ಬಿಬಿಎಂಪಿ
ಪ್ರಾಣಿ ಪ್ರಿಯರಿಗೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿ, ನಾಯಿಗಳಿಗೆ ಬಿಸ್ಕತ್ ಹಾಕುವಂತಿಲ್ಲ
ಬೆಂಗಳೂರು (ಜು.27): ನಾಯಿ, ಬೆಕ್ಕು ಸಾಕುವುದಕ್ಕೆ, ಲಿಫ್ಟ್ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗವು ಅಪಾರ್ಟ್ಮೆಂಟ್ ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳಿಗೆ ಸೂಚಿಸಿ ಮಾರ್ಗಸೂಚಿ ರೂಪಿಸಿದೆ.
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧಾರಿಸಿ ಬಿಬಿಎಂಪಿಯು ಪ್ರತ್ಯೇಕ ಮಾರ್ಗಸೂಚಿ ರಚಿಸಿ ಬಿಡುಗಡೆ ಮಾಡಿದೆ.
ಬೀದಿ ನಾಯಿಗಳಿಗೆ ಊಟ ಹಾಕುವವರಿಗೆ, ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಅಪಾರ್ಟ್ಮೆಂಟ್ ಮಾಲೀಕರ ಸಂಘ, ಶೈಕ್ಷಣಿಕ ಸಂಸ್ಥೆಗಳು, ಟೆಕ್ ಪಾರ್ಕ್, ಸಾರ್ವಜನಿಕ ಸಂಸ್ಥೆಗಳಿಗೆ ಬಿಬಿಎಂಪಿಯ ಮಾರ್ಗಸೂಚಿ ಪಾಲನೆ ಮಾಡುವಂತೆ ಸೂಚಿಸಿದೆ.
ಅಪಾರ್ಟ್ಮೆಂಟ್- ಕ್ಷೇಮಾಭಿವೃದ್ಧಿ ಸಂಘ: ಸಾಕು ಪ್ರಾಣಿ ಕಾಯ್ದೆಗೆ ವಿರುದ್ಧವಾಗಿ ಯಾವುದೇ ಬೈಲಾ ರೂಪಿಸುವಂತಿಲ್ಲ. ಪ್ರಾಣಿ ಪ್ರಿಯರಿಗೆ ಬೆಕ್ಕು, ನಾಯಿ ಸೇರಿದಂತೆ ಇತರೆ ಸಾಕು ಪ್ರಾಣಿ ಸಾಕುವುದಕ್ಕೆ ನಿಷೇಧ ಹೇರುವಂತಿಲ್ಲ. ಲಿಫ್ಟ್ಗಳಲ್ಲಿ ಸಾಕು ಪ್ರಾಣಿಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಒಂದು ವೇಳೆ ನಿರಾಕಸಿದರೆ, ಪ್ರತ್ಯೇಕ ಲಿಫ್ಟ್ ವ್ಯವಸ್ಥೆ ಮಾಡಬೇಕು. ಸಾಕು ಪ್ರಾಣಿಗಳು ಆವರಣಕ್ಕೆ ಬಂದಾಗ ಕಡ್ಡಾಯವಾಗಿ ಮುಖವಾಡ ಹಾಕಬೇಕೆಂದು ನಿರ್ಬಂಧಿಸುವಂತಿಲ್ಲ. ನಾಯಿ ಮತ್ತು ಬೆಕ್ಕು ಬೊಗಳುವುದಕ್ಕೆ ನೆರೆ ಹೊರೆಯವರು ಆಕ್ಷೇಪ ವ್ಯಕ್ತಪಡಿಸುವಂತಿಲ್ಲ. ಅಗತ್ಯವಾದರೆ ಸಾಕು ಪ್ರಾಣಿಗಳ ಓಡಾಟಕ್ಕೆ ಬೆಳಗ್ಗೆ ಮತ್ತು ಸಂಜೆ ಸಮಯ ನಿಗದಿ ಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ಅನಧಿಕೃತವಾಗಿ ಸಂತಾನೋತ್ಪತ್ತಿ ಕಂಡು ಬಂದರೆ, ನಾಯಿ ಕಚ್ಚಿದರೆ ಬಿಬಿಎಂಪಿಗೆ ಮಾಹಿತಿ ನೀಡಬೇಕು. ಸಾಕು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅಪಾರ್ಟ್ಮೆಂಟ್ ವ್ಯಾಪ್ತಿಯಲ್ಲಿ ಸಾಕು ಪ್ರಾಣಿಗಳಿಗೆ ಊಟ ಹಾಕುವುದಕ್ಕೆ ಅಡ್ಡಿ ಪಡಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಭದ್ರತಾ ಸಿಬ್ಬಂದಿಗೆ ತರಬೇತಿ ಕೊಡಿ: ಸಾಕು ಪ್ರಾಣಿಗಳಿಗೆ ಅಪಾರ್ಟ್ಮೆಂಟ್ ಭದ್ರತಾ ಸಿಬ್ಬಂದಿ ಬೆತ್ತದಿಂದ ಹೊಡೆಯುವಂತಿಲ್ಲ. ಬೆದರಿಸುವಂತಿಲ್ಲ. ಸಾಕು ಪ್ರಾಣಿಗಳೊಂದಿಗೆ ಹೇಗೆ ವರ್ತಿಸಬೇಕು ಎಂಬುದರ ಬಗ್ಗೆ ಭದ್ರತಾ ಸಿಬ್ಬಂದಿಗೆ ತರಬೇತಿ ಕೊಡಿಸಬೇಕು ಎಂದು ಸೂಚಿಸಲಾಗಿದೆ.
ಸಾಕು ಪ್ರಾಣಿ ಸ್ವಚ್ಛತೆ ಕಾಪಾಡಿ: ಸಾಕು ಪ್ರಾಣಿಗಳ ಸ್ವಚ್ಛತೆ ಕಾಪಾಡಬೇಕು. ಹೆಚ್ಚಿನ ಜನ ಸೇರುವ ಸ್ಥಳಗಳಿಗೆ ಕರೆದೊಯ್ಯಬಾರದು. ಬಾಲ್ಕಾನಿಗೆ ಬಿಡಬಾರದು. ಗುಣಮಟ್ಟದ ಆಹಾರ ನೀಡಬೇಕು. ಮಲಗುವುದಕ್ಕೆ ಬೆಚ್ಚನೆ ವ್ಯವಸ್ಥೆ ಮಾಡಬೇಕು. ಮಕ್ಕಳೊಂದಿಗೆ ಸಾಕು ಪ್ರಾಣಿಗಳನ್ನು ಹೊರಗೆ ಕಳುಹಿಸಬಾರದು. ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಲಾಗಿದೆ.
ಬೀದಿ ನಾಯಿಗಳ ಆಹಾರಕ್ಕೆ ಪ್ರತ್ಯೇಕ ಸ್ಥಳ: ಬೀದಿ ನಾಯಿಗಳಿಗೆ ಬಿಬಿಎಂಪಿ ಗುರುತಿಸಿದ ಸ್ಥಳದಲ್ಲಿ ಊಟ ಹಾಕಬೇಕು. ರಾತ್ರಿ 10.30ರಿಂದ ಬೆಳಗಿನ ಜಾವ 5.30ರ ಅವಧಿಯಲ್ಲಿ ಊಟ ಹಾಕುವಂತಿಲ್ಲ. ಹಸಿ ಮಾಂಸ ಮತ್ತು ಸಕ್ಕರೆ ಇರುವ ಬಿಸ್ಕತ್ ಹಾಕುವಂತಿಲ್ಲ. ಒಂದು ದಿನ ಊಟ ಹಾಕುವುದು, ಒಂದು ದಿನ ಬಿಡುವುದು ಮಾಡುವಂತಿಲ್ಲ. ಹೆಚ್ಚಿನ ಜನ ಇರುವ ಕಡೆ ಊಟ ಹಾಕಬಾರದು. ಬೇರೆಯವರ ಸ್ವತ್ತಿನಲ್ಲಿ ಅನುಮತಿ ಇಲ್ಲದೇ ಊಟ ಹಾಕಬಾರದು. ಶಿಕ್ಷಣ ಸಂಸ್ಥೆ, ಕಂಪನಿ ಸೇರಿದಂತೆ ಖಾಸಗಿ ಆವರಣದಲ್ಲಿ ಅನುಮತಿ ಇಲ್ಲದೇ ಆಹಾರ ಹಾಕುವಂತಿಲ್ಲ. ನಾಯಿ ವಾಸಿಸುವ ಪ್ರದೇಶದಲ್ಲಿ ಆಹಾರ ನೀಡಬೇಕು. ನೆರೆ ಹೊರೆಯವರೊಂದಿಗೆ ಜಗಳಕ್ಕೆ ಅವಕಾಶ ನೀಡದಂತೆ ಆಹಾರ ನೀಡಬೇಕು ಎಂದು ಸೂಚಿಸಲಾಗಿದೆ.
ಚುನಾವಣೆ
ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.
ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.
ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.
ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.
ದೇಶ
ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ: ಮಧುಮೇಹ, ರಕ್ತದೊತ್ತಡ ಪ್ರಕರಣ ಹೆಚ್ಚಳ
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು, ನಿಯಮಿತ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದೆ.
ದಕ್ಷಿಣ ಕಾರ್ಪೋರೇಷನ್ ವ್ಯಾಪ್ತಿಯ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 49 ನಮ್ಮ ಕ್ಲಿನಿಕ್ಗಳಲ್ಲಿ ಬುಧವಾರ ಸಮೂಹ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
1,934 ಮಂದಿಗೆ ಆರೋಗ್ಯ ತಪಾಸಣೆ
ಒಟ್ಟು 1,934 ಪೌರಕಾರ್ಮಿಕರು ತಪಾಸಣೆಗೆ ಒಳಪಟ್ಟಿದ್ದು, ಈ ಪೈಕಿ 605 ಪುರುಷರು ಮತ್ತು 1,348 ಮಹಿಳೆಯರು ಸೇರಿದ್ದಾರೆ. ತಪಾಸಣಾ ಕಾರ್ಯಕ್ಕಾಗಿ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ತಪಾಸಣೆಯಲ್ಲಿ ಪತ್ತೆಯಾದ ಕಾಯಿಲೆಗಳು
ಆರೋಗ್ಯ ತಪಾಸಣೆಯಲ್ಲಿ ಕಂಡುಬಂದ ಪ್ರಮುಖ ಸಮಸ್ಯೆಗಳ ವಿವರ ಹೀಗಿದೆ:
- ಮಧುಮೇಹ: 256 ಪ್ರಕರಣ
- ಅಧಿಕ ರಕ್ತದೊತ್ತಡ: 254 ಪ್ರಕರಣ
- ರಕ್ತಹೀನತೆ: 67 ಪ್ರಕರಣ
- ದಂತ ಸಮಸ್ಯೆ: 57 ಪ್ರಕರಣ
- ಜ್ವರ: 43 ಪ್ರಕರಣ
- ಕಣ್ಣಿನ ಸಮಸ್ಯೆ: 39 ಪ್ರಕರಣ
- ಶ್ರವಣ ಸಮಸ್ಯೆ: 16 ಪ್ರಕರಣ
- ಹೃದಯ ಸಮಸ್ಯೆ: 4 ಪ್ರಕರಣ
- ಜನರಲ್ ಓಪಿಡಿ: 1,198
- ಪೌರಕಾರ್ಮಿಕರ ಆರೋಗ್ಯದ ಮೇಲೆ ವಿಶೇಷ ಗಮನ
- ಪೌರಕಾರ್ಮಿಕರು ನಗರ ಸ್ವಚ್ಛತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಹಿನ್ನೆಲೆ, ಅವರ ಆರೋಗ್ಯ ರಕ್ಷಣೆಗಾಗಿ ಪಾಲಿಕೆ ನಿರಂತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸೌಲಭ್ಯ ಒದಗಿಸುತ್ತಿದೆ. ಮಧುಮೇಹ ಮತ್ತು ರಕ್ತದೊತ್ತಡ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಯೋಜನೆ ರೂಪಿಸಲಾಗುತ್ತಿದೆ.
ಬಿಬಿಎಂಪಿ
ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ
ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.
ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.

🧹 ಬದಲಾವಣೆ ಉದ್ದೇಶ ಏನು?
- ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
- ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
- ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.
🤝 ಸಾರ್ವಜನಿಕರ ಸಹಕಾರಕ್ಕೆ ಕರೆ:
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.
-
ಕ್ರೀಡೆ17 hours agoಟಿ20 ತಂಡದಲ್ಲಿ ದೊಡ್ಡ ಬದಲಾವಣೆ ಸಾಧ್ಯತೆ; ಸೂರ್ಯಕುಮಾರ್ ಸ್ಥಾನ ಅಪಾಯದಲ್ಲಿ!
-
ದೇಶ20 hours agoಕುವೈತ್ ಏರ್ಪೋರ್ಟ್ ಮೇಲೆ ಭೀಕರ ದಾಳಿ: ಭಾರತೀಯ ಸೇರಿ ಹಲವರಿಗೆ ಗಾಯ!
-
ಬೆಂಗಳೂರು20 hours agoBangalore : ‘ಪೋಸ್ಟರ್ಗಳ ಮಧ್ಯೆ ನನ್ನ ಮನೆ’ – ಕಾಮಿಡಿಯನ್ ವ್ಯಂಗ್ಯಕ್ಕೆ ನೆಟ್ಟಿಗರ ಮೆಚ್ಚುಗೆ
-
ದೇಶ17 hours ago25 ವರ್ಷದ ಸ್ನೇಹಕ್ಕೆ ಮದುವೆಯ ಮುದ್ರೆ? ಗೌರಿ ಜೊತೆ ಅಮೀರ್ ಹೊಸ ಜೀವನ ಆರಂಭ!
-
ಅಪರಾಧ20 hours agoLatest : ವನ್ಯಜೀವಿಗಳಿಗೆ ಕಿರುಕುಳ; ಅರಣ್ಯ ಇಲಾಖೆ ಖಡಕ್ ಆ್ಯಕ್ಷನ್, ಒಬ್ಬ ಆರೋಪಿ ವಶಕ್ಕೆ
-
ದೇಶ15 hours agoಇಂಧನ ಭದ್ರತೆಗೆ ಬಲ: ಮೋದಿ ಜೊತೆ ವೆನೆಜುವೆಲಾ ಅಧ್ಯಕ್ಷೆಯ ಮಹತ್ವದ ಮಾತುಕತೆ
-
ದೇಶ19 hours agoಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಹವಾಮಾನ ಇಲಾಖೆ ಮಹತ್ವದ ಮಾಹಿತಿ
-
ದೇಶ19 hours agoಇಸ್ರೇಲ್-ಲೆಬನಾನ್ ನಡುವೆ ಮತ್ತೆ ಕದನ ವಿರಾಮ; ಅಮೆರಿಕಾದ ಮಹತ್ವದ ಮಧ್ಯಸ್ಥಿಕೆ
