Connect with us

ಬೆಂಗಳೂರು

ಯಾರೇನೇ ಅಂದ್ರೂ ನೀರಿನ ಬೆಲೆ ಏರಿಕೆ ಗ್ಯಾರೆಂಟಿ-ಡಿಸಿಎಂ

ಬೆಂಗಳೂರು: ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಶತಸಿದ್ಧ, ವೆಚ್ಚದ ಬಗ್ಗೆ ಯೋಚಿಸಿದ್ದರೆ ನೀರು ಪೂರೈಕೆ ಕಷ್ಟವಾಗಲಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನೀರು ಸರಬರಾಜು ಪ್ರಕ್ರಿಯೆಗೆ ಎಷ್ಟು ವರ್ಷದಲ್ಲಿ ಎಷ್ಟು ವೆಚ್ಚವಾಗುತ್ತಿದೆ, ಈಗ ಎಷ್ಟು ಹಣ ಖರ್ಚಾಗುತ್ತಿದೆ ಎಂಬ ಮಾಹಿತಿಯನ್ನು ಒಳಗೊಂಡ ಪ್ರಾಜೆಕ್ಟ್ ರೂಪಿಸಿ ಸಂಬಂಧಿಸಿ ಮಂಡಳಿ ಹಾಗೂ ಸಂಸ್ಧೆಗಳು ಬಿಡುಗಡೆಗೊಳಿಸಬೇಕು, ಮಾಧ್ಯಮಗಳು ಸೇರಿದಂತೆ ಎಲ್ಲರೂ ಈ ಮಾಹಿತಿಗಳನ್ನು ಜನರಿಗೆ ಮತ್ತು ವಿರೋಧಪಕ್ಷಗಳಿಗೆ ಮನವರಿಕೆಯಾಗುವ ರೀತಿ ತಲುಪಿಸುವ ಕೆಲಸ ಮಾಡುವ ಮೂಲಕ ನೀರು, ವೆಚ್ಚ ಸರಬರಾಜು ಬಗ್ಗೆ ಜಾಗೃತಿ ಹುಟ್ಟಿಸುವ ಕೆಲಸದಲ್ಲಿ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ,
ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಏರಿಕೆ ಕುರಿತು ಮಾಹಿತಿ ನೀಡಿದ್ರು,
ಇದೇ ವೇಳೆ ವಿದ್ಯುತ್ ವೆಚ್ಚವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಕಾರ್ಪೋರೇಷನ್, ಪಡಬ್ಲ್ಯುಡಿ ಸೇರಿದಂತೆ ಕೆಲವು ಸಂಸ್ಧೆಗಳು ಒಟ್ಟು ಸೇರಿ ಒಂದು ಘಟಕವನ್ನು ರಚಿಸಿ ಆ ಮೂಲಕ ತಾವೇ ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆ ಸಂಸ್ತೆಗಳಿಗೆ ವಿದ್ಯುತ್ ಹಣದಲ್ಲಿ ಉಳಿತಾಯಕ್ಕೆ ಅವಕಾಶವೂ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ,

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

Trending