Connect with us

ದೇಶ

2ನೇ ದಿನಕ್ಕೆ ಕಾಲಿಟ್ಟ ದೋಸ್ತಿ ನಾಯಕರ ಪಾದಯಾತ್ರೆ; ಇದು ಹಗರಣಗಳ ಕೂಪ ಅಂತ ವಿಜಯೇಂದ್ರ ವಾಗ್ದಾಳಿ

Published

on

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ `ಮೈಸೂರು ಚಲೋ’ (Mysuru Chalo) ಪಾದಯಾತ್ರೆಯು 2ನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ದಿನಂದಂತೆಯೇ `ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿʼ, ʻಧಿಕ್ಕಾರ, ಧಿಕ್ಕಾರ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ, ರಾಜ್ಯ ಸರ್ಕಾರಕ್ಕೆ ಧಿಕ್ಕಾರʼ ಘೋಷಣೆಗಳನ್ನು ಬಿಜೆಪಿ-ಜೆಡಿಎಸ್ ನಾಯಕರು ಮೊಳಗಿಸುತ್ತಿದ್ದಾರೆ.

ಬೆಳಗ್ಗೆ 9:30ರ ಸುಮಾರಿಗೆ 2ನೇ ದಿನದ ಪಾದಯಾತ್ರೆ ಆರಂಭಗೊಂಡಿದ್ದು, ಬಿಡದಿಯಿಂದ ರಾಮನಗರದ (Ramanagara) ಕೆಂಗಲ್‌ವರೆಗೆ ಅಂದ್ರೆ ಸುಮಾರು 22 ಕಿಮೀ ವರೆಗೆ ಪಾದಯಾತ್ರೆ ಸಾಗಲಿದೆ. ರಾಮನಗರದಲ್ಲಿ ಸಂಜೆ 4 ಗಂಟೆ ವೇಳೆಗೆ ದೋಸ್ತಿ ನಾಯಕರಿಂದ ಸಾರ್ವಜನಿಕ ಸಭೆ ನಡೆಯಲಿದೆ. ಶನಿವಾರ (ಆ.3) ಕೆಂಗೇರಿಯಲ್ಲಿ ಉದ್ಘಾಟನೆಗೊಂಡ ಪಾದಯಾತ್ರೆಯು ಮೊದಲ ದಿನ ಬಿಡದಿವರೆಗೆ ನಡೆದಿತ್ತು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪಾದಯಾತ್ರೆ ನೋಡಿ ಆಡಳಿತ ಪಕ್ಷ ಗಾಬರಿಯಾಗಿದೆ. ರಾಜ್ಯದ ಜನರ ಪರ ನಾವು ಸರ್ಕಾರಕ್ಕೆ ಪ್ರಶ್ನೆ ಕೇಳ್ತಿದ್ದೀವಿ. ನಮ್ಮ ಪ್ರಶ್ನೆಗಳಿಗೆ ಅವರಿಬ್ಬರೂ (ಸಿಎಂ, ಡಿಸಿಎಂ) ಉತ್ತರ ಕೊಡಬೇಕು. ಅವರು ಉತ್ತರ ಕೊಡುವ ಬದಲು ಬೆದರಿಕೆ ಹಾಕ್ತಿದ್ದಾರೆ. ಸದನದಲ್ಲೂ ಅವರು ಅಕ್ರಮಗಳ ಬಗ್ಗೆ ಉತ್ತರ ಕೊಡಲಿಲ್ಲ. ಆದರೆ ಉತ್ತರ ಕೊಡೋವರೆಗೂ ನಾವು ಬಿಡಲ್ಲ, ಹೋರಾಟ ಬಿಡಲ್ಲ. ಇದು ಹಗರಣಗಳ ಕೂಪ ಆಗಿದೆ. ಆಡಳಿತ ಪಕ್ಷದ ಪರಿಸ್ಥಿತಿ ಹಾಳಾಗಿದೆ. ಭ್ರಷ್ಟಾಚಾರದಲ್ಲಿ ಎಲ್ಲರೂ ನಿರತರಾಗಿದ್ದಾರೆ. ಪಿಎಸ್‌ಐ ಪರಶುರಾಮ್ ಅವರು ಶಾಸಕರ ಒತ್ತಡದ ಕಾರಣ ಮೃತ ಪಟ್ಟಿದ್ದಾರೆ. ಸ್ಥಳೀಯ ಶಾಸಕ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದೇ ಪರಶುರಾಮ್ ಸಾವಿಗೆ ಕಾರಣ. ಅಷ್ಟೇ ಅಲ್ಲ ನಿರಂತರವಾಗಿ ವರ್ಗಾವಣೆ ದಂಧೆಯೂ ನಡೀತಿದೆ ಎಂದು ಗುಡುಗಿದ್ದಾರೆ.

ಯತ್ನಾಳ್ ವಿರುದ್ಧ ಶಾಸಕ ಕೃಷ್ಣಪ್ಪ ವಾಗ್ದಾಳಿ:
ಪಾದಯಾತ್ರೆಗೂ ಮುನ್ನ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಕೃಷ್ಣಪ್ಪ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾದಯಾತ್ರೆ ಬಗ್ಗೆ ನಮ್ಮದೇ ಪಕ್ಷದ ಕೆಲವರು ಟೀಕೆ ಮಾಡ್ತಿದ್ದಾರೆ. ಯತ್ನಾಳ್ ಅವರೇ ಯಾಕೆ ಹೀಗ್ ಮಾಡ್ತೀರಿ? ಪಕ್ಷ ಸಂಘಟನೆಗೆ ಗಮನ ಕೊಡಿ. ಬಿಜೆಪಿ ಸರ್ಕಾರ ಇದ್ದಾಗಲೂ ಮಾತಾಡ್ತಿದ್ರಿ, ಈಗಲೂ ಮಾತಾಡ್ತಿದೀರಿ. ಪಕ್ಷದ ವಿಚಾರ ಯಾಕೆ ಹೀಗೆಲ್ಲ ಮಾತಾಡ್ತೀರಿ. ನಿಮ್ಮ ಕ್ಷೇತ್ರದಲ್ಲೇ ನೀವು ಲೀಡ್ ಕೊಡಿಸೋಕ್ಕೆ ಆಗಲಿಲ್ಲ. ನೀವೇನು ಪಾದಯಾತ್ರೆ ಬಗ್ಗೆ ಮಾತಾಡೋದು? ಮೊದಲು ನಿಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶ

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್‌ಗೆ; FTA ಮೂಲಕ ಹೊಸ ಅಧ್ಯಾಯ

Published

on

ಆಕ್ಲೆಂಡ್: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (Free Trade Agreement – FTA) ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದಲ್ಲಿ ಐತಿಹಾಸಿಕ ಮೈಲಿಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಕಳೆದ 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು **ನ್ಯೂಜಿಲ್ಯಾಂಡ್ (New Zealand)**ಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದ್ದು, ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, ಆರ್ಥಿಕ ಹಾಗೂ ವ್ಯೂಹಾತ್ಮಕ ಸಹಕಾರಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಆಕ್ಲೆಂಡ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅತ್ಯಂತ ಕಡಿಮೆ ಅವಧಿಯಲ್ಲಿ ಭಾರತ-ನ್ಯೂಜಿಲ್ಯಾಂಡ್ FTA ಯಶಸ್ವಿಯಾಗಿ ಪೂರ್ಣಗೊಳಿಸಿದ ನ್ಯೂಜಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ (Christopher Luxon) ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿದರು. ಕಳೆದ ವರ್ಷ ಹೋಲಿ ಹಬ್ಬದ ವೇಳೆ ಲಕ್ಸನ್ ಭಾರತಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡ ಅವರು, ಅಂದೇ ಆರಂಭವಾದ ಮಾತುಕತೆಗಳು ಇಂದು ಐತಿಹಾಸಿಕ ಒಪ್ಪಂದದ ರೂಪ ಪಡೆದಿವೆ ಎಂದರು.

ಪ್ರಧಾನಿ ಮೋದಿ ಅವರ ಪ್ರಕಾರ, ಈ ಒಪ್ಪಂದವು ಕೇವಲ ವ್ಯಾಪಾರಕ್ಕೆ ಸೀಮಿತವಾಗಿಲ್ಲ. ಭಾರತ ಮತ್ತು ನ್ಯೂಜಿಲ್ಯಾಂಡ್ ಈಗ ವ್ಯೂಹಾತ್ಮಕ ಪಾಲುದಾರಿಕೆ (Strategic Partnership) ಮೂಲಕ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಡಲ ಭದ್ರತೆ, ಆರ್ಥಿಕ ಬೆಳವಣಿಗೆ ಹಾಗೂ ಜಾಗತಿಕ ಶಾಂತಿಗೆ ಒಟ್ಟಾಗಿ ಕಾರ್ಯನಿರ್ವಹಿಸಲಿವೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಂಚಿಕೊಂಡಿರುವ ಎರಡೂ ರಾಷ್ಟ್ರಗಳು ಸಹಜ ಪಾಲುದಾರರಾಗಿವೆ ಎಂದು ಅವರು ಹೇಳಿದರು.

FTA ಜಾರಿಯಾದ ಬಳಿಕ ಎರಡೂ ದೇಶಗಳ ಉದ್ಯಮಿಗಳು, ರೈತರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಮಹಿಳಾ ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ನುರಿತ ವೃತ್ತಿಪರರಿಗೆ ಹೊಸ ವ್ಯಾಪಾರ, ಹೂಡಿಕೆ ಮತ್ತು ಉದ್ಯೋಗ ಅವಕಾಶಗಳು ಸಿಗಲಿವೆ. ದ್ವಿಪಕ್ಷೀಯ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಒಪ್ಪಂದ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ಎರಡೂ ದೇಶಗಳ ನಾಯಕರು ವ್ಯಕ್ತಪಡಿಸಿದ್ದಾರೆ.

Continue Reading

ದೇಶ

ಲೋಕಸಭೆ-ವಿಧಾನಸಭೆ ಚುನಾವಣೆ ಒಂದೇ ದಿನ? 2029 ಗುರಿಯಾಗಿಸಿಕೊಂಡ ಕೇಂದ್ರದ ಯೋಜನೆ

Published

on

ನವದೆಹಲಿ: ದೇಶದಲ್ಲಿ ಹಲವು ವರ್ಷಗಳಿಂದ ಚರ್ಚೆಯಾಗುತ್ತಿರುವ ‘ಒಂದು ದೇಶ-ಒಂದು ಚುನಾವಣೆ’ (One Nation One Election) ವ್ಯವಸ್ಥೆಯನ್ನು 2029ರ ಲೋಕಸಭೆ ಚುನಾವಣೆ (Lok Sabha Election 2029) ವೇಳೆಗೆ ಜಾರಿಗೆ ತರಲು ಜಂಟಿ ಸಂಸದೀಯ ಸಮಿತಿ (JPC) ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಿದೆ. ಈ ಕುರಿತು ಜೆಪಿಸಿ ಅಧ್ಯಕ್ಷ ಪಿ.ಪಿ. ಚೌಧರಿ ಮಾಹಿತಿ ನೀಡಿದ್ದು, ಎಲ್ಲಾ ರಾಜ್ಯಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಾನುಮತದ ಕಾರ್ಯವಿಧಾನ ರೂಪಿಸಲು ಸಮಿತಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಂದೇ ವೇಳೆ ನಡೆಸುವ ಸಾಧ್ಯತೆಗಳ ಬಗ್ಗೆ ತಜ್ಞರು, ನಾಗರಿಕ ಸಮಾಜ ಹಾಗೂ ವಿವಿಧ ವಲಯಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಸಮಿತಿಯ ಪ್ರಾಥಮಿಕ ಸಮಾಲೋಚನೆಗಳಲ್ಲಿ ಭಾಗವಹಿಸಿದ ಸುಮಾರು 99 ಪ್ರತಿಶತ ನಾಗರಿಕರು ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ ಹಾಗೂ ಗೋವಾ ಸೇರಿದಂತೆ ಹಲವು ರಾಜ್ಯಗಳಿಗೆ ಜೆಪಿಸಿ ಭೇಟಿ ನೀಡಿ ಸಂವಿಧಾನ ತಜ್ಞರು, ಶಿಕ್ಷಣ ತಜ್ಞರು ಮತ್ತು ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದೆ. ರಾಜ್ಯ ವಿಧಾನಸಭೆಗಳ ಅವಧಿಯನ್ನು ಲೋಕಸಭೆ ಚುನಾವಣೆಯೊಂದಿಗೆ ಹೊಂದಾಣಿಕೆ ಮಾಡುವ ಕುರಿತು ಅಭಿಪ್ರಾಯ ಸಂಗ್ರಹ ನಡೆಯುತ್ತಿದೆ.

ಜೆಪಿಸಿ ಪ್ರಕಾರ, ಒಂದು ದೇಶ-ಒಂದು ಚುನಾವಣೆ ಜಾರಿಯಾದರೆ ಪದೇಪದೇ ಜಾರಿಯಾಗುವ ಮಾದರಿ ನೀತಿ ಸಂಹಿತೆ (Model Code of Conduct) ಸಮಸ್ಯೆ ಕಡಿಮೆಯಾಗಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ. ಜೊತೆಗೆ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಪ್ರಮಾಣ ಕಡಿಮೆಯಾಗುವುದರಿಂದ ಶಿಕ್ಷಣ ಕ್ಷೇತ್ರಕ್ಕೂ ಅನುಕೂಲವಾಗಲಿದೆ. ಪ್ರತ್ಯೇಕ ಚುನಾವಣೆಗಳಿಗೆ ಆಗುವ ಸಾವಿರಾರು ಕೋಟಿ ರೂಪಾಯಿ ವೆಚ್ಚವನ್ನು ಉಳಿತಾಯ ಮಾಡಿ ಮೂಲಸೌಕರ್ಯ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಬಳಸುವ ಅವಕಾಶ ಸಿಗಲಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

Continue Reading

ದೇಶ

ಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್‌ನಲ್ಲಿ ಖಲಿಸ್ತಾನಿ ಘೋಷಣೆ

Published

on

ಮೆಲ್ಬೋರ್ನ್: ಆಸ್ಟ್ರೇಲಿಯಾ (Australia) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಂಗಿದ್ದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಖಲಿಸ್ತಾನಿ ಬೆಂಬಲಿಗನೊಬ್ಬ ಭಾರತ ವಿರೋಧಿ ಘೋಷಣೆ ಕೂಗಿದ ಘಟನೆ ಭದ್ರತಾ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆಯ ಬಳಿಕ ಸ್ಥಳೀಯ ಭದ್ರತಾ ಸಿಬ್ಬಂದಿ ಹಾಗೂ ವಿಕ್ಟೋರಿಯಾ ಪೊಲೀಸರು (Victoria Police) ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದು ಹೋಟೆಲ್ ಆವರಣದಿಂದ ಹೊರಗೆ ಕರೆದೊಯ್ದಿದ್ದಾರೆ.

ಮಾಹಿತಿಯ ಪ್ರಕಾರ, ಕೆಲ ಪ್ರತಿಭಟನಾಕಾರರು ಹೋಟೆಲ್ ಹೊರಭಾಗದಲ್ಲಿ ಖಲಿಸ್ತಾನಿ ಧ್ವಜಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಅವರಲ್ಲಿ ಒಬ್ಬ ವ್ಯಕ್ತಿ ಹೋಟೆಲ್‌ನ ಬಾಲ್ಕನಿ ಭಾಗದವರೆಗೆ ತೆರಳಿ ಕೆಲಕಾಲ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆ ಪ್ರಧಾನಿ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಭಾರತದ ಪ್ರಧಾನಿ ತಂಗಿದ್ದ ಹೋಟೆಲ್‌ ಸುತ್ತಮುತ್ತ ಕಠಿಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದ್ದರೂ, ಪ್ರತಿಭಟನಾಕಾರ ಹೋಟೆಲ್ ಪ್ರದೇಶದೊಳಗೆ ಪ್ರವೇಶಿಸಿರುವುದು ಗಮನ ಸೆಳೆದಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿದ್ದು, ಭದ್ರತಾ ಲೋಪದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ವಿದೇಶಗಳಲ್ಲಿ ಭಾರತೀಯ ರಾಯಭಾರ ಕಚೇರಿಗಳು, ಭಾರತೀಯ ನಾಯಕರು ಹಾಗೂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಲವು ಖಲಿಸ್ತಾನಿ ಬೆಂಬಲಿಗರು ಪ್ರತಿಭಟನೆ ನಡೆಸಿರುವ ಘಟನೆಗಳು ಹಲವು ಬಾರಿ ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ವೇಳೆ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಧಿಕೃತ ತನಿಖೆ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಭಟನೆಯ ಹಿಂದೆ ಯಾವುದೇ ಸಂಘಟಿತ ಭದ್ರತಾ ಉಲ್ಲಂಘನೆ ಇದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Continue Reading

Trending