Blog
ಡಿ.ಕೆ ಶಿವಕುಮಾರ್ ಮೇಲೆ ಗರಂ ಆದ ಸಚಿವ ಸತೀಶ್ ಜಾರಕಿಹೊಳಿ; ನಾವೆಲ್ಲಾ ಹೆದರಲ್ಲ ಅಂದಿದ್ದೇಕೆ ಸಾಹುಕಾರ್?

ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಲೇ ಇದೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಆರೋಪ ಪಕ್ಷದ ಮೇಲೆ ಬಂದಾಗಿನಿಂದಲೂ ಸಿಎಂ ಬದಲಾವಣೆ ಎಂಬ ಗಾಳಿ ಜೋರಾಗಿ ಬೀಸಿತ್ತು. ಸಿಎಂ ಕುರ್ಚಿಗೆ ಒಬ್ಬರಾದ ಮೇಲೆ ಒಬ್ಬರು ಟವಲ್ ಹಾಕುತ್ತಲೇ ಇದ್ದರು. ಈಗಾಗಲೇ ರಾಜ್ಯ ಕಾಂಗ್ರೆಸ್ ಹಲವು ಟೀಮ್ಗಳಾಗಿ ಹೋಳಾಗಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿದ್ದವು. ಗುಪ್ತ ಸಭೆಗಳು ಕೂಡ ಆಗಾಗ ನಡೆದ ಬಗ್ಗೆ ಸುದ್ದಿಯಾಗಿತ್ತು. ಇತ್ತೀಚೆಗಷ್ಟೆ ಸತೀಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಈ ರಹಸ್ಯ ಸಭೆಗಳ ಬಗ್ಗೆ ಹೈಕಮಾಂಡ್ಗೆ ವರದಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಇತ್ತೀಚೆಗಷ್ಟೇ ಹೇಳಿದ್ದರು. ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಈಗ ಟಾಂಗ್ ಕೊಟ್ಟಿದ್ದಾರೆ.
ರಹಸ್ಯ ಸಭೆಗಳ ಬಗ್ಗೆ ಹೈಕಮಾಂಡ್ಗೆ ವರದಿ ನೀಡಿದ ವಿಚಾರವಾಗಿ ಮಾತನಾಡಿರುವ ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ಪರವಾಗಿ ನಾವಿದ್ದೇವೆ ಪಕ್ಷಕ್ಕೆ 12 ಗಂಟೆ ಟೈಮ್ ಕೊಟ್ಟಿದ್ದೇವೆ.ಹೀಗಾಗಿ ನಾವೆಲ್ಲಾ ಹೆದರುವ ಪರಿಸ್ಥಿತಿಯೇ ಇಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕಾಗಿ ಕೆಲವರು ತೆರೆಮರೆಯಲ್ಲಿ ದುಡಿಯುತ್ತಿದ್ದಾರೆ. ಕೆಲವರು ಹೈಲೈಟ್ ಆಗುತ್ತಾರೆ, ಕೆಲವರು ಆಗೋದಿಲ್ಲ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಬಾಣ ಬಿಟ್ಟಿದ್ದಾರೆ.
Blog
ಈ ಸಲ ಕಪ್ ನಮ್ದೆ ಆದ್ರೆ ಒನ್ ಡೇ ಪಾನಿಪುರಿ ನಿಮ್ದು- ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಅನಿಲ್ ಚಾಟ್ಸ್ ಸೆಂಟರ್ ನ ಮಾಲೀಕ

ಬೆಂಗಳೂರು: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಸೆನಸಲಿವೆ, ಆರ್ಸಿಬಿ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಿದ್ದು, ಕಪ್ ಗೆಲ್ಲಲೇಬೇಕು ಎಂದು ಫ್ಯಾನ್ಸ್ ಹಾರೈಕೆ ಮಾಡ್ತಿದ್ದಾರೆ,
ಆರ್ಸಿಬಿ ಕ್ರೇಜ್ ಯಾವ ಮಟ್ಟಿಗೆ ಇದೆ ಅಂದ್ರೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಅನಿಲ್ ಚಾಟ್ಸ್ ಸೆಂಟರ್ ನ ಮಾಲೀಕರು ಉಚಿತ ಚಾಟ್ಸ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.
ಆರ್ ಸಿ ಬಿ ಕಟ್ಟಾ ಅಭಿಮಾನಿಯಾಗಿರೋ ಚಾಟ್ಸ್ ಮಾಲೀಕರು ತಮ್ಮ ನೆಚ್ಚಿನ ತಂಟ ಫೈನಲ್ ಪ್ರವೇಶ ಮಾಡಿರೋ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ,
ಈ ಸಲ ಕಪ್ ನಮ್ದೆ ಆದ್ರೆ ಒನ್ ಡೇ ಪಾನಿಪುರಿ ನಿಮ್ದು, ಮಸಾಲಾಪುರಿ, ಪಾನಿಪುರಿ, ಭೇಲ್ ಪುರಿ ಫ್ರೀ ಕೊಡುವುದಾಗಿ ಬರೆದುಕೊಂಡಿದ್ದಾರೆ, ಇದೇ ಜೂ.4 ರಂದು ಸಂಜೆ 5 ಗಂಟೆಯಿಂದ ಉಚಿತ ಚಾಟ್ಸ್ ನೀಡಲಿದ್ದಾರೆ,
Blog
ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.
ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ ಖಾನ್ಗೆ ಕೋರ್ಟ್ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್ ಕ್ಲೀನ್ಚಿಟ್ ನೀಡಿದೆ.
ಏನಿದು ಪ್ರಕರಣ?
ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.
Blog
ಕೋಲಾರದ ರೈತರಿಂದಲೂ ಪಾಕಿಸ್ತಾನ ಮೇಲೆ surgical strike

ಕೋಲಾರ: ಪಹಲ್ಗಾಮ್ ದಾಳಿ ಬಳಿಕ ಭಾರತೀಯ ಸೇನಾ ದಾಳಿ ಭೀತಿಯಲ್ಲಿರುವ ಪಾಕಿಸ್ತಾನಕ್ಕೆ ನಮ್ಮ ಕೋಲಾರದ ರೈತರೂ ಕೂಡ ಶಾಕ್ ನೀಡಿದ್ದು, ಇಷ್ಟು ದಿನ ಪಾಕಿಸ್ತಾನಕ್ಕೆ ರವಾನೆಯಾಗುತ್ತಿದ್ದ ಅಪಾರ ಪ್ರಮಾಣದ ಟೊಮ್ಯಾಟೊ ಬಂದ್ ಆಗಿದೆ.
ಹೌದು.. ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಬೆನ್ನಲ್ಲೇ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಪಾಕಿಸ್ತಾನದ ವಿರುದ್ದ ಭಾರತ ಸಿಂಧೂನದಿ ನೀರು ಸ್ಥಗಿತ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಉಭಯ ದೇಶಗಳ ನಡುವಿನ ಬಹುತೇಕ ಎಲ್ಲ ರೀತಿಯ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ರಾಜತಾಂತ್ರಿಕವಾಗಿ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ. ಇದರಿಂದ ಔಷಧ ಸೇರಿದಂತೆ ದಿನನಿತ್ಯ ಬಳಕೆ ವಸ್ತುಗಳಿಗಾಗಿ ಪಾಕಿಸ್ತಾನ ಪರದಾಡುತ್ತಿದೆ.
ಇನ್ನು ಅತ್ತ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಕ್ರಮಗಳಿಗೆ ಮುಂದಾಗುತ್ತಿದ್ದರೆ ಇದೀಗ ಕರ್ನಾಟಕದ ಕೋಲಾರದ ರೈತರೂ ಕೂಡ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಕೋಲಾರದ ರೈತರು ಮತ್ತು ವರ್ತಕರು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಟೊಮ್ಯಾಟೊ ರಪ್ರು ಮೇಲೆ ಸಂಪೂರ್ಣ ನಿರ್ಬಂಧ ಹೇರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾರೆ.
ಉಗ್ರದಾಳಿಯ ರೂವಾರಿಯಾಗಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕೋಲಾರ ರೈತರು, ತಮ್ಮ ಟೊಮೆಟೊವನ್ನು ಪಾಕಿಸ್ತಾನಕ್ಕೆ (Pakistan) ರಪ್ತು ಮಾಡುವುದನ್ನು ನಿಲ್ಲಿಸಿದ್ದಾರೆ. ಈ ಮೂಲಕ ಕೋಲಾರದ ರೈತರು ಸಹ ಪಾಕಿಸ್ತಾನಕ್ಕೆ ಶಾಕ್ ಕೊಟ್ಟಿದ್ದಾರೆ.
ನಷ್ಟವಾದರೂ ಪರವಾಗಿಲ್ಲ.. ಪಾಕ್ ಗೆ ಟೊಮ್ಯಾಟೋ ಕಳುಹಿಸಲ್ಲ
ಕೋಲಾರದಿಂದ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 800 ರಿಂದ 900 ಟನ್ ಟೊಮ್ಯಾಟೊವನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಪೆಹಲ್ಗಾಮ್ ದಾಳಿ ಬೆನ್ನಲ್ಲೇ ವರ್ತಕರು ಇನ್ನು ಮುಂದೆ ಪಾಕಿಸ್ತಾನಕ್ಕೆ ಒಂದೇ ಒಂದು ಟೊಮೆಟೊವನ್ನು ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.
ಪ್ರತೀ ವರ್ಷ ಕೋಲಾರ ರೈತರು ಪಾಕಿಸ್ತಾನಕ್ಕೆ ಟೊಮ್ಯಾಟೋ ಮಾರಾಟ ಮಾಡಿ ಕೋಟ್ಯಾಂತರ ರೂ ಆದಾಯ ಗಳಿಸುತ್ತಿದ್ದರು. ಆದರೆ ಈಗ ತಮಗೆ ನಷ್ಟವಾದರೂ ಪರವಾಗಿಲ್ಲ.. ಪಾಕಿಸ್ತಾನಕ್ಕೆ ಮಾತ್ರ ನಾವು ಟೊಮ್ಯಾಟೋ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಕೋಲಾರದಿಂದ ಪಾಕಿಸ್ತಾನಕ್ಕೆ ಟೊಮ್ಯಾಟೋ ಮಾತ್ರವಲ್ಲದೇ ಇತರೆ ತರಕಾರಿಗಳನ್ನೂ ಕೂಡ ರವಾನೆ ಮಾಡಲಾಗುತ್ತಿತ್ತು. ಇದೀಗ ಅದಕ್ಕೂ ಕತ್ತರಿ ಬಿದ್ದಿದೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ