ಬೆಂಗಳೂರು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ… ಗವರ್ನರ್ ಅಚ್ಚರಿ ಹೇಳಿಕೆ!

ಬೆಂಗಳೂರು: ಮುಡಾ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡುರುವ ಬಗ್ಗೆ ಒಂದೆಡೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇತ್ತ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರು ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ,
ತಾವು ನೇರವಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿಲ್ಲ, ಕೇವಲ ತನಿಖೆಗೆ ಸೂಚಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕರ ಬಳಿ ಸ್ಪಷ್ಟನೆ ನೀಡಿದ್ದಾಗಿ ತಿಳಿಸಿದ್ದಾರೆ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ, ತನಿಖೆಗೆ ಸೂಚಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕರ ಬಳಿ ಸ್ಪಷ್ಟನೆ ನೀಡಿದ್ದಾಗಿ ತಿಳಿಸಿದ್ದಾರೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ಇಂದು ಕೈನಾಯಕರು ರಾಜಭವನ ಚಲೋ ಕೈಗೊಂಡಿದ್ದರು, ಈ ವೇಳೆ ಗವರ್ನರ್ ಸಮಜಾಯಿಷಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ,