Connect with us

ದೇಶ

70 ವರ್ಷ ಮೇಲ್ಪಟ್ಟವರಿಗೂ ₹5 ಲಕ್ಷದ ಆಯುಷ್ಮಾನ್ ಭಾರತ್ ವಿಮೆ: ಕೇಂದ್ರದ ಮಹತ್ವದ ನಿರ್ಧಾರ – Ayushman Bharat Yojana

ನವದೆಹಲಿ: 70 ವರ್ಷ ಮೇಲ್ಪಟ್ಟವರಿಗೂ ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ’ಯನ್ನು ಯಾವುದೇ ಆದಾಯದ ಮಿತಿಯಿಲ್ಲದೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರ ಕೈಗೊಂಡಿತು. ಇದರಿಂದಾಗಿ ದೇಶದ 6 ಕೋಟಿ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

5 ಲಕ್ಷ ರೂಪಾಯಿಯ ಉಚಿತ ವಿಮಾ ಯೋಜನೆಯ ವಿಸ್ತರಣೆ 4.5 ಕೋಟಿ ಹಿರಿಯ ನಾಗರಿಕರ ಕುಟುಂಬಗಳಿಗೆ ನೆರವಾಗಲಿದೆ. ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ಹೊಸದಾಗಿ ವಿಭಿನ್ನ ಕಾರ್ಡ್‌ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

70 ವರ್ಷ ಮತ್ತು ಮೇಲ್ಪಟ್ಟ ಹಿರಿಯ ನಾಗರಿಕರ ಕುಟುಂಬಗಳು ಈಗಾಗಲೇ ಈ ಯೋಜನೆಯ ಭಾಗವಾಗಿದ್ದರೂ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಟಾಪ್‌ ಅಪ್‌ ಮೂಲಕ ಪಡೆಯಲಿದ್ದಾರೆ. (ಇದನ್ನು ಅವರು ತಮ್ಮ 70 ವರ್ಷದೊಳಗಿನ ಇತರೆ ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳುವ ಅವಶ್ಯಕತೆ ಇಲ್ಲ). ಉಳಿದಂತೆ, ಎಲ್ಲ 70 ಮತ್ತು ಮೇಲ್ಪಟ್ಟ ಹಿರಿಯರು ಕುಟುಂಬದ ಆಧಾರದಲ್ಲಿ ಪ್ರತಿ ವರ್ಷ 5 ಲಕ್ಷ ರೂಪಾಯಿಯ ಉಚಿತ ವಿಮಾ ಯೋಜನೆಯ ಲಾಭ ಪಡೆಯಬಹುದು.

ಎಪ್ಪತ್ತು ವರ್ಷ ಮತ್ತು ಮೇಲ್ಪಟ್ಟವರು ಖಾಸಗಿ ಆರೋಗ್ಯ ವಿಮೆ ಮಾಡಿಸಿದ್ದರೆ ಅಥವಾ ESI ಯೋಜನೆಯ ಭಾಗವಾಗಿದ್ದರೂ ಕೂಡಾ ಆಯುಷ್ಮಾನ್ ವಿಮಾ ಯೋಜನೆಯ ಅನುಕೂಲಗಳನ್ನು ಪಡೆಯಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದಲ್ಲದೇ, ಸಾರ್ವಜನಿಕ ಆರೋಗ್ಯ ಯೋಜನೆಗಳಾದ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಹೆಚ್‌ಎಸ್), ಮಾಜಿ ಸೈನಿಕರ ಆರೋಗ್ಯ ಯೋಜನೆ (ಇಸಿಹೆಚ್‌ಎಸ್‌) ಮತ್ತು ಆಯುಷ್ಮಾನ್ ಸಶಸ್ತ್ರ ಪೊಲೀಸ್ ದಳ (ಸಿಎಪಿಎಫ್)ದವರು ತಮ್ಮ ಹಾಲಿ ಯೋಜನೆಗಳನ್ನು ಮುಂದುವರೆಸಬಹುದು ಇಲ್ಲವೇ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯನ್ನು ಹೊಂದಬಹುದು. ಇಲ್ಲಿ ಸರ್ಕಾರ, ಎರಡರ ಪೈಕಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ದೇಶದ ಪ್ರತಿ ನಾಗರಿಕನಿಗೂ ಕೈಗೆಟುಕುವ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನಾವು ಬದ್ಧವಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯನ್ನು 70 ವರ್ಷ ಮೇಲ್ಪಟ್ಟವರಿಗೂ ಒದಗಿಸಲು ಕ್ರಮ ಕೈಗೊಂಡಿದೆ. ಈ ಯೋಜನೆಯು 6 ಕೋಟಿ ನಾಗರಿಕರಿಗೆ ಘನತೆ, ಕಾಳಜಿ ಮತ್ತು ಭದ್ರತೆಯನ್ನು ಖಚಿತಪಡಿಸುತ್ತದೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಕಾರ, ಎಬಿ ಪಿಎಂ-ಜೆಎವೈ ವಿಶ್ವದ ಅತಿದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ಭರವಸೆ ಯೋಜನೆ. ಇದು ವಾರ್ಷಿಕ 5 ಲಕ್ಷ ರೂಪಾಯಿ ವೆಚ್ಚದಲ್ಲಿ 12.34 ಕೋಟಿ ಕುಟುಂಬಗಳ 55 ಕೋಟಿ ಜನರಿಗೆ ದ್ವಿತೀಯ ಮತ್ತು ತೃತೀಯ ಆಸ್ಪತ್ರೆ ಸೇವೆ ಒದಗಿಸುತ್ತದೆ. ಅರ್ಹ ಕುಟುಂಬದ ಪ್ರತಿ ಸದಸ್ಯ ಯಾವುದೇ ಪ್ರಾಯದ ನಿರ್ಬಂಧವಿಲ್ಲದೆ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತಾರೆ.

ಈ ಯೋಜನೆ 7.37 ಆಸ್ಪತ್ರೆ ದಾಖಲಾತಿಗಳನ್ನು ಹೊಂದಿದೆ. ಈ ಪೈಕಿ ಶೇ.49ರಷ್ಟು ಮಹಿಳಾ ಫಲಾನುಭವಿಗಳು ಎಂಬುದು ವಿಶೇಷ. ಈ ಯೋಜನೆಯಿಂದ 1 ಲಕ್ಷ ಕೋಟಿ ರೂಪಾಯಿ ಮೊತ್ತದಷ್ಟು ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending