Connect with us

Blog

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ದುಬಾರಿ ಬೆಲೆಯ ಪ್ರೀಮಿಯಂ ಬ್ರಾಂಡ್ ಮದ್ಯದ ದರ ಇಳಿಸಿ ಸರ್ಕಾರದ ಆದೇಶ – Liquor Price

Published

on

ಬೆಂಗಳೂರು: ಪ್ರೀಮಿಯಂ ಮದ್ಯದ ಬೆಲೆ ಇಂದಿನಿಂದ ಅಗ್ಗವಾಗಲಿದೆ. ದುಬಾರಿ ಬ್ರಾಂಡ್​​ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಜೆಟ್​ನಲ್ಲಿ ಘೋಷಿಸಿದಂತೆ ಜುಲೈ 1ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಬೇಕಿತ್ತು. ಜುಲೈನಿಂದ ಮದ್ಯದ ದರದಲ್ಲಿ ಪರಿಷ್ಕರಣೆ ಮಾಡುವ ಮೂಲಕ ಒಂದೆಡೆ ಮದ್ಯ ಪ್ರಿಯರಿಗೆ ಖುಷಿ ಪಡಿಸುವುದಷ್ಟೇ ಅಲ್ಲ ತನ್ನ ಅಬಕಾರಿ ಆದಾಯವನ್ನೂ ಹೆಚ್ಚಿಸುವ ಲೆಕ್ಕಾಚಾರ ರಾಜ್ಯ ಸರ್ಕಾರದ್ದಾಗಿತ್ತು.‌ ಈ ಸಂಬಂಧ ಜುಲೈ 1ಕ್ಕೆ ಪರಿಷ್ಕೃತ ದರಗಳ ಅಧಿಸೂಚನೆ ಹೊರಡಿಸಿತ್ತು. ಆದರೆ, ಸಿಎಂ ಸೂಚನೆ ಮೇರೆಗೆ ದರ ಪರಿಷ್ಕರಣೆ ಆದೇಶ ಜಾರಿಯನ್ನು ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ ಕೆಲ ಪರಿಷ್ಕರಣೆ ಮಾಡಿ ದುಬಾರಿ ಬ್ರಾಂಡ್​ಗಳ ಮದ್ಯದ ಮೇಲಿನ ದರವನ್ನು 15-20% ವರೆಗೆ ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಪರಿಷ್ಕೃತ ದರದಂತೆ ಮದ್ಯದ ಸ್ಲ್ಯಾಬ್ ವಾರು ದರವನ್ನು ಪರಿಷ್ಕರಿಸಿರುವ ಸರ್ಕಾರ ಪ್ರಸ್ತುತ ಇದ್ದ 18 ಸ್ಲ್ಯಾಬ್​ಗಳಲ್ಲಿ ವಿಧಿಸಲಾಗುತ್ತಿದ್ದ ಅಬಕಾರಿ ಸುಂಕವನ್ನು 16 ಸ್ಲ್ಯಾಬ್​ಗಳಿಗೆ ಇಳಿಕೆ ಮಾಡಿದೆ. ಅದಕ್ಕನುಗಣವಾಗಿ ಅಬಕಾರಿ ಸುಂಕವನ್ನು ಪರಿಷ್ಕರಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಪರಿಷ್ಕೃತ ದರ ಹೇಗಿರಲಿದೆ?: ಅಬಕಾರಿ ಇಲಾಖೆ ಪ್ರತಿ ಬಾಕ್ಸ್ (8.64/9/12 ಬಲ್ಕ್ ಲೀಟರ್ ಮದ್ಯದ ಬಾಕ್ಸ್)ನ ಘೋಷಿತ ಉತ್ಪಾದನಾ ಬೆಲೆಯ ಆಧಾರದಲ್ಲಿ ಸ್ಲ್ಯಾಬ್ ವೈಸ್ ಅಬಕಾರಿ ಸುಂಕ ವಿಧಿಸುತ್ತದೆ. ಪ್ರಸ್ತುತ ಅಬಕಾರಿ ಸುಂಕವನ್ನು 18 ಸ್ಲ್ಯಾಬ್​ಗಳಲ್ಲಿ ವಿಧಿಸಲಾಗುತ್ತಿತ್ತು. ಇದೀಗ ಪರಿಷ್ಕೃತ ಅಬಕಾರಿ ಸುಂಕದಲ್ಲಿ ಪ್ರಸ್ತುತ ಇರುವ 18 ಸ್ಲ್ಯಾಬ್​ಗಳನ್ನು 16ಕ್ಕೆ ಕಡಿತಗೊಳಿಸಲಾಗಿದೆ. ಹಳೆಯ ಸ್ಲ್ಯಾಬ್​ಗೆ ಹೋಲಿಸಿದರೆ 5ನೇ ಸ್ಲ್ಯಾಬ್​ನಿಂದ 16 ಸ್ಲ್ಯಾಬ್ ವರೆಗಿನ‌ ಮದ್ಯದ ದರದಲ್ಲಿ ಇಳಿಕೆ ಮಾಡಲಾಗಿದೆ.

ಪರಿಷ್ಕೃತ 16 ಸ್ಲ್ಯಾಬ್ ವೈಸ್ ಘೋಷಿತ ಉತ್ಪಾದನಾ ಬೆಲೆಯ ಪ್ರಕಾರ 0-450 ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಹೆಚ್ಚುವರಿ ಅಬಕಾರಿ ಸುಂಕ 215 ರೂ. ಇರಲಿದೆ. 451-500 ದರ ಸ್ಲ್ಯಾಬ್​ಗೆ ಸುಂಕ 294 ರೂ. ಪರಿಷ್ಕರಣೆ ಆಗಲಿದೆ. ಇನ್ನು 501-550 ದರ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 386 ರೂ., 551-650 ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಸುಂಕ 523 ರೂ., 651-750 ವರೆಗಿನ ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 620 ರೂ., 751-900 ದರ ಸ್ಲ್ಯಾಬ್​ಗೆ ಸುಂಕ 770 ರೂ., 901-1050 ದರ ಸ್ಲ್ಯಾಬ್​ಗೆ ಸುಂಕ 870 ರೂ., 1051-1300 ದರ ಸ್ಲ್ಯಾಬ್​ಗೆ ಸುಂಕ 970 ರೂ., 1301-1800 ದರ ಸ್ಲ್ಯಾಬ್​ಗೆ ಸುಂಕ 1200 ರೂ., 1801-2500 ದರ ಸ್ಲ್ಯಾಬ್​ಗೆ ಸುಂಕ 1400 ರೂ., 2501-5000 ದರ ಸ್ಲ್ಯಾಬ್​ಗೆ ಸುಂಕ 1600 ರೂ., 5001-8000 ದರ ಸ್ಲ್ಯಾಬ್​ಗೆ ಸುಂಕ 2000 ರೂ., 8001-12,500 ದರ ಸ್ಲ್ಯಾಬ್​ಗೆ ಸುಂಕ 2400 ರೂ., 12501-15000 ದರ ಸ್ಲ್ಯಾಬ್​ಗೆ ಸುಂಕ 2600 ರೂ., 15001-20000 ದರ ಸ್ಲ್ಯಾಬ್​ಗೆ ಸುಂಕ 2800 ರೂ. ಮತ್ತು 20000 ಮೇಲ್ಪಟ್ಟ ದರ ಸ್ಲ್ಯಾಬ್​ಗೆ ಹೆಚ್ಚುವರಿ ಅಬಕಾರಿ ಸುಂಕ 3000 ರೂ. ವಿಧಿಸಲಾಗುತ್ತದೆ.

ಈವರೆಗಿನ ಮದ್ಯದ ದರ ಹೇಗಿತ್ತು?: ಈ ಮುಂಚೆ 18 ಸ್ಲ್ಯಾಬ್ ವೈಸ್ ಘೋಷಿತ ಉತ್ಪಾದನಾ ಬೆಲೆ (ಪ್ರತಿ ಬಾಕ್ಸ್) ಪ್ರಕಾರ 0-449ವರೆಗಿನ ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 215 ರೂ. ವಿಧಿಸಲಾಗುತ್ತಿತ್ತು. 451- 499 ರೂ. ವರೆಗಿನ ಘೋಷಿತ ಉತ್ದಾದನಾ ದರದ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 294 ರೂ. ಇತ್ತು. ಇನ್ನು 500- 549 ದರ ಸ್ಲ್ಯಾಬ್​ಗೆ ಸುಂಕ 386 ರೂ., 550- 599 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 497 ರೂ., 600-699 ದರ ಸ್ಲ್ಯಾಬ್​ಗೆ ಸುಂಕ 668 ರೂ., 700-799 ದರ ಸ್ಲ್ಯಾಬ್​ಗೆ ಸುಂಕ 816 ರೂ., 800-899 ದರ ಸ್ಲ್ಯಾಬ್​ಗೆ ಸುಂಕ 870 ರೂ., 900-999 ದರ ಸ್ಲ್ಯಾಬ್​ಗೆ ಸುಂಕ 938 ರೂ., 1000-1099 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 982 ರೂ., 1100-1199 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 1102 ರೂ., 1200-1299 ದರ ಸ್ಲ್ಯಾಬ್​ಗೆ ಸುಂಕ 1325 ರೂ., 1300-1399 ದರ ಸ್ಲ್ಯಾಬ್​ಗೆ ಸುಂಕ 1541ರೂ., 1400-1799 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 1667 ರೂ., 1800-2199 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 1860 ರೂ., 2200-4924 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 2124 ರೂ., 4925-7650 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 2483 ರೂ., 7651-15000 ದರ ಸ್ಲ್ಯಾಬ್​ಗೆ ಅಬಕಾರಿ ಸುಂಕ 3571 ರೂ., 15,001 ಮೇಲ್ಪಟ್ಟ ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಹೆಚ್ಚುವರಿ ಅಬಕಾರಿ ಸುಂಕ 5358 ರೂ. ವಿಧಿಸಲಾಗುತ್ತಿತ್ತು.

Continue Reading
Click to comment

Leave a Reply

Your email address will not be published. Required fields are marked *

Blog

ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ: ಸತ್ಯ ಹೊರಬರಲಿದೆ, ನಾನು ತಪ್ಪು ಮಾಡಿಲ್ಲ

Published

on

ಬೆಳ್ತಂಗಡಿ, ದಕ್ಷಿಣ ಕನ್ನಡ: ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ ಎಂದು ಪುನರುಚ್ಚರಿಸಿದಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿಂದ ಮಂಗಳೂರಿಗೆ ಬಂದು ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದ ವಿಜಯೇಂದ್ರ, ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಈ ಬೆಳವಣಿಗೆಯಿಂದ ತಮಗೂ ಮಾನಸಿಕವಾಗಿ ಬೇಸರವಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಸತ್ಯಾಸತ್ಯತೆ ಬಹಿರಂಗಪಡಿಸುವ ಉದ್ದೇಶದಿಂದ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಬೇಕೆಂದು ಭಾವನಾತ್ಮಕವಾಗಿ ಹೇಳಿದ್ದೆ. ಆದರೆ ಪಕ್ಷದ ಹಿರಿಯ ನಾಯಕರು ಆ ಹಂತಕ್ಕೆ ಹೋಗುವುದು ಬೇಡ ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದಿಂದ ಪಕ್ಷದ ರಾಜ್ಯಾಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಅಂತಹ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುವ ಅಥವಾ ಕೀಳುಮಟ್ಟದ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದರು.

ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿವಿಧ ಹೆಸರುಗಳನ್ನು ತೇಲಿಬಿಟ್ಟು ಬಿಜೆಪಿ ಶಾಸಕರ ಬಗ್ಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೊಳಗೂ ಅನುಮಾನದ ವಾತಾವರಣ ನಿರ್ಮಾಣವಾಗಿರುವುದು ನಿಜ. ಆದರೆ ಸತ್ಯ ಇಂದು ಅಲ್ಲದಿದ್ದರೂ ನಾಳೆ ಹೊರಬರುತ್ತದೆ. ಕೇಂದ್ರ ನಾಯಕತ್ವಕ್ಕೂ ಎಲ್ಲ ಮಾಹಿತಿಯಿದ್ದು, ನನಗೆ ಯಾವುದೇ ತನಿಖಾ ವರದಿ ಬಂದಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣೆಗೆ ಮೊದಲೇ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಅವರ ಅಭಿಪ್ರಾಯವನ್ನು ಉತ್ತಮ ಉದ್ದೇಶದಿಂದ ನೀಡಲಾಗಿದೆ ಎಂದು ಸ್ವಾಗತಿಸುತ್ತೇನೆ ಎಂದ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲಾಗುವುದು. ಬಿಡದಿ ಭೂಸ್ವಾಧೀನ ಪ್ರಕರಣದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರ್ಪಡೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

“ನಾನು ಯಾವುದೇ ತಪ್ಪು ಮಾಡಿಲ್ಲ. ಒಬ್ಬ ಭಕ್ತನಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಸಮಯ ಬಂದಾಗ ಎಲ್ಲ ಸತ್ಯವೂ ಹೊರಬರುತ್ತದೆ. ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ” ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Continue Reading

Blog

ಕಡಿಮೆ ಕ್ಯಾಲೋರಿ, ಹೆಚ್ಚು ಪೋಷಕಾಂಶ: ರಂಬುಟಾನ್ ಹಣ್ಣಿನತ್ತ ಜನರ ಒಲವು

Published

on

By

ರಂಬುಟಾನ್ ಹಣ್ಣಿನತ್ತ ಜನರ ಒಲವು

ಆರೋಗ್ಯಕರ ಆಹಾರಗಳತ್ತ ಜನರ ಆಸಕ್ತಿ ಹೆಚ್ಚುತ್ತಿರುವ ಹಿನ್ನೆಲೆ, ಉಷ್ಣವಲಯದ ಹಣ್ಣಾದ ರಂಬುಟಾನ್ ತನ್ನ ಪೌಷ್ಟಿಕಾಂಶದ ಗುಣಗಳಿಂದ ಗಮನ ಸೆಳೆಯುತ್ತಿದೆ. ಕಡಿಮೆ ಕ್ಯಾಲೋರಿ, ಹೆಚ್ಚಿನ ನೀರಿನ ಅಂಶ ಮತ್ತು ಸಮೃದ್ಧ ಪೋಷಕಾಂಶಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವವರಿಗೆ ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗುತ್ತಿದೆ.
ತಜ್ಞರ ಪ್ರಕಾರ, ರಂಬುಟಾನ್‌ನಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಿ, ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ರಂಬುಟಾನ್ ಹಣ್ಣಿನ ಆರೋಗ್ಯ ಪ್ರಯೋಜನಗಳು – ಮುಖ್ಯಾಂಶಗಳುಆರೋಗ್ಯಕರ ಆಹಾರ ಪದ್ಧತಿಯಲ್ಲಿ ರಂಬುಟಾನ್ ಸೇರಿಸಿಕೊಳ್ಳುವುದರಿಂದ ಹಲವು ಪೌಷ್ಟಿಕ ಲಾಭಗಳನ್ನು ಪಡೆಯಬಹುದು.ರಂಬುಟಾನ್ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶ ಹೊಂದಿರುವ ಪೌಷ್ಟಿಕ ಹಣ್ಣು.ವಿಟಮಿನ್ ಸಿ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸಿ ಜೀವಕೋಶಗಳನ್ನು ರಕ್ಷಿಸುತ್ತದೆ.ಫೈಬರ್‌ ಅಂಶ ಜೀರ್ಣಕ್ರಿಯೆ ಸುಧಾರಿಸಿ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳ ಬೆಳವಣಿಗೆಗೆ ನೆರವಾಗುತ್ತದೆ.ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ತೂಕ ನಿಯಂತ್ರಣಕ್ಕೆ ಸಹಕಾರಿ.ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಿ ಚರ್ಮದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ.ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್, ತಾಮ್ರ ಮತ್ತು ಪೊಟ್ಯಾಸಿಯಮ್ ಖನಿಜಗಳು ಮೂಳೆ, ಸ್ನಾಯು ಮತ್ತು ಹೃದಯದ ಆರೋಗ್ಯಕ್ಕೆ ನೆರವಾಗುತ್ತವೆ.ಹಣ್ಣಿನ ಬಿಳಿ ತಿರುಳು ಮಾತ್ರ ಸೇವನೆಗೆ ಯೋಗ್ಯ.ಸಿಪ್ಪೆ ಮತ್ತು ಬೀಜಗಳನ್ನು ಹಸಿಯಾಗಿ ತಿನ್ನಬಾರದು; ಅವು ವಿಷಕಾರಿ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.

Continue Reading

Blog

‘ಲಂಚ ಕೇಳಿದರೆ ತಕ್ಷಣ ದೂರು ನೀಡಿ’: ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

Published

on

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ D. K. Shivakumar ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಸಾರ್ವಜನಿಕರ ಕೆಲಸಗಳಿಗೆ ಯಾರಾದರೂ ಲಂಚ ಕೇಳಿದರೆ ತಕ್ಷಣ ದೂರು ಸಲ್ಲಿಸಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲೂ ದೂರು ಸ್ವೀಕಾರದ ದೂರವಾಣಿ ಸಂಖ್ಯೆಯನ್ನು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಅವರು ನಿರ್ದೇಶಿಸಿದರು. “ನಾವು ಎಲ್ಲರೂ ‘ಟೀಮ್ ಕರ್ನಾಟಕ’ ಆಗಿ ಕಾರ್ಯನಿರ್ವಹಿಸಿ ಜನರಿಗೆ ಸ್ವಚ್ಛ ಮತ್ತು ಪರಿಣಾಮಕಾರಿ ಆಡಳಿತ ನೀಡಬೇಕು” ಎಂದು ಹೇಳಿದರು.

ರಾಜ್ಯದಲ್ಲಿ ಮುಂದುವರಿದಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಹಾಗೂ ಮೊದಲ ಮತ್ತು ಎರಡನೇ ಬೆಳೆಗೆ ನೀರಿನ ಕೊರತೆ ಆಗದಂತೆ ನಿಗಾ ವಹಿಸಬೇಕು ಎಂದು ಆದೇಶಿಸಿದರು. ಜಿಲ್ಲೆಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಯ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಕೆಎಸ್‌ಆರ್‌ಟಿಸಿಯ ನಾಲ್ಕು ವಿಭಾಗಗಳ ಮೂಲಕ ಕೇವಲ ಎರಡು ದಿನಗಳಲ್ಲಿ 2,764 ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ವೇಳೆ ಸರ್ಕಾರದ ‘100 ದಿನಗಳ ಅಭಿಯಾನ’ ಕುರಿತು ಜಿಲ್ಲಾವಾರು ಪರಿಶೀಲನೆ ನಡೆಸಲಾಯಿತು. ಬಿ-ಖಾತೆಯಿಂದ ಎ-ಖಾತೆಗೆ ಇ-ಖಾತಾ ವರ್ಗಾವಣೆ, ವಸತಿ ರಹಿತರಿಗೆ ಮನೆ ಮತ್ತು ವಿದ್ಯುತ್ ಸಂಪರ್ಕ, ಉದ್ಯೋಗ ವಿನಿಮಯ ಕೇಂದ್ರಗಳ ಆರಂಭ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಅನುಷ್ಠಾನ ವೇಗಗೊಳಿಸಲು ಸೂಚನೆ ನೀಡಲಾಯಿತು.

Continue Reading

Trending