Connect with us

ಬೆಂಗಳೂರು

ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಸಿಎಂ ಭೇಟಿ; ಮುನಿರತ್ನ ವಿರುದ್ಧ ಕ್ರಮಕ್ಕೆ ಪತ್ರ – BJP MLA Munirathna Remarks Row

ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ, ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಸಿಎಂ ನಿವಾಸ ಕಾವೇರಿಯಲ್ಲಿಂದು ಭೇಟಿಯಾದ ನಿಯೋಗ, ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ನಿಯೋಗದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಎಂ.ಸಿ.ಸುಧಾಕರ್, ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಮಾಲೂರು ಮಂಜೇಗೌಡ, ಕುಣಿಗಲ್ ರಂಗನಾಥ್, ಎಸ್​.ರವಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, “ಮುನಿರತ್ನ ವಿರುದ್ಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ಪಡೆದು ಮತ್ತಷ್ಟು ಕ್ರಮ ಆಗಬೇಕು ಅಂತ ಸಿಎಂಗೆ ಮನವಿ ಮಾಡಿದ್ದೇವೆ. ಮುನಿರತ್ನ ಇಲ್ಲಸಲ್ಲದ ಟ್ವೀಟ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರಯತ್ನ ಮಾಡುತ್ತಿದ್ದಾರೆ. ಬಿಬಿಎಂಪಿಯಲ್ಲಿ ದಾಖಲೆ ಸುಟ್ಟು ಹಾಕಿದ ಇತಿಹಾಸ ಇದೆ. ಅಂತಹದರಲ್ಲಿ ಮುನಿರತ್ನ ‌ನಿಸ್ಸೀಮರು. ಕಾನೂನು ವ್ಯಾಪ್ತಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಂತಹ ಪ್ರಯತ್ನಕ್ಕೆ ಅವಕಾಶ ಕೊಡದಂತೆ ಸಿಎಂಗೆ ಮನವಿ ಮಾಡಿದ್ದೇವೆ. ನ್ಯಾಯಾಂಗದಲ್ಲಿ ಸರ್ಕಾರ ಗಟ್ಟಿಯಾಗಿ ಕೆಲಸ ಮಾಡಬೇಕು. ಸರ್ಕಾರಿ ವಕೀಲರು ದಾಖಲಾತಿ ಸಮೇತ ಅವರ ವಿರುದ್ಧ ವಾದ ಮಾಡಿ ಶಿಕ್ಷೆ ಕೊಡಿಸಬೇಕು. ಈ ಕೇಸ್​ನಲ್ಲಿ ಹೆಚ್ಚು ಗಮನಕೊಡುವಂತೆ ಮನವಿ ಮಾಡಿದ್ದೇವೆ” ಎಂದರು.

ಮುಂದುವರೆದು, “ಪ್ರತ್ಯೇಕ ತನಿಖೆ ತಂಡದಿಂದ ತನಿಖೆ ಮಾಡಲು ಮನವಿ ಮಾಡಿದ್ದೇವೆ. SIT, ಲೋಕಾಯುಕ್ತದಿಂದ ತನಿಖೆ ಮಾಡೋಕೆ ಸಾಧ್ಯನಾ ಅಂತ ಪರಿಶೀಲನೆ ಮಾಡೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ. ಮುನಿರತ್ನ ಶಾಸಕನಾಗಲು ಅನರ್ಹ. ಚುನಾವಣೆಗೆ ನಿಲ್ಲಲು ಕನಿಷ್ಠ ಅರ್ಹತೆ ಬೇಕು. ಆದರೆ ಅದು ಅವರಲ್ಲಿಲ್ಲ” ಎಂದರು.

ಅವರು ನಿಮ್ಮ ಪಕ್ಷದಲ್ಲಿದ್ದವರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ, “ಮಗು ಹುಟ್ಟುತ್ತದೆ. ತಂದೆ-ತಾಯಿ ಬೆಳೆಸುತ್ತಾರೆ. ವಾತಾವರಣ ಸರಿ ಇದ್ದರೂ ಕೂಡಾ ಹುಟ್ಟುಗುಣ ಹಾಗೇ ಇರುತ್ತೆ. ಶಾಸಕನಾದ ನಂತರ ಅವರ ಬಣ್ಣ ಬಯಲಾಗಿದೆ. ಮುನಿರತ್ನ ವಿರುದ್ಧ ಮಹಿಳೆಯ ಸೀರೆ ಎಳೆದ ಕೇಸ್ ಸೇರಿ ಅನೇಕ ಕೇಸ್‌ಗಳಿವೆ. ಅವರ ಗ್ರಹಚಾರ ಕೆಟ್ಟಿದೆ. ಬಿಜೆಪಿ ಮುನಿರತ್ನ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿ, ಅಶೋಕ್, ರವಿ, ಅಮಿತ್ ಶಾ, ಮೋದಿ ಬಳಿ ಹೋಗಿ ಕ್ರಮಕ್ಕೆ ಒತ್ತಾಯ ಮಾಡಲಿ. ಇಲ್ಲದೇ ಹೋದರೆ ಇವರನ್ನು ಸಮಾಜ ವಿರೋಧಿ ಎನ್ನಬೇಕಾಗುತ್ತದೆ. ಮೂವರು ಮುನಿರತ್ನ ಪರ ಮಾತಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಬೇಕು” ಎಂದು ಒತ್ತಾಯಿಸಿದರು.

ನಾಗಮಂಗಲ ಘಟನೆ ಮುಚ್ಚಿ ಹಾಕೋಕೆ ಸರ್ಕಾರ ಮುನಿರತ್ನ ವಿಷಯ ದೊಡ್ಡದು ಮಾಡಲು ಮುಂದಾಗಿದೆ ಎಂಬ ಬಿಜೆಪಿ ಆರೋಪ‌ ವಿಚಾರವಾಗಿ ಪ್ರತಿಕ್ರಿಯಿಸಿ, “ನಾಗಮಂಗಲದಲ್ಲಿ ಹಿಂದೂಗಳು-ಮುಸ್ಲಿಮರು ಒಟ್ಟಾಗಿ ಗಣೇಶ ಬಿಟ್ಟಿದ್ದಾರೆ. ಬಿಜೆಪಿಯವರಿಗೆ ಇಷ್ಟು ಬೇಗ ಇದು ಮುಗಿದು ಹೋಯ್ತು ಅಂತ ಬೇಸರ ಇದೆ. ಮುಸ್ಲಿಮರು ಮತ್ತು ಹಿಂದೂಗಳು ಒಟ್ಟಾಗಿ ಇದ್ದಾರೆ‌. ಸಣ್ಣ ಪುಟ್ಟ ಗೊಂದಲ ಮಾಡೋರು ಬೇರೆ ಇದ್ದಾರೆ ಬಿಟ್ಟರೆ ಈಗ ಎಲ್ಲರೂ ಒಂದಾಗಿದ್ದಾರೆ. ಬಿಜೆಪಿ ಅವರು ಇದಕ್ಕೆ ಸಂತೋಷಪಡೋದು ಬಿಟ್ಟು ಸಮಿತಿ ಕಳಿಸಿದ್ದಾರೆ. ಇದಕ್ಕೇನು ಹೇಳೋಣ?. ಕೆರಗೋಡು, ನಾಗಮಂಗಲ ಕೇಸ್ ಪ್ರಯತ್ನ ಫೇಲ್ ಆಯ್ತು ಅಂತ ಬಿಜೆಪಿ ಅವರಿಗೆ ರಾತ್ರಿ ನಿದ್ರೆ ಇಲ್ಲವಂತೆ. ಇದನ್ನು ಬಿಟ್ಟು ಬೇರೆ ರಾಜಕೀಯ ಮಾಡಲಿ ಎಂದು ಟಾಂಗ್​ ಕೊಟ್ಟರು.

ಸಿಎಂ ಸಿದ್ದರಾಮಯ್ಯ ಭೇಟಿಯ ಬಳಿಕ ಮಾತನಾಡಿದ ಸಚಿವ ಎಂ.ಸಿ ಸುಧಾಕರ್​, “ಮುನಿರತ್ನ ಅವರು ಮಾತನಾಡಿರುವ ಆಡಿಯೋ ಬಂದಿದೆ. ಅದರಲ್ಲಿ ಒಕ್ಕಲಿಗ ಹಾಗೂ ದಲಿತರ ಕುರಿತಾಗಿ ಮಾತನಾಡಿರುವುದು ಖಂಡನೀಯ. ಅದು ಬಹಳಷ್ಟು ನೋವು ಉಂಟು ಮಾಡಿದೆ. ಸರ್ಕಾರ ಅವರನ್ನು ಬಂಧಿಸುವ ಕೆಲಸ ಮಾಡಿದೆ. ಇದೀಗ ಒಂದು ಆಡಿಯೋ ಮಾತ್ರ ಬೆಳಕಿಗೆ ಬಂದಿದೆ. ಈ ಹಿಂದೆ ಹಲವು ಬಾರಿ ಈ ರೀತಿ ಮಾತನಾಡಿದ್ದಾರೆ” ಎಂದು ಆರೋಪಿಸಿದರು.

ಹನುಮಂತರಾಯಪ್ಪ ಆಡಿಯೋ ವೈರಲ್ ವಿಚಾರವಾಗಿ,‌ “ಹನುಮಂತರಾಯಪ್ಪ ಆಡಿಯೋ ನಾನು ಕೇಳಿದ್ದೇನೆ. ಅವರೇನು ತಪ್ಪಾಗಿ ಮಾತಾಡಿಲ್ಲ. ಗುತ್ತಿಗೆಯಲ್ಲಿ ಆಗಿರುವ ಸಮಸ್ಯೆ ಪರಿಹಾರ ಮಾಡೋದಾಗಿ ಮಾತ್ರ ಹೇಳಿದ್ದಾರೆ. ಇದಕ್ಕೂ ಮುನಿರತ್ನ ಮಾತಾಡಿರೋದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

Trending