Connect with us

ಬೆಂಗಳೂರು

RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

ಬೆಂಗಳೂರು: ಆರ್‌ಎಸ್‌ಎಸ್ ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ (RSS) ಅಂದ್ರೆ ‘ರೂಮರ್ಸ್‌ ಸ್ಪ್ರೆಡ್ಡಿಂಗ್ ಸಂಘ್’. ಅವರು ಕಳ್ಳನನ್ನು ಸುಳ್ಳ ಮಾಡ್ತಾರೆ, ಸುಳ್ಳನನ್ನು ಸತ್ಯವಂತ ಮಾಡ್ತಾರೆ. ಬಡವರು, ಅಮಾಯಕರನ್ನು ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಾರೆ ಎಂದು ಟೀಕಿಸಿದರು.

ಎಬಿವಿಪಿಯವರು ಮೊದಲು ಮುಸ್ಲಿಮರ ಬಗ್ಗೆ ಹೇಳೋದಿಲ್ಲ. ಶೂದ್ರ ಹುಡುಗರು ಸಿಕ್ಕಿದರೆ ಮೊದಲು ರಾಷ್ಟ್ರ ಕಟ್ಟಬೇಕು ಅಂತಾರೆ. ಆಮೇಲೆ ನಿಧಾನವಾಗಿ ಅವರ ತಲೆಯಲ್ಲಿ ಮುಸ್ಲಿಂ ದ್ವೇಷದ ಗೊಬ್ಬರ ತುಂಬುತ್ತಾರೆ. ದೇಶಭಕ್ತರು ಎನ್ನುವ ಆರ್‌ಎಸ್‌ಎಸ್‌ನವರು ತ್ರಿವರ್ಣ ಧ್ವಜಕ್ಕೆ ಗೌರವ ಕೊಡಲ್ಲ. 52 ವರ್ಷ ಆರ್‌ಎಸ್‌ಎಸ್ ಕಚೇರಿ ಮೇಲೆ ಧ್ವಜ ಹಾರಿಸಿಲ್ಲ. ನಾವೆಲ್ಲ ಸಾಫ್ಟ್ ಹಿಂದುತ್ವದವರಲ್ಲ, ನಾವೆಲ್ಲ ಹಿಂದೂಗಳು. ನಮ್ಮ ಕಾಂಗ್ರೆಸ್‌ನಲ್ಲಿ ಕೆಲವರು ಸಾಫ್ಟ್ ಹಿಂದುತ್ವವಾದಿಗಳಿದ್ದಾರೆ ಎಂದರು.

ಬಿಜೆಪಿಯ ದೀನ್ ದಯಾಳ್ ಉಪಾಧ್ಯಾಯವರನ್ನು ಕೊಂದವರು ಯಾರು? ಅವರ ಕೊಲೆ ಮಾಡಿದ್ದು, ಯಾರು ಅಂತಾ ಸಂಘಪರಿವಾರ ಹೇಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೊಲೆ ಆಗಿದ್ದು ಜನ ಸಂಘದ ಕಡೆಯೇ ತೋರಿಸುತ್ತದೆ. ಇದರ ಬಗ್ಗೆ ಯಾರೂ ಸ್ಪಷ್ಟವಾಗಿ ಹೇಳುತ್ತಲೇ ಇಲ್ಲ ಬಿಜೆಪಿಯವರು. ಆರ್‌ಎಸ್‌ಎಸ್ ಕಾಲಾಳುಗಳೆಲ್ಲ ಬಡವರೇ. ಅಧಿಕಾರ, ಸಂಪತ್ತು ಪಡೆಯುವವರು ಬೇರೆ, ಜೈಲಿಗೆ ಹೋಗುವವರು ಬೇರೆಯೇ. ಸಂಘ ಪರಿವಾರದ ಸಹವಾಸದಿಂದ ಹೋರಾಟ ಮಾಡಿದವರು ಒಂದೋ ಜೈಲಿಗೆ ಹೋಗಬೇಕು, ಇಲ್ಲ ಸ್ಮಶಾನ ಸೇರಬೇಕು. ಬೊಮ್ಮಾಯಿ ಮಗ, ಯಡಿಯೂರಪ್ಪ ಮಗ ಏನಾದರೂ ಬೀದಿಯಲ್ಲಿ ಹೋರಾಟ ಮಾಡಿದ್ರಾ? ಹೋರಾಟ ಮಾಡೋದೆಲ್ಲ ಪುನೀತ್ ಕೆರೆಹಳ್ಳಿ ಥರದವರು. ಬಿಸಿಸಿಐ ಅಧ್ಯಕ್ಷ ಆಗೋದು ಜಯ್ ಶಾ ಎಂದು ಟಾಂಗ್ ಕೊಟ್ಟರು.

ರಾಷ್ಟ್ರ ಇವತ್ತು ಕವಲು ದಾರಿಯಲ್ಲಿದೆ. ಗಾಂಧೀಯವರ ಚಿಂತನೆ ಪರಿಪಾಲನೆ ಒಂದೆಡೆ. ಗೋಡ್ಸೆ ವೈಭವೀಕರಿಸುವುದು ಮತ್ತೊಂದು ಕಡೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೋಚುತ್ತಿದ್ದರು. ರಾಜ ಮಹಾರಾಜರು ಆಸ್ತಿ ಸಂಪಾದಿಸುತ್ತಿದ್ದರು. ಚರ್ಚಿಲ್ ಭಾರತಕ್ಕೆ ಸ್ವಾತಂತ್ರ‍್ಯ ಕೊಟ್ಟಿದ್ದೇವೆ. ಆದರೆ ಅವರು ಹಸಿವಿನಿಂದ ಸಾಯ್ತಾರೆ ಎಂದಿದ್ದರು. ಆದರೆ ಭವ್ಯ ಭಾರತ ಕಟ್ಟುವ ಕೆಲಸ ಆಗಿದೆ. ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಕ್ಕಿವೆ ಎಂದು ತಿಳಿಸಿದರು.

ಹಿಂದೂ ರಾಷ್ಟ್ರ ಕಟ್ಟುವ ಮಾತನಾಡ್ತಾರೆ. ಇವತ್ತು ಪರಿಸ್ಥಿತಿ ಎಲ್ಲಿಗೆ ಹೋಗಿದೆ ನೋಡ್ತಿದ್ದೇವೆ. ನಾನು ಎಬಿವಿಪಿ, ಆರ್‌ಎಸ್‌ಎಸ್ ವಿರುದ್ಧ ಇದ್ದವನು. ವಿದ್ಯಾರ್ಥಿ ಸಂಘಟನೆಯಿಂದಲೇ ಬೆಳೆದವನು. ಕಾಂಗ್ರೆಸ್‌ನಲ್ಲಿ ಆಗ ಮೂರು ಗುಂಪು ಇದ್ದವು. ಅರಸು ಅವರದ್ದು ಒಂದು, ಗುಂಡೂರಾವ್ ಮತ್ತೊಂದು. ಉಳಿದವರದ್ದು ಇನ್ನೊಂದು ಗುಂಪು ಇತ್ತು. ಆದರೂ ನಮ್ಮದು ಕಾಂಗ್ರೆಸ್ ಗುಂಪು ಅಷ್ಟೇ. ಎಂದೂ ನಿಯಮ, ಸಿದ್ಧಾಂತ ಬಿಟ್ಟು ಹೋಗಲಿಲ್ಲ ಎಂದರು.

ಸುಳ್ಳು ಇತಿಹಾಸವನ್ನ ಹೇಳಿಕೊಂಡು ಓಡಾಡ್ತಾರೆ. ಹಿಂದೆ ಎಬಿವಿಪಿ ಇಂದಿನಷ್ಟು ಕೆಟ್ಟದ್ದಾಗಿರಲಿಲ್ಲ. ಹಿಂದೂ, ಮುಸ್ಲಿಂ ಅಂತಾ ಇವತ್ತು ತಂದಿಟ್ಟಿದ್ದಾರೆ. ಗೋಲ್ವಾಲ್ಕರ್ ಬಂಚ್ ಆಫ್ ಥಾಟ್ಸ್ ಬರೆದಿದ್ದರು. ಅದರಲ್ಲಿ ಹಿಂದೂ, ಜಾತಿಯ ಬಗ್ಗೆ ಬರೆದಿದ್ದರು. ಚಿಂತನಗಂಗಾದಲ್ಲಿ 175ನೇ ಪೇಜ್‌ನಲ್ಲಿದೆ. ಅದರಲ್ಲಿ ದ್ವೇಷದ ಬಗ್ಗೆ ಉಲ್ಲೇಖಿಸಿದ್ದಾರೆ. ಕ್ರಿಶ್ಚಿಯನ್, ಮುಸ್ಲಿಮರ ಬಗ್ಗೆ ದ್ವೇಷ ಸಾಧಿಸಿದ್ದರು. ಸ್ವಾತಂತ್ರಕ್ಕಾಗಿ ಪ್ರಾಣಕೊಟ್ಟವರು ಅಲ್ಪಸಂಖ್ಯಾತರು, ಮುಸ್ಲಿಮರು, ಸಿಖ್ಖರು ಹೆಚ್ಚು ತ್ಯಾಗ ಮಾಡಿದ್ದವರು. ನಾವು ಸಾಫ್ಟ್ ಹಿಂದುತ್ವವಾದಿಗಳಲ್ಲ. ನಾವು ಹಿಂದೂಗಳೇ, ಆದರೆ ಹಿಂದುತ್ವವಾದಿಗಳಲ್ಲ. 10 ವರ್ಷ ಆಯ್ತು ಆಯೋಗ್ಯರು ಅಧಿಕಾರದಲ್ಲಿ ಕುಳಿತು. ಸುಭಾಷ್ ಚಂದ್ರಬೋಸ್ ಸಾವಿನ ತನಿಖೆ ಮಾಡಲಿಲ್ಲ. ಸುಭಾಷ್ ಚಂದ್ರರು, ಶಾಸ್ತ್ರಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಾನು ಹೇಳುವುದು ಸಾಕಷ್ಟಿದೆ. ಈಗ ಮಾತನಾಡಿದರೆ ಚುನಾವಣೆ ಮೇಲೆ ಎಫೆಕ್ಟ್ ಆಗಬಹುದು. ಹಾಗಾಗಿ ಮುಂದೆ ಮಾತನಾಡ್ತೇನೆ ಎಂದರು.

ದೇಶ

BMSCE ವಿಜ್ಞಾನ ಪ್ರದರ್ಶನ: 14 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 60+ ಮಾದರಿ ಪ್ರದರ್ಶನ

ಬೆಂಗಳೂರು: BMS College of Engineering ವತಿಯಿಂದ ಯುವಕ ಸಂಘದ ಕ್ಯಾಂಪಸ್–2 ಕಮ್ಯೂನಿಟಿ ಯೋಜನೆ ಅಡಿಯಲ್ಲಿ ವಿಜ್ಞಾನ ಮಾದರಿಗಳ ಅಂತಿಮ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಕಾಲೇಜು ಆವರಣದಲ್ಲಿ ಭರ್ಜರಿಯಾಗಿ ಆಯೋಜಿಸಲಾಯಿತು.

ಕಳೆದ 8 ತಿಂಗಳುಗಳಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪರಿಸರ, ವಿಜ್ಞಾನ, ಜೀವನ ಕೌಶಲ್ಯ ಮತ್ತು ಮಾನಸಿಕ ಸಮಾಲೋಚನೆ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲಾಗಿತ್ತು. ತರಬೇತಿಯ ಬಳಿಕ ಆಯ್ಕೆಯಾದ ಪ್ರಾಜೆಕ್ಟ್‌ಗಳನ್ನು ಈ ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.


60ಕ್ಕೂ ಹೆಚ್ಚು ವಿಜ್ಞಾನ ಮಾದರಿ ಪ್ರದರ್ಶನ

14 ಶಾಲೆಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, 60ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸೃಜನಶೀಲತೆ, ವೈಜ್ಞಾನಿಕ ಮನೋಭಾವ ಮತ್ತು ನವೀನ ಆಲೋಚನೆಗಳು ವಿಶೇಷವಾಗಿ ಗಮನಸೆಳೆದವು.


🎓 ಗಣ್ಯರ ಉಪಸ್ಥಿತಿ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎನ್‌ಎಸ್‌ಎಸ್ ರಾಜ್ಯ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ:

  • ಡಾ. ಭೀಮಶಾ ಆರ್ಯ – ಪ್ರಾಂಶುಪಾಲರು
  • ಡಾ. ಎಲ್. ರವಿಕುಮಾರ್ – ಉಪ ಪ್ರಾಂಶುಪಾಲರು
  • ಡಾ. ಶೇಷಾಚಲಂ – ಉಪ ಪ್ರಾಂಶುಪಾಲರು
  • ಡಾ. ಸುಜಾತಾ ಎನ್. – ಯೋಜನಾ ಅಧಿಕಾರಿ
  • ಯುವಕ ಸಂಘದ ಸಂಯೋಜಕರು

ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ವಿದ್ಯಾರ್ಥಿಗಳಿಗೆ ಸೌಲಭ್ಯ

ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪ್ಯಾಡ್‌ಗಳನ್ನು ವಿತರಿಸಲಾಯಿತು. ಜೊತೆಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು.


ವೈಜ್ಞಾನಿಕ ಚಿಂತನೆಗೆ ಉತ್ತೇಜನ

ಒಟ್ಟಾರೆ, ಈ ವಿಜ್ಞಾನ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಮತ್ತು ನವೀನತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವಹಿಸಿತು. ಶಾಲಾ–ಕಾಲೇಜು ಸಹಯೋಗದ ಉತ್ತಮ ಉದಾಹರಣೆಯಾಗಿ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು.

Continue Reading

ದೇಶ

HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?

ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಲಿಗೆ ಬೀಳುವಂತೆ ಸೂಚನೆ?

ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

Trending