Connect with us

ಅಪರಾಧ

ಇಂಥವರಿಗೆ ಮನುಷ್ಯತ್ವ ಇದೆಯಾ.. ದರ್ಶನ್​​ ಫೋಟೋ ನೋಡಿ ಬಿಕ್ಕಿಬಿಕ್ಕಿ ಕಣ್ಣೀರು ಹಾಕಿದ ರೇಣುಕಾಸ್ವಾಮಿ ತಂದೆ

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಬಿಂದಾಸ್ ಜೀವನ ನಡೆಸ್ತಿದ್ರೆ, ಇತ್ತ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಕಣ್ಣೀರೇ ಗತಿಯಾಗಿದೆ. ಮಗನ ಕಳ್ಕೊಂಡ ದುಃಖದಲ್ಲಿರೋ ಪೋಷಕರು ತಪ್ಪು ಮಾಡಿದವ್ರಿಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇಡ್ಕೊಂಡಿದ್ರು. ಆದ್ರೆ, ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ಆರೋಪಿ ದರ್ಶನ್ ಚಿಂತೆಯೇ ಇಲ್ಲದೆ ರಾಜ್ಯಾತಿಥ್ಯ ನೀಡ್ತಿರೋದು ರೇಣುಕಾಸ್ವಾಮಿ ತಂದೆ-ತಾಯಿಗೆ ಮತ್ತಷ್ಟು ಕಣ್ಣೀರಿಗೆ ಕಾರಣವಾಗಿದೆ.

ಮುಪ್ಪಿನ ಕಾಲದಲ್ಲಿ ನೋಡ್ಕೋಬೇಕಾಗಿದ್ದ ಮನೆ ಮಗ ಕೊಲೆಯಾಗಿರೋದನ್ನೇ ತಂದೆ-ತಾಯಿಗೆ ಸಹಿಸೋಕೆ ಆಗ್ತಿಲ್ಲ. ಮನೆಗೆ ಆಧಾರವಾಗಿದ್ದ ಮಗನಿಲ್ಲದೇ ಮನೆ ಬರಡಾಗಿದ್ದು, ರೇಣುಕಾಸ್ವಾಮಿ ಪೋಷಕರು ನಿತ್ಯವೂ ಕಣ್ಣೀರು ಹಾಕುವಂತಾಗಿದೆ. ಆದ್ರೆ, ಕೊಲೆ ಕೇಸ್‌ನಲ್ಲಿ ಜೈಲು ಸೇರಿರೋ ಆರೋಪಿ ದರ್ಶನ್‌ ಮಾತ್ರ ಆರಾಮಾಗಿಯೇ ಜೀವನವನ್ನ ನಡೆಸ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ಸಿಕ್ತಿರೋ ರಾಜಾಥಿತ್ಯ ನೋಡಿ ಮೃತ ರೇಣುಕಾಸ್ವಾಮಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.

ಜೈಲಿನಲ್ಲಿ ಯಾವುದೇ ಚಿಂತೆ ಇಲ್ಲದೇ ಆರೋಪಿ ದರ್ಶನ್ ಸಿಗರೇಟ್ ಹೊಡ್ಕೊಂಡು. ಕಾಫಿ ಕುಡಿದು ರೌಡಿಶೀಟರ್‌ಗಳ ಜೊತೆ ಮಾತಾಡ್ತಾ ಎಂಜಾಯ್ ಮಾಡ್ತಿದ್ದಾರೆ. ಇದೆಲ್ಲಾ ನೋಡಿರೋ ರೇಣುಕಾಸ್ವಾಮಿ ಪೋಷಕರು ದಂಗಾಗಿದ್ದಾರೆ. ಇದರ ಬಗ್ಗೆ ಮಾತಾಡಿರೋ ರೇಣುಕಾಸ್ವಾಮಿ ತಂದೆ ಶಿವನಗೌಡರ್ ನಮ್ಮ ಮನೆತನ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದೆಯಾ ಅಂತಾ ಕಣ್ಣೀರಾಕಿದ್ದಾರೆ.

ಪೊಲೀಸರ ಮೇಲೆ ಹಾಗೂ ಸರ್ಕಾರದ ಮೇಲೆ ನಂಬಿಕೆ ಇದೆ. ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ಮಾಡಲಿ. ಯಾರಾದ್ರೂ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ. ನ್ಯಾಯಾಂಗ ಇದೆ, ಚಾರ್ಜ್ ಶೀಟ್ ಹಾಕಿದ ಬಳಿಕ ಗೊತ್ತಾಗುತ್ತದೆ. ಜಡ್ಜ್ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಪೂರ್ಣ ನಂಬಿಕೆ ಇದೆ. ಫೋಟೋ ನೋಡಿದ್ರೆ ತಪ್ಪು ಮಾಡಿದ್ದೇನೆ ಎಂಬ ಭಾವನೆ ಇಲ್ಲ. ಆ ಫೋಟೋ ನೋಡಿ ನಮಗೆ ಶಾಕ್ ಆಯ್ತು, ತನಿಖೆ ಆಗಲಿ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು ಮತ್ತೊಂದು ಆಗಿರಬಾರದು. ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್​ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ಪೊಲೀಸರ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ. ನನ್ನ ಮಗನ ಕಳೆದುಕೊಂಡಿದ್ದು ನನಗೆ ಗೊತ್ತಿದೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು. ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ನನ್ನ ಮಗನ ಸಾವಿಗೆ ಈಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು. ನಮ್ಮ ಮನೆತನ ಕಣ್ಣಿರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನದ ಬಗ್ಗೆ ಸಂಕಟ ಆಗುತ್ತದೆ. ಇಂಥ ದೃಷ್ಯ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಆಗಬೇಕು. ಈತರ ಆಗುವುದರಿಂದ ಸಿಬಿಐ ತನಿಖೆ ನಡೆಸಬೇಕು

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಅಪರಾಧ

ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್‌ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.

Continue Reading

ಅಪರಾಧ

ರೇಣುಕಾಸ್ವಾಮಿ ಪ್ರಕರಣ: ರಮ್ಯಾ ಪೋಸ್ಟ್‌ಗೆ ಅಸಭ್ಯ ಪ್ರತಿಕ್ರಿಯೆ – ಆರೋಪಿಗಳ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿರುದ್ಧ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಅವರು ತಮ್ಮ ಅಭಿಪ್ರಾಯವನ್ನು ಇನ್‌ಸ್ಟಾಗ್ರಾಂ ಹಾಗೂ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಕಟಿಸಿದ್ದರು.

ಈ ಪೋಸ್ಟ್ ನಂತರ, ಕೆಲ ಕಿಡಿಗೇಡಿಗಳು ರಮ್ಯಾ ವಿರುದ್ಧ ಅಶ್ಲೀಲ ಹಾಗೂ ಅಪಮಾನಕಾರಕ ಸಂದೇಶಗಳನ್ನು ಕಮೆಂಟ್‌ಗಳ ರೂಪದಲ್ಲಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಉಂಟಾಗಿದೆ. ಮಹಿಳಾ ವಿರುದ್ಧದ ಈ ರೀತಿಯ ಆನ್‌ಲೈನ್ ದೌರ್ಜನ್ಯಕ್ಕೆ ವಿರೋಧ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದ ಸ್ಥಿತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಈ ನಡುವೆ, ನಟಿ ರಮ್ಯಾ ಬೆಂಬಲಿಗರು ಹಾಗೂ ಮಹಿಳಾ ಹಕ್ಕು ಕಾರ್ಯಕರ್ತರು solchen ಅಭಿವ್ಯಕ್ತಿಗಳನ್ನು ಖಂಡಿಸಿದ್ದಾರೆ.

ಅಧಿಕೃತರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.

Continue Reading

Trending