Connect with us

ದೇಶ

ದೇವರ’ ಸಾಂಗ್​​ ರಿಲೀಸ್​ಗೆ ಡೇಟ್​​ ಫಿಕ್ಸ್: ಜೂ.ಎನ್​ಟಿಆರ್​​-ಜಾಹ್ನವಿ ರೊಮ್ಯಾಂಟಿಕ್ ಲುಕ್​ಗೆ ಫ್ಯಾನ್ಸ್ ಫಿದಾ – Devara

ದೇವರ ಪಾರ್ಟ್ 1′ ಈ ಸಾಲಿನ ಬಹುನಿರೀಕ್ಷಿತ ಚಿತ್ರ. ಸೌತ್​ ಸೂಪರ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಹಾಗೂ ಬಾಲಿವುಡ್​ ಬೆಡಗಿ ಜಾಹ್ನವಿ ಕಪೂರ್ ಮುಖ್ಯಭೂಮಿಕೆಯ ಈ ಆ್ಯಕ್ಷನ್ ಥ್ರಿಲ್ಲರ್ ಸೆಪ್ಟೆಂಬರ್ 27 ರಂದು ಚಿತ್ರಮಂದಿರ ಪ್ರವೇಶಿಸಲಿದೆ. ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದಂತೆ, ಚಿತ್ರ ತನ್ನ ಪ್ರಮೋಶನ್​ ಚುರುಕುಗೊಳಿಸಿದೆ. ಸಿನಿಮಾ ಸುತ್ತಲಿನ ಅಪ್ಡೇಟ್ಸ್, ಅಂತೆಕಂತೆಗಳು ಅಭಿಮಾನಿಗಳ ಕುತೂಹಲ ಕೆರಳಿಸಿದೆ. ಇದೀಗ, ಚಿತ್ರದ ಎರಡನೇ ಹಾಡಿನ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಬಹಿರಂಗಪಡಿಸಿದ್ದು, ಪ್ರೇಕ್ಷಕರ ಉತ್ಸಾಹ ಗರಿಗೆದರಿದೆ.

ಇಂದು ಜಾಹ್ನವಿ ಕಪೂರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್, ಜಾಹ್ನವಿ ಹಾಗೂ ಜೂನಿಯರ್ ಎನ್‌ಟಿಆರ್ ಅವರನ್ನೊಳಗೊಂಡಿದೆ. ಸಖತ್​ ರೊಮ್ಯಾಂಟಿಕ್ ಭಂಗಿಯಲ್ಲಿ ಜೋಡಿ ಕಾಣಿಸಿಕೊಂಡಿದೆ. ಪೋಸ್ಟರ್ ಜೊತೆಗೆ, “ಬಹು ನಿರೀಕ್ಷಿತ ದೇವರ ಚಿತ್ರದ ಎರಡನೇ ಹಾಡು ಆಗಸ್ಟ್ 5 ರಂದು ಬಿಡುಗಡೆಯಾಗಲಿದೆ. ಸೆಪ್ಟೆಂಬರ್​ 27ಕ್ಕೆ ಸಿನಿಮಾ ಬಿಡುಗಡೆ” ಎಂದು ಬರೆದುಕೊಂಡಿದ್ದಾರೆ. ಹುಬ್ಬೇರಿಸುವಂತಹ ಪೋಸ್ಟರ್ ಜೊತೆಗೆ ಸಾಂಗ್​ ರಿಲೀಸ್​ ಡೇಟ್​​ ಬಹಿರಂಗಪಡಿಸಿದ್ದು, ಅಭಿಮಾನಿಗಳ ಉತ್ಸಾಹ ದುಪ್ಪಟ್ಟಾಗಿದೆ.

ಈ ಹಿಂದೆ, ‘ಫಿಯರ್’ ಸಾಂಗ್ ಎಂಬ ಚಿತ್ರದ ಮೊದಲ ಹಾಡ ಬಿಡುಗಡೆಯಾಗಿತ್ತು. ಸಾಂಗ್​ ರಿಲೀಸ್​ ಸಂದರ್ಭ, ನಿರ್ಮಾಪಕ ನಾಗ ವಂಶಿ ಈ ಹಾಡು ಅನಿರುದ್ಧ್ ಸಂಯೋಜಿಸಿದ್ದ ಜೈಲರ್ ಚಿತ್ರದ ಜನಪ್ರಿಯ ಹುಕುಮ್ ಹಾಡು ಸಂಪಾದಿಸಿರುವ ಜನಪ್ರಿಯತೆಯನ್ನು ಮೀರಿಸುತ್ತದೆ ಎಂದು ಹೇಳುವ ಮೂಲಕ ಸಿನಿಪ್ರಿಯರ ಆಸಕ್ತಿಯನ್ನು ಕೆರಳಿಸಿದ್ದರು. ನಂತರ, ಫಿಯರ್ ಸಾಂಗ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಿ ವಂಶಿ ಅವರ ಹೇಳಿಕೆ ನಿಜವೆಂದು ಸಾಬೀತುಪಡಿಸಿತು.

ಸದ್ಯ ದೇವರ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಕೆಲವೇ ಕೆಲ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ದೇವರ ಭಾಗ 1ರಲ್ಲಿ ಜಾಹ್ನವಿ ಕಪೂರ್ ಮಹಿಳಾ ನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಬಾಲಿವುಡ್​ ನಟಿಗಿದು ಚೊಚ್ಚಲ ಟಾಲಿವುಡ್​ ಚಿತ್ರ. ಅಲ್ಲದೇ ಇದೇ ಮೊದಲ ಬಾರಿಗೆ ಆರ್​ಆರ್​ಅರ್​ ಖ್ಯಾತಿಯ ಜೂನಿಯರ್​ ಎನ್​​ಟಿಆರ್​ ಜೊತೆ ತೆರೆಹಂಚಿಕೊಂಡಿದ್ದಾರೆ. ಇನ್ನೂ ಬಾಲಿವುಡ್ ಸ್ಟಾರ್ ಹಿರೋ ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ವಿಲನ್​​ ರೋಲ್​ ನಿಭಾಯಿಸಿದ್ದಾರೆ. ಸಿನಿಮಾ ಸೆಪ್ಟೆಂಬರ್ ಕೊನೆಗೆ ತೆರೆಕಾಣಲಿದ್ದು, ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.

ಅಪರಾಧ

KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ

ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.

ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending