Connect with us

ಬೆಂಗಳೂರು

ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ- ಶಾಸಕ ಎಸ್ ಟಿ ಸೋಮಶೇಖರ್

ಬೆಂಗಳೂರು: ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಕೆಂಗೇರಿ ಉಪನಗರದ ಇಂದಿರಾ ಗಾಂಧಿ ಸರ್ಕಲ್ ನಲ್ಲಿ ಧ್ವಜ ರೋಹನ ಮಾಡಿ ನಂತರ ಮಾತನಾಡಿದ ಅವರು ದೇಶ ಮತ್ತು ದೇಶಾಭಿಮಾನ ಎದೆಯೊಳಗೆ ಇದ್ದಾಗ ಮಾತ್ರ ಸ್ವಾತಂತ್ರ್ಯ ಎಂಬುದು ಪರಪೂರ್ಣ ಅರ್ಥ ಪಡೆಯುತ್ತದೆ, ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾಲುಗಾರಿಕೆಯೂ ಮುಖ್ಯ ಪಾತ್ರ ವಹಿಸುತ್ತದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಂವಿಧಾನಿಕ, ರಾಜಕೀಯ, ಪ್ರಾದೇಶಿಕ, ಮಾನಿಸಕ ಮನಸ್ಧಿತಿ ಮತ್ತು ದೈಹಿಕ ವ್ಯಾಪ್ತಿ ಇವೆರಡರ ಸಮ್ಮಿಲನದ ಒಟ್ಟು ಒಂದೊಳ್ಳೆ ನಾಗರಿಕನ ವ್ಯಕ್ತಿತ್ವವೇ ಸ್ವಾತಂತ್ರ್ಯ ಎಂದರು,
ರಾಮರಾಜ್ಯದ ಕನಸು ಕಂಡ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಣ್ಣೊಬ್ಬಳು ಮಧ್ಯ ರಾತ್ರಿ ಒಬ್ಬಂಟಿಯಾಗಿ ರಸ್ತೆಯಲ್ಲಿ ನಡೆದಾಡಿದರೆ ಅವತ್ತು ಈ ದೇಶಕ್ಕೆ ಸಿಗುವುದು ನಿಜವಾದ ಸ್ವಾತಂತ್ರ್ಯ ಎಂದು ಹೇಳಿದ್ದರು, ಅದರೆ ಇಂದು ಭಯದಿಂದಲೇ ದಿನಚರಿ ವ್ಯವಹಾರಗಳನ್ನು ಮುಗಿಸಿ, ಸಂಜೆ ಆಗುತ್ತಲೇ ಭಯದಿಂದಲೇ ಮನೆ ಸೇರುವ ಸ್ಧಿತಿ ನಿರ್ಮಾಣವಾಗಿದೆ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕಂಡ ರಾಮ ರಾಜ್ಯದ ಕನಸು, ಸ್ವಾಮಿ ವಿವೇಕಾನಂದರು ಕಂಡ ಬಲಿಷ್ಠ ಭಾರತದ ಕನಸುಗಳು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕಂಡ ನವ ಭಾರತ ಸಮ ಸಮಾಜ ನಿರ್ಮಾಣದ ಕನಸು ಇಂದು ದೇಶದ ಸಂವಿಧಾನ ಮತ್ತು ದೇಶದ ಪ್ರಗತಿಗೆ ವಿರುದ್ಧವಾಗಿ ದಿಕ್ಕಾಪಾಲಾಗಿ ನಿರ್ದಿಷ್ಟ ಗುರಿಯಿಲ್ಲದೆ ಸಾಗುತ್ತಿದೆ, ದೊಡ್ಡ ದೊಡ್ಡ ಜನರು, ದೊಡ್ಡ ದೊಡ್ಡ ಕಾರುಗಳು ಬಂದವು ಹೋದವು, ಒಂದಷ್ಟು ಕಣ್ಣಿಗೆ ಮಣ್ಣೆರಾಚುವ ಹಣವು ಮನೆಯೊಳಗೆ ಬಂದು ಬಿದ್ದವು ಅದರೆ ತಂದೆ ತಾಯಿಗೆ ಜೀವನದ ಕೊನೆ ಗಳಿಗೆಯಲ್ಲಿ ಅಸರೆಯಾಗಬೇಕಾದ ಪ್ರೀತಿಯ ಮಗನಿಲ್ಲವಾಯಿತು, ಮುಗ್ದ ಮಗುವಿಗೆ ತಂದೆ ಎಂಬ ಪ್ರೀತಿ ಇಲ್ಲದೆ ಅನಾಥವಾಯಿತು ಎಂದರು, ಕಾರ್ಯಕ್ರಮದಲ್ಲಿ ಬಂಡೇಮಠ ವಾರ್ಡ್ ಅಧ್ಯಕ್ಷ ಟಿ.ಪ್ರಭಾಕರ್, ಸ್ವಾಭಿಮಾನ ಮಹಿಳಾ ಟ್ರಸ್ಟ್ ಅಧ್ಯಕ್ಷೆ ಅನುಪಮಾ ಪಂಚಾಕ್ಷರಿ, ಸ್ಧಳೀಯ ಕಾಂಗ್ರೆಸ್ ಮುಖಂಡರಾದ ಶಿವು, ಕೆ.ವೈ.ಕೃಷ್ಣ, ಸಜ್ಜಾದ್ ಬಾಬು, ರೋಹಿಣಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಧಿತರಿದ್ದರು,

ದೇಶ

SHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು, ಫೆಬ್ರವರಿ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ Shakti Scheme ಅಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ನುಮುಂದೆ ಆಧಾರ್ ಕಾರ್ಡ್ ಬದಲಾಗಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಈ ಕುರಿತು ಮುಖ್ಯಮಂತ್ರಿ Siddaramaiah ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲಿವೆ. ಈ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.


ಬೆಂಗಳೂರು ರೇಸ್ ಕೋರ್ಸ್ ಕುಣಿಗಲ್‌ಗೆ ಶಿಫ್ಟ್

ಬೆಂಗಳೂರಿನ ಪ್ರಸಿದ್ಧ Bangalore Turf Club (ರೇಸ್ ಕೋರ್ಸ್) ಅನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್ ಫಾರ್ಮ್‌ಗೆ ಸ್ಥಳಾಂತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಲೀಸ್ ಅವಧಿ ಮುಕ್ತಾಯವಾಗಿರುವುದು ಹಾಗೂ ಬಾಡಿಗೆ ಪರಿಷ್ಕರಣೆ ಆಗಿರದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಕ್ಲಬ್‌ನ ಜಾಗವನ್ನು ಹಾಗೆಯೇ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.


ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ–ಸಾಕ್ಸ್

1ರಿಂದ 10ನೇ ತರಗತಿ ತನಕ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ 2026-27ನೇ ಸಾಲಿಗೆ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.


ಇತರೆ ಪ್ರಮುಖ ನಿರ್ಧಾರಗಳು

  • ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ
  • ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ‘ಶಾಶ್ವತ ವಿಶೇಷ ಕೃಷಿವಲಯ’ವಾಗಿ ಘೋಷಣೆ
  • ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ಸ್ಥಾಪನೆ
  • ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಶಿಷ್ಟಾಚಾರ ನಿಯಮ ಜಾರಿಗೆ ಅನುಮೋದನೆ
  • ನ್ಯಾಯಾಲಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಅನುಮತಿ

ವಿಪಕ್ಷಗಳ ಟೀಕೆಗೆ ಗುರಿಯಾಗಿರುವ SIR ವಿಷಯದಲ್ಲಿಯೂ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿದೆ. ಕಾನೂನು ಇಲಾಖೆ ಸಮಗ್ರ ಅಧ್ಯಯನ ನಡೆಸಿ ಮುಂದಿನ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.

Continue Reading

ದೇಶ

ದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ.

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಅತಿವೇಗವೇ ಕಾರಣ?

ಪ್ರಾಥಮಿಕ ತನಿಖೆಯ ಪ್ರಕಾರ, ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್‌ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ.


ಪೊಲೀಸ್ ಪರಿಶೀಲನೆ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


‘ಅವೈಜ್ಞಾನಿಕ ರಸ್ತೆ’ ಆರೋಪ

ಅಪಘಾತ ನಡೆದ ಸ್ಥಳದ ರಸ್ತೆ ವಿನ್ಯಾಸ ಮತ್ತು ನಿರ್ಮಾಣದ ಬಗ್ಗೆ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ಹೆದ್ದಾರಿ ಸರಿಯಾದ ವಿನ್ಯಾಸ ಹೊಂದಿಲ್ಲ ಎಂದು ಅವರು ದೂರಿದ್ದಾರೆ.

ಸ್ಥಳೀಯ ನಿವಾಸಿ ಮಂಜುನಾಥ್ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದಾರೆ. ಕಾಮಗಾರಿ ಸಂದರ್ಭದಲ್ಲೇ ಎಂಜಿನಿಯರ್ ಒಬ್ಬರು ವಿನ್ಯಾಸದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಅದನ್ನು ಪರಿಗಣಿಸಲಿಲ್ಲ ಎಂದು ಹೇಳಿದ್ದಾರೆ.

ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಿದ್ದರೂ, ಕೆಲವೆಡೆ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇರುವುದಾಗಿ ಅವರು ತಿಳಿಸಿದ್ದಾರೆ. 2010ರಲ್ಲಿ ರೈತರು ಜಮೀನುಗಳನ್ನು ಹೆದ್ದಾರಿ ಯೋಜನೆಗೆ ನೀಡಿದ್ದರೂ, ಸಮರ್ಪಕ ಪರಿಹಾರವೂ ಸಿಗಲಿಲ್ಲ ಮತ್ತು ರಸ್ತೆ ಗುಣಮಟ್ಟವೂ ಸಮರ್ಪಕವಾಗಿಲ್ಲ ಎಂದು ಆರೋಪಿಸಲಾಗಿದೆ.

Continue Reading

ದೇಶ

BMSCE ವಿಜ್ಞಾನ ಪ್ರದರ್ಶನ: 14 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 60+ ಮಾದರಿ ಪ್ರದರ್ಶನ

ಬೆಂಗಳೂರು: BMS College of Engineering ವತಿಯಿಂದ ಯುವಕ ಸಂಘದ ಕ್ಯಾಂಪಸ್–2 ಕಮ್ಯೂನಿಟಿ ಯೋಜನೆ ಅಡಿಯಲ್ಲಿ ವಿಜ್ಞಾನ ಮಾದರಿಗಳ ಅಂತಿಮ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಕಾಲೇಜು ಆವರಣದಲ್ಲಿ ಭರ್ಜರಿಯಾಗಿ ಆಯೋಜಿಸಲಾಯಿತು.

ಕಳೆದ 8 ತಿಂಗಳುಗಳಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪರಿಸರ, ವಿಜ್ಞಾನ, ಜೀವನ ಕೌಶಲ್ಯ ಮತ್ತು ಮಾನಸಿಕ ಸಮಾಲೋಚನೆ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲಾಗಿತ್ತು. ತರಬೇತಿಯ ಬಳಿಕ ಆಯ್ಕೆಯಾದ ಪ್ರಾಜೆಕ್ಟ್‌ಗಳನ್ನು ಈ ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.


60ಕ್ಕೂ ಹೆಚ್ಚು ವಿಜ್ಞಾನ ಮಾದರಿ ಪ್ರದರ್ಶನ

14 ಶಾಲೆಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, 60ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸೃಜನಶೀಲತೆ, ವೈಜ್ಞಾನಿಕ ಮನೋಭಾವ ಮತ್ತು ನವೀನ ಆಲೋಚನೆಗಳು ವಿಶೇಷವಾಗಿ ಗಮನಸೆಳೆದವು.


🎓 ಗಣ್ಯರ ಉಪಸ್ಥಿತಿ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎನ್‌ಎಸ್‌ಎಸ್ ರಾಜ್ಯ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ:

  • ಡಾ. ಭೀಮಶಾ ಆರ್ಯ – ಪ್ರಾಂಶುಪಾಲರು
  • ಡಾ. ಎಲ್. ರವಿಕುಮಾರ್ – ಉಪ ಪ್ರಾಂಶುಪಾಲರು
  • ಡಾ. ಶೇಷಾಚಲಂ – ಉಪ ಪ್ರಾಂಶುಪಾಲರು
  • ಡಾ. ಸುಜಾತಾ ಎನ್. – ಯೋಜನಾ ಅಧಿಕಾರಿ
  • ಯುವಕ ಸಂಘದ ಸಂಯೋಜಕರು

ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ವಿದ್ಯಾರ್ಥಿಗಳಿಗೆ ಸೌಲಭ್ಯ

ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪ್ಯಾಡ್‌ಗಳನ್ನು ವಿತರಿಸಲಾಯಿತು. ಜೊತೆಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು.


ವೈಜ್ಞಾನಿಕ ಚಿಂತನೆಗೆ ಉತ್ತೇಜನ

ಒಟ್ಟಾರೆ, ಈ ವಿಜ್ಞಾನ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಮತ್ತು ನವೀನತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವಹಿಸಿತು. ಶಾಲಾ–ಕಾಲೇಜು ಸಹಯೋಗದ ಉತ್ತಮ ಉದಾಹರಣೆಯಾಗಿ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು.

Continue Reading

Trending