PM Modi
ರಾಕೆಟ್ನಿಂದ ಬೇರ್ಪಟ್ಟ ಆದಿತ್ಯ ಎಲ್ 1 ಮಿಷನ್; ಇಸ್ರೋಗೆ ಮೋದಿ ಶಹಬ್ಬಾಶ್
ಸೂರ್ಯನ ಮೇಲ್ಮೈನಲ್ಲಿ ಅಧ್ಯಯನ ನಡೆಸಲು ಇಸ್ರೋ ಕೈಗೊಂಡಿರುವ ಆದಿತ್ಯ ಎಲ್ 1 ಮಿಷನ್ ಉಡಾವಣೆ (Aditya L1 Launch) ಯಶಸ್ವಿಯಾಗಿದೆ. ಇದರ ಜತೆಗೆ ಪಿಎಸ್ಎಲ್ವಿ ಸಿ-57 ರಾಕೆಟ್ನಿಂದ ಆದಿತ್ಯ ಎಲ್ ಮಿಷನ್ ಯಶಸ್ವಿಯಾಗಿ ಬೇರ್ಪಟ್ಟಿದ್ದು, ನಿಗದಿತ ಕಕ್ಷೆ ಸೇರುವಲ್ಲೂ ಸಫಲವಾಗಿದೆ. ಇನ್ನು ರಾಕೆಟ್ನಿಂದ ಬೇರ್ಪಟ್ಟ ಆದಿತ್ಯ ಎಲ್ 1 ಮಿಷನ್, ಸೂರ್ಯನ ಲ್ಯಾಗ್ರೇಂಜ್ 1 ಕಕ್ಷೆ (L1 Orbit)ಯತ್ತ ಸಾಗುತ್ತಿದೆ. ಮತ್ತೊಂದೆಡೆ, ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಕೆಟ್ನಿಂದ ಮಿಷನ್ ಬೇರ್ಪಟ್ಟ ಬಳಿಕ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, “ಉಡಾವಣೆಯ ಒಂದು ಗಂಟೆಯ ಬಳಿಕ ಪಿಎಸ್ಎಲ್ವಿ ರಾಕೆಟ್ನಿಂದ ಆದಿತ್ಯ ಎಲ್ 1 ಮಿಷನ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಇದರೊಂದಿಗೆ ಆದಿತ್ಯ ಎಲ್ 1 ಮಿಷನ್ ಪಯಣ ಲ್ಯಾಗ್ರೇಂಜ್ನತ್ತ ಸಾಗುತ್ತಿದೆ. ಇದಕ್ಕಾಗಿ ಮಿಷನ್ 125 ದಿನ ತೆಗೆದುಕೊಳ್ಳಲಿದೆ. ಮಿಷನ್ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಎಲ್ಲರಿಗೂ ಧನ್ಯವಾದ” ಎಂದು ಹೇಳಿದರು.
ಮೋದಿ ಅಭಿನಂದನೆ
ಉಡಾವಣೆ ಯಶಸ್ವಿಯಾಗುತ್ತಲೇ ಪ್ರಧಾನಿ ನರೇಂದ್ರ ಅವರು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು. “ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಆದಿತ್ಯ ಎಲ್ 1 ಮಿಷನ್ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳು ಹಾಗೂ ಎಂಜಿನಿಯರ್ಗಳಿಗೆ ಅಭಿನಂದನೆಗಳು. ಬಾಹ್ಯಾಕಾಶದ ಅಧ್ಯಯನದ ಮೂಲಕ ಮನುಕುಲಕ್ಕೆ ನೆರವಾಗುವಲ್ಲಿ ನಮ್ಮ ವಿಜ್ಞಾನಿಗಳ ಪ್ರಯತ್ನ ಮುಂದುವರಿಯುತ್ತಲೇ ಇರುತ್ತದೆ” ಎಂದು ಹೇಳಿದ್ದಾರೆ.
ಚಂದ್ರನ ಅಂಗಳಕ್ಕೆ ಇಳಿದು ಚಂದ್ರಯಾನ 3 ನೌಕೆಯು ಅಧ್ಯಯನ ನಡೆಸಿದಂತೆ ಆದಿತ್ಯ ಎಲ್ 1 ಮಿಷನ್ ಸೂರ್ಯನ ಅಂಗಳಕ್ಕೆ ಇಳಿಯುವುದಿಲ್ಲ ಹಾಗೂ ಸೂರ್ಯನಿಗೆ ತುಂಬ ಹತ್ತಿರದಲ್ಲಿ ಅಧ್ಯಯನ ನಡೆಸುವುದಿಲ್ಲ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್ 1 ಮಿಷನ್ ಅಧ್ಯಯನ ನಡೆಸಲಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್ ಸಂಚರಿಸಿ ಅಧ್ಯಯನ ನಡೆಸಲಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.
PM Modi
ತೆಲಂಗಾಣದಲ್ಲಿ 56,000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಆದಿಲಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಸುಮಾರು 56,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತೆಲಂಗಾಣದ ಅಭಿವೃದ್ಧಿಯ ಕನಸನ್ನು ನನಸಾಗಿಸಲು ಕೇಂದ್ರ ಎಲ್ಲಾ ಬೆಂಬಲವನ್ನು ನೀಡುತ್ತಿದೆ ಎಂದು ಹೇಳಿದರು. ವಿದ್ಯುತ್, ರೈಲು ಮತ್ತು ರಸ್ತೆಗಳಿಗೆ ಸಂಬಂಧಿಸಿದ ಹೊಸ ಅಭಿವೃದ್ಧಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತಿವೆ ಎಂದರು. ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ, ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ ಆಳವಾಗಿ ಮುಳುಗಿರುವ ಇಂಡಿಯಾ ಮೈತ್ರಿಕೂಟದ ನಾಯಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ನಾನು ಅವರ ‘ಪರಿವಾರವಾದ’ವನ್ನು ಪ್ರಶ್ನಿಸಿದಾಗ, ಅವರು ಮೋದಿಗೆ ಕುಟುಂಬವಿಲ್ಲ ಎಂದು ಹೇಳಲು ಪ್ರಾರಂಭಿಸಿದ್ದಾರೆ” ಎಂದು ಪ್ರಧಾನಿ ತಿರುಗೇಟು ನೀಡಿದರು. “ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನ ನನ್ನ ಕುಟುಂಬ ಇದ್ದಂತೆ. ಇಂದು ದೇಶದ ಕೋಟಿ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರು ಮೋದಿಯವರ ಕುಟುಂಬ. ದೇಶದ ಪ್ರತಿಯೊಬ್ಬ ಬಡವರೂ ನನ್ನ ಕುಟುಂಬ, ಯಾರೂ ಇಲ್ಲದವರು ಸಹ ಮೋದಿ ನನ್ನವರು ಎಂದು ಹೇಳುತ್ತಾರೆ ಮತ್ತು ಮೋದಿ ಅವರಿಗೂ ಸೇರಿದ್ದಾರೆ. ‘ನೇನೆ ಮೋದಿ ಕುಟುಂಬ’ (ನಾನು ಮೋದಿ ಕುಟುಂಬ) ಎಂದು ಹೇಳುತ್ತಾರೆ ಎಂದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಪ್ರಧಾನಿಯವರು ದೊಡ್ಡಣ್ಣನಿದ್ದಂತೆ. ದೊಡ್ಡ ಸಹೋದರನ ಸಹಾಯದಿಂದ ಮಾತ್ರ ರಾಜ್ಯಗಳು ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ” ಎಂದು ಅವರು ಹೇಳಿದರು. ಪ್ರಧಾನಿಯವರ ಬೆಂಬಲದಿಂದ ಮಾತ್ರ ತೆಲಂಗಾಣ ಗುಜರಾತ್ನಂತೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.
PM Modi
ರಾಮಮಂದಿರ ಪ್ರಾಣಪ್ರತಿಷ್ಠೆಗೆ ಶಾಲಾ ಕಾಲೇಜಿಗೆ ರಜೆ, ಮದ್ಯ ಮಾರಾಟ ನಿಷೇಧ; ಸಿಎಂ ಯೋಗಿ ಘೋಷಣೆ!
ರಾಮಮಂದಿರ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ಈ ದಿನ ಉತ್ತರ ಪ್ರದೇಶ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಲಖನೌ ರಾಮ ಮಂದಿರ ಲೋಕಾರ್ಪಣೆಗೆ ತಯಾರಿ ನಡೆಯುತ್ತಿದೆ. ಜನವರಿ 22 ರಂದು ರಾಮಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಐತಿಹಾಸಿಕ ದಿನಕ್ಕಾಗಿ ವಿಶ್ವವೇ ಕಾಯುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆದಿನ ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಪ್ರಾಣ ಪ್ರತಿಷ್ಠೆ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಮಹತ್ವದ ಆದೇಶವನ್ನು ಸಿಎಂ ಯೋಗಿ ಆದಿತ್ಯನಾಥ್ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನ ಶಾಂತಿಯುತವಾಗಿ ಸಂಭ್ರಮಿಸಲು ಮನವಿ ಮಾಡಿದ್ದಾರೆ. 500 ವರ್ಷಗಳ ಹೋರಾಟದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಈ ಐತಿಹಾಸಿಕ ದಿನ ನಮ್ಮೆಲ್ಲರಿಗೂ ಅತ್ಯಂತ ಮಹತ್ವ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಆಚರಿಸಲು ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಶ್ರೀರಾಮ ಪ್ರಾಣಪ್ರತಿಷ್ಠೆ ಅತ್ಯಂತ ಪವಿತ್ರವಾಗಿದೆ. ಹೀಗಾಗಿ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಸಂಭ್ರಮಿಸಲು ಕೆಲ ಸೂಚನೆ ನೀಡಲಾಗಿದೆ. ಶಾಂತಿಯುತವಾಗಿ ಸಂಭ್ರಮ ಆಚರಿಸಿ, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಮನೆಯಲ್ಲೇ ದೀಪ ಬೆಳಗಿ ರಾಮನ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ಪ್ರಾಣಪತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಶಾಂತಿಯುತವಾಗಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಭ್ರಮದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ. ರಾಮ ಮಂದಿರ ಪ್ರಾಣಪ್ರತಿಷ್ಟೆಯನ್ನು ಪ್ರಧಾನಿ ನರೇಂದ್ರ ಮೋದಿ ನೇರವೇರಿಸಲಿದ್ದಾರೆ. ಜನವರಿ 22ರ 12.30ರ ಶುಭಮುಹೂರ್ತದಲ್ಲಿ ಪ್ರಾಣಪ್ರತಿಷ್ಠೆ ನಡೆಯಲಿದೆ. ಜನವರಿ 16ರಿಂದ ರಾಮನಗರಿಯಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಮಾಡಲಾಗುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಬರೋಬ್ಬರಿ 7 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಪ್ರತಿಯೊಬ್ಬ ಗಣ್ಯರಿಗೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುವುದು. ದೇವಾಲಯ ಟ್ರಸ್ಟ್ನ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಗಣ್ಯರನ್ನು ಭೇಟಿ ಮಾಡಿ ಆಹ್ವಾನ ನೀಡಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ಹೇಳಿದ್ದಾರೆ.
PM Modi
ವಿಶ್ವ ಹವಾಮಾನ ಶೃಂಗಸಭೆ: ದುಬೈನಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ.
ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿರುವ ಭಾರತೀಯ ವಲಸಿಗರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜನರು ಮೋದಿ-ಮೋದಿ ಮತ್ತು ಈ ಬಾರಿ ಮೋದಿ ಸರ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಜತೆಗೆ 400ಕ್ಕೂ ಅಧಿಕ ಸೀಟುಗಳಿಂದ ಗೆಲ್ಲುವಂತೆ ಶುಭ ಹಾರೈಸಿದರು.ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿರುವ ಭಾರತೀಯ ವಲಸಿಗರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜನರು ಮೋದಿ-ಮೋದಿ ಮತ್ತು ಈ ಬಾರಿ ಮೋದಿ ಸರ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಜತೆಗೆ 400ಕ್ಕೂ ಅಧಿಕ ಸೀಟುಗಳಿಂದ ಗೆಲ್ಲುವಂತೆ ಶುಭ ಹಾರೈಸಿದರು.ಎಎನ್ಐ ಹಂಚಿಕೊಂಡಿರುವ ವಿಡಿಯೋದಲ್ಲಿ, ಮೋದಿ, ಮೋದಿ, ಅಬ್ಕಿ ಬಾರ್ ಮೋದಿ ಸರ್ಕಾರ್ ಮತ್ತು ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಅನಿವಾಸಿ ಭಾರತೀಯರೊಬ್ಬರು ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಗ್ಗೆ ಸಂತಸ ವ್ಯಕ್ತಪಡಿಸಿ, ನಾನು 20 ವರ್ಷಗಳಿಂದ ಯುಎಇಯಲ್ಲಿ ವಾಸಿಸುತ್ತಿದ್ದೇನೆ, ಆದರೆ ಇಂದು ನನ್ನವರೊಬ್ಬರು ಈ ದೇಶಕ್ಕೆ ಬಂದಂತೆ ಭಾಸವಾಗುತ್ತಿದೆ ಎಂದಿದ್ದಾರೆ.ಮೋದಿ ಭಾರತದ ವಜ್ರ, ಪ್ರಧಾನಿ ಮೋದಿಯನ್ನು ಇಲ್ಲಿ ನೋಡಲು ನಮಗೆ ತುಂಬಾ ಸಂತೋಷವಾಗಿದೆ. ಜಗತ್ತಿಗೆ ಪ್ರಧಾನಿ ಮೋದಿಯಂತಹ ನಾಯಕನ ಅಗತ್ಯವಿದೆ ಎಂದರು.ಶೃಂಗಸಭೆಯಲ್ಲಿ ಜಾಗತಿಕ ನಾಯಕರು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿಮೆ ಮಾಡಲು ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ. ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಲ್ಲದೆ, ಮೋದಿ ಇತರೆ ಮೂರು ಉನ್ನತ ಮಟ್ಟದ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ದುಬೈನಲ್ಲಿರುವ ಭಾರತೀಯ ಸಮುದಾಯದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹವು ನಮ್ಮ ರೋಮಾಂಚಕ ಸಂಸ್ಕೃತಿ ಮತ್ತು ಬಲವಾದ ಸಂಬಂಧಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
-
ದೇಶ3 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ10 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ10 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ10 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ3 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ10 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ2 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ3 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
