Connect with us

ರಾಜಕೀಯ

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸಂಸದ ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್

ಚಿಕ್ಕಬಳ್ಳಾಪುರ: ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸಂಸದ ಸುಧಾಕರ್’ಗೆ ಶಾಸಕ ಪ್ರದೀಪ್ ಈಶ್ವರ್’ಗೆ ಸವಾಲು ಹಾಕಿದ್ದಾರೆ.

ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್‌ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ದರೆ ಬಚಾವ್ ಆಗು ನೋಡೋಣ ಎಂದು ಏಕವಚನದಲ್ಲೇ ಸವಾಲು ಹಾಕಿದರು.

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ಹೇಳಿದರು.

ಶಾಸಕ ಪ್ರದೀಪ್ ಈಶ್ವರ್, ಸಂಸದ ಡಾ ಕೆ.ಸುಧಾಕರ್ ಮಧ್ಯೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಮತದಾನ ನಡೆದಿದ್ದು, ನ್ಯಾಯಾಲಯದ ನಿರ್ದೇಶನದ ಮೇರೆಗೆ ಫಲಿತಾಂಶ ಕಾಯ್ದಿರಿಸಲಾಗಿದೆ. ಆದರೂ ಚುನಾವಣೆಯಲ್ಲಿ ಜಯಗಳಿಸಿದ್ದೇವೆ ಎಂದು ಬಿಜೆಪಿಯವರು ವಿಜಯೋತ್ಸವ ಆಚರಿಸಿದ್ದಾರೆ.

ಒಟ್ಟು 31 ಸದಸ್ಯ ಬಲದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ 9 ಸದಸ್ಯರು, 3 ಮಂದಿ ಪಕ್ಷೇತರರು, 6 ಜನ ಕಾಂಗ್ರೆಸ್ಸಿಗರು, ಸಂಸದರ ಮತ ಸೇರಿ ಬಿಜೆಪಿಗೆ ಒಟ್ಟು 19 ಮತಗಳು ಬಂದಿವೆ.

ಇನ್ನು ಕಾಂಗ್ರೆಸ್‌ 10 ಸದಸ್ಯರು, ಶಾಸಕ, ಎಂಎಲ್ಸಿ ಸೇರಿ 3, ಒಬ್ಬ ಪಕ್ಷೇತರ, ಇಬ್ಬರು ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಒಟ್ಟು 16 ಮತಗಳನ್ನು ಪಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗುತ್ತಿದೆ.

ಶಾಸಕ ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಎಂ.ಆರ್.ಸೀತಾರಾಂ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಹಾಗೂ ಎಂ.ಆರ್.ಸೀತಾರಾಂ ಮತದಾನ ಮಾಡಲು ಅರ್ಹರಲ್ಲ ಎಂದು ಡಾ.ಕೆ.ಸುಧಾಕರ್ ಬೆಂಬಲಿಗ ಹಾಗೂ ಮಾಜಿ ನಗರಸಭಾ ಸದಸ್ಯ ಆನಂದಬಾಬುರೆಡ್ಡಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಕಾರಣ ಮತದಾನಕ್ಕೆ ಅವಕಾಶ ನೀಡಿ, ಚುನಾವಣೆ ನಡೆಸಲು ಕೋರ್ಟ್ ಸೂಚನೆ ನೀಡಿದ್ದರೂ ಫಲಿತಾಂಶ ರಿಟ್ ಅರ್ಜಿಯ ಫಲಿತಾಂಶಕ್ಕೆ ಒಳಪಟ್ಟಿರುವುದಾಗಿ ಆದೇಶಿಸಿತ್ತು. ಹಾಗಾಗಿ ಚುನಾವಣೆ ನಡೆದರೂ ಅಧಿಕೃತವಾಗಿ ಚುನಾವಣಾಧಿಕಾರಿ ಫಲಿತಾಂಶ ಪ್ರಕಟಗೊಂಡಿಲ್ಲ.

ಈ ನಡುವೆ ಚುನಾವಣೆ ಬಳಿಕ ಮಾತನಾಡಿದ ಸುಧಾಕರ್ ಅವರು, ನಮ್ಮ ಸದಸ್ಯರನ್ನು ಕಾಂಗ್ರೆಸ್‌ನವರು ಹೈಜಾಕ್ ಮಾಡಲು ಬಹಳಷ್ಟು ಪ್ರಯತ್ನ ಮಾಡಿದರು. ಶಾಸಕ ಪ್ರದೀಪ್ ಈಶ್ವರ್ ಉಡಾಫೆ ಮಾತುಗಳು, ದ್ವೇಷದ ರಾಜಕಾರಣ ಹೂಮಾಲೆಯಾಗಿ ನನ್ನ ಕೊರಳಿಗೆ ಬೀಳುತ್ತಿವೆ. ಇವರ ಡ್ಯಾನ್ಸ್ ಹೀಗೆ ಮುಂದುವರೆಯಲಿ. ಇನ್ನೂ ಮೂರು ವರ್ಷ ಹೀಗೆ ಮಾಡಿ. ಆಮೇಲೆ ಈ ರಾಜ್ಯ ದೇಶದಲ್ಲಿ ಎಲ್ಲೂ ಅವಕಾಶ ಇರಲ್ಲ. ಪ್ಲೀಸ್ ನೋಟ್ ಮೈ ಪಾಯಿಂಟ್ ಎಂದು ಹೇಳಿದ್ದರು.

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending