ಬೆಂಗಳೂರು

ಇನ್ನು ಮುಂದೆ ಸಿಗಲ್ಲ ಅನ್ನಭಾಗ್ಯ ಹಣ!

ಬೆಂಗಳೂರು; ರಾಜ್ಯದಲ್ಲಿ ಇನ್ನು ಮುಂದೆ ಸಿಗಲ್ಲ ಅನ್ನಭಾಗ್ಯ ಯೋಜನೆಯ ಹಣ, ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ಬದಲು ನೀಡುತ್ತಿದ್ದ ಹಣ ಈಗ ಬಂದ್ ಆಗಲಿದೆ,
ಹೌದು, ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ನೀಡುತ್ತಿದ್ದ 5 ಕೆ.ಜಿ. ಅಕ್ಕಿ ಹಣ ಮುಂದೆ ಫಲಾನುಭವಿಗಳಿಗೆ ಸಿಗುವುದು ಬಂದ್ ಆಗಲಿದ್ದು, ಇನ್ನು ಹಣದ ಬದಲು ಅಕ್ಕಿಯನ್ನೇ ನೀಡಲು ಸರ್ಕಾರ ತೀರ್ಮಾನಿಸಿದೆ,
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ಕೇಂದ್ರ ತಿರಸ್ಕರಿಸಿತ್ತು, ಈ ಹಿನ್ನೆಲೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಬದಲು ಅದರ ಹಣವನ್ನು ಫಲಾನುಭವಿಗಳಿಗೆ ನೀಡುತ್ತಿದೆ, ತಲಾ ಒಂದು ಕೆಜಿಗೆ 34 ರೂಪಾಯಿಯಂತೆ 170 ರೂಪಾಯಿ ನೀಡುತ್ತಿದೆ,
ಈ ಕುರಿತು ಎಫ್‍ಸಿಐನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಧಾಪಕ ಮಹೇಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪುರೈಸಲು ಮನವಿ ಮಾಡಿದ್ದು ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ,
ಕಳೆದ ವರ್ಷ ಮಳೆ ಸರಿಯಾಗಿ ಆಗದ ಕಾರಣ ಅಕ್ಕಿ ಕೊರತೆಯಿತ್ತು, ಅದ್ದರಿಂದ ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಲಾಗಲಿಲ್ಲ, ಈ ಬಾರಿ ಉತ್ತಮ ಮಳೆಯಾಗಿದ್ದು, ಕರ್ನಾಟಕ 7.4 ಲಕ್ಷ ಟನ್ ಅಕ್ಕಿ ದಾಸ್ತಾನು ಹೊಂದಿದೆ, 2025 ರ ಮಾರ್ಚ್‍ವರೆಗೆ ಕೆಜಿಗೆ 28 ರೂ ಅಂತೆ ರಾಜ್ಯಕ್ಕೆ ಅಕ್ಕಿ ಪೂರೈಸಲು ಸಿದ್ಧವಿದ್ದೇವೆ ಎಂದು ಅವರು ತಿಳಿಸಿದ್ದಾರೆ ,

Leave a Reply

Your email address will not be published. Required fields are marked *

Trending

Exit mobile version