ದೇಶ
ಶ್ರೀ ಕೃಷ್ಣ ಜನ್ಮಾಷ್ಟಮಿ 2024: ದೇಶದೆಲ್ಲೆಡೆ ‘ಗೋವಿಂದ’ನ ಜಪ; ಮಥುರಾದಲ್ಲಿ ‘ರಾಧೇಶ್ಯಾಮ’ನಿಗೆ ವಿಶೇಷ ಆರತಿ – janmashtami 2024

ಮಥುರಾ(ಉತ್ತರ ಪ್ರದೇಶ) : ಭಗವಾನ್ ಶ್ರೀ ಕೃಷ್ಣನಿಗಿಂದು ಜನ್ಮದಿನದ ಸಂಭ್ರಮ. ಇಡೀ ರಾಷ್ಟ್ರವೇ ಶ್ರೀಕೃಷ್ಣನ ಜನ್ಮದಿನದ ಆಚರಣೆಯಲ್ಲಿ ಮುಳುಗಿದೆ. ಕೃಷ್ಣನ ಭಕ್ತರು ಸಡಗರದಿಂದ ವಿವಿಧ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೃಷ್ಣನ ಜನ್ಮಸ್ಥಳ ಮಥುರಾದಲ್ಲಂತೂ ಹಬ್ಬ ಜೋರಾಗಿದೆ. ಮುಂಜಾನೆಯಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಉಪವಾಸ ಕೈಗೊಂಡು ಭಕ್ತಿ-ಭಜನೆ, ಆರತಿ ಮಾಡಿ ಶ್ರೀಕೃಷ್ಣನ ದರ್ಶನ ಪಡೆದು ಪಾವನರಾಗುತ್ತಿದ್ದಾರೆ.
ದೇವಾಲಯದಲ್ಲೆಲ್ಲಾ ಗಂಟೆ, ಮೃದಂಗ, ಶಂಖಗಳ ಸದ್ದು ಪ್ರತಿಧ್ವನಿಸುತ್ತಿದೆ. ದೇವಾಲಯಗಳನ್ನು ಬಣ್ಣಬಣ್ಣದ ದೀಪಗಳಿಂದ, ಹೂವುಗಳಿಂದ ಅಲಂಕರಿಸಲಾಗಿದೆ. ವಿಷ್ಣುವಿನ 8 ನೇ ಅವತಾರ ತಾಳಿದ್ದ ಶ್ರೀ ಕೃಷ್ಣನ ಜನ್ಮದಿನ ಕೃಷ್ಣ ಪಕ್ಷದ ಅಷ್ಟಮಿ ಅಥವಾ ಭಾದ್ರಪದ ಮಾಸದ 8ನೇ ದಿನದಂದು ಬರುತ್ತದೆ. ಮತ್ತು ಇದನ್ನು ಕೃಷ್ಣಾಷ್ಟಮಿ, ಗೋಕುಲಾಷ್ಟಮಿ, ಅಷ್ಟಮಿ ರೋಹಿಣಿ, ಶ್ರೀಕೃಷ್ಣ ಜಯಂತಿ ಮತ್ತು ಶ್ರೀ ಜಯಂತಿ ಎಂದೂ ಕರೆಯಲಾಗುತ್ತದೆ.
ಜನ್ಮಾಷ್ಟಮಿಯಂದು ದಹಿ ಹಂಡಿಯೇ ವಿಶೇಷ : ಕೃಷ್ಣ ಜನ್ಮಾಷ್ಟಮಿಯ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಈ ಹಬ್ಬದಲ್ಲಿ ಪ್ರಮುಖ ಆಚರಣೆ ದಹಿ ಹಿಂಡಿ. ದಹಿ ಹಂಡಿಯೆಂಬುದು ಹಿಂದಿ ಪದ. ಕನ್ನಡದಲ್ಲಿ ನಾವು ಮೊಸರು ಕುಡಿಕೆ ಎಂದು ಕರೆಯುತ್ತೇವೆ. ದಹಿ ಎಂದರೆ ಮೊಸರು. ಹಂಡಿ ಎಂದರೆ ಮೊಸರನ್ನು ಸಂಗ್ರಹಿಸಲು ಬಳಸುವ ಮಡಕೆ. ಪದ್ಧತಿ ಪ್ರಕಾರ ಕೃಷ್ಣ ಜನ್ಮಾಷ್ಟಮಿಯ ಮಾರನೇ ದಿನ ದಹಿ ಹಂಡಿ ಆಚರಣೆಗಳನ್ನು ನಡೆಸಲಾಗುತ್ತದೆ.
“ಮಾಖನ್ ಚೋರ್” ಕೃಷ್ಣ : ಮೊಸರು ಕುಡಿಕೆ ಆಚರಣೆಯ ಮೂಲಕ ಶ್ರೀಕೃಷ್ಣನ ಜೀವನವನ್ನು ಚಿತ್ರಿಸಲಾಗಿದೆ. ಬಾಲ್ಯ ಜೀವನದಲ್ಲಿ ಶ್ರೀ ಕೃಷ್ಣ ಅತಿಯಾಗಿ ಬೆಣ್ಣೆ, ಮೊಸರನ್ನು ಸೇವಿಸುತ್ತಿದ್ದ. ಇದಕ್ಕಾಗಿ ಅಕ್ಕಪಕ್ಕದ ಮನೆಗಳಲ್ಲೂ ಕೂಡ ಮಡಿಕೆಯಿಂದ ಮೊಸರು, ಬೆಣ್ಣೆ ಕದಿಯುತ್ತಿದ್ದನು. ಇದರಿಂದ ಕೋಪಗೊಂಡಿದ್ದ ತಾಯಿ ಯಶೋದಾ ಹಾಲು, ಬೆಣ್ಣೆ ಮತ್ತು ಮೊಸರನ್ನು ಸಾಕಷ್ಟು ಎತ್ತರದಲ್ಲಿ ತೂಗುಹಾಕಲು ಆರಂಭಿಸಿದರು. ಆದರೂ ಬಿಡದ ಕೃಷ್ಣ ಮತ್ತು ಅವನ ಗೆಳೆಯರು ಬೆಣ್ಣೆಯನ್ನು ಪಡೆಯಲು ಮಾನವ ಪಿರಮಿಡ್ಗಳನ್ನು ನಿರ್ಮಿಸುವ ಮೂಲಕ ಬೆಣ್ಣೆಯನ್ನು ಕದ್ದು ಹಂಚಿ ತಿನ್ನುತ್ತಿದ್ದರು. ಇದರ ನೆನಪಿಗಾಗಿ ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಮೊಸರು ಮಡಿಕೆ ಆಟವನ್ನು ಆಚರಿಸಲಾಗುತ್ತದೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ