ಬೆಂಗಳೂರು
ಇಂದು ಫ್ರೆಂಡ್ಶಿಪ್ ಡೇ! ಕುಚಿಕು ಗೆಳೆಯರಾದ ವಿಷ್ಣು-ಅಂಬಿ ಸ್ನೇಹ ಬಾಂಧವ್ಯದ ಸವಿ ನೆನಪು – Vishnu Ambi Friendship
ಕನ್ನಡ ಚಿತ್ರರಂಗದಲ್ಲಿ ಕುಚಿಕು ಗೆಳೆಯರಾಗಿ ಇವತ್ತಿಗೂ ಅಭಿಮಾನಿಗಳ ಹೃದಯವನ್ನು ಆವರಿಸಿರುವ ಇಬ್ಬರು ದಿಗ್ಗಜ ನಟರೆಂದರೆ ಅದು ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ರೆಬಲ್ ಸ್ಟಾರ್ ಅಂಬರೀಶ್.
ಅನೇಕ ಬಾರಿ ಅಂಬರೀಶ್ ಅವರು ಸಂದರ್ಶನಗಳಲ್ಲಿ ಮಾತನಾಡುತ್ತಾ, ನನ್ನ ಮತ್ತು ವಿಷ್ಣುವರ್ಧನ್ ಸ್ನೇಹಕ್ಕೆ ಬೆಲೆನೇ ಕಟ್ಟೋಕಾಗಲ್ಲ. ವಿಷ್ಣು ಅಪರೂಪದ ಗೆಳೆಯ ಅಂದಿದ್ರು.
ಮೂಲತಃ ಮೈಸೂರಿನವರಾದ ವಿಷ್ಣುವರ್ಧನ್ ಹಾಗೂ ಅಂಬರೀಶ್ ಸ್ನೇಹ ಶುರುವಾಗಿದ್ದು ನಾಗರಹಾವು ಸಿನಿಮಾದಿಂದ.
ನಾಗರಹಾವು ಸೆಟ್ನಲ್ಲಿ ಮೊದಲ ಭೇಟಿ: ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಾಗರಹಾವು ಸಿನಿಮಾಗಾಗಿ ಹೊಸ ನಟರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆಗ ಚಿಗುರು ಮೀಸೆಯ ತೀಕ್ಷ್ಣ ಕಣ್ಣಿನ ಹುಡುಗ ವಿಷ್ಣುವರ್ಧನ್ ನಾಯಕನಾಗಿ ಆಯ್ಕೆಯಾಗಿದ್ದರು. ಇದೇ ಚಿತ್ರದಲ್ಲಿ ಜಲೀಲನ ಪಾತ್ರಕ್ಕಾಗಿ ತುಸು ಪುಂಡನ ಲುಕ್ ಇರುವ ನಟನಿಗಾಗಿ ಪುಟ್ಟಣ್ಣ ಹುಡುಕಾಡುತ್ತಿದ್ದರು. ಆಗ ರೆಬಲ್ ಸ್ಟಾರ್ ಅಂಬರೀಶ್ ಜಲೀಲನ ಪಾತ್ರಕ್ಕೆ ಆಯ್ಕೆಯಾಗಿದ್ದರು.
ವಿಷ್ಣುವರ್ಧನ್ ಅವರದು ಸ್ವಲ್ಪ ತಮಾಷೆ ಮಾಡುವ ವ್ಯಕ್ತಿತ್ವ. ಹೀಗಾಗಿ ಅಂಬರೀಶ್ಗೆ ವಿಷ್ಣುವರ್ಧನ್ ಬಹಳ ಬೇಗನೆ ಇಷ್ಟವಾಗಿದ್ದರು. ಈ ಚಿತ್ರದಲ್ಲಿ ವಿಷ್ಣು ಹೀರೋ ಆಗಿದ್ರೆ, ಅಂಬರೀಶ್ ವಿಲನ್ ರೋಲ್ನಲ್ಲಿ ಮಿಂಚಿದ್ದರು. ನಿಜ ಜೀವನದಲ್ಲಿ ಇಬ್ಬರೂ ತುಂಬಾ ಒಳ್ಳೆಯ ಸ್ನೇಹಿತರಾಗಲು ಈ ಚಿತ್ರವೂ ಕಾರಣವಾಯಿತು. ಜಲೀಲನ ಪಾತ್ರದಲ್ಲಿದ್ದ ಅಂಬರೀಶ್ ನಟಿ ಆರತಿ ಅವರನ್ನು ರೇಗಿಸುತ್ತಿದ್ದರೆ, ಇತ್ತ ವಿಷ್ಣುವರ್ಧನ್ ಸೈಕಲ್ನಲ್ಲಿ ಬಂದು ಫೈಟ್ ಮಾಡುವ ದೃಶ್ಯ ಅಭಿಮಾನಿಗಳಿಗೆ ಕಿಕ್ ಕೊಟ್ಟಿತ್ತು.
ಸಾಹಸಸಿಂಹ ವಿಷ್ಣು ಬಗ್ಗೆ ಅಂಬಿಗೆ ಎಲ್ಲಿಲ್ಲದ ಅಭಿಮಾನ. ಇಬ್ಬರೂ ಗಂಟೆಗಟ್ಟಲೆ ಕೂತು ಹರಟೆ ಹೊಡೆಯುತ್ತಾ, ಒಬ್ಬರ ಕಾಲು ಮತ್ತೊಬ್ಬರು ಎಳೆದು ನಕ್ಕು ನಲಿಯುತ್ತಿದ್ದರು. ಚಿತ್ರದುರ್ಗದಲ್ಲಿ ನಾಗರಹಾವು ಶೂಟಿಂಗ್ ಸಂದರ್ಭದಲ್ಲಿ ಇಬ್ಬರೂ ಒಂದೇ ರೂಂನಲ್ಲಿ ವಿಶ್ರಾಂತಿ ಪಡೆಯುವ ಸಂದರ್ಭವಿತ್ತು. ಈ ಸಂದರ್ಭದಲ್ಲಂತೂ ಇಬ್ಬರೂ ಮತ್ತಷ್ಟು ಕ್ಲೋಸ್ ಆದರು. ಚಿತ್ರದುರ್ಗದಲ್ಲಿ ನಡೆಯುತ್ತಿದ್ದ ಶೂಟಿಂಗ್ ಯಾವಾಗ ಬೆಂಗಳೂರಿಗೆ ಶಿಫ್ಟ್ ಆಯ್ತೋ ಆಗ ಅಂಬರೀಶ್ ಸಿನಿಮಾ ಶೂಟಿಂಗ್ ಬಿಡುವು ಸಿಕ್ಕಾಗೆಲ್ಲಾ ವಿಷ್ಣುವರ್ಧನ್ ಮನೆಗೆ ಹೋಗುತ್ತಿದ್ದರು. ಬಹುಶಃ ನಾಗರಹಾವು ಚಿತ್ರದ ಮೂಲಕ ಚಿಗುರಿದ ಸ್ನೇಹ ಆದರ್ಶ ಸ್ನೇಹವಾಗುತ್ತೆ ಅಂತಾ ಅವರಿಬ್ಬರಿಗೂ ಅಂದು ಅರಿವೇ ಇರಲಿಲ್ಲ.
ಓ ಗೆಳೆಯ ನಿನಗೆ ಸ್ಯಾಣೆ ಕೋಪ ಕಣೋ..: ಇಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಜೊತೆಯಾಗಿ ಅಭಿನಯಿಸಿದ್ದಾರೆ. ಆದರೆ ಇವರ ಸ್ನೇಹ ಮತ್ತಷ್ಟು ಗಟ್ಟಿಯಾಗಿದ್ದು ಡಿ.ರಾಜೇಂದ್ರ ಬಾಬು ನಿರ್ದೇಶನದ ದಿಗ್ಗಜರು ಸಿನಿಮಾದಲ್ಲಿ. ಈ ಚಿತ್ರದಲ್ಲಿ ನಿಜ ಜೀವನದಲ್ಲಿ ಅಂಬಿ ಮತ್ತು ವಿಷ್ಣು ಇರುವಂತೆಯೇ ತೋರಿಸಲಾಗಿತ್ತು. ಈ ಚಿತ್ರದಲ್ಲಿ ಅಂಬರೀಶ್ ‘ಓ ಗೆಳೆಯ ನಿನಗೆ ಸ್ಯಾಣೆ ಕೋಪ ಕಣೋ’ ಅಂತಾ ವಿಷ್ಣುವರ್ಧನ್ ಬಗ್ಗೆ ಹಾಡುವ ಗೀತೆ ಗೆಳೆತನದ ಎವರ್ಗ್ರೀನ್ ಹಾಡು ಆಗಿದೆ.
ಇಬ್ಬರೂ ಬಿಟ್ಟು ಇನ್ನೊಬ್ಬರು ಇರುತ್ತಿರಲಿಲ್ಲ. ವಿಷ್ಣುವರ್ಧನ್ ಸಿನಿಮಾ ಕಾರ್ಯಕ್ರಮವಾಗಲಿ ಅಥವಾ ಹೊರೆಗೆ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಅಂಬರೀಶ್ ಅಲ್ಲಿರಬೇಕಿತ್ತು. ಅಂಬಿಯಿಲ್ಲದೇ ವಿಷ್ಣುವರ್ಧನ್ ಯಾವುದೇ ಕಾರ್ಯಕ್ರಮಕ್ಕೆ ಹೋಗುತ್ತಿರಲಿಲ್ವಂತೆ.
ಈ ಸಂಗತಿ ನಿಮಗೆ ಗೊತ್ತೇ?: ಈ ಸ್ಟಾರ್ ಸ್ನೇಹಿತರ ಬಗ್ಗೆ ಇಲ್ಲೊಂದು ಅಚ್ಚರಿಯ ವಿಚಾರವಿದೆ. ಅಂಬಿ-ವಿಷ್ಣು ಆಪ್ತರಾಗಿದ್ದರೂ ಅವರ ಆಲೋಚನೆಗಳು ಮಾತ್ರ ತದ್ವಿರುದ್ಧ. ಜನರ ಜೊತೆ ಬೆರೆಯುವ ವಿಚಾರದಲ್ಲಿ ವಿಷ್ಣುವರ್ಧನ್ ಸ್ವಲ್ಪ ದೂರ ಸರಿಯುತ್ತಿದ್ದರು. ಆದರೆ ಅಂಬರೀಶ್ ಸದಾ ಜನರೊಂದಿಗೆ ಬೆರೆಯುತ್ತಿದ್ದರು. ವಿಷ್ಣು ರಾಜಕೀಯ ಎಂದರೆ ದೂರ ಸರಿದು ನಿಲ್ಲುತ್ತಿದ್ದರು. ಹಾಗಾಗಿ ರಾಜಕೀಯಕ್ಕೆ ಕಾಲಿಡಲೇ ಇಲ್ಲ. ಆದರೆ ಮಂಡ್ಯದಲ್ಲಿ ಅಂಬರೀಶ್ ಸ್ಪರ್ಧಿಸುವ ವೇಳೆ ನಾಮಿನೇಷನ್ ದಿನ ಗೆಳೆಯನ ಜೊತೆ ವಿಷ್ಣುವರ್ಧನ್ ಬಂದಿದ್ದರು. ಸದ್ಯ ನಮ್ಮೊಂದಿಗೆ ಇಬ್ಬರೂ ಇಲ್ಲ. ಆದರೆ ರೀಲ್ ಹಾಗೂ ರಿಯಲ್ ಲೈಫ್ನಲ್ಲೂ ಅವರ ಗೆಳೆತನ ಇಂದಿಗೂ ಮಾದರಿ.
ಅಪರಾಧ
“ಜನಸೇವೆಗೆ ನೇಮಕ, ಭ್ರಷ್ಟಾಚಾರಕ್ಕೆ ಅಲ್ಲ”: ಅಧಿಕಾರಿಗಳಿಗೆ ಉಪಲೋಕಾಯುಕ್ತ ಖಡಕ್ ಸಂದೇಶ
ಮಂಡ್ಯ: ರಾಜ್ಯದ ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ Justice B. Veerappa ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಹಾಗೂ ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಹೇಳಿದ್ದಾರೆ.
ಡಾ. B. R. Ambedkar ರಚಿಸಿದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ. ಆದರೆ ಭ್ರಷ್ಟಾಚಾರ ಸಂವಿಧಾನದ ಮೂಲ ಉದ್ದೇಶವನ್ನೇ ಹಾಳು ಮಾಡುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ರಾಜ್ಯದ 16 ಜಿಲ್ಲೆಗಳಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ ನ್ಯಾ. ವೀರಪ್ಪ, Transparency International ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದರು. “180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ ಕೇವಲ 39 ಅಂಕಗಳನ್ನು ಪಡೆದಿದೆ” ಎಂದು ಹೇಳಿದರು.
“ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಭ್ರಷ್ಟ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿದ್ದ ವೇಳೆ ಲೋಕ ಅದಾಲತ್ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು.
ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು ಎಂದು ಮನವಿ ಮಾಡಿದ ಅವರು, “ಬದಲಾವಣೆ ಅಧಿಕಾರಿಗಳಿಂದ ಮಾತ್ರವಲ್ಲ, ನಾಗರಿಕರಿಂದಲೂ ಆಗಬೇಕು” ಎಂದು ಹೇಳಿದರು.
ದೇಶ
‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.
ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.
“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ದೇಶ
ಪೆಟ್ರೋಲ್-ಡಿಸೇಲ್ ತೆರಿಗೆ ಕಡಿತಕ್ಕೆ ಸಿಎಂ ಸ್ಪಷ್ಟ ನಕಾರ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಚರ್ಚೆಗಳು ತೀವ್ರವಾಗಿರುವ ನಡುವೆ ಮುಖ್ಯಮಂತ್ರಿ Siddaramaiah ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸಿದರೆ ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಏರಿಕೆ ಮಾಡಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಎಂದು ಆರೋಪಿಸಿದರು.
ಮುಂದುವರಿದು ಅವರು, “Narendra Modi ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡಿಸೇಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ Manmohan Singh ಅವಧಿಯಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ ₹414 ಇತ್ತು. ಈಗ ದರ ಎಷ್ಟು ಏರಿದೆ ಎಂಬುದನ್ನು ಜನರು ಗಮನಿಸಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಜನರಿಗೆ ಯಾವುದೇ ನೆರವು ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ದರ ಹೆಚ್ಚಿಸಿದಾಗ ಅವರ ವಿರುದ್ಧ ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕೆಂದು ಕೇಳುತ್ತೀರಿ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರ ನಿಲುವು ಕಾಣಿಸುತ್ತದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು.
ಇಂಧನ ದರ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.
-
ಕ್ರೀಡೆ21 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ19 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ17 hours ago‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ
-
ದೇಶ19 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ದೇಶ18 hours agoಸಿ.ಟಿ. ರವಿ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಭಾರೀ ಘರ್ಷಣೆ
-
ದೇಶ22 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ22 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
-
ಅಪರಾಧ23 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
