ಬೆಂಗಳೂರು

3 ಕ್ಷೇತ್ರಗಳಿಗೆ ಉಪಚುನಾವಣೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು,
ನಗರದ ಮಲ್ಲೇಶ್ವರಂನ ಬಿಜೆಪಿಯ ರಾಜ್ಯ ಕಾರ್ಯಾಲಯದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯ ನಂತರ ಮಾತನಾಡಿದ ಅವರು ಈ ಮೂರು ಕ್ಷೇತ್ರಗಳನ್ನೂ ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ ಮಾಡಬೇಕು ಎಂಬ ಚರ್ಚೆ ಸಭೆಯಲ್ಲಿ ನಡೆದಿದೆ ಎಂದರು,
ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿ ಎನ್‍ಡಿಎ ಮಿತ್ರ ಪಕ್ಷವಾದ ಜೆಡಿಎಸ್ ಮತ್ತು ನಮ್ಮ ಕೇಂದ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ ನಿರ್ಣಯಿಸಲು ಕೋರ್ ಕಮಿಟಿ ನಿರ್ಧರಿಸಿದೆ, ಈ ಹಿಂದೆ ಶ್ರೀನಿವಾಸ್ ಪೂಜಾರಿಯವರು ಚುನಾಯಿತರಾಗಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಧಳೀಯ ಸಂಸ್ಧೆಗಳ ಉಪ ಚುನಾವಣೆ ಅ.21 ರಂದು ನಡೆಯಲಿದೆ, ಆ ಉಪ ಚುನಾವಣೆಗೆ ಸಂಬಂಧಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೋಗಿ ಅಪೇಕ್ಷಿತರ ವರದಿ, 2 ಜೆಲ್ಲೆಗಳ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಬಂದಿದ್ದರು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು ಕೇಂದ್ರೀಯ ನಾಯಕತ್ವದ ಜೊತೆ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ ಎಂದು ಮಾಹಿತಿ ನೀಡಿದರು,

Leave a Reply

Your email address will not be published. Required fields are marked *

Trending

Exit mobile version