ಬೆಂಗಳೂರು
ಹೆಚ್ಡಿಕೆ ಆರೋಗ್ಯದಲ್ಲಿ ಚೇತರಿಕೆ: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಖಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಅವರು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ,
ಆದಿಚುಂಚನಗಿರಿ ಮಹಾಸಂಸ್ಧಾಪನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಅರೋಗ್ಯವನು ವಿಚಾರಿಸಿದರು, ನಂತರ ಅವರು ಮಾತನಾಡುತ್ತ ಕುಮಾರಸ್ವಾಮಿ ಅವರು ತುಂಬಾ ಚೆನ್ನಾಗಿದ್ದಾರೆ, ಅವರ ಆರೋಗ್ಯ ಸ್ಧಿರವಗಿದೆ, ಆರೋಗ್ಯದಲ್ಲಿ ಚೇತರಿಕೆದ್ದು ಯಾವುದೇ ತೊಂದರೆ ಇಲ್ಲ, ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ, ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡುತ್ತಾರೆ, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ಸಲಹ ಕೊಟ್ಟಿದ್ದೇನೆ ಎಂದರು,