Connect with us

ದೇಶ

ಲಾಹೋರ್​ ರ್‍ಯಾಲಿ ಮುಂದೂಡಿದ ತೆಹ್ರೀಕ್​ ಇ ಇನ್ಸಾಫ್​: ಕಾರಣ? – imran Khan PTI party

ಇಸ್ಲಾಮಾಬಾದ್​: ಇಮ್ರಾನ್​ ಖಾನ್​ ಸ್ಥಾಪನೆ ಮಾಡಿದ್ದ ಪಾಕಿಸ್ತಾನ ತೆಹ್ರೀಕ್​ ಇ ಇನ್ಸಾಫ್​ ಆಗಸ್ಟ್​ 27ರಂದು ಲಾಹೋರ್​​ನಲ್ಲಿ ಹಮ್ಮಿಕೊಂಡಿದ್ದ ​ ಸಮಾವೇಶವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಸಮಾವೇಶಕ್ಕೆ ಸ್ಥಳೀಯ ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ವರದಿಯೊಂದು ತಿಳಿಸಿದೆ.

ಈ ಕಾರಣಕ್ಕೆ ಸಮಾವೇಶ ಮುಂದೂಡಿಕೆ: ಸ್ಥಳೀಯ ಆಡಳಿತಗಾರರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷವೂ ಸಮಾವೇಶ ಮುಂದೂಡಲು ನಿರ್ಧರಿಸಿದೆ. ಸಮಾವೇಶ ಆಯೋಜನೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಈಗ ರದ್ದು ಮಾಡಿ, ಮುಂದಿನ ದಿನದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪಿಟಿಐ ಮಾಹಿತಿ ಕಾರ್ಯದರ್ಶಿ ಶೌಕತ್​ ಮೊಹಮ್ಮದ್​ ಬಸ್ರಾ ತಿಳಿಸಿದ್ದಾರೆ ಎಂದು ಎಆರ್​ವೈ ನ್ಯೂಸ್​ ವರದಿ ಮಾಡಿದೆ.

ಜೊತೆಗೆ ನ್ಯಾಯಾಲಯದ ಆದೇಶವನ್ನು ಅನುಸರಿಸಲು ವಿಫಲವಾದ ಹಿನ್ನೆಲೆ ಆಡಳಿತದ ವಿರುದ್ಧ ಮೊಕದ್ದಮೆ ಹೂಡಲಾಗುವುದು. ಪಿಟಿಐ ಮುಂದಿನ ದಿನದಲ್ಲಿ ಈ ರ್‍ಯಾಲಿಯನ್ನು ಮರುಯೋಜಿಸಲಿದ್ದು, ಸೆಪ್ಟೆಂಬರ್​ 8ರ ಬಳಿಕ ಈ ಸಮಾವೇಶ ನಡೆಸಲು ಅನಮತಿ ಕೋರುತ್ತೇವೆ ಎಂದರು.

ಪಿಟಿಐ ಇದೀಗ ಲಾಹೋರ್​ ರ್‍ಯಾಲಿಯನ್ನು ಮಾತ್ರ ಮುಂದೂಡಿಲ್ಲ. ಆಗಸ್ಟ್​ 22ರಂದು ನಿಗದಿಯಾಗಿದ್ದ ತರ್ನೊಲ್​ ಸಾರ್ವಜನಿಕ ಸಭೆ ಕೂಡ ಕೆಲವು ನಾಯಕರ ವಿವಾದದಿಂದ ಮುಂದೂಡಲಾಗಿತ್ತು. ಈ ಸಭೆ ಸಂಬಂಧ ಪಕ್ಷದ ನಾಯಕರು ಜೈಲಿನಲ್ಲಿರುವ ಇಮ್ರಾನ್​ ಖಾನ್​ ಅವರನ್ನು ಸಂಪರ್ಕಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.

ಪಾಕ್​ ರಕ್ಷಣಾ ಸಚಿವರು ಹೇಳಿದ್ದಿಷ್ಟು?: ಭಾನುವಾರ ಈ ಕುರಿತು ಮಾತನಾಡಿದ ಪಾಕಿಸ್ತಾನ ರಕ್ಷಣಾ ಸಚಿವ ಕ್ವಾಜಾ ಅಸಿಫ್​, ರ್‍ಯಾಲಿ ಯಶಸ್ವಿಯಾಗುತ್ತದೆ ಎಂದು ಇಮ್ರಾನ್​ ಖಾನ್​ ನಂಬಿದ್ದರೆ, ಈ ಸಭೆ ರದ್ದಾಗುತ್ತಿರಲಿಲ್ಲ. ಮುಖ್ಯವಾದ ವಿಷಯ ಎಂದರೆ ಇಮ್ರಾನ್​ ನೇತೃತ್ವದ ಪಿಟಿಐ ಪಕ್ಷದ ಜನಪ್ರಿಯತೆ ಕುಗ್ಗುತ್ತಿದ್ದು, ರ್‍ಯಾಲಿಗಳು ರದ್ದಾಗುತ್ತಿವೆ. ಅಷ್ಟೇ ಅಲ್ಲ ಸುಳ್ಳು ನಿರೂಪಣೆ ಮೂಲಕ ತನ್ನ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳಲು ಇಮ್ರಾನ್​ ಪಕ್ಷ ತಂತ್ರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ಜಿಯೋ ನ್ಯೂಸ್​ ವರದಿ ಮಾಡಿದೆ.

ಪಿಟಿಐ ನಾಯಕರಾದ ಗೋಹರ್ ಅಲಿ ಖಾನ್ ಮತ್ತು ಅಜಮ್ ಸ್ವಾತಿ ಅವರು ಅದೇ ದಿನ ನಿಗದಿಪಡಿಸಿದ ಖತ್ಮ್-ಇ-ನಬುವ್ವತ್ ನ ಪಾವಿತ್ರತೆ ಖಾತ್ರಿಪಡಿಸುವ ಆಗಸ್ಟ್​ 22ರ ರ್‍ಯಾಲಿ ಮುಂದೂಡಿಕೆ ಮಾಡಿದ್ದಾರೆ. ಈ ಮುಂದೂಡಿಕೆಯನ್ನು ಇಮ್ರಾನ್​ ಖಾನ್​ ಮತ್ತು ಅವರ ಅವರ ಸಹೋದರಿ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending