ಅಪರಾಧ

ರೇಣುಕಾಸ್ವಾಮಿಯ ಕೊಲೆ ಕೇಸ್ ಬಿಗ್ ಅಪ್ಡೇಟ್ ಕೊಟ್ಟ ಪೊಲೀಸ್ ಆಯುಕ್ತ

ಬೆಂಗಳೂರು; ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಕೇಸ್‍ಗೆ ಸಂಬಂಧಿಸಿ ತನಿಖೆಯು ಅಂತಿಮ ಹಂತಕ್ಕೆ ತಲುಪಿದ್ದು ಶೀಘ್ರವೇ ಚಾರ್ಜ್‍ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು,
ಈ ಕುರಿತು ಮಾತನಾಡಿ ಪ್ರಕರಣ ಸಂಬಂಧ ಬಹುತೇಕ ಎಫ್‍ಎಸ್‍ಎಲ್ ವರದಿಗಳು ಪೊಲೀಸರ ಕೈಗೆ ಸೇರಿದ್ದು, ಅನೇಕ ಮೌಖಿಕ ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷಿಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ, ಹಲವು ಸಾಕ್ಷ್ಯಾಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಬಹುತೇಕ ವರದಿಗಳು ಪೊಲೀಸರಿಗೆ ತಲುಪಿದೆ, ಅದರೆ ಕೆಲ ಎಲೆಕ್ಟ್ರಾನಿಕ್ ಡಿವೈಸ್‍ಗಳ ಎಫ್‍ಎಸ್‍ಎಲ್ ರಿಪೋರ್ಟ್ ಬರಬೇಕಿದೆ, ಬಾಕಿ ವರದಿಗಳು ಸದ್ಯದಲ್ಲಿ ಕಳುಹಿಸಿಕೊಡಲಾಗುವುದು ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ಅವರು ಮಾಹಿತಿ ನೀಡಿದರು,
ಕೊಲೆ ಆರೋಪದಲ್ಲಿ ಸದ್ಯ ನಟ ದರ್ಶನ & ಗ್ಯಾಂಗ್ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ, ದರ್ಶನ ಆಪ್ತೆ ಪವಿತ್ರಾಗೌಡ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಸಂಚು ರೂಪಿಸಿ ಅಪಹರಣ ಮಾಡಿ ಬೆಂಗಳೂರಿನ ಪಟ್ಟಣಗೆರೆ ಶೆಡ್‍ಗೆ ಕರೆತಂದು ಹಲ್ಲೆ ನಡೆಸಿ ಕೊಲೆಗೈಯಲಾಗಿತ್ತು,

Leave a Reply

Your email address will not be published. Required fields are marked *

Trending

Exit mobile version