ದೇಶ
ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/04/rr.jpg&description=ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/04/rr.jpg&description=ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ', 'pinterestShare', 'width=750,height=350'); return false;" title="Pin This Post">
ವಾಷಿಂಗ್ಟನ್: ಭಾರತ, ಅಮೆರಿಕ ಮತ್ತು ಇತರ ಪಶ್ಚಿಮದ ರಾಷ್ಟ್ರಗಳು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿವೆ ಆದರೆ ಆದರೆ ಜಾಗತಿಕ ಉತ್ಪಾದನೆಯಲ್ಲಿ ಪ್ರಾಬಲ್ಯ ಸಾಧಿಸಿರುವ ಚೀನಾದಲ್ಲಿ ಉದ್ಯೋಗ ಸಮಸ್ಯೆಯಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದು, ಭಾರತ ದೇಶ ಉತ್ಪಾದನೆಯತ್ತ ಗಮನ ಹರಿಸುವ ಅಗತ್ಯವಿದೆ ಎಂದರು.
ನಿನ್ನೆ ಭಾನುವಾರ ಅಮೆರಿಕಾದ ಡಲ್ಲಾಸ್ನ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತದಲ್ಲಿ ಕೌಶಲ್ಯ ಹೊಂದಿರುವವರಿಗೆ ಕೊರತೆಯಿಲ್ಲ. ಉತ್ಪಾದನೆಯಲ್ಲಿ ಶ್ರೇಷ್ಠತೆ ಸಾಧಿಸಿದರೆ ಭಾರತ ದೇಶವು ಚೀನಾದೊಂದಿಗೆ ಸ್ಪರ್ಧಿಸಬಹುದು ಎಂದರು.
ವ್ಯಾಪಾರ ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ವೃತ್ತಿಪರ ತರಬೇತಿಯನ್ನು ಪ್ರೋತ್ಸಾಹಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ನಾಲ್ಕು ದಿನಗಳ ಯುಎಸ್ ಎಯ ಅನಧಿಕೃತ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರು ಡಲ್ಲಾಸ್, ಟೆಕ್ಸಾಸ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಅನಿವಾಸಿ ಭಾರತೀಯರು ಯುವಕರೊಂದಿಗೆ ಸಂವಾದ ನಡೆಸಲಿದ್ದಾರೆ. ಇಂದು ಸೋಮವಾರದಿಂದ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರು ಅಲ್ಲಿನ ಜನಪ್ರತಿನಿಧಿಗಳು ಮತ್ತು ಯುಎಸ್ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲು ಯೋಜಿಸಿದ್ದಾರೆ.
ಕಳೆದ ಶನಿವಾರ ರಾತ್ರಿ ಡಲ್ಲಾಸ್ಗೆ ಆಗಮಿಸಿದ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಮತ್ತು ಯುಎಸ್ಎಯ ಭಾರತೀಯ ರಾಷ್ಟ್ರೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಮೊಹಿಂದರ್ ಗಿಲ್ಜಿಯಾನ್ ನೇತೃತ್ವದಲ್ಲಿ ಭಾರತೀಯ-ಅಮೆರಿಕನ್ ಸಮುದಾಯದ ಸದಸ್ಯರು ಸ್ವಾಗತಿಸಿದರು.
ಪಾಶ್ಚಿಮಾತ್ಯ ದೇಶಗಳಲ್ಲಿ ಹಾಗೆಯೇ ಭಾರತದಲ್ಲಿ ಕೂಡ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದರು.
ಚೀನಾ ಪ್ರಾಬಲ್ಯ: ನೀವು 1940 ರ ದಶಕ, 50 ಮತ್ತು 60 ರ ದಶಕಗಳಲ್ಲಿ ಯುನೈಟೆಡ್ ಸ್ಟೇಟ್ಸ್ ನ್ನು ನೋಡಿದರೆ, ಅವು ಜಾಗತಿಕ ಉತ್ಪಾದನೆಯ ಕೇಂದ್ರವಾಗಿತ್ತು. ತಯಾರಿಸಿದ ಯಾವುದಾದರೂ ವಸ್ತುಗಳು ಅದು, ಕಾರು ಆಗಿರಲಿ, ವಾಷಿಂಗ್ ಮೆಷಿನ್ ಗಳು, ಟಿವಿಗಳು, ಎಲ್ಲವೂ ಯುನೈಟೆಡ್ ಸ್ಟೇಟ್ಸ್ ನಲ್ಲಿ ತಯಾರಿಸಲ್ಪಟ್ಟವು. ಉತ್ಪಾದನೆಯು ಯುನೈಟೆಡ್ ಸ್ಟೇಟ್ಸ್ನಿಂದ ಕೊರಿಯಾಕ್ಕೆ ಹೋಗಿ ಅದು ಅಂತಿಮವಾಗಿ ಚೀನಾಕ್ಕೆ ಹೋಯಿತು, ಈಗ ನೀವು ನೋಡಿದರೆ, ಚೀನಾ ಜಾಗತಿಕ ಉತ್ಪಾದನೆಯಲ್ಲಿ ಪ್ರಾಬಲ್ಯ ಹೊಂದಿದೆ. ಪಶ್ಚಿಮ, ಅಮೆರಿಕ, ಯುರೋಪ್ ಮತ್ತು ಭಾರತವು ಉತ್ಪಾದನೆಯ ಕಲ್ಪನೆಯನ್ನು ಬಿಟ್ಟುಕೊಟ್ಟಿದೆ, ಅದನ್ನು ಚೀನಾಕ್ಕೆ ಹಸ್ತಾಂತರಿಸಿದ್ದಾರೆ ಎಂದರು.
ಉತ್ಪಾದನೆಯಿಂದ ಉದ್ಯೋಗ ಸೃಷ್ಟಿ: ಉತ್ಪಾದನೆ ಕ್ಷೇತ್ರದಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ನಾವು ಏನು ಮಾಡುತ್ತೇವೆ, ಅಮೆರಿಕನ್ನರು ಏನು ಮಾಡುತ್ತಾರೆ, ಪಶ್ಚಿಮದ ದೇಶಗಳು ಏನು ಮಾಡುತ್ತವೆ, ನಾವು ಬಳಕೆಯನ್ನು ಸಂಘಟಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ಭಾರತ ದೇಶವು ಉತ್ಪಾದನೆ ಮತ್ತು ಉತ್ಪಾದನೆಯನ್ನು ಸಂಘಟಿಸುವ ಕ್ರಿಯೆಯ ಬಗ್ಗೆ ಯೋಚಿಸಬೇಕು. ಇಲ್ಲದಿದ್ದರೆ ಉತ್ಪಾದನೆ ಕೇತ್ರ ಚೀನಾ, ಬಾಂಗ್ಲಾ ದೇಶದವರ ಸಂರಕ್ಷಣೆಯ ಕ್ಷೇತ್ರವೆನಿಸಿಕೊಳ್ಳಲಿದೆ ಎಂದರು.
ಉತ್ಪಾದನೆಯನ್ನು ಉತ್ತೇಜಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ನಾವು ಅದನ್ನು ಮಾಡುವವರೆಗೆ, ನಿರುದ್ಯೋಗ ಸಮಸ್ಯೆಯಿರುತ್ತದೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ನಲ್ಲಿ ಬರುತ್ತಿರುವ ಸಮಸ್ಯೆಗಳು ನಮ್ಮ ರಾಜಕೀಯದ ಧ್ರುವೀಕರಣಕ್ಕೆ ಕಾರಣವಾಗಿದೆ ಎಂದರು.
ಕೌಶಲ್ಯ ಕೊರತೆಯಿಲ್ಲ: ಭಾರತದಲ್ಲಿ ಕೌಶಲ್ಯದ ಸಮಸ್ಯೆ ಇದೆ ಎಂದು ಹಲವರು ಹೇಳುತ್ತಾರೆ. ಭಾರತಕ್ಕೆ ಕೌಶಲ್ಯದ ಸಮಸ್ಯೆ ಇದೆ ಎಂದು ನಾನು ಭಾವಿಸುವುದಿಲ್ಲ. ಭಾರತವು ಕೌಶಲ್ಯ ಹೊಂದಿರುವ ಜನರ ಬಗ್ಗೆ ಗೌರವವನ್ನು ಹೊಂದಿಲ್ಲ ಅಷ್ಟೆ. ವೃತ್ತಿಪರ ತರಬೇತಿಯ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ವ್ಯಾಪಾರ ವ್ಯವಸ್ಥೆಯೊಂದಿಗೆ ಜೋಡಿಸುವ ಅಗತ್ಯವಿದೆ ಎಂದರು.
ಈ ಅಂತರವನ್ನು ಕಡಿಮೆ ಮಾಡುವುದು ಅಥವಾ ಈ ಎರಡು ವ್ಯವಸ್ಥೆಗಳಾದ ಕೌಶಲ್ಯ ಮತ್ತು ಶಿಕ್ಷಣವನ್ನು ವೃತ್ತಿಪರ ತರಬೇತಿಯ ಮೂಲಕ ಜೋಡಿಸುವುದು ಮೂಲಭೂತವಾಗಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ದೊಡ್ಡ ಸಮಸ್ಯೆಯು ಸೈದ್ಧಾಂತಿಕ ಸೆರೆಹಿಡಿಯುವಿಕೆಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ಭಾರತವು ಉತ್ಪಾದನೆಗಾಗಿ ತನ್ನನ್ನು ತಾನು ಹೊಂದಿಸಿಕೊಳ್ಳಲು ಪ್ರಾರಂಭಿಸಿದರೆ ಮತ್ತು ಕೌಶಲ್ಯಗಳನ್ನು ಗೌರವಿಸಲು ಪ್ರಾರಂಭಿಸಿದರೆ ಭಾರತವು ಚೀನಾವನ್ನು ಎದುರಿಸಬಹುದು ಎಂದು ಅವರು ಮನಗಂಡಿದ್ದಾರೆ ಎಂದು ಅವರು ಹೇಳಿದರು.
ನನಗೆ ಇದು ಸಂಪೂರ್ಣವಾಗಿ ಮನವರಿಕೆಯಾಗಿದೆ. ತಮಿಳುನಾಡಿನಂತಹ ರಾಜ್ಯಗಳು ಅದನ್ನು ಈಗಾಗಲೇ ತೋರಿಸಿವೆ. ಭಾರತದ ರಾಜ್ಯಗಳು ಇದನ್ನು ಮಾಡಿಲ್ಲ ಎಂದು ಅಲ್ಲ ಪ್ರಮಾಣ ಮತ್ತು ಸಮನ್ವಯದೊಂದಿಗೆ ಅದನ್ನು ಮಾಡಬೇಕಾಗಿದೆ” ಎಂದು ಗಾಂಧಿ ಹೇಳಿದರು.
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ