ಬೆಂಗಳೂರು
ಆಪ್ತರ ಮಾತು ಕೇಳಿ ಸಿಎಂ ಕೆಟ್ಟರು, ಸತ್ಯಕ್ಕೆ ಜಯ ಸಿಕ್ಕಿದೆ : ಶಾಸಕ ಶ್ರೀವತ್ಸ

ಮೈಸೂರು: ಮುಡಾ ಹೋರಾಡದಲ್ಲಿ ನಮಗೆ ಜಯ ಸಿಕ್ಕಿದೆ. ಪ್ರತಿಯೊಂದು ದಾಖಲೆಗಳನ್ನು ಇಟ್ಟುಕೊಂಡೇ ನಾವು ಹೋರಾಟ ಮಾಡಿದ್ದೇವೆ. ಸಿದ್ದರಾಮಯ್ಯನವರ ಮನೆಯವರೇ ಇದರ ಫಲಾನುಭವಿಗಳಾಗಿದ್ದಾರೆ ಎಂದು ತೋರುತ್ತಿತ್ತು. ಸತ್ಯಮೇವ ಜಯತೆ ಅನ್ನುವುದು ಸತ್ಯ. ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಮೈಸೂರು ಕೆಆರ್ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂರನ್ನು ಅವರ ಆಪ್ತ ಸಚಿವ ಭೈರತಿ ಸುರೇಶ್, ಕಾನೂನು ಸಲಹೆಗಾರ ಪೊಣ್ಣನ್ನ ಸೇರಿ ದಾರಿ ತಪ್ಪಿಸಿದರು. ಸಿಎಂ ಸ್ವತಃ ವಕೀಲರು ಅರಿತುಕೊಳ್ಳುವುದರಲ್ಲಿ ಎಡವಿದ್ದಾರೆ. ಹೀಗಾಗಿ ಈ ಸ್ಥಿತಿಗೆ ತಲುಪಿದ್ದಾರೆ ಎಂದರು.
ಸಿಎಂ ರಾಜೀನಾಮೆ ವಿಚಾರವಾಗಿ ಮಾತನಾಡಿ, ಅವರು ಕಾನೂನನ್ನು ಅರಿತವರು. ಊರಿಗೆಲ್ಲಾ ಬುದ್ಧಿ ಹೇಳುವ ಸಿಎಂ ತಾವೇ ಬದನೆಕಾಯಿ ತಿನ್ನೋದಿಕ್ಕೆ ಆಗಲ್ಲ. ಅವರು ರಾಜೀನಾಮೆ ಕೊಡಲೇಬೇಕು ಎಂದು ಈ ಆಗ್ರಹಿಸಿದರು.
ಸಿಎಂ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಮಾಡಿದ ಅಪಪ್ರಚಾರಗಳೆಲ್ಲವೂ ಈಗ ಇವರು ಸುಳ್ಳು ಎಂದು ತೀರ್ಪಿನ ಮೂಲಕ ಸಾಬೀತಾಯಿತು. ಇವರಿಗೆ ಸುಪ್ರೀಂ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಇರಬಹುದು. ಆದರೆ ಈಗಂತು ನಿರಾಶೆ ಆಗಿದೆ. ಆದ್ದರಿಂದ ಯಾವತ್ತು ಸತ್ಯಕ್ಕೆ ಜಯ ಸಿಕ್ಕಿರೋದಂತು ನಿಜ ಎಂದು ಹೇಳಿದರು.