Connect with us

ಬೆಂಗಳೂರು

ನನ್ನನ್ನು ಸರ್ವನಾಶ ಮಾಡುವುದೇ ಎಚ್‌ಡಿಕೆ ಗುರಿ; ಡಿಕೆ ಶಿವಕುಮಾರ್ ಗಂಭೀರ ಆರೋಪ

Published

on

ಬೆಂಗಳೂರು: ನನ್ನನ್ನು ಸರ್ವನಾಶ ಮಾಡುವುದನ್ನೇ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರತಿನಿತ್ಯ ಬಯಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಎಚ್‌ಡಿಕೆ ವಿರುದ್ಧ ಹರಿಹಾಯ್ದರು.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ ಎಚ್‌ಡಿಕೆ ವಿರೋಧಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಚ್‌ಡಿಕೆ ಯಾವಾಗಲೂ ನನ್ನ ಸರ್ವನಾಶ ಮಾಡುವುದನ್ನೇ ಪ್ರತಿಯೊಂದು ದಿನ ಬಯಸುತ್ತಾರೆ. ನಾವು ಒಳ್ಳೆಯದು ಮಾಡಲು ಬಯಸಿದರೂ ಅವರ ಉದ್ದೇಶ ಬೇರೆ ಎಂದರು.

ಅವರ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಅವರ ಹೆಜ್ಜೆ, ಭಾವನೆ, ಆಚಾರ ವಿಚಾರ ಎಲ್ಲವೂ ನಮಗೆ ಅರಿವಿದೆ. ನಾವೇನು ರಾಮನಗರವನ್ನು ಟಚ್ ಮಾಡಲ್ಲ.ಅವರು ಬಂದುರಾಮನಗರಕ್ಕೆ ಆಕ್ರಮನ ಮಾಡಲು ಪ್ರಯತ್ನ ಮಾಡಿದ್ದಾರೆ. ಇದು ನಮ್ಮ ಜಿಲ್ಲೆ ರಾಮನಗರ ತಾಲ್ಲೂಕಿನವರು, ಮಾಗಡಿ, ಕನಕಪುರದವರು ನಮ್ಮವರು ಅಂದರೆ ಬೆಂಗಳೂರಿನವರು ಎಂದರು.

ಕೆಂಗಲ್ ಹನುಮಂತಯ್ಯ ವಿಧಾನಸೌಧವನ್ನು ಕಟ್ಟಿದ್ದು ಬೆಂಗಳೂರಿನಲ್ಲಿ, ಎಚ್‌ಡಿ ದೇವೇಗೌಡ, ಎಚ್‌ಡಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು ಬೆಂಗಳೂರಿನಲ್ಲಿ ಎಂದರು. ಬೆಂಗಳೂರು ವಿಶ್ವಮಟ್ಟಕ್ಕೆ ಬೆಳೆದಿದೆ. ಇದನ್ನು ಏಕೆ ಹಾಳು ಮಾಡಿಕೊಳ್ಳಬೇಕು. ಹೆಡ್ ಕ್ವಾಟರ್ಸ್ ರಾಮನಗರ ಜಿಲ್ಲೆಯಲ್ಲೇ ಇರುತ್ತದೆ. ಆದರೆ ಹೆಸರು ಬದಲಾವಣೆ ಮಾಡಲಾಗಿದೆ ಎಂದರು.

ಇನ್ನು 2028 ಕ್ಕೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಬೆಂಗಳೂರು ದಕ್ಷಿಣ ಎಂಬ ಹೆಸರನ್ನು ಬದಲಾವಣೆ ಮಾಡಿ ರಾಮನಗರ ಎಂದು ಇಡುತ್ತೇನೆ ಎಂಬ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಹಣೆಯಲ್ಲಿ ಹೆಸರು ಮತ್ತೆ ಬದಲಾವಣೆ ಮಾಡುವುದು ಬರೆದಿಲ್ಲ. 2028 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಹೊಸತಾಗಿ ನಾಮಕರಣ ಮಾಡಲಾಗಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂತಹದೊಂದು ಮಹತ್ವದ ತೀರ್ಮಾನವನ್ನು ಮಾಡಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅಂತೂ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 2028 ರಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ ಬೆಂಗಳೂರು ದಕ್ಷಿಣ ಎಂಬ ಹೆಸರನ್ನು ಬದಲಾವಣೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಸರು ಬದಲಾವಣೆ ವಿಚಾರ ರಾಜಕೀಯ ಆಯಾಮವನ್ನು ಪಡೆದುಕೊಂಡಿದೆ.

ಬೆಂಗಳೂರು

ವಾಹನ ಸವಾರರಿಗೆ ಬಂಪರ್ ಆಫರ್! ಟ್ರಾಫಿಕ್ ಫೈನ್‌ಗೆ 50% ರಿಯಾಯಿತಿ

Published

on

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಾಖಲಿಸಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ವಿಶೇಷ ಅವಕಾಶ ಜೂನ್ 21ರಿಂದ ಜುಲೈ 10ರವರೆಗೆ ಲಭ್ಯವಿರಲಿದೆ.

ರಾಜ್ಯದಲ್ಲಿ ಲಕ್ಷಾಂತರ ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ಟ್ರಾಫಿಕ್ ದಂಡವನ್ನು ಪಾವತಿಸಲು ಅನುಕೂಲವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರಿಯಾಯಿತಿ ಅವಧಿಯಲ್ಲಿ ದಂಡ ಪಾವತಿಸುವವರು ಕೇವಲ ಅರ್ಧ ಮೊತ್ತವನ್ನು ಪಾವತಿಸಿದರೆ ಸಾಕು.

ಯಾರಿಗೆಲ್ಲಾ ರಿಯಾಯಿತಿ ಅನ್ವಯ?

ಪೊಲೀಸ್ ಇಲಾಖೆಯು 2026ರ ಮೇ ತಿಂಗಳಿಗಿಂತ ಮುಂಚೆ ಇ-ಚಲನ್ ಮೂಲಕ ದಾಖಲಿಸಿರುವ ಎಲ್ಲಾ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ.

ಇದರ ಜೊತೆಗೆ, ಸಾರಿಗೆ ಇಲಾಖೆ ಅಧಿಕಾರಿಗಳು 1991ರಿಂದ 2022ರವರೆಗೆ ದಾಖಲಿಸಿರುವ ಪ್ರಕರಣಗಳ ಬಾಕಿ ದಂಡಗಳಿಗೂ ಶೇ.50 ರಷ್ಟು ರಿಯಾಯಿತಿ ದೊರೆಯಲಿದೆ.

ಈ ಹಿಂದೆಯೂ ನೀಡಲಾಗಿತ್ತು ಅವಕಾಶ

ಇ-ಚಲನ್ ದಂಡ ಪಾವತಿಗೆ ರಾಜ್ಯ ಸರ್ಕಾರ ಈ ಹಿಂದೆ ಹಲವು ಬಾರಿ ಶೇ.50 ರಷ್ಟು ರಿಯಾಯಿತಿ ಘೋಷಿಸಿತ್ತು. ಕಳೆದ ವರ್ಷ ಮೊದಲ ಬಾರಿಗೆ ಸಾರಿಗೆ ಇಲಾಖೆ ಪ್ರಕರಣಗಳ ಬಾಕಿ ದಂಡ ಪಾವತಿಗೂ ರಿಯಾಯಿತಿ ನೀಡಲಾಗಿತ್ತು. ಇದೀಗ ಎರಡನೇ ಬಾರಿ ಈ ಸೌಲಭ್ಯ ಘೋಷಣೆ ಮಾಡಲಾಗಿದೆ.

ವಾಹನ ಸವಾರರು ಏನು ಮಾಡಬೇಕು?

ರಿಯಾಯಿತಿ ಅವಧಿಯೊಳಗೆ ತಮ್ಮ ವಾಹನಗಳ ವಿರುದ್ಧ ಇರುವ ಬಾಕಿ ದಂಡಗಳ ವಿವರಗಳನ್ನು ಪರಿಶೀಲಿಸಿ, ಆನ್‌ಲೈನ್ ಅಥವಾ ಸಂಬಂಧಿತ ಇಲಾಖೆಯ ಮೂಲಕ ಪಾವತಿಸಬಹುದು. ಗಡುವಿನ ಬಳಿಕ ಮತ್ತೆ ಪೂರ್ಣ ದಂಡ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ಕ್ರಮದಿಂದ ಲಕ್ಷಾಂತರ ವಾಹನ ಸವಾರರಿಗೆ ಆರ್ಥಿಕ ಪರಿಹಾರ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

Continue Reading

ದೇಶ

ರಾಮಲಿಂಗಾರೆಡ್ಡಿ ರಾಜೀನಾಮೆ: ಕಾರಿನ ಚಕ್ರದಡಿ ಮಲಗಿ ಅಭಿಮಾನಿಗಳ ಕಣ್ಣೀರು!

Published

on

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ D. K. Shivakumar ನೇತೃತ್ವದ ಸರ್ಕಾರಕ್ಕೆ ಮೊದಲ ದೊಡ್ಡ ರಾಜಕೀಯ ಸವಾಲು ಎದುರಾಗಿದೆ. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ತಮಗೆ ಬೆಂಗಳೂರು ನಗರಾಭಿವೃದ್ಧಿ (BDA) ಅಥವಾ ಗೃಹ ಖಾತೆ ಸಿಗಬೇಕೆಂಬ ನಿರೀಕ್ಷೆಯಲ್ಲಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬೇರೆ ಇಲಾಖೆ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಇದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವ ರೆಡ್ಡಿ, ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ರವಾನಿಸಿದ್ದಾರೆ.

ಕಾರಿನ ಚಕ್ರಗಳ ಕೆಳಗೆ ಮಲಗಿ ಪ್ರತಿಭಟನೆ

ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಲು ಮನೆಯಿಂದ ಹೊರಟಾಗ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ಕಾರನ್ನು ಸುತ್ತುವರಿದು ಪ್ರತಿಭಟನೆ ನಡೆಸಿದರು. ಕೆಲವರು ಕಾರಿನ ಮುಂದೆ ಹಾಗೂ ಚಕ್ರಗಳ ಕೆಳಗೆ ಮಲಗಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರು. ಹಿರಿಯ ನಾಯಕರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಯಸಿದ ಖಾತೆ ಸಿಗದಿದ್ದೇ ಅಸಮಾಧಾನಕ್ಕೆ ಕಾರಣ?

ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ 12 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ರಾಮಲಿಂಗಾರೆಡ್ಡಿ ಬಯಸಿದ್ದ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಅಥವಾ ಗೃಹ ಖಾತೆ ಅವರಿಗೆ ದೊರೆಯಲಿಲ್ಲ ಎನ್ನಲಾಗಿದೆ. ಇದರಿಂದ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಧಾನಕ್ಕೆ ಮುಂದಾದ ಸರ್ಕಾರ

ಈ ಬೆಳವಣಿಗೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ರೆಡ್ಡಿ ಈಗಾಗಲೇ ನೀಡಿದ್ದಾರೆ ಎನ್ನಲಾಗಿದೆ.

ಸರ್ಕಾರ ರಚನೆಯಾದ ಕೇವಲ ಎರಡು ದಿನಗಳಲ್ಲೇ ಹಿರಿಯ ನಾಯಕರೊಬ್ಬರು ಬಂಡಾಯದ ಧ್ವನಿ ಎತ್ತಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ರಾಜಕೀಯ ತಲೆನೋವಾಗಿ ಪರಿಣಮಿಸಿದೆ.

Continue Reading

ದೇಶ

ಸರ್ಕಾರಕ್ಕೆ ಎರಡೇ ದಿನದಲ್ಲಿ ಸಂಕಷ್ಟ! ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಸ್ಪಷ್ಟನೆ

Published

on

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಅಸಮಾಧಾನವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು, ನನ್ನ ಆಪ್ತ ಸ್ನೇಹಿತರು ಮತ್ತು ಅನುಭವಿ ರಾಜಕಾರಣಿ. ಅವರ ಅಸಮಾಧಾನವನ್ನು ಚರ್ಚೆಯ ಮೂಲಕ ಪರಿಹರಿಸುತ್ತೇವೆ” ಎಂದು ಹೇಳಿದ್ದಾರೆ.

ಖಾತೆ ಹಂಚಿಕೆ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿರುವ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ನೀಡಲಾಗಿದೆ. ಆದರೆ ಅವರು ಬೆಂಗಳೂರು ನಗರಾಭಿವೃದ್ಧಿ ಅಥವಾ ನಗರ ಆಡಳಿತಕ್ಕೆ ಸಂಬಂಧಿಸಿದ ಖಾತೆಯ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

“ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಬೇರೆ ಖಾತೆ ನೀಡಬೇಕೆಂಬ ಅವರ ಆಪೇಕ್ಷೆಯಿದೆ. ಈ ವಿಚಾರವನ್ನು ಅವರೊಂದಿಗೆ ಚರ್ಚಿಸುತ್ತೇನೆ. ಸಚಿವ ಸಂಪುಟದಲ್ಲಿಯೂ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಎರಡೇ ದಿನಗಳಲ್ಲಿ ಸಚಿವ ಸಂಪುಟದೊಳಗೆ ಅಸಮಾಧಾನದ ಕಿಡಿ ಕಾಣಿಸಿಕೊಂಡಿರುವುದು ಕಾಂಗ್ರೆಸ್ ನಾಯಕರಿಗೆ ಆತಂಕ ತಂದಿದೆ.

ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಮಾತನಾಡಿದ್ದ ರಾಮಲಿಂಗಾರೆಡ್ಡಿ, “ನನ್ನ ನಿರ್ಧಾರ ಅಚಲ. ಯಾರ ಮನವೊಲಿಕೆಗೂ ನಾನು ಬಗ್ಗುವುದಿಲ್ಲ. ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದರು. ಇದರಿಂದ ಸರ್ಕಾರದ ಮೊದಲ ಹಂತದಲ್ಲೇ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಆದಾಗ್ಯೂ, ಹಿರಿಯ ನಾಯಕನನ್ನು ಮನವೊಲಿಸಿ ಸರ್ಕಾರದಲ್ಲಿ ಮುಂದುವರಿಸುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕತ್ವ ವ್ಯಕ್ತಪಡಿಸಿದ್ದು, ಮುಂದಿನ ಕೆಲ ದಿನಗಳಲ್ಲಿ ಈ ಬೆಳವಣಿಗೆ ಮಹತ್ವದ ತಿರುವು ಪಡೆಯುವ ಸಾಧ್ಯತೆ ಇದೆ.

Continue Reading

Trending