Connect with us

ದೇಶ

ಬಿಜೆಪಿಯಲ್ಲಿ ಭಿನ್ನಮತ: ಜೋಶಿ – ವಿಜಯೇಂದ್ರ ಭೇಟಿ, ಹೆಚ್ಚಿದ ಕುತೂಹಲ – VIJAYENDRA MEETS JOSHI

ಹುಬ್ಬಳ್ಳಿ/ಧಾರವಾಡ: ನಗರದ ಮಯೂರ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ‌ ನೀಡಿದರು. ಬಿಜೆಪಿಯಲ್ಲಿನ ಭಿನ್ನಮತದ ಹಿನ್ನೆಲೆಯಲ್ಲಿ ಜೋಶಿ ಮತ್ತು ವಿಜಯೇಂದ್ರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ಜೋಶಿ ಭೇಟಿಗೆ ವಿಶೇಷ ಮಹತ್ವ ಇಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಮಾಜಿ ಸಚಿವರು ಸೇರಿದಂತೆ ಇನ್ನಿತರರನ್ನು ಉಳಿಸುವ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈಗಾಗಲೇ ಎಸ್ಐಟಿ ಚಾರ್ಜ್ ಸೀಟ್​ನಲ್ಲಿಯೂ ನಾಗೇಂದ್ರ ಹಾಗೂ ದದ್ದಲ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.

‌ಸಿದ್ದರಾಮಯ್ಯನವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡದೇ ಇಲ್ಲ ಎಂಬ ದಾಟಿಯಲ್ಲಿ ಮಾತನಾಡಿದ್ದಾರೆ. ಅಲ್ಲದೇ ಮುಡಾ ಹಗರಣದಲ್ಲಿ ಕಾನೂನು ಬಾಹಿರವಾಗಿ ಸಿಎಂ ಅವರ ಧರ್ಮ ಪತ್ನಿಯ ಹೆಸರಿನಲ್ಲಿ ನಿವೇಶನಗಳನ್ನು ಪಡೆದಿದ್ದಾರೆ. ಬಡವರ ಪಾಲಿಗೆ ಬರಬೇಕಿದ್ದ ಮುಡಾ ನಿವೇಶನಗಳನ್ನು ಲೂಟಿ ಮಾಡಿರುವುದು ಖಂಡನೀಯವಾಗಿದೆ. ನೈತಿಕತೆಯಿದ್ದರೇ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನೂ ಐದು ಸಾವಿರ ಕೋಟಿಗೂ ಅಧಿಕ ಬೆಲೆಯ ಮುಡಾ ನಿವೇಶನದಲ್ಲಿ ಅವ್ಯವಹಾರ ಆಗಿದ್ದು, ಈ ಹಗರಣದ ತನಿಖೆಯನ್ನು ಸಿದ್ದರಾಮಯ್ಯನವರು ಸಿಬಿಐಗೆ ವಹಿಸಬೇಕಿದೆ. ಯಾವುದೇ ಅವ್ಯವಹಾರ ಮಾಡಿಲ್ಲ ಎಂದಾದರೇ ಸಿಬಿಐಗೆ ನೀಡಿ ಎಂದು ಒತ್ತಾಯಿಸಿದರು.

ಗುಂಡೂರಾವ್​ಗೆ ವಿಜಯೇಂದ್ರ ಟಾಂಗ್: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ ಕೋರ್ಟ್​ನಲ್ಲಿಯೇ ನ್ಯಾಯ ಸಿಕ್ಕಿದೆ. ಈ ನಿಟ್ಟಿನಲ್ಲಿ ಯಾವುದೇ ಆರೋಪಗಳಿಗೆ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಕುಮಾರಸ್ವಾಮಿ ಕೇಳಗಿಳಿಸುವ ಹುನ್ನಾರ ಎಂಬ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರನ್ನು ಹತ್ತಿಕುವ ಹಾಗೂ ಕೆಳಗಿಸುವ ಕಾರ್ಯವನ್ನು ಮಾಡಿಲ್ಲ. ಅಲ್ಲದೇ ನಮ್ಮಲ್ಲಿ ಸ್ಪಷ್ಟತೆ ಇದೆ. ಹಾಗೇ ಏನಾದರೂ ಇದ್ದರೇ ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿಯವರು ಯಾಕೆ ಬರಬೇಕಿತ್ತು ಎಂದು ಪ್ರಶ್ನಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿಯೇ ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಅಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೂ ಬಂದಿದ್ದೇವೆ. ಮುಂದೆಯೂ ಒಟ್ಟಾಗಿಯೇ ಮುನ್ನಡೆಯಬೇಕೆಂಬ ಅಪೇಕ್ಷೆಯಿದೆ ಎಂದು ವಿಜಯೇಂದ್ರ ಹೇಳಿದರು.

ಸಿಎಂ ರಾಜೀನಾಮೆ ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ಸರ್ಕಾರ ಆತುರದಲ್ಲಿದೆ. ನನಗೆ ಇರುವ ಮಾಹಿತಿ ಪ್ರಕಾರ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟೇ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದರು. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡನಲ್ಲಿ ಕೂಡಾ ಸಿದ್ಧರಾಮಯ್ಯ ಅವರ ರಾಜೀನಾಮೆ ಪಡೆಯಬೇಕು ಎಂದು ತೀರ್ಮಾನ ಆಗಿದೆ ಎಂದು ಮಾಹಿತಿ ಇದೆ. ಇವರು ಆತುರದಲ್ಲಿ ಎಲ್ಲ‌ ನಿರ್ಧಾರ ಮಾಡುತ್ತಿದ್ದಾರೆ ಎಂದರು.

ಭ್ರಷ್ಟಾಚಾರ ಇಲ್ಲದೇ ಆಡಳಿತ ಕೊಡಲು ಅಸಾಧ್ಯ. ಹಿಂದಿನಿಂದಲೂ ನಾವು ಹೇಳಿದ್ವಿ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಇವರನ್ನು ಎಟಿಎಂ ಆಗಿ ಪರಿವರ್ತನೆ ಮಾಡಬೇಕು ಎಂದು ಇತ್ತು. ಇದು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಇರುವ ಉದ್ದೇಶ. ನಾವು ಆರೋಪ ಮಾಡುತಿದ್ದೇವೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದಕ್ಕೆ ಪುರಾವೆ ಸಿಕ್ಕಿವೆ. ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅಭಿವೃದ್ಧಿ ಆಗಲೇ ಇಲ್ಲ. ಅಭಿವೃದ್ಧಿ ಚಾಲನೆ ಕೂಡಾ ಸಿಎಂ ಕೊಟ್ಟಿಲ್ಲ ಎಂದು ಹರಿಹಾಯ್ದರು.

ರಾಜ್ಯದ ರೈತರಿಗೆ, ಬಡವರಿಗೆ ಈ ಸರ್ಕಾರ ಶಾಪವಾಗಿ ಪರಿಣಮಿಸಿದೆ‌. ಇಂತ ಭ್ರಷ್ಟ ಸರ್ಕಾರದ‌ ವಿರುದ್ಧ ನಾವು ಹೋರಾಟ ಮಾಡುತ್ತ ಬಂದಿದ್ದೇವೆ. ಇದರಿಂದಾಗಿಯೇ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಅವರೇ ಹಗರಣದಲ್ಲಿ ಭಾಗಿಯಾಗಿದ್ದಾರೆ. ಇಂದಲ್ಲಾ ನಾಳೆ ಅವರೂ‌ ರಾಜೀನಾಮೆ ಕೊಡ್ತಾರೆ. ಸಿಎಂ ಜಿಂದಾಲ್ ಅಷ್ಟೇ ಅಲ್ಲ, ಬೆಂಗಳೂರು ಟನಲ್​ಗಾಗಿ 14 ಸಾವಿರ ಕೋಟಿ ಎಂದು ಹೇಳ್ತಾರೆ. ಆದರೆ ಅದು 30 ರಿಂದ 40 ಸಾವಿರ ಕೋಟಿಯ ಟನಲ್ ಇದೆ ಎಂದು ನನಗೆ ಮಾಹಿತಿ ಇದೆ ಎಂದರು.

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

ದೇಶ

ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ

ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆ ಹರಿದುಬಂದಿದೆ.

24 ವರ್ಷದ ನಟಿ ಮೆರೂನ್ ಬಣ್ಣದ ಪದವಿ ಗೌನ್ ಮತ್ತು ಕ್ಯಾಪ್ ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ದೃಶ್ಯಗಳು ಅಭಿಮಾನಿಗಳ ಮನಸೆಳೆದಿವೆ. ಒಂದು ವಿಡಿಯೋದಲ್ಲಿ ತಮ್ಮ ಹೆಸರನ್ನು ಘೋಷಿಸುವ ಮೊದಲು ಸಹಪಾಠಿಗಳೊಂದಿಗೆ ಸಾಲಿನಲ್ಲಿ ನಿಂತು ಕಾಯುತ್ತಿರುವುದು ಕಾಣಿಸುತ್ತದೆ. ನಂತರ ಪ್ರಮಾಣಪತ್ರವನ್ನು ನಗುಮೊಗದಿಂದ ಸ್ವೀಕರಿಸಿದ ಅವರು, ವೇದಿಕೆಯಿಂದ ಇಳಿಯುವಾಗ ಕುಟುಂಬ ಸದಸ್ಯರನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು.

ಬಿಡುವಿಲ್ಲದ ಚಿತ್ರರಂಗದ ವೃತ್ತಿಜೀವನದ ನಡುವೆಯೂ ವೈದ್ಯಕೀಯ ಶಿಕ್ಷಣವನ್ನು ಸಮತೋಲನಗೊಳಿಸಿರುವ ಶ್ರೀಲೀಲಾ ಅವರ ಸಾಧನೆಗೆ ಅಭಿಮಾನಿಗಳು ಹಾಗೂ ಸಿನಿ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಹಲವು ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವಿದ್ಯಾಭ್ಯಾಸವನ್ನು ಕಡೆಗಣಿಸದೇ ಯಶಸ್ವಿಯಾಗಿ ಮುಗಿಸಿರುವುದು ಯುವಜನತೆಗೆ ಸ್ಪೂರ್ತಿಯಾಗಿದೆ.

ನಟನೆ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲೂ ತಮ್ಮ ಹೆಜ್ಜೆ ಇಟ್ಟಿರುವ ಶ್ರೀಲೀಲಾ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, “ಡಾಕ್ಟರ್ ಶ್ರೀಲೀಲಾ” ಎಂದು ಅಭಿಮಾನಿಗಳು ಕರೆದಾಡುತ್ತಿದ್ದಾರೆ.

Continue Reading

Trending