Connect with us

ದೇಶ

ಅರ್ಜುನನಿದ್ದ ಬಳ್ಳೆ ಶಿಬಿರಕ್ಕೆ ಮಹೇಂದ್ರ ಎಂಟ್ರಿ: ಮಾಜಿ ಕ್ಯಾಪ್ಟನ್ ಸ್ಥಾನ ತುಂಬಲು ರೆಡಿ

Published

on

ಮೈಸೂರು: ದಸರಾ ಗಜಪಡೆ ಮಾಜಿ ಕ್ಯಾಪ್ಟನ್ ಅರ್ಜುನ ಸಾವಿನ ಬಳಿಕ ಸಾಕಾನೆಗಳಿಲ್ಲದೇ ಭಣಗುಡುತ್ತಿದ್ದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಶಿಬಿರಕ್ಕೆ ಭವಿಷ್ಯದ ಕ್ಯಾಪ್ಟನ್​ ಆಗಮನದಿಂದ ಜೀವ ಕಳೆ ಬಂದಿದೆ. ಭವಿಷ್ಯದಲ್ಲಿ ಅಂಬಾರಿ ಹೊರುವ ಭರವಸೆ ಮೂಡಿಸಿರುವ 41 ವರ್ಷದ ಮಹೇಂದ್ರ ಆನೆಯನ್ನು ದಸರಾ ಬಳಿಕ ಮತ್ತಿಗೋಡು ಆನೆ ಶಿಬಿರದಿಂದ ಬಳ್ಳೆಗೆ ಸ್ಥಳಾಂತರ ಮಾಡಲಾಗಿದೆ.

ಬಳ್ಳೆ ಆನೆ ಶಿಬಿರದಲ್ಲಿದ್ದ ಅರ್ಜುನ ಕಳೆದ ವರ್ಷ ಡಿ.4ರಂದು ಸಕಲೇಶಪುರ ಸಮೀಪ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದುರಂತ ಅಂತ್ಯ ಕಂಡಿತ್ತು. ಅಲ್ಲದೇ, ಬಳಿಕ ಕುಮಾರಸ್ವಾಮಿ, ದುರ್ಗಪರಮೇಶ್ವರಿ ಆನೆಗಳೂ ಸಾವನ್ನಪ್ಪಿದ ನಂತರ ಆನೆಗಳಿಲ್ಲದೇ ಬಳ್ಳೆ ಶಿಬಿರ ಖಾಲಿಯಾಗಿತ್ತು. ಇದೀಗ ಅರ್ಜುನನ ಸ್ಥಳಕ್ಕೆ ಮಹೇಂದ್ರ ಆನೆಯನ್ನು ಸ್ಥಳಾಂತರಿಸಲಾಗಿದೆ. ಮಹೇಂದ್ರನ ಜೊತೆ ರಾಮಪುರ ಲಕ್ಷ್ಮೀ ಆನೆಯನ್ನೂ ಕರೆ ತಂದಿರುವುದು ಈ ಶಿಬಿರಕ್ಕೆ ಮರುಜೀವ ಬಂದಂತಾಗಿದೆ. ಕ್ಯಾಂಪ್​ಗೆ ಬಂದ ಆನೆಗಳಿಗೆ ಬಳ್ಳೆಯ ಮಾಸ್ತಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸ್ವಾಗತಿಸಿಕೊಳ್ಳಲಾಗಿದೆ.

2018ರಲ್ಲಿ ರಾಮನಗರದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾದ 41 ವರ್ಷದ ಮಹೇಂದ್ರ ಕಳೆದ 2 ವರ್ಷಗಳಿಂದ ಶ್ರೀರಂಗಪಟ್ಟಣದ ಗ್ರಾಮೀಣ ದಸರಾದಲ್ಲಿ ಅಂಬಾರಿ ಆನೆಯಾಗಿ ಭಾಗವಹಿಸುತ್ತಿತ್ತು. ಇದನ್ನು ಈ ಬಾರಿ ಮೈಸೂರು ದಸರಾಗೆ ಕರೆತರಲಾಗಿತ್ತು. 2002ರಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಲಕ್ಷ್ಮೀ ಆನೆಯು ಇಲಾಖೆಯ ಶಿಬಿರದಲ್ಲಿ ಸಾಕಲಾಗಿದ್ದ ಆನೆಯಾಗಿದೆ. ಇವರೆಡೂ ಈಗ ಬಳ್ಳೆ ಆನೆ ಶಿಬಿರ ಸೇರಿವೆ.

ಅಂಬಾರಿ ಹೊರುವ ಭರವಸೆ ಮೂಡಿಸಿದ ಮಹೇಂದ್ರ: ಸದ್ಯ ಮಹೇಂದ್ರ ಭವಿಷ್ಯದ ಅಂಬಾರಿ ಆನೆಯಾಗುವ ಭರವಸೆ ಮೂಡಿಸಿದ್ದಾನೆ. ಈಗಾಗಲೇ ಆನೆಪ್ರಿಯರು ಮುಂದಿನ ಅಂಬಾರಿ ಆನೆ ಮಹೇಂದ್ರ ಎಂದೇ ಹೇಳುತ್ತಿದ್ದಾರೆ. ಮಹೇಂದ್ರನನ್ನು ಬಲಿಷ್ಠವಾಗಿ ತಯಾರುಗೊಳಿಸುವ ಜವಾಬ್ದಾರಿ ಮಾವುತ ರಾಜಣ್ಣ ಮತ್ತು ಕಾವಾಡಿ ಮಲ್ಲಿಕಾರ್ಜುನ ಹಾಗೂ ಜಮೇದಾರನಾಗಿ ನೇಮಕಗೊಂಡಿರುವ ಅರ್ಜುನ ಆನೆಯ ಮಾವುತನಾಗಿದ್ದ ವಿನುವಿನ ಹೆಗಲ ಮೇಲಿದೆ.

ಬಳ್ಳೆಯಲ್ಲಿದ್ದ ದಸರಾ ಆನೆಗಳು: ಈ ಹಿಂದೆ ಬಳ್ಳೆ ಆನೆ ಶಿಬಿರದ ರಾಜೇಂದ್ರ 3 ಬಾರಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಆನೆ. ವಯೋ ಸಹಜವಾಗಿ ದಸರಾದಿಂದ ರಾಜೇಂದ್ರನಿಗೆ ನಿವೃತ್ತಿ ನೀಡಲಾಗಿತ್ತು. ಕೊನೆಗೆ ಇಳಿ ವಯಸ್ಸಿನಲ್ಲಿ ರಾಜೇಂದ್ರ ಸಾವನ್ನಪ್ಪಿತ್ತು.

ಬಳಿಕ 1971ರಲ್ಲಿ ಕಾಕನಕೋಟೆ ಖೆಡ್ಡದಲ್ಲಿ ಸೆರೆಯಾದ ದ್ರೋಣ ಆನೆಯನ್ನು ಮಾವುತ ದೊಡ್ಡಪ್ಪಾಜಿ ಪಳಗಿಸಿದರು. 1981ರಲ್ಲಿ ಅಂಬಾರಿ ಹೊರುವ ಕಾಯಕ ಆರಂಭಿಸಿದ ದ್ರೋಣ 1997ರ ನಡುವೆ 18 ಬಾರಿ ಅಂಬಾರಿ ಹೊತ್ತು ದಾಖಲೆ ಬರೆದಿತ್ತು. 1998ರಲ್ಲಿ ವಿಪರ್ಯಾಸವೆಂಬಂತೆ ಮೇಯುವಾಗ ವಿದ್ಯುತ್ ತಗುಲಿ ಮೃತಪಟ್ಟಿತ್ತು.

ಬಲರಾಮನ ಬಳಿಕ ಅಂಬಾರಿ ಹೊತ್ತ ಆನೆ ಅರ್ಜುನ: ಬಳ್ಳೆ ಆನೆ ಶಿಬಿರದ ಅರ್ಜುನ ಆನೆಯು 9 ಬಾರಿ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ. ಅತ್ಯಾಕರ್ಷಕ ಮೈಕಟ್ಟಿನಿಂದಲೇ ಹಾಗೂ ಲಕ್ಷಣವಾದ ಮುಖದಿಂದಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ ಆನೆ ಇದಾಗಿತ್ತು. 1968ರಲ್ಲಿ ಕಾಕನಕೋಟೆಯ ಖೆಡ್ಡದಲ್ಲಿ ಸೆರೆಹಿಡಿಯಲಾದ ಅರ್ಜುನ ಆನೆಯನ್ನು ಬಳ್ಳೆ ಆನೆ ಶಿಬಿರದಲ್ಲಿ ಪಳಗಿಸಲಾಯಿತು. ವಿಪರ್ಯಾಸವೆಂಬಂತೆ, ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ವೇಳೆ 2023ರ ಡಿಸೆಂಬರ್ ಮೊದಲ ವಾರದಂದು ಅರ್ಜುನ ಸಾವನ್ನಪ್ಪಿದ.

ಈ ಸಂಬಂಧ ನಾಗರಹೊಳೆ ರಾಷ್ಟ್ರೀಯ ನಿರ್ದೇಶಕಿ ಪಿ.ಎ.ಸೀಮಾ ಮಾತನಾಡಿ, ”ಸರ್ಕಾರದ ಆದೇಶದಂತೆ ಸ್ಥಳಾಂತರಿಸಲಾಗಿದೆ. ಬಳ್ಳೆ ಶಿಬಿರದಲ್ಲಿ ಯಾವುದೇ ಆನೆಗಳಿಲ್ಲದಿರುವುದರಿಂದ ಹುಲಿ, ಆನೆ ಕಾರ್ಯಾಚರಣೆಗಳಿದ್ದಾಗ ಇಲ್ಲಿಂದ ಆನೆಗಳನ್ನು ಕರೆತರುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಮಹೇಂದ್ರ ಮತ್ತು ಲಕ್ಷ್ಮೀ ಆನೆಯನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ‌” ಎಂದಿದ್ದಾರೆ.

ದೇಶ

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ

Published

on

ಹರಿಯಾಣ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಅಧಿಕೃತ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲು ಸಿದ್ಧತೆ ಆರಂಭಿಸಿರುವುದು ದೇಶಾದ್ಯಂತ ಕುತೂಹಲ ಹುಟ್ಟಿಸಿದೆ. ಹರಿಯಾಣದ ಪಾಣಿಪತ್ ಮೂಲದ ವಕೀಲ Sudhir Jamir ಅವರು ಈ ವಿಶಿಷ್ಟ ಹೆಸರಿನ ಪಕ್ಷವನ್ನು ನೋಂದಾಯಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪಕ್ಷದ ಸಂವಿಧಾನ ಈಗಾಗಲೇ ಸಿದ್ಧಗೊಂಡಿದ್ದು, ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಜಮಿರ್ ಮಾಹಿತಿ ನೀಡಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಸಂಪೂರ್ಣ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ 10 ರಿಂದ 12 ದಿನಗಳಿಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಯುವಕರು ಬೆಂಬಲ ಸೂಚಿಸಿದ್ದಾರೆ. ಯುವಕರ ನಿರುದ್ಯೋಗ, ವ್ಯವಸ್ಥೆಯ ವಿರುದ್ಧದ ಅಸಮಾಧಾನ ಹಾಗೂ ಪರ್ಯಾಯ ರಾಜಕೀಯದ ಚರ್ಚೆಗಳಿಗೆ ಈ ಚಳುವಳಿ ವೇದಿಕೆಯಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಚಳುವಳಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ Abhijeet Dipke ಅಮೆರಿಕದಿಂದ ಆನ್‌ಲೈನ್ ಅಭಿಯಾನ ನಡೆಸುತ್ತಿದ್ದು, ಇದನ್ನು ಕೇವಲ ಸೋಶಿಯಲ್ ಮೀಡಿಯಾದಲ್ಲೇ ಸೀಮಿತಗೊಳಿಸದೆ ನೆಲಮಟ್ಟದಲ್ಲಿ ಸಂಘಟನೆ ರೂಪಿಸಬೇಕು ಎಂದು ಜಮಿರ್ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಪರಿಕಲ್ಪನೆ ಹುಟ್ಟಿಕೊಂಡಿತ್ತು. ಬಳಿಕ ಹಾಸ್ಯ, ವಿಡಂಬನೆ ಮತ್ತು ರಾಜಕೀಯ ಸಂದೇಶಗಳ ಮೂಲಕ ಇದು ವೈರಲ್ ಆಗಿ ಯುವಜನರಲ್ಲಿ ಹೊಸ ಚರ್ಚೆಗೆ ಕಾರಣವಾಯಿತು. ಇದೀಗ ಇದೇ ಹೆಸರಿನಲ್ಲಿ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವುದು ದೇಶದ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.

Continue Reading

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

ದೇಶ

ಕದನ ವಿರಾಮ ಮಾತುಕತೆ ಮಧ್ಯೆಯೇ US ಏರ್‌ಸ್ಟ್ರೈಕ್‌; ಬಂದರ್‌ ಅಬ್ಬಾಸ್‌ನಲ್ಲಿ ಸ್ಫೋಟ

Published

on

ಟೆಹ್ರಾನ್‌: ಇರಾನ್‌ ಜೊತೆಗಿನ ಕದನ ವಿರಾಮ ಹಾಗೂ ಉದ್ವಿಗ್ನತೆ ಶಮನಕ್ಕೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತ ತಲುಪಿದ್ದಾಗಲೇ ಅಮೆರಿಕ ಮತ್ತೆ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಆತಂಕ ಹೆಚ್ಚಿಸಿದೆ. ದಕ್ಷಿಣ ಇರಾನ್‌ನ ಮಿಲಿಟರಿ ನೆಲೆಗಳು, ಕ್ಷಿಪಣಿ ಉಡಾವಣಾ ತಾಣಗಳು ಹಾಗೂ ಹಾರ್ಮುಜ್‌ ಜಲಸಂಧಿಯಲ್ಲಿ ಜಲಬಾಂಬ್‌ಗಳನ್ನು ನಿಯೋಜಿಸುತ್ತಿದ್ದ ಬೋಟ್‌ಗಳನ್ನು ಗುರಿಯಾಗಿಸಿ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿದೆ.

ಭಾರತೀಯ ಕಾಲಮಾನ ಮಂಗಳವಾರ ಮುಂಜಾನೆ ನಡೆದ ಈ ದಾಳಿಯಲ್ಲಿ ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ ಕಾರ್ಪ್ಸ್‌ (IRGC) ಬಳಕೆ ಮಾಡುತ್ತಿದ್ದ ಎರಡು ಬೋಟ್‌ಗಳನ್ನು ಅಮೆರಿಕ ನಾಶಪಡಿಸಿದೆ ಎಂದು ವರದಿಯಾಗಿದೆ. ಹಾರ್ಮುಜ್‌ ಜಲಸಂಧಿಯಲ್ಲಿ ಗಣಿಗಳನ್ನು ಅಳವಡಿಸುತ್ತಿದ್ದ ಮಾಹಿತಿ ಲಭಿಸಿದ ತಕ್ಷಣ ಅಮೆರಿಕ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಯುಎಸ್‌ ಸೆಂಟ್ರಲ್ ಕಮಾಂಡ್‌ (CENTCOM) ತಿಳಿಸಿದೆ.

ಇದೇ ವೇಳೆ ಬಂದರ್‌ ಅಬ್ಬಾಸ್‌ನಲ್ಲಿರುವ ಕ್ಷಿಪಣಿ ಉಡಾವಣಾ ತಾಣಗಳ ಮೇಲೂ ಅಮೆರಿಕದ ಫೈಟರ್‌ ಜೆಟ್‌ಗಳು ದಾಳಿ ನಡೆಸಿವೆ. ಈ ಕಾರ್ಯಾಚರಣೆಯಲ್ಲಿ ಕ್ಷಿಪಣಿ ಲಾಂಚರ್‌ಗಳು ಹಾಗೂ ಮಿಲಿಟರಿ ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿದೆ. ಸ್ಫೋಟಗಳ ಪರಿಣಾಮ ದಟ್ಟ ಹೊಗೆ ಆಕಾಶಕ್ಕೆ ಚಿಮ್ಮಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ದಾಳಿ ಆತ್ಮರಕ್ಷಣೆಯ ಭಾಗವಾಗಿದ್ದು, ಯುದ್ಧವನ್ನು ವಿಸ್ತರಿಸುವ ಉದ್ದೇಶ ನಮ್ಮದಲ್ಲ ಎಂದು CENTCOM ಸ್ಪಷ್ಟಪಡಿಸಿದೆ. ಆದರೆ ಅಮೆರಿಕದ ಕ್ರಮ ಇರಾನ್‌ನನ್ನು ಮತ್ತಷ್ಟು ಕೆರಳಿಸಿದ್ದು, ಮತ್ತೆ ಯುದ್ಧ ಪ್ರಾರಂಭವಾಗಬಹುದೇ ಎಂಬ ಆತಂಕ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ.

ಈ ನಡುವೆ ಅಮೆರಿಕ ಅಧ್ಯಕ್ಷ Donald Trump ತಮ್ಮ ‘ಟ್ರುಥ್‌’ ಸಾಮಾಜಿಕ ಜಾಲತಾಣದಲ್ಲಿ ದಾಳಿಯ ಚಿತ್ರ ಹಂಚಿಕೊಂಡು “ಇದು ಟ್ರಂಪ್‌ ನೀತಿ” ಎಂದು ಪೋಸ್ಟ್‌ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

Trending