ಬೆಂಗಳೂರು
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಟಪ್ಪು ಸಂತತಿ ದೌರ್ಜನ್ಯ ನಡೆಸುತ್ತಾರೆ: ತೇಜಸ್ವಿ ಸೂರ್ಯ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ಟಿಪ್ಪು ಸಂತತಿಯಿಂತಿರುವ ಕೆಲವು ಮತೀಯ ಶಕ್ತಿಗಳು ರಾತ್ರೋರಾತ್ರಿ ಎದ್ದು ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸುತ್ತಾರೆ ಎಂದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪಿಸಿದರು,
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಡ್ಯ ಜೆಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಏನು ನಡೆದಿದೆ ಎಂಬುದು ಜನತೆಗೆ ಗೊತ್ತಿದೆ ನಮ್ಮ ಗಣಪತಿಯನ್ನು ವಿಸರ್ಜನೆ ಮಾಡುವಾಗ ಕೋಮುಗಲಭೆ ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದರು,
ನಾಗಮಂಗಲ ಗಲಭೆಯನ್ನು ಗೃಹ ಸಚಿವ ಸಣ್ಣ ಘಟನೆ ಎಂದು ಹೇಳುತ್ತಾರೆ, ನಿಮ್ಮ ಮನೆ ರೋಡ್ನಲ್ಲಿ ಯಾರಾದರೂ ಗಣೇಶ ಕೂರಿಸಿದಾಗ ಅಲ್ಲಿ ಯಾರಾದ್ರೂ ಕಲ್ಲು ಹೊಡೆದ್ರೆ, ಬೆಂಕಿ ಹಾಕಿದರೆ ಸಣ್ಣ ಘಟನೆ ಎಂದು ಹೇಳುತ್ತೀರಾ? ನಿಮ್ಮ ಮನಗೆ ಬೆಂಖಿ ಬೀಳುವವರೆಗೂ ನಿಮಗೆ ಘಟನೆ ಬಗ್ಗೆ ಗೊತ್ತಾಗುವುದಿಲ್ಲ ಎಂದು ಕಿಡಿಕಾರಿದರು,
ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದಾರೆ, ಕರ್ನಾಟಕದಲ್ಲಿ ಸಂವಿಧಾನದ ಪ್ರಕಾರ ಕಾನೂನು ನಡೆಯುತ್ತಿದೆಯಾ? ಷರಿಯಾ ಪ್ರಕಾರ ಕಾನೂನು ನಡೆಯುತ್ತಿದೆಯಾ? ಬಾಂಗ್ಲಾ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಇರೋ ವ್ಯತ್ಯಾ ಏನು ಎಂದು ಪ್ರಶ್ನಿಸಿದರು,
ಬೆಂಕಿ ಹಾಕಿದ ಟೆರರಿಸ್ವ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಿಂದೂ ಯುವಕರ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯಬೇಕು, ಇದೇ ರೀತಿ ಅಮಾಯಕರ ಮೇಲೆ ಕ್ರಮಕ್ಕೆ ಮುಂದಾದ್ರೆ ಬಿಜೆಪಿ ಹಳ್ಳಿ ಹಳ್ಳಿಯಲ್ಲಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು,