ದೇಶ
ರಜನಿಕಾಂತ್ ಸುಪ್ರೀಮ್ ಆಫ್ ಆಲ್ ಸ್ಟಾರ್ಸ್’ ಎಂದ ಬಿಗ್ ಬಿ: ‘ಅಮಿತಾಭ್ ನೋಡಿ ಬಾಲಿವುಡ್ ನಕ್ಕ ದಿನ’ಇತ್ತೆಂದ ನಟ – Vettaiyan Prevue and Audio Launch

ಚೆನ್ನೈ(ತಮಿಳುನಾಡು): ಭಾರತೀಯ ಚಿತ್ರರಂಗದ ಹಿರಿಯ, ಬಹುಬೇಡಿಕೆ ನಟ ಅಮಿತಾಭ್ ಬಚ್ಚನ್ ಅವರು ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮೇಲೆ ಹೊಂದಿರುವ ಅಗಾಧ ಅಭಿಮಾನ ಎಲ್ಲರಿಗೂ ತಿಳಿದಿರುವ ವಿಚಾರ. ಶುಕ್ರವಾರ ಚೆನ್ನೈನಲ್ಲಿ ನಡೆದ ಬಹುನಿರೀಕ್ಷಿತ ಚಿತ್ರ ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದೆ.
ಸೆಪ್ಟೆಂಬರ್ 20ರಂದು ಚೆನ್ನೈನಲ್ಲಿ ನಡೆದ ಸಿನಿಮಾ ಪ್ರಮೋಶನ್ ಈವೆಂಟ್ಗೆ ಬಿಗ್ ಬಿ ಆಗಮಿಸಲು ಸಾಧ್ಯವಾಗಿಲ್ಲವಾದರೂ, ಹೃದಯಸ್ಪರ್ಶಿ ವಿಡಿಯೋ ಸಂದೇಶದ ಮೂಲಕ ಅಭಿಮಾನಿಗಳು ಮತ್ತು ಚಿತ್ರತಂಡದೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ರಿಲೀಸ್ ಈವೆಂಟ್ನ ಕೆಲ ಹೈಲೆಟ್ಸ್ ಇಲ್ಲಿವೆ.
ಸುಪ್ರೀಮ್ ಆಫ್ ಆಲ್ ಸ್ಟಾರ್ಸ್’: ಬಿಗ್ ಬಿ
ತಮ್ಮ ವಿಡಿಯೋದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ದಕ್ಷಿಣ ಚಿತ್ರರಂಗದ ಹೆಸರಾಂತ ನಟ ರಜನಿಕಾಂತ್ ಅವರನ್ನು “ಸುಪ್ರೀಮ್ ಆಫ್ ಆಲ್ ಸ್ಟಾರ್ಸ್” ಎಂದು ಉಲ್ಲೇಖಿಸಿದ್ದಾರೆ. ಈ ಗುಣಗಾನ ಪ್ರೇಕ್ಷಕರಿಂದ ಹರ್ಷೋದ್ಗಾರ ಮತ್ತು ಚಪ್ಪಾಳೆಗಳನ್ನು ಸ್ವೀಕರಿಸಿತು. “ವೆಟ್ಟೈಯನ್ ನನ್ನ ಚೊಚ್ಚಲ ತಮಿಳು ಚಿತ್ರ, ಗೌರವಕರ ವಿಷಯ. ರಜನಿಕಾಂತ್ ಎಲ್ಲ ಸ್ಟಾರ್ಗಳಿಗಿಂತಲೂ ಸರ್ವೋಚ್ಛ” ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
‘ರಜನಿ ನೆಲದ ಮೇಲೆ ಮಲಗುತ್ತಿದ್ದರು’: 1991ರ ಬ್ಲಾಕ್ಬಸ್ಟರ್ ‘ಹಮ್’ ಚಿತ್ರದಲ್ಲಿ ರಜನಿಕಾಂತ್ ಮತ್ತು ಅಮಿತಾಭ್ ಸಹೋದರರ ಪಾತ್ರ ನಿರ್ವಹಿಸಿದ್ದರು. ವಿಡಿಯೋದಲ್ಲಿ, ಬಿಗ್ ಬಿ ಶೂಟಿಂಗ್ ಕ್ಷಣಗಳನ್ನು ನೆನಪಿಸಿಕೊಂಡರು. ಹಮ್ ಚಿತ್ರೀಕರಣದ ವೇಳೆ ನಾನು ನನ್ನ ಎಸಿ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿದ್ದೆ. ರಜನಿ ಬ್ರೇಕ್ ಟೈಮ್ನಲ್ಲಿ ನೆಲದ ಮೇಲೆ ಮಲಗುತ್ತಿದ್ದರು. ಅವರ ಸರಳತೆ ನೋಡಿ ನಾನು ವಾಹನದಿಂದ ಹೊರಬಂದು ಹೊರಗೆ ವಿಶ್ರಾಂತಿ ಪಡೆದೆ ಎಂದು ಹಳೇ ನೆನಪುಗಳನ್ನು ಮೆಲುಕು ಹಾಕಿದರು.
‘ಬಿಗ್ ಬಿ ಯಶಸ್ಸಿನ ಅವನತಿಗಾಗಿ ಜಗತ್ತು ಕಾದಿತ್ತು’: ಈವೆಂಟ್ನಲ್ಲಿ, ಅಮಿತಾಭ್ ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಎದುರಿಸಿದ ಕೆಲ ಸವಾಲುಗಳನ್ನು ರಜನಿ ವಿವರಿಸಿದರು. “ಅಮಿತ್ ಜಿ ಸಿನಿಮಾಗಳನ್ನು ನಿರ್ಮಿಸುವ ಸಂದರ್ಭ ಅವರು ದೊಡ್ಡ ನಷ್ಟವನ್ನು ಎದುರಿಸಿದ್ದರು. ಎಷ್ಟರ ಮಟ್ಟಿಗೆಂದರೆ ತಮ್ಮ ವಾಚ್ಮ್ಯಾನ್ಗೆ ಸಂಬಳ ಪಾವತಿಸಲು ಸಹ ಸಾಧ್ಯವಾಗಲಿಲ್ಲ. ಅವರ ಜುಹು ನಿವಾಸ ಪಬ್ಲಿಕ್ ಬಿಡ್ಡಿಂಗ್ಗೆ ಹೋಗಿತ್ತು. ಆ ಸಂದರ್ಭ ಬಾಲಿವುಡ್ ಅವರನ್ನು ನೋಡಿ ನಗುತ್ತಿತ್ತು. ಅವರ ಯಶಸ್ಸಿನ ಅವನತಿಗಾಗಿ ಜಗತ್ತು ಕಾದಿತ್ತು” ಎಂದು ತಿಳಿಸಿದರು.
‘ದಿನಕ್ಕೆ 10 ಗಂಟೆ ಕೆಲಸ ಮಾಡುತ್ತಾರೆ’: “ಕೇವಲ ಮೂರು ವರ್ಷಗಳಲ್ಲಿ, ಅಮಿತಾಭ್ ಅವರು ಜಾಹೀರಾತುಗಳು ಮತ್ತು ಕೆಬಿಸಿ ಯಲ್ಲಿ ಕಾಣಿಸಿಕೊಂಡರು. ಎಲ್ಲ ಹಣವನ್ನು ಮರಳಿ ಗಳಿಸಿದರು. ಜುಹು ಸೇರಿದಂತೆ ಅವರ ಮೂರು ಮನೆಗಳನ್ನು ಸಹ ಮರಳಿ ಪಡೆದರು. ಅವರದ್ದು ಸ್ಫೂರ್ತಿದಾಯಕ ವ್ಯಕ್ತಿತ್ವ. 82ರ ಹರೆಯದ ಅವರು ದಿನಕ್ಕೆ 10 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ” ಎಂದು ಪ್ರಶಂಸೆಗಳ ಸುರಿಮಳೆಯನ್ನೇ ಹರಿಸಿದರು.
ತಂದೆಯ ಜನಪ್ರಿಯತೆಯನ್ನು ಬಳಸಲಿಲ್ಲ’: ಅಮಿತಾಭ್ ಕುಟುಂಬದ ಸಾಹಿತ್ಯ ಪರಂಪರೆ ಬಗ್ಗೆಯೂ ಮಾತನಾಡಿದರು. “ಅಮಿತಾಭ್ ಅವರ ತಂದೆ ಓರ್ವ ಶ್ರೇಷ್ಠ ಬರಹಗಾರರಾಗಿದ್ದರು. ಅವರು ತಮ್ಮ ತಂದೆಯ ಜನಪ್ರಿಯತೆಯನ್ನು ಸುಲಭವಾಗಿ ಬಳಸಬಹುದಿತ್ತು. ಆದರೆ ಅವರು ತಮ್ಮದೇ ಆದ ಮಾರ್ಗ ಕಂಡುಕೊಂಡರು” ಎಂದು ತಿಳಿಸಿದರು.
ಅಮಿತಾಭ್ ಆ್ಯಕ್ಸಿಡೆಂಟ್ ನೆನಪಿಸಿಕೊಂಡ ರಜನಿ: ರಜನಿ ಕೆಲ ಕಠಿಣ ಕ್ಷಣಗಳನ್ನೂ ನೆನಪಿಸಿಕೊಂಡರು. “ಒಮ್ಮೆ, ಅಮಿತಾಭ್ ಅವರು ಭೀಕರ ಅಪಘಾತಕ್ಕೊಳಗಾದರು. ಆ ವೇಳೆ, ಇಂದಿರಾ ಗಾಂಧಿ ಅವರು ಸಮ್ಮೇಳನಕ್ಕಾಗಿ ವಿದೇಶದಲ್ಲಿದ್ದರು. ಅಪಘಾತದ ಬಗ್ಗೆ ತಿಳಿದ ಕೂಡಲೇ ಅವರು ಭಾರತಕ್ಕೆ ಹಿಂತಿರುಗಿದರು. ಆಗ ರಾಜೀವ್ ಗಾಂಧಿ ಮತ್ತು ಅಮಿತಾಭ್ ಜಿ ಒಟ್ಟಿಗೆ ವಿದ್ಯಾಭ್ಯಾಸ ಪಡೆದವರು ಎಂಬುದು ಎಲ್ಲರಿಗೂ ಗೊತ್ತಾಯಿತು.
ಕುಣಿದು ಕುಪ್ಪಳಿಸಿದ ರಜನಿ: ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಂಜು ವಾರಿಯರ್, ರಾಣಾ ದಗ್ಗುಬಾಟಿಯಂತಹ ಗಣ್ಯರು ಕಾಣಿಸಿಕೊಂಡರು. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ಮನಸಿಲಾಯೊ ಹಾಡಿಗೆ ಸಿಗ್ನೇಚರ್ ಸ್ಟೆಪ್ ಹಾಕಲು ರಜನಿಕಾಂತ್ ಅವರನ್ನು ಆಹ್ವಾನಿಸಿದರು. ಬ್ಲ್ಯಾಕ್ ಔಟ್ಫಿಟ್ನಲ್ಲಿದ್ದ ಸೂಪರ್ ಸ್ಟಾರ್ ವೇದಿಕೆಯಲ್ಲಿ ಸಖತ್ ಸ್ಟೆಪ್ ಹಾಕಿದರು. ಅನಿರುದ್ಧ್ ಅವರ ಗಾಯನ ಈವೆಂಟ್ನ ಉತ್ಸಾಹ ಹೆಚ್ಚಿಸಿತ್ತು. ರಜನಿಕಾಂತ್ ಡ್ಯಾನ್ಸ್ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!