Connect with us

ದೇಶ

ರಾಜಮನೆತನಕ್ಕೂ ಚಾಮುಂಡಿ ದೇವಾಲಯಕ್ಕೂ ಇರೋ ಸಂಬಂಧವೇನು? ದಾಖಲೆಗಳು ಏನು ಹೇಳ್ತಿವೆ?

ಬೆಟ್ಟದ ಮೇಲೆ ಕುಳಿತಿರುವ ಚಾಮುಂಡೇಶ್ವರಿ ದೇವಿ ಮೈಸೂರು ರಾಜಮನೆತನದ ಪ್ರಧಾನ ದೇವತೆ. ಇಂದು ಸಹ ಅವರ ಮನೆತನದ ಹೆಸರಲ್ಲಿ ಸಂಕಲ್ಪ ಮಾಡಿ ಪೂಜೆ ಮಾಡಲಾಗುತ್ತದೆ. ಅನೇಕ ಹಳೆ ಸಂಪ್ರದಾಯ ಮತ್ತು ಪದ್ದತಿ ಆಚರಣೆಗಳನ್ನು ಮಾಡಲಾಗುತ್ತ್ತದೆ.

ದೇವಾಲಯದಲ್ಲಿ ಗೋಡೆಗಳು, ಅಡುಗೆ ಮನೆ, ಅಥಿತಿ ಗೃಹಗಳು ಸೇರಿ ಅನೇಕ ಅಭಿವೃದ್ದಿ ಕೆಲಸಗಳನ್ನು ಒಡೆಯರ್ ಮಾಡಿದ್ದಾರೆ. ಜೊತೆಗೆ ದೇವಾಲಯಕ್ಕೆ ಅನೇಕ ಚಿನ್ನಾಭರಣಗಳನ್ನು ನೀಡಿದ್ದಾರೆ. ದೇವಾಲಯದ ಪೂಜೆ ಖರ್ಚಿಗಾಗಿ ಭೂಮಿಯನ್ನ ಬಿಟ್ಟಿದ್ದಾರೆ. ಅದಕ್ಕಾಗಿ ನೂರಾರು ವರ್ಷಗಳಿಂದ ಸಂಕಲ್ಪ ಪೂಜೆ ನಡೆಯತ್ತಾ ಬಂದಿದೆ. ರಾಜಮನೆತದ ಹೆಸರಿನಲ್ಲಿಯೇ ಸಂಕಲ್ಪ ಮಾಡಿ ಪೂಜೆ ಆರಂಭ ಮಾಡಲಾಗುತ್ತದೆ. ಆದರಂತೆ ಚಾಮುಂಡಿ ಬೆಟ್ಟದಲ್ಲಿ ಅನೇಕ ಕಾರ್ಯಕ್ರಮ ಆಗುತ್ತವೆ. ದೇವಾಲಯವು ಇಂದು ಸಹ ರಾಜಮನೆತನದ ಅವಿಭಾಜ್ಯ ಅಂಗವಾಗಿದೆ.

ದಾಖಲೆಗಳು ಏನು ಹೇಳುತ್ತವೆ?

1831 ರಲ್ಲಿ ಬ್ರಿಟಿಷ್ ಸರ್ಕಾರ ಮೈಸೂರು ಆಡಳಿತ ವಹಿಸಿಕೊಂಡಿತ್ತು. ಆಗ ಮುಜರಾಯಿ ಕಮಿಷನ್​ಗೆ ಆಡಳಿತದ ವರ್ಗಾವಣೆ ಮಾಡಿತ್ತು. ಆನಂತರ ಅರಮನೆ ಮುಜರಾಯಿ ಸಂಸ್ಥೆಗಳು ಅಂತಾ ಬದಲಾವಣೆ ಮಾಡಲಾಯಿತು. ಆದರೆ ಅದು ಮಹಾರಾಜರ ಬಳಿಯೇ ಅಂದಿನಿಂದಲೂ ಉಳಿದುಕೊಂಡಿದೆ.

ಹೆಚ್ ಪಿ ಶಶಿಧರಮೂರ್ತಿಯವರ ಬುಕ್​ನಲ್ಲಿ ಈ ಬಗ್ಗೆ ಉಲ್ಲೇಖ ಇದೆ. ಕರ್ನಾಟಕ ಸ್ಟೇಟ್ ಆರ್ಚಿವ್ ಡಿಪಾರ್ಟ್​ಮೆಂಟ್ ಮುಜರಾಯಿ ಬುಕ್​ನಲ್ಲಿ ಈ ಕುರಿತಾಗಿ ಮಾಹಿತಿ ಇದೆ. ಚಾಮುಂಡಿ ಬೆಟ್ಟದ ಕಾರ್ಯಗಳು 1970 – 71ರಿಂದ ರಾಜಮನೆತನದ ಒಡೆತನದಲ್ಲಿ ನಡೆಯುತ್ತಿದ್ದವು. 1986 ರಲ್ಲಿ ಮೂರನೇ ಕೃಷ್ಣರಾಜ ಒಡೆಯರ್ ಸಾವನ್ನಪ್ಪುತ್ತಾರೆ. ಆಗ ಸರ್ಕಾರದ ಸುಪರ್ದಿಗೆ ನೀಡಲಾಗಿತ್ತು.

ಅಕ್ಟೋಬರ್​​ 20, 1908 ರಲ್ಲಿ ಮಹಾರಾಜರಿಂದ ಆದೇಶವನ್ನು ಮಾಡಿದ್ದರು. ಚಾಮುಂಡಿ ದೇವಾಲಯದ ಸೇರಿ 12 ದೇವಾಲಯಗಳ ಬಗ್ಗೆ ಆದೇಶ ಹೊರಡಿಸಿದ್ದರು. ದೇವಾಲಯಗಳನ್ನ ಅರಮನೆ ಇಲಾಖೆಗೆ ವರ್ಗಾಯಿಸಿ ಆದೇಶ ನೀಡಿದ್ದರು. ಅಷ್ಟು ದೇವಾಲಯಗಳನ್ನು ಓರ್ವ ಅಧಿಕಾರಿ ನೋಡಿಕೊಳ್ಳಲು ನೇಮಕಗೊಳಿಸಲು ಆದೇಶ ನೀಡಿದ್ದರು.

ಜನವರಿ 20, 1909ರಲ್ಲಿ ಡಿಸಿ ಮೈಸೂರನ್ನು ಮ್ಯಾನೇಜ್ ಮಾಡಲು ಆದೇಶ ಹೊರಡಿಸುತ್ತಾರೆ. ಅದರಂತೆಯೇ ಏಪ್ರಿಲ್​ 14, 1920ರ ವೇಳೆ ಅರಮನೆಗೆ ಇಲಾಖೆ ಆಡಳಿತ ಮಂಡಳಿ ಆದೇಶ ನೀಡುತ್ತದೆ. ಅದರಲ್ಲಿ 29 ದೇವಾಲಯಗಳು ಮಹಾರಾಜರ ಆಡಳಿತದಲ್ಲಿದ್ದವು. ಜನವರಿ 23, 1950 ರಲ್ಲಿ ಭಾರತ ಸರ್ಕಾರ ಮತ್ತು ಮಹಾರಾಜರ ನಡುವೆ ಒಪ್ಪಂದ ನಡೆಯಿತು.

ಮೈಸೂರು ಸಂಸ್ಥಾನ ಭಾರತ ಒಕ್ಕೂಟಕ್ಕೆ ಸೇರುವಾಗ ಮೊದಲ ಒಪ್ಪಂದ ನಡೆಯಿತು. ಚಾಮುಂಡಿ ದೇವಾಲಯ ಸೇರಿ ಮಹಾರಾಜರ ಖಾಸಗಿ ಆಸ್ತಿಗಳ ಬಗ್ಗೆ ಮತ್ತು 29 ದೇವಾಲಯಗಳ ಮೇಲೆ ರಾಜಮನೆತದ ಪೂರ್ತಿ ಮಾಲಕತ್ವವಿದೆ ಎಂದು ಹೇಳಿತು.

ಆಗಸ್ಟ್​ 15, 47ರ ತನಕ ಇದ್ದ ಆಸ್ತಿಗಳ ಮೇಲೆ ಹಕ್ಕು ಹೊಂದಿರುವ ಒಪ್ಪಂದ ಮಾಡಲಾಯಿತು. ಇದಕ್ಕೆ ಮಹಾರಾಜ ಮತ್ತು ಸಿಎಸ್ ಆಫ್ ಭಾರತ ಸರ್ಕಾರದ ಸಹಿ ಇದೆ. ಫೆಬ್ರವರಿ 6, 1951ರ ಮೈಸೂರು ಸರ್ಕಾರದ ಆದೇಶದಲ್ಲಿಯೂ ಉಲ್ಲೇಖವಿದೆ. ಅರಮನೆ ಮುಜರಾಯಿ ಆಸ್ತಿಗಳು ಮಹಾರಾಜರಿಗೆ ಸೇರಿವೆ ಎಂದು ಆದೇಶವಿದೆ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending