Connect with us

ಅಪರಾಧ

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ – Stone Pelting In Nagamangala

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯ ಸಂಪೂರ್ಣ ವಿವರ: ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ (ನಿನ್ನೆ) ರಾತ್ರಿ ಮೂರ್ತಿಯ ನಿಮಜ್ಜನಾ ಮೆರವಣಿಗೆ ಅನ್ಯಕೋಮಿನ ಪ್ರಾರ್ಥನಾ ಮಂದಿರದ ಬಳಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

3 ದಿನ 144 ಸೆಕ್ಷನ್ ಜಾರಿ- ಐಜಿಪಿ: “ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಕೆಲವು ಅಂಗಡಿ ಮತ್ತು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಎಲ್ಲೆಡೆ ಭದ್ರತೆ ನೀಡಿದ್ದೇವೆ. ಪರಿಸ್ಥಿತಿ ಹತೋಟಿಗೆ ಬಂದಿದೆ. ಮೂರು ದಿನಗಳವರೆಗೆ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಗಲಾಟೆಯ ವೇಳೆ ಮಚ್ಚು, ಲಾಂಗು, ಪೆಟ್ರೋಲ್ ಬಾಂಬ್ ಬಳಸಿರುವ ಬಗ್ಗೆ ಮಾಹಿತಿ ಇಲ್ಲ. ಕೆಲವರನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ” ಎಂದು ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ತಿಳಿಸಿದರು.

ಎಸ್​ಪಿ ಪ್ರತಿಕ್ರಿಯೆ: “ಗಣೇಶ ಮೂರ್ತಿಯ ಮೆರವಣಿಗೆ ಹೆಚ್ಚು ಹೊತ್ತು ಮಸೀದಿಯ ಮುಂದೆ ನಿಂತಿರುವುದಕ್ಕೆ ಎರಡು ಕೋಮುಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಿದರು. ಬಳಿಕ ಪೊಲೀಸರು ಹೊಡೆದರೆಂದು ಠಾಣೆ ಮುಂದೆ ಒಂದು ಗುಂಪಿನ ಯುವಕರು ಬಂದು ಪ್ರತಿಭಟನೆ ಮಾಡಿದ್ದಾರೆ. ಇನ್ನೊಂದೆಡೆ ಇನ್ನೊಂದು ಕೋಮಿನವರು ಕಲ್ಲು ತೂರಾಟ ಮಾಡಿದರು. ಎರಡು ಬೈಕ್​ ಮತ್ತು ನಾಲ್ಕೈದು ಅಂಗಡಿಗಳಿಗೂ ಬೆಂಕಿ ಹಚ್ಚಿದ್ದಾರೆ. ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ. ಪ್ರಕರಣದ ಬಗ್ಗೆ ತನಿಖೆ ಮಾಡುತ್ತಿದ್ದೇವೆ” ಎಂದು ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ ಪ್ರತಿಕ್ರಿಯಿಸಿದರು.

ಕಳೆದ ವರ್ಷವೂ ಗಲಾಟೆ: ನಾಗಮಂಗಲದಲ್ಲಿ ಗಣೇಶೋತ್ಸವ ವೇಳೆ ಈ ರೀತಿಯ ಸಂಘರ್ಷ ಇದು ಮೊದಲಲ್ಲ. ಕಳೆದ ವರ್ಷವೂ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.

ಅಪರಾಧ

 ವಿರಾಟ್​ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

ಅಪರಾಧ

ಬೆಂಗಳೂರಿನಲ್ಲೊಬ್ಬ ಭಯಂಕರ ಕುಡುಕ!

ಬೆಂಗಳೂರು: ಇತ್ತೀಚೆಗೆ ಬೆಂಗಳೂರಲ್ಲಿ ಎಣ್ಣೆ ಹೊಡೆದು ಗಾಡಿ ಓಡಿಸೋರ ಸಂಖ್ಯೆ ಹೆಚ್ಚಾಗಿದ್ದು, ಆಸಾಮಿಗಳು ದೊಡ್ಡ ಅನಾಹುತಕ್ಕೆ ಕಾರಣವಾಗ್ತಿದ್ದಾರೆ,
ಬೆಂಗಳೂರಿನ ಕೋರಮಂಗಲದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಒನ್ ವೇಯಲ್ಲಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಹಾನಿ ಮಾಡಿದ್ದಋಎ, ಪೊಲೀಸರು ತಡೆಯಲು ಯತ್ನಿಸಿದಾಗ ಅವರ ಮೇಲೆಯೇ ಕಾರು ಹೊತ್ತಿಸಲು ಯತ್ನಿಸಿದ್ದಾನೆ, ನಂತರ ಪೊಲೀಸರು ಕಾರಿನ ಗಾಜು ಒಡೆದು ಆತನನ್ನು ಹಿಡಿದಿದ್ದಾರೆ, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ, ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರಿಕೇಡ್ ಗೆ ಕಾರು ಗುದ್ದಿಸಿದ್ದಾನೆ, ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ, ನಂತರ ಕಾರಿನ ಬಾಗಿಲ ತೆರೆಯುವಂತೆ ಪೊಲೀಸರು ಸೂಚನೆ ನೀಡಿರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ, ಹೀಗಾಗಿ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆದು ತೆಗೆದಿದ್ದಾರೆ,
ಚಾಲಕ ವಿಪರೀತ ಮದ್ಯಪಾನ ಮಾಡಿದ್ದ ಮತ್ತು ಅವನಿಗೆ ಸುತ್ತಮುತ್ತಲಿನ ಪ್ರಜ್ಞೆಯೇ ಇರಲಿಲ್ಲ ಎಂದು ಹಲವರು ಹೇಳಿದ್ದಾರೆ,

Continue Reading

ಅಪರಾಧ

ಮುನಿರತ್ನ ವಿರುದ್ಧ ಅತ್ಯಾಚಾರಆರೋಪ ಎಸ್​ಐಟಿಗೆ ಶಿಫ್ಟ್​: ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡ್ರಾ ಶಾಸಕ?

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿನಿಂದನೆ, ಮತ್ತು ಇತರ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಲಾಗಿದೆ. ಬಂಧನ ಭೀತಿಯಿಂದ ಶಾಸಕರು ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.ಈ ಘಟನೆಯು ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮುನಿರತ್ನ ಮತ್ತು ಆತನ ಸಹಚರರಾದ ವಸಂತ, ಚನ್ನಕೇಶವ, ಕಮಲ್ ಮತ್ತು ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರಿನ ಪ್ರಕಾರ, 2023ರ ಜೂನ್ 11ರಂದು ಶಾಸಕರ ಕಚೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮಹಿಳೆಯ ದೂರಿನಲ್ಲಿ, ತನಗೆ ಇಂಜೆಕ್ಷನ್ ನೀಡಿ ಅತ್ಯಾಚಾರವೆಸಗಲಾಗಿದ್ದು, ಇದರಿಂದ ತನಗೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ತಿಳಿಸಲಾಗಿದೆ. ಈ ಆರೋಪದಡಿಯಲ್ಲಿ ಐಪಿಸಿ ಸೆಕ್ಷನ್ 376D (ಸಾಮೂಹಿಕ ಅತ್ಯಾಚಾರ), 270, 323, 354, 504, 506, 509, ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಈ ಆರೋಪಗಳು ರಾಜಕೀಯ ವಿವಾದಕ್ಕೆ ಕಾರಣವಾಗಿವೆ.ಮುನಿರತ್ನ ವಿರುದ್ಧ ಈಗಾಗಲೇ ಜಾತಿನಿಂದನೆ, ಲಂಚ ಆರೋಪ, ಮತ್ತು ಅತ್ಯಾಚಾರ ಸೇರಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಸರ್ಕಾರವು 2024ರ ಸೆಪ್ಟೆಂಬರ್‌ನಲ್ಲಿ ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚಿಸಿತು. ಈ ತಂಡವು ಈಗ ಆರ್‌ಎಂಸಿ ಯಾರ್ಡ್‌ನಲ್ಲಿ ದಾಖಲಾದ ಇತ್ತೀಚಿನ ಅತ್ಯಾಚಾರ ಪ್ರಕರಣವನ್ನು ತನಿಖೆಗೆ ಒಳಪಡಿಸಿದೆ. 590 ಪುಟಗಳ ಚಾರ್ಜ್‌ಶೀಟ್‌ನಲ್ಲಿ 53 ಸಾಕ್ಷಿಗಳ ಹೇಳಿಕೆ, 157 ದಾಖಲೆಗಳು, ಮತ್ತು ಎಫ್‌ಎಸ್‌ಎಲ್ ವರದಿಯನ್ನು ಸೇರಿಸಲಾಗಿದ್ದು, ಜಾತಿನಿಂದನೆ ಆರೋಪಕ್ಕೆ ಸಂಬಂಧಿಸಿದ ಆಡಿಯೊ ಕ್ಲಿಪ್‌ನಲ್ಲಿ ಮುನಿರತ್ನನ ಧ್ವನಿಯನ್ನು ದೃಢೀಕರಿಸಲಾಗಿದೆ.ಈ ತನಿಖೆಯು ಮುನಿರತ್ನನ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು.

ಅತ್ಯಾಚಾರ ಆರೋಪದಿಂದಾಗಿ ಮುನಿರತ್ನನಿಗೆ ಬಂಧನ ಭೀತಿ ಎದುರಾಗಿದ್ದು, ಆತ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಉನ್ನತ ಮೂಲಗಳ ಪ್ರಕಾರ, ಶಾಸಕರು ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಮತ್ತು ಜಾಮೀನು ಸಿಗುವವರೆಗೆ ಬೆಂಗಳೂರಿನಿಂದ ದೂರವಿರುವ ಅಜ್ಞಾತ ಸ್ಥಳದಲ್ಲಿದ್ದಾರೆ ಎಂದು ತಿಳಿದುಬಂದಿದೆ.  ಮುನಿರತ್ನ ಈ ಹಿಂದೆ ಜಾತಿನಿಂದನೆ ಮತ್ತು ಲಂಚ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು, ಆದರೆ ಈ ಹೊಸ ಪ್ರಕರಣ ಆತನಿಗೆ ದೊಡ್ಡ ಸವಾಲಾಗಿದೆ.ದೂರುದಾರೆಯಾದ ಬಿಜೆಪಿ ಕಾರ್ಯಕರ್ತೆ ತನ್ನ ಹೇಳಿಕೆಯಲ್ಲಿ, ತಾನು ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೆ ಎಂದು ತಿಳಿಸಿದ್ದಾರೆ. ತನ್ನ ಪತಿ ತೊರೆದ ಬಳಿಕ ಎರಡನೇ ಮದುವೆಯಾಗಿ ಜೀವನ ನಡೆಸುತ್ತಿದ್ದಾಗ, ವೇಶ್ಯಾವಾಟಿಕೆ ಆರೋಪದಡಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ಕೆಲವರು ತನ್ನ ಕೇಸ್ ಇತ್ಯರ್ಥ ಮಾಡುವ ಆಮಿಷವೊಡ್ಡಿ ಕಚೇರಿಗೆ ಕರೆಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳು ಕಾನೂನಿನ ಎದುರು ಗಂಭೀರವಾಗಿದ್ದು, ತನಿಖೆಯ ಫಲಿತಾಂಶವನ್ನು ಕಾದುನೋಡಬೇಕಿದೆ.

Continue Reading
Advertisement

Trending