ಕ್ರೀಡೆ
ಚೆಸ್ ಒಲಿಂಪಿಯಾಡ್: ಭಾರತದ ‘ರಾಜ’, ‘ರಾಣಿ’ಯರಿಗೆ ಐತಿಹಾಸಿಕ ಚಿನ್ನ – Chess Olympiad 2024

ಬುಡಾಪೆಸ್ಟ್(ಹಂಗೆರಿ): ಯುವ ಚೆಸ್ ತಾರೆಯರನ್ನೊಳಗೊಂಡ ಭಾರತದ ಪುರುಷ ಮತ್ತು ಮಹಿಳೆಯರ ತಂಡಗಳು 45ನೇ ಆವೃತ್ತಿಯ ಚೆಸ್ ಒಲಿಂಪಿಯಾಡ್ನಲ್ಲಿ ಭಾನುವಾರ ಚೊಚ್ಚಲ ಸ್ವರ್ಣ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿವೆ.
ಪುರುಷರ ತಂಡ ಕೊನೆಯ ಸುತ್ತಿನ ಪಂದ್ಯದಲ್ಲಿ ಸ್ಲೊವೇನಿಯಾವನ್ನು 3.5-0.5ರಿಂದ ಮಣಿಸಿತು. ಮಹಿಳಾ ತಂಡ ನಿರ್ಣಾಯಕ ಸುತ್ತಿನಲ್ಲಿ ಅಜರ್ಬೈಜಾನ್ ವಿರುದ್ಧ 3.5-0.5 ಅಂತರದಿಂದ ಜಯ ಸಾಧಿಸಿ ಸ್ವರ್ಣ ಪದಕ ಗೆದ್ದುಕೊಂಡಿತು.
18 ವರ್ಷದ ವಿಶ್ವ ಚಾಂಪಿಯನ್ಶಿಪ್ ಚಾಲೆಂಜರ್ ಡಿ.ಗುಕೇಶ್ ಮತ್ತು 21 ವರ್ಷದ ಅರ್ಜುನ್ ಎರಿಗೈಸ್ ಪ್ರಮುಖ ಗೇಮ್ಗಳಲ್ಲಿ ಮತ್ತೊಮ್ಮೆ ಅತ್ಯುತ್ತಮ ಪ್ರದರ್ಶನ ತೋರಿದರೆ, 19 ವರ್ಷದ ಆರ್.ಪ್ರಜ್ಞಾನಂದ ಅಂತಿಮ ಸುತ್ತಿನಲ್ಲಿ ಫಾರ್ಮ್ಗೆ ಮರಳಿ ಭಾರತದ ಗೆಲುವಿನ ಹಾದಿ ಸುಗಮಗೊಳಿಸಿದರು. ನಾಲ್ಕನೇ ಬೋರ್ಡ್ನಲ್ಲಿ 29 ವರ್ಷದ ವಿದಿತ್ ಗುಜ್ರಾತಿ ಪಾಯಿಂಟ್ ಸಾಧಿಸಿ ತಂಡಕ್ಕೆ ಮತ್ತೊಂದು ಭರ್ಜರಿ ಜಯ ತಂದುಕೊಟ್ಟರು.
ಸ್ಲೊವೇನಿಯಾದ ವ್ಲಾಡಿಮಿರ್ ಫೆಡೋಸೀವ್ ವಿರುದ್ಧ 18 ವರ್ಷದ ಗ್ರ್ಯಾಂಡ್ಮಾಸ್ಟರ್ ಗುಕೇಶ್ ಅದ್ಭುತ ತಂತ್ರಗಾರಿಕೆಯಿಂದ ಗೆದ್ದು ಬೀಗಿದರು. ಅಚ್ಚರಿಯ ಸೆಂಟರ್ ಕೌಂಟರ್ ಡಿಫೆನ್ಸ್ ಆಟದಿಂದ ಜನ್ ಸುಬೆಲಿ ವಿರುದ್ಧ ಅರ್ಜುನ್ ಎರಿಗೈಸಿ ಮೂರನೇ ಬೋರ್ಡ್ನಲ್ಲಿ ಗೆದ್ದರು. ಆಂಟನ್ ಡೆಮ್ಚೆಂಕೊ ವಿರುದ್ಧ ಆರ್. ಪ್ರಜ್ಞಾನಂದ ಭರ್ಜರಿ ಗೆಲುವು ಕಂಡರು.
- ಸ್ಮರಣೀಯ ವಿಜಯದ ನಂತರ ಮಾತನಾಡಿದ ಗುಕೇಶ್, “ವಿಶೇಷವಾಗಿ ನನ್ನ ಆಟದ ಬಗ್ಗೆ ಮತ್ತು ನಾವು ಒಂದು ತಂಡವಾಗಿ ಹೇಗೆ ಆಡಿದ್ದೇವೆ ಎಂಬುದರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ಹರ್ಷ ವ್ಯಕ್ತಪಡಿಸಿದರು.
- ಮಹಿಳಾ ತಂಡದ ಪರ 33ರ ಹರೆಯದ ಡಿ.ಹರಿಕಾ ಉತ್ತಮ ಪ್ರದರ್ಶನ ತೋರಿದರೆ, 18ರ ಹರೆಯದ ದಿವ್ಯಾ ದೇಶ್ ಮುಖ್ ತಮ್ಮ ಎದುರಾಳಿ ಗಿವರ್ ಬೆಯ್ದುಲ್ಲಯೇವಾ ಅವರನ್ನು ಹಿಂದಿಕ್ಕಿ ಮೂರನೇ ಸುತ್ತಿನಲ್ಲಿ ವೈಯಕ್ತಿಕ ಚಿನ್ನದ ಪದಕ ಗಳಿಸಿದರು. 23ರ ಹರೆಯದ ಆರ್.ವೈಶಾಲಿ ಡ್ರಾ ಸಾಧಿಸಿದ ನಂತರ, 21 ವರ್ಷದ ವಂತಿಕಾ ಅಗರ್ವಾಲ್ ಕೊನೆಯ ಪಂದ್ಯದಲ್ಲಿ ಬಾಲಾಜಯೇವಾ ಖಾನಿಮ್ ವಿರುದ್ಧ ಗೆಲುವು ದಾಖಲಿಸಿದರು.
- ನಾಲ್ಕು ವೈಯಕ್ತಿಕ ಚಿನ್ನ: ಎರಡು ಚಿನ್ನದ ಪದಕಗಳ ಹೊರತಾಗಿ ಭಾರತೀಯ ಆಟಗಾರರು ತಮ್ಮ ಬೋರ್ಡ್ಗಳಲ್ಲಿ ಅತ್ಯುತ್ತಮ ವೈಯಕ್ತಿಕ ಪ್ರದರ್ಶನದಿಂದ ಹೆಚ್ಚು ಸ್ವರ್ಣ ಪದಕಗಳನ್ನು ಗೆದ್ದರು. ಮುಕ್ತ ವಿಭಾಗದಲ್ಲಿ(Open Section) ಗುಕೇಶ್ ಮತ್ತು ಎರಿಗೈಸ್ ಮೊದಲ ಮತ್ತು ಮೂರನೇ ಬೋರ್ಡ್ನಲ್ಲಿ ಚಿನ್ನದ ಪದಕಗಳನ್ನು ಗೆದ್ದರೆ, ಮಹಿಳಾ ವಿಭಾಗದಲ್ಲಿ ದಿವ್ಯಾ ದೇಶ್ಮುಖ್ ಮತ್ತು ವಂತಿಕಾ ಅಗರ್ವಾಲ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಬೋರ್ಡ್ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಚಿನ್ನ ಪದಕಕ್ಕೆ ಕೊರಳೊಡ್ಡಿದರು.
- ಕಳೆದ ಒಲಿಂಪಿಯಾಡ್ ವಿಜೇತ ಉಜ್ಬೇಕಿಸ್ತಾನ್ ವಿರುದ್ಧ 2-2 ಗೋಲುಗಳ ಅಂತರದಲ್ಲಿ ಡ್ರಾ ಸಾಧಿಸಿದ ಭಾರತದ ಪುರುಷರು ಒಟ್ಟು 22 ಪಂದ್ಯಗಳಲ್ಲಿ 21 ಅಂಕಗಳನ್ನು ಗಳಿಸಿದ್ದಾರೆ. ಒಟ್ಟು 44 ಪಂದ್ಯಗಳ ಪೈಕಿ ಭಾರತ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲನುಭವಿಸಿತು.
- ಐದು ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಗಳನ್ನು ಗೆದ್ದಿರುವ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಈ ವೇಳೆ ಉಪಸ್ಥಿತರಿದ್ದರು.
- ಬೆಳ್ಳಿ, ಕಂಚು ಗೆದ್ದ ದೇಶಗಳು: ಮುಕ್ತ ವಿಭಾಗದಲ್ಲಿ ಅಮೆರಿಕ ಬೆಳ್ಳಿ, ಉಜ್ಬೇಕಿಸ್ತಾನ ಕಂಚಿನ ಪದಕ ಗೆದ್ದುಕೊಂಡರೆ, ಮಹಿಳೆಯರ ವಿಭಾಗದಲ್ಲಿ ಕಜಕಿಸ್ತಾನ ಬೆಳ್ಳಿ, ಅಮೆರಿಕ ಕಂಚಿನ ಪದಕ ಪಡೆಯಿತು.
ಕ್ರೀಡೆ
ಕುಮಾರಸ್ವಾಮಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ಗೋವಿಂದರಾಜ್ ಅವರು ಜೂನ್ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್ ಎಂಬ ಆರೋಪ ಈಗ ಕೇಳಿ ಬಂದಿದೆ.
ಕುಮಾರಸ್ವಾಮಿ ಹೇಳಿದ್ದೇನು?
ಜೂನ್ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.
ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.
ಕ್ರೀಡೆ
2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ
ಕ್ರೀಡೆ
ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ