ್ಕಷಗಳು ಮಾತ್ರವಲ್ಲ ಹೈಕೋರ್ಟ್ ಸಹ ಘಟನೆ ಟೀಕಿಸಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ,
ರಾಜ್ಯಕ್ಕೆ ಈ ಘಟನೆ ಕಪ್ಪು ಚುಕ್ಕೆಯಾಗಿರುವ ಬೆನ್ನಲ್ಲೇ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರದ ಬಗ್ಗೆ ಚರ್ಚೆಗಳೂ ಆರಂಭವಾಗಿದೆ, ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಧಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಈ ವಿಷಯ ಸರ್ಕಾರ ಪರಿಶೀಲಿಸಲಿದೆ, ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು, ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎನ್ನುತಲೇ ಸ್ಧಳಾಂತರದ ಸುಳಿವು ನೀಡಿದ್ದರು,
ಇದೀಗ ಮಹತ್ವದ ಬೆಳವಣಿಗೆ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರಿಸುವಂತೆ ಕೋರಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದೆ, ಕ್ರೀಡಾಂಗಣವಿರುವ ಜಾಗ ಭಾರತೀಯ ಸೇನೆಗೆ ಸೇರಿದ್ದು, ಈ ಸ್ಧಳ ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿಸಿದ್ದೇವೆ ಎಂದು ಸಂಘಟನೆ ತಿಳಿಸಿದೆ, ಈ ಕುರಿತು ಮಾತನಾಡಿರುವ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಶೆಟ್ಟಿ ಚಿನ್ನಸ್ವಾಮಿ ಸ್ಟೇಡಿಯಂ ಸೇನೆಗೆ ಸೇರಿದ ಜಾಗ, 18.50 ಎಕರೆ ಈ ಜಾಗವಾಗಿದೆ, ಇದು ಆರ್ಮಿಗೆ ಸೇರಿದ್ದು, ನಗರದಿಂದ ಇದನ್ನು ಸ್ಧಳಾಂತರಿಸಲಿ, ಸ್ಟೇಡಿಯಂ ನಿಂದಲೇ ಟ್ರಾಫಿಕ್ ಸಮಸ್ಯೆಯೂ ಆಗುತ್ತಿದೆ, ಹೀಗಾಗಿ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವರಿಗೆ ಪತ್ರ ಬರೆದು ಈ ಕುರಿತು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ,
ಬೆಂಗಳೂರು
ಆರೋಗ್ಯ ಇಲಾಖೆಯಿಂದ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ: ಇನ್ಮುಂದೆ ಮನೆ ಬಾಗಿಲಿಗೆ ಚಿಕಿತ್ಸೆ!

ಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಮೊಬೈಲ್ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ಆರಂಭವಾಗಿದೆ. ಈ ಕಾರ್ಯಕ್ರಮವು ಆರೋಗ್ಯ ಕ್ಷೇತ್ರದಲ್ಲಿ ಸಮಾಜದ ದುರ್ಬಲ ವರ್ಗಕ್ಕೆ ಗುಣಮಟ್ಟದ ಚಿಕಿತ್ಸೆಯನ್ನು ತಲುಪಿಸುವ ಗುರಿಯನ್ನು ಹೊಂದಿದೆ.
ಯೋಜನೆಯ ವಿಶೇಷತೆಗಳೇನು?
ರಾಜ್ಯದಲ್ಲಿ ಮೊದಲ ಬಾರಿಗೆ, ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಮತ್ತು ಇತರ ಗಂಭೀರ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೋಗ್ಯ ಇಲಾಖೆಯು ಮನೆಗೆ ತೆರಳಿ ಉಚಿತ ಒಪಿಡಿ ಸೇವೆ ಒದಗಿಸಲಿದೆ. ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಈ ಯೋಜನೆಯನ್ನು ಪೈಲಟ್ ಯೋಜನೆಯಾಗಿ ಆರಂಭಿಸಲಾಗಿದೆ. ಈ ಸೇವೆಯಿಂದ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡದೆಯೇ ತಮ್ಮ ಮನೆಯ ಬಳಿಯೇ ಚಿಕಿತ್ಸೆ ಪಡೆಯಬಹುದು.
ಗಂಭೀರ ರೋಗಿಗಳಿಗೆ ಆಸ್ಪತ್ರೆಗೆ ತೆರಳುವುದು ಕಷ್ಟಕರವಾಗಿರುತ್ತದೆ. ಆಸ್ಪತ್ರೆಯಲ್ಲಿ ಕಾಯುವ ಸಾಲುಗಳು, ದೀರ್ಘ ಕಾಯುವಿಕೆ, ಮತ್ತು ಆರ್ಥಿಕ ಒತ್ತಡದಿಂದ ಬಳಲುವವರಿಗೆ ಈ ಯೋಜನೆಯು ತುರ್ತು ಚಿಕಿತ್ಸೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಮೊಬೈಲ್ ಆಸ್ಪತ್ರೆಗಳ ಮೂಲಕ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ನೇರವಾಗಿ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ನೀಡಲಿದ್ದಾರೆ.
ಪ್ರಸ್ತುತ, ಸಿವಿ ರಾಮನ್ ನಗರದಿಂದ ಐದಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಬೆಂಗಳೂರಿನ ಇತರ ಪ್ರದೇಶಗಳಿಗೆ ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ವಿಸ್ತರಿಸುವ ಯೋಜನೆಯಿದೆ ಎಂದು ಸಿವಿ ರಾಮನ್ ನಗರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ್ ತಿಳಿಸಿದ್ದಾರೆ.
ಈ ಯೋಜನೆಯಿಂದ ಬಡವರಿಗೆ, ವಯೋವೃದ್ಧರಿಗೆ, ಮತ್ತು ಗಂಭೀರ ರೋಗಿಗಳಿಗೆ ಆರ್ಥಿಕ ಹೊರೆಯಿಲ್ಲದೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ. ಒಬ್ಬ ರೋಗಿಯ ತಾಯಿ ಆಶಾದೇವಿ, “ಈ ಸೇವೆಯಿಂದ ಬಡವರಿಗೆ ತುಂಬಾ ಉಪಯೋಗವಾಗಲಿದೆ. ಸರ್ಕಾರ ಈ ಯೋಜನೆಯನ್ನು ಎಲ್ಲೆಡೆ ವಿಸ್ತರಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಯೋಜನೆಯ ಪ್ರಯೋಜನಗಳು:
- ಉಚಿತ ಚಿಕಿತ್ಸೆ: ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಇತ್ಯಾದಿ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ.
- ಮನೆ ಬಾಗಿಲಿಗೆ ಸೇವೆ: ಆಸ್ಪತ್ರೆಗೆ ತೆರಳುವ ತೊಂದರೆ ತಪ್ಪಿಸಲು ಮೊಬೈಲ್ ಆಸ್ಪತ್ರೆ ಮಾದರಿ.
- ದುರ್ಬಲ ವರ್ಗಕ್ಕೆ ಒತ್ತು: ಬಡವರು, ವಯೋವೃದ್ಧರು, ಮತ್ತು ಗಂಭೀರ ರೋಗಿಗಳಿಗೆ ಆದ್ಯತೆ.
- ತುರ್ತು ಚಿಕಿತ್ಸೆ: ಆಸ್ಪತ್ರೆಯ ಕಾಯುವಿಕೆಯಿಂದ ರೋಗಿಗಳಿಗೆ ಮುಕ್ತಿ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ