Connect with us

ಕ್ರೀಡೆ

ಪಂದ್ಯ ನಡೆಯುವುದೇ ಅನುಮಾನ : ಬಾಬರ್ ಅಜಂ

ಪಂದ್ಯ ನಡೆಯುವುದೇ ಅನುಮಾನ : ಬಾಬರ್ ಅಜಂ
ಪಂದ್ಯ ನಡೆಯುವುದೇ ಅನುಮಾನ : ಬಾಬರ್ ಅಜಂ

ಏಷ್ಯಾಕಪ್​ ಟೂರ್ನಿ ಎಲ್ಲಿ ನಡೆಯಬೇಕು ಎಂದು ನೀವು ನನ್ನನ್ನು ಕೇಳಿದರೆ, ನಾನು ಈ ಟೂರ್ನಿ ಸಂಪೂರ್ಣವಾಗಿ ಪಾಕಿಸ್ತಾನದಲ್ಲಿ ನಡೆಯಬೇಕು ಎನ್ನುತ್ತೇನೆ. ಆದರೆ ದುರದೃಷ್ಟವಶಾತ್, ಅದರ ಬಗ್ಗೆ ಏನೂ ಮಾಡಲು ಸಾಧ್ಯವಿಲ್ಲ” ಎಂದು ಪಂದ್ಯಾವಳಿಯ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಬಾಬರ್ ಹೇಳಿದರು.

ಭಾರತ ವಿರುದ್ಧದ ಪಂದ್ಯ ಎಂದಾಗ ಹಲವು ನಿರೀಕ್ಷೆಗಳು ಸಹಜ. ಇದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರವನ್ನು ನಾವು ರೂಪಿಸಿದ್ದೇವೆ. ಇದನ್ನು ಇಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಉತ್ತಮ ಆಟ ಪ್ರದರ್ಶಿಸುವುದೇ ನಮ್ಮ ಮೊದಲ ಗುರಿ. ಭಾರತವೂ ಕೂಡ ಈ ಪಂದ್ಯಕ್ಕೆ ರಣತಂತ್ರವನ್ನು ರೂಪಿಸಿರುವುದು ಸಹಜ. ಒಟ್ಟಾರೆ ಇದರ ಫಲಿತಾಂಶ ಪಂದ್ಯದ ದಿನ ಹೊರಬೀಳಲಿದೆ ಎಂದು ಹೇಳಿದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಸೆಪ್ಟೆಂಬರ್​ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ಇದು ಭಾರತಕ್ಕೆ ಈ ಕೂಟದ ಮೊದಲ ಪಂದ್ಯವಾದರೆ, ಪಾಕ್​ಗೆ ಎರಡನೇ ಪಂದ್ಯ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತ್ತಿದ್ದಾರೆ. ಆದರೆ ಅಭಿಮಾನಿಗಳ ಈ ಆಸೆಗೆ ಮಳೆ ತಣ್ಣೀರೆರಚುವ ಸಾಧ್ಯತೆ ಇದೆ. ಹೌದು ಪಂದ್ಯ ನಡೆಯುವ ದಿನ ಕ್ಯಾಂಡಿಯಲ್ಲಿ ಶೇ. 90ರಷ್ಟು ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಲಂಕಾದಲ್ಲೇ ಕಳೆದ ವಾರವ ಅಫಘಾನಿಸ್ತಾನವನ್ನು ಕ್ಲೀನ್‌ಸ್ವೀಪ್‌ ಮಾಡಿ ನಂ.1 ಸ್ಥಾನ ಅಲಂಕರಿಸಿರುವ ಪಾಕಿಸ್ತಾನ ಈ ಕೂಟದ ಅತ್ಯಂತ ಅಪಾಯಕಾರಿ ತಂಡವಾಗಿ ಕಾಣಿಸಿಕೊಂಡಿದೆ. ಲಂಕಾದ ಪಿಚ್​ನಲ್ಲಿ ಆಡಿದ ಅನುಭವ ಕೂಡ ತಂಡಕ್ಕೆ ನೆರವಾಗಲಿದೆ. ಇದಲ್ಲದೆ ಬಾಬರ್‌ ಅಜಂ ಪಡೆ ಎಲ್ಲ ವಿಭಾಗಗಳಲ್ಲೂ ಬಲಿಷ್ಠ ಆಟಗಾರರನ್ನು ನೆಚ್ಚಿಕೊಂಡಿದೆ. ಅದಲ್ಲದೆ ಭಾರತ ವಿರುದ್ಧ 2021ರ ವಿಶ್ವಕಪ್​ ಟೂರ್ನಿಯಲ್ಲಿ ಗೆದ್ದ ಬಳಿಕ ಒತ್ತಡವನ್ನು ನಿಭಾಯಿಸುವ ಕಲೆ ಪಾಕ್​ ಕಲಿತುಕೊಂಡಿದೆ. ಹೀಗಾಗಿ ಪಾಕ್​ ಸವಾಲನ್ನು ರೋಹಿತ್​ ಪಡೆ ಅಷ್ಟು ಲಘುವಾಗಿ ತೆಗೆದುಕೊಳ್ಳಬಾರದು.

ಭಾರತ ತಂಡ

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಸರ್‌ ಪಟೇಲ್‌, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ, ಪ್ರಸಿದ್ಧ್‌ ಕೃಷ್ಣ, ಸಂಜು ಸ್ಯಾಮ್ಸನ್‌ (ಮೀಸಲು ಆಟಗಾರ).

ಪಾಕಿಸ್ತಾನ ತಂಡ

ಬಾಬರ್ ಅಜಂ (ನಾಯಕ), ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಸೌದ್ ಶಕೀಲ್ (ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಮಾತ್ರ) ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರಾವುಫ್​, ನಸೀಮ್ ಶಾ, ಶಾಹೀನ್ ಅಫ್ರಿದಿ, ತಯ್ಯಬ್ ತಾಹಿರ್, ಮೊಹಮ್ಮದ್ ಹ್ಯಾರಿಸ್, ಫಹೀಮ್ ಅಶ್ರಫ್, ಮೊಹಮ್ಮದ್ ವಾಸಿಮ್.

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

ಕ್ರೀಡೆ

2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ

Continue Reading

ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.

ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Trending