Connect with us

ದೇಶ

Horoscope Today 06 September 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ….

ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುವ ನೆಂಟರಂತೆ.

ಆದರೆ, ನಾವು ಮಾಡುವ ಪಾಪ- ಕರ್ಮಗಳು. ತಂದೆ- ತಂದೆ ಮೂಲಕ ನಮಗೆ ಬರುವ ರಕ್ತದ ಗುಣದಂತೆ. ಒಳ್ಳೆ ಕರ್ಮಕ್ಕೆ ಉತ್ತಮ ಫಲ- ಆರೋಗ್ಯ. ಕೆಟ್ಟ ಕರ್ಮಕ್ಕೆ- ಕೆಟ್ಟ ಫಲ, ಸಮಸ್ಯೆ. ಆದರೆ ಅದನ್ನು ಕೂಡ ನಾವು ಹೇಗೆ ವೈದ್ಯರಲ್ಲಿಗೆ ಹೋಗಿ, ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುತ್ತೀವೋ ಹಾಗೇ ಜೋಪಾನ ಮಾಡಬಹುದು.

ಮೇಷ

ವೈಯಕ್ತಿಕ ವಿಚಾರಗಳ ಬಗ್ಗೆ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಭಾವನೆ ನಿಮ್ಮನ್ನು ಬಹಳ ಕಾಡಲಿದೆ. ಸ್ವಂತ ನಿರ್ಧಾರವನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಸೃಷ್ಟಿಯಾಗಲಿದೆ. ಆರ್ಥಿಕ ಒತ್ತಡದ ಕಾರಣಕ್ಕೆ ಇತರರ ಬಳಿ ಸಾಲ ಮಾಡಬೇಕಾದ ಸೃಷ್ಟಿ ನಿರ್ಮಾಣವಾಗಲಿದೆ.

ವೃಷಭ

ಎಣ್ಣೆಯಲ್ಲಿ ಕರಿದ ಅಥವಾ ಮಸಾಲೆ ಪದಾರ್ಥಗಳ ಸೇವನೆಯಿಂದ ಸಾಧ್ಯವಾದಷ್ಟೂ ದೂರ ಇರಿ. ಇತರರಿಗೆ ಮಾದರಿ ಎನಿಸುವಂತೆ ಇರುವುದಕ್ಕೆ ಪ್ರಯತ್ನಿಸಿ. ಕಾನೂನು ಮುರಿಯಲು ಹೋಗಬೇಡಿ. ತುರ್ತು ಕೆಲಸಗಳು ಬರಬಹುದು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಟ್ಟುಕೊಂಡಿರಿ.

ಮಿಥುನ

ಇಡೀ ದಿನ ಬಿಡುವಿಲ್ಲದಂಥ ಕೆಲಸ ಇರಲಿದೆ. ಈ ಹಿಂದೆ ನೀವು ಮಾಡಿದ್ದ ಕೆಲವು ಕೆಲಸಗಳನ್ನು ಮೆಚ್ಚಿ, ಹೊಸ ಜವಾಬ್ದಾರಿಗಳನ್ನು ವಹಿಸಲಾಗುತ್ತದೆ. ಪ್ರಾಣಿ- ಪಕ್ಷಿಗಳ ಸಲುವಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿಯ ಕಡೆ ಸಂಬಂಧಿಕರಿಗೆ ನಿಮ್ಮ ನೆರವು ಬೇಕಾಗಬಹುದು.

ಕರ್ಕಾಟಕ

ಸಣ್ಣ ಸಮಸ್ಯೆಗಳನ್ನು ನೀವೇ ಮನಸಿಗೆ ತೆಗೆದುಕೊಂಡು, ದೊಡ್ಡದು ಮಾಡಲು ಹೋಗದಿರಿ. ಸಂಗಾತಿಯ ಬಗ್ಗೆ ಅಸಮಾಧಾನಗಳು ಇದ್ದಲ್ಲಿ ಕೂತು, ಮಾತನಾಡಿ ಬಗೆಹರಿಸಿಕೊಳ್ಳಿ. ಎಲ್ಲರನ್ನೂ ಅನುಮಾನದಿಂದ ನೋಡಿದರೆ ನಿಮ್ಮ ಸಹಾಯಕ್ಕೆ ಯಾರೂ ಇಲ್ಲದಂತೆ ಆಗುತ್ತದೆ. ತಾಳ್ಮೆಯಿಂದ ಇರುವುದನ್ನು ರೂಢಿ ಮಾಡಿಕೊಳ್ಳಿ.

ಸಿಂಹ

ಅಂದುಕೊಂಡಿದ್ದಕ್ಕಿಂತ ವೇಗವಾಗಿ ಕೆಲಸ- ಕಾರ್ಯಗಳು ಮುಗಿಯುತ್ತವೆ. ಸೇವಾ ಮನೋಭಾವ ಹೆಚ್ಚಾಗುತ್ತದೆ. ಇಷ್ಟು ಸಮಯ ನಿಮ್ಮನ್ನು ಕಾಡುತ್ತಿದ್ದ ಆತಂಕ ನಿವಾರಣೆ ಆಗುವ ದಾರಿ ಗೋಚರಿಸಲಿದೆ. ಯಾರನ್ನೋ ನಂಬಿ, ಹೂಡಿಕೆ ಮಾಡುವುದು ನಷ್ಟಕ್ಕೆ ಕಾರಣ ಆಗಬಹುದು. ಆ ಬಗ್ಗೆ ಎ‌ಚ್ಚರ ಇರಲಿ.

ಕನ್ಯಾ

ದೇವತಾರಾಧನೆ, ಅಧ್ಯಾತ್ಮ ಚಿಂತನೆಗೆ ಹೆಚ್ಚು ಸಮಯ ಮೀಸಲಿಡಲಿದ್ದೀರಿ. ಊಟ- ತಿಂಡಿ ರುಚಿಕಟ್ಟಾಗಿ ಇರಲಿದೆ. ಒಪ್ಪಿಕೊಂಡ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸುವುದು ಕಷ್ಟವಾಗುತ್ತದೆ. ಯಾರ ನೆರವನ್ನು ಬಯಸಿದ್ದರೋ ಅವರಿಗೇ ಸಮಸ್ಯೆ ಎದುರಾಗಲಿದೆ. ಅತಿಯಾದ ನಿರೀಕ್ಷೆ ಬೇಡ.

ತುಲಾ

ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ನಿಮ್ಮ ನಿರ್ಧಾರಗಳು ಕೆಲಸ ಮಾಡುತ್ತವೆ. ಸಹೋದ್ಯೋಗಿಗಳು ನಿಮ್ಮನ್ನು ಮೆಚ್ಚುಗೆಯಿಂದ ನೋಡುತ್ತಾರೆ. ತಂದೆ- ತಾಯಿ ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವ ದಿನ ಇದು. ಸಂಗಾತಿ- ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.

ವೃಶ್ಚಿಕ

ಈ ದಿನ ಹೊತ್ತು ಕಳೆಯುವುದೇ ಕಷ್ಟ ಎಂಬಷ್ಟು ಬೇಸರ ಉಂಟಾಗುತ್ತದೆ. ಏಕಾಗ್ರತೆಯಿಂದ ಕೆಲಸ ಮಾಡುವುದು ಅಸಾಧ್ಯ ಎಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಯಾರದೋ ಅಪ್ಪಣೆಗಾಗಿ ಕಾದು ಕೂರುವಂಥ ಸ್ಥಿತಿ ನಿರ್ಮಾಣವಾಗುತ್ತದೆ. ಆಪ್ತರಿಗೆ ನಿಮ್ಮ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮೂಡುವಂತೆ ಆಗುತ್ತದೆ.

ಧನು

ಹಳೆಯ ಗೆಳೆಯ- ಗೆಳತಿಯರು, ಸಂಬಂಧಿಗಳು ನಿಮ್ಮ ಜತೆಗೆ ಮಾತು ಕತೆ ನಡೆಸಲಿದ್ದೀರಿ. ಹಳೆಯ ನೆನಪುಗಳು ನಿಮ್ಮನ್ನು ಕಾಡಲಿದೆ. ಮಕ್ಕಳ ಸಲುವಾಗಿಯೇ ಹೆಚ್ಚಿನ ಸಮಯ ಹೋಗುತ್ತದೆ. ಮನರಂಜನೆಗಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿ ಮನೆ ಕಡೆಯವರ ಪ್ರೀತಿ ದೊರೆಯಲಿದೆ.

ಮಕರ

ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಬೆಳವಣಿಗೆಗಳು ನಡೆಯಲಿವೆ. ವಹಿಸಿದ ಕೆಲಸವನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡುವುದು ಅಸಾಧ್ಯ ಎಂಬಂತಾಗುತ್ತದೆ. ವಿವಿಧ ಬಗೆಯ ಸ್ನೇಹಿತರಿಂದ ಬರುವ ಸಲಹೆ- ಸೂಚನೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಿ. ಯಾರ ಮೇಲೂ ಸಿಟ್ಟಾಗಬೇಡಿ.

ಕುಂಭ

ವಿಚಿತ್ರವಾದ ಕೋರಿಕೆಗಳು ನಿಮ್ಮನ್ನು ಬೆನ್ನಟ್ಟಲಿವೆ. ಎಲ್ಲವನ್ನೂ ಈಡೇರಿಸಿಕೊಳ್ಳಬೇಕು ಅಂತ ಹೊರಡಬೇಡಿ. ಖರ್ಚಿನ ಮೇಲೆ ಗಮನ ಇರಲಿ. ಇತರರಿಗೆ ನೆರವಾಗಬೇಕು ಎಂಬ ಆಲೋಚನೆಯೇನೋ ಸರಿ. ಆದರೆ ನಿಮಗೂ ಇಲ್ಲದಂತೆ ಮಾಡಿಕೊಂಡು, ಸಹಾಯ ಮಾಡುವುದು ಒಳ್ಳೆ ವಿಚಾರ ಅಲ್ಲ.

ಮೀನ

ಹೊಸ ವ್ಯಾಪಾರದ ಆಲೋಚನೆಗಳು ಬರುವ ದಿನ ಇದು. ಮುಮ್ದೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸರಿಯಾದ ಯೋಜನೆಯನ್ನು ಮಾಡಿಟ್ಟುಕೊಳ್ಳಿ. ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಇತರರ ನೆರವು ಬೇಕಾಗಲಿದೆ. ನಿಮ್ಮ ಯೋಜನೆಗಳಿಗೆ ತಂದೆ- ತಾಯಿ ಅಥವಾ ಸಂಗಾತಿಯ ಸಹಾಯ ದೊರೆಯಬಹುದು.

Continue Reading
Click to comment

Leave a Reply

Your email address will not be published. Required fields are marked *

ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರ ಅಂಜನಾದ್ರಿ ಬೆಟ್ಟ ಭೇಟಿ – ಆಂಜನೇಯ ದರ್ಶನ ಪಡೆದು ವಿಶೇಷ ಪೂಜೆ

ಕೊಪ್ಪಳ, ಆಗಸ್ಟ್ 7 – ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಕುಟುಂಬದ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಾಯುಪುತ್ರ ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಈ ಪವಿತ್ರ ಸ್ಥಳದಲ್ಲಿ ಅವರು 575 ಮೆಟ್ಟಿಲುಗಳನ್ನು 30 ನಿಮಿಷಗಳಲ್ಲಿ ಏರಿ ಭಕ್ತಿಯಿಂದ ದರ್ಶನ ಪಡೆದರು.


🌄 ಅಂಜನಾದ್ರಿ ಬೆಟ್ಟ – ಭಕ್ತರ ಆಸ್ಥೆಯ ಗಗನಚುಂಬಿ ಸಂಕೇತ

ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯಿಂದ ಹೆಸರಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಶ್ರೀ ರಾಮ, ಸೀತಾ ದೇವಿಗಳ ಮೂರ್ತಿಗಳೂ ಇಲ್ಲಿ ಪೂಜಿಸಲ್ಪಡುತ್ತವೆ. ಬೆಟ್ಟದ ಶಿಖರದಿಂದ ತುಂಗಭದ್ರಾ ನದಿಯ ನೋಟ, ಸೂರ್ಯಾಸ್ತದ ಸೌಂದರ್ಯ ಮತ್ತು ಹಂಪಿಯ ಇತಿಹಾಸದ ಅವಶೇಷಗಳು ಮನ ಮೋಹಿಸುತ್ತವೆ.


🛕 ಅಂಜನಾದ್ರಿ ಬೆಟ್ಟದ ಪ್ರಮುಖ ಅಂಶಗಳು:

  • 575 ಮೆಟ್ಟಿಲುಗಳನ್ನು ಏರಿ ಸ್ವಾಮಿದರ್ಶನ
  • ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸನ್ಮಾನ
  • ದೇವಾಲಯದ ಆಂತರಿಕ ಶ್ರದ್ಧಾ ಭರವಸೆಯ ಸ್ಥಳ
  • ಹಂಪಿಯಿಂದ ನದಿ ದಾಟಿ ಬೋಟ್ ಮೂಲಕ ಪ್ರವೇಶದ ಅನುಕೂಲ
  • ರೈಲು ಮಾರ್ಗ: ಕೊಪ್ಪಳ ಅಥವಾ ಮುನಿರಾಬಾದ್‌ ಮೂಲಕ
  • ರಸ್ತೆ ಸಂಪರ್ಕ ಉತ್ತಮ, ವಿಮಾನ ಸಂಪರ್ಕ ಇಲ್ಲ

📜 ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ಸರ್ಕಾರದ ದೃಷ್ಟಿಕೋನ

ಹನುಮ ಮಾಲೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಾಗ್ದಾನ ನೀಡಿದ್ದರು. ರಾಜ್ಯ ಸರಕಾರ ಕೂಡ ಈ ಸ್ಥಳವೇ ಆಂಜನೇಯನ ಜನ್ಮಭೂಮಿ ಎಂದು ಧರ್ಮಗ್ರಂಥಗಳ ಆಧಾರದ ಮೇಲೆ ದೃಢಪಡಿಸಿದೆ.

Continue Reading

ದೇಶ

ಅಮೆರಿಕದ ಒತ್ತಡಕ್ಕೂ headstrong ಭಾರತದ ನಿಲುಹೊರೆ: ರೈತ ಮತ್ತು ಮೀನುಗಾರರ ಹಿತಾಸಕ್ತಿಗೆ ಪ್ರಧಾನಿಯರಿಂದ ಖಡಕ್ ಸಂದೇಶ

ನವದೆಹಲಿ, ಆಗಸ್ಟ್ 7 – ರೈತರು ಹಾಗೂ ಮೀನುಗಾರರ (Farmers & Fishermen) ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಒಪ್ಪಂದವನ್ನು ಭಾರತ ಎಂದಿಗೂ ಮಾಡದು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಆಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ ಬೆನ್ನಲ್ಲೇ ಮೋದಿ ಈ ಹೇಳಿಕೆಯಿಂದ ಅಮೆರಿಕಕ್ಕೆ ತೀಕ್ಷ್ಣ ಸಂದೇಶ ನೀಡಿದ್ದಾರೆ.

ರೈತರಿಗೆ ಬೆಂಬಲವೇ ಪ್ರಮುಖ ಆದ್ಯತೆ
ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, “ರೈತರು, ಮೀನುಗಾರರು, ಹೈನುಗಾರರು ನಮ್ಮ ಆರ್ಥಿಕ ವ್ಯವಸ್ಥೆಯ ಪ್ರಮುಖ ಅಂಶಗಳು. ಅವರ ಹಿತಾಸಕ್ತಿಗೆ ಭಾರತ ಯಾವತ್ತೂ ರಾಜಿ ಆಗುವುದಿಲ್ಲ” ಎಂದರು.

ಸಾಂಸ್ಕೃತಿಕ ನಂಬಿಕೆಗೆ ಧಕ್ಕೆಯಾಗದಂತೆ ನಿರ್ಧಾರ
ಅಮೆರಿಕ ಭಾರತ ಮಾರುಕಟ್ಟೆಗೆ ಡೈರಿ ಉತ್ಪನ್ನ ಪ್ರವೇಶಕ್ಕೆ ಒತ್ತಡ ಹಾಕುತ್ತಿದ್ದರೂ ಭಾರತ ಅದನ್ನು ನಿರಾಕರಿಸಿದೆ. ಕಾರಣ, ಅಮೆರಿಕದಲ್ಲಿ ಜಾನುವಾರುಗಳಿಗೆ ಮಾಂಸಾಂಶ ಆಹಾರ ನೀಡಲಾಗುತ್ತದೆ. ಹೀಗೆ ಪಶು ಉತ್ಪನ್ನಗಳಿಂದ ಉತ್ಪತ್ತಿಯಾದ ಹಾಲು ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳ ವಿರುದ್ಧವಾಗಿರುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟರು.

ಅಮೆರಿಕದ ಸುಂಕ ಸಮರ – ಭಾರತದ ತೀವ್ರ ಪ್ರತಿಕ್ರಿಯೆ
ಟ್ರಂಪ್ ಸರಕಾರ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ವಿರುದ್ಧ ಸುಂಕ ಸಮರ ಘೋಷಿಸಿದ್ದು, ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿದೆ. ಆದರೆ ಭಾರತ ಕೃಷಿ, ಹೈನು ಉತ್ಪನ್ನ, ಮೀನುಗಾರಿಕೆ ಕ್ಷೇತ್ರಗಳ ಮೇಲೆ ಸಂಬಂಧಿತ ಮೌಲ್ಯಗಳನ್ನು ಬಲಪಡಿಸಿ ಅಮೆರಿಕದ ಒತ್ತಡಕ್ಕೆ ಕೀಳ್ಮಣೆ ನೀಡಿಲ್ಲ.

ಪ್ರಧಾನಿಯ ಮಾತುಗಳಲ್ಲಿ ಸ್ಪಷ್ಟ ಸಂದೇಶ:

“ಭಾರತದ ರೈತ, ಮೀನುಗಾರ ಮತ್ತು ಹೈನುಗಾರರು ನಮ್ಮ ಅಸ್ಥಿ-ಮಜ್ಜೆಯಂತಹವರು. ಅವರ ಹಿತದೃಷ್ಟಿಗೆ ಯಾವುದೇ ಬೆಲೆ ಕಟ್ಟಲು ನಾನು ಸಿದ್ಧ” ಎಂದು ಮೋದಿ ಹೇಳಿದ್ದಾರೆ.

Continue Reading

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

Trending