Connect with us

ಬೆಂಗಳೂರು

RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

ಬೆಂಗಳೂರು: ಆರ್‌ಎಸ್‌ಎಸ್ ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ (RSS) ಅಂದ್ರೆ ‘ರೂಮರ್ಸ್‌ ಸ್ಪ್ರೆಡ್ಡಿಂಗ್ ಸಂಘ್’. ಅವರು ಕಳ್ಳನನ್ನು ಸುಳ್ಳ ಮಾಡ್ತಾರೆ, ಸುಳ್ಳನನ್ನು ಸತ್ಯವಂತ ಮಾಡ್ತಾರೆ. ಬಡವರು, ಅಮಾಯಕರನ್ನು ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಾರೆ ಎಂದು ಟೀಕಿಸಿದರು.

ಎಬಿವಿಪಿಯವರು ಮೊದಲು ಮುಸ್ಲಿಮರ ಬಗ್ಗೆ ಹೇಳೋದಿಲ್ಲ. ಶೂದ್ರ ಹುಡುಗರು ಸಿಕ್ಕಿದರೆ ಮೊದಲು ರಾಷ್ಟ್ರ ಕಟ್ಟಬೇಕು ಅಂತಾರೆ. ಆಮೇಲೆ ನಿಧಾನವಾಗಿ ಅವರ ತಲೆಯಲ್ಲಿ ಮುಸ್ಲಿಂ ದ್ವೇಷದ ಗೊಬ್ಬರ ತುಂಬುತ್ತಾರೆ. ದೇಶಭಕ್ತರು ಎನ್ನುವ ಆರ್‌ಎಸ್‌ಎಸ್‌ನವರು ತ್ರಿವರ್ಣ ಧ್ವಜಕ್ಕೆ ಗೌರವ ಕೊಡಲ್ಲ. 52 ವರ್ಷ ಆರ್‌ಎಸ್‌ಎಸ್ ಕಚೇರಿ ಮೇಲೆ ಧ್ವಜ ಹಾರಿಸಿಲ್ಲ. ನಾವೆಲ್ಲ ಸಾಫ್ಟ್ ಹಿಂದುತ್ವದವರಲ್ಲ, ನಾವೆಲ್ಲ ಹಿಂದೂಗಳು. ನಮ್ಮ ಕಾಂಗ್ರೆಸ್‌ನಲ್ಲಿ ಕೆಲವರು ಸಾಫ್ಟ್ ಹಿಂದುತ್ವವಾದಿಗಳಿದ್ದಾರೆ ಎಂದರು.

ಬಿಜೆಪಿಯ ದೀನ್ ದಯಾಳ್ ಉಪಾಧ್ಯಾಯವರನ್ನು ಕೊಂದವರು ಯಾರು? ಅವರ ಕೊಲೆ ಮಾಡಿದ್ದು, ಯಾರು ಅಂತಾ ಸಂಘಪರಿವಾರ ಹೇಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೊಲೆ ಆಗಿದ್ದು ಜನ ಸಂಘದ ಕಡೆಯೇ ತೋರಿಸುತ್ತದೆ. ಇದರ ಬಗ್ಗೆ ಯಾರೂ ಸ್ಪಷ್ಟವಾಗಿ ಹೇಳುತ್ತಲೇ ಇಲ್ಲ ಬಿಜೆಪಿಯವರು. ಆರ್‌ಎಸ್‌ಎಸ್ ಕಾಲಾಳುಗಳೆಲ್ಲ ಬಡವರೇ. ಅಧಿಕಾರ, ಸಂಪತ್ತು ಪಡೆಯುವವರು ಬೇರೆ, ಜೈಲಿಗೆ ಹೋಗುವವರು ಬೇರೆಯೇ. ಸಂಘ ಪರಿವಾರದ ಸಹವಾಸದಿಂದ ಹೋರಾಟ ಮಾಡಿದವರು ಒಂದೋ ಜೈಲಿಗೆ ಹೋಗಬೇಕು, ಇಲ್ಲ ಸ್ಮಶಾನ ಸೇರಬೇಕು. ಬೊಮ್ಮಾಯಿ ಮಗ, ಯಡಿಯೂರಪ್ಪ ಮಗ ಏನಾದರೂ ಬೀದಿಯಲ್ಲಿ ಹೋರಾಟ ಮಾಡಿದ್ರಾ? ಹೋರಾಟ ಮಾಡೋದೆಲ್ಲ ಪುನೀತ್ ಕೆರೆಹಳ್ಳಿ ಥರದವರು. ಬಿಸಿಸಿಐ ಅಧ್ಯಕ್ಷ ಆಗೋದು ಜಯ್ ಶಾ ಎಂದು ಟಾಂಗ್ ಕೊಟ್ಟರು.

ರಾಷ್ಟ್ರ ಇವತ್ತು ಕವಲು ದಾರಿಯಲ್ಲಿದೆ. ಗಾಂಧೀಯವರ ಚಿಂತನೆ ಪರಿಪಾಲನೆ ಒಂದೆಡೆ. ಗೋಡ್ಸೆ ವೈಭವೀಕರಿಸುವುದು ಮತ್ತೊಂದು ಕಡೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೋಚುತ್ತಿದ್ದರು. ರಾಜ ಮಹಾರಾಜರು ಆಸ್ತಿ ಸಂಪಾದಿಸುತ್ತಿದ್ದರು. ಚರ್ಚಿಲ್ ಭಾರತಕ್ಕೆ ಸ್ವಾತಂತ್ರ‍್ಯ ಕೊಟ್ಟಿದ್ದೇವೆ. ಆದರೆ ಅವರು ಹಸಿವಿನಿಂದ ಸಾಯ್ತಾರೆ ಎಂದಿದ್ದರು. ಆದರೆ ಭವ್ಯ ಭಾರತ ಕಟ್ಟುವ ಕೆಲಸ ಆಗಿದೆ. ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಕ್ಕಿವೆ ಎಂದು ತಿಳಿಸಿದರು.

ಹಿಂದೂ ರಾಷ್ಟ್ರ ಕಟ್ಟುವ ಮಾತನಾಡ್ತಾರೆ. ಇವತ್ತು ಪರಿಸ್ಥಿತಿ ಎಲ್ಲಿಗೆ ಹೋಗಿದೆ ನೋಡ್ತಿದ್ದೇವೆ. ನಾನು ಎಬಿವಿಪಿ, ಆರ್‌ಎಸ್‌ಎಸ್ ವಿರುದ್ಧ ಇದ್ದವನು. ವಿದ್ಯಾರ್ಥಿ ಸಂಘಟನೆಯಿಂದಲೇ ಬೆಳೆದವನು. ಕಾಂಗ್ರೆಸ್‌ನಲ್ಲಿ ಆಗ ಮೂರು ಗುಂಪು ಇದ್ದವು. ಅರಸು ಅವರದ್ದು ಒಂದು, ಗುಂಡೂರಾವ್ ಮತ್ತೊಂದು. ಉಳಿದವರದ್ದು ಇನ್ನೊಂದು ಗುಂಪು ಇತ್ತು. ಆದರೂ ನಮ್ಮದು ಕಾಂಗ್ರೆಸ್ ಗುಂಪು ಅಷ್ಟೇ. ಎಂದೂ ನಿಯಮ, ಸಿದ್ಧಾಂತ ಬಿಟ್ಟು ಹೋಗಲಿಲ್ಲ ಎಂದರು.

ಸುಳ್ಳು ಇತಿಹಾಸವನ್ನ ಹೇಳಿಕೊಂಡು ಓಡಾಡ್ತಾರೆ. ಹಿಂದೆ ಎಬಿವಿಪಿ ಇಂದಿನಷ್ಟು ಕೆಟ್ಟದ್ದಾಗಿರಲಿಲ್ಲ. ಹಿಂದೂ, ಮುಸ್ಲಿಂ ಅಂತಾ ಇವತ್ತು ತಂದಿಟ್ಟಿದ್ದಾರೆ. ಗೋಲ್ವಾಲ್ಕರ್ ಬಂಚ್ ಆಫ್ ಥಾಟ್ಸ್ ಬರೆದಿದ್ದರು. ಅದರಲ್ಲಿ ಹಿಂದೂ, ಜಾತಿಯ ಬಗ್ಗೆ ಬರೆದಿದ್ದರು. ಚಿಂತನಗಂಗಾದಲ್ಲಿ 175ನೇ ಪೇಜ್‌ನಲ್ಲಿದೆ. ಅದರಲ್ಲಿ ದ್ವೇಷದ ಬಗ್ಗೆ ಉಲ್ಲೇಖಿಸಿದ್ದಾರೆ. ಕ್ರಿಶ್ಚಿಯನ್, ಮುಸ್ಲಿಮರ ಬಗ್ಗೆ ದ್ವೇಷ ಸಾಧಿಸಿದ್ದರು. ಸ್ವಾತಂತ್ರಕ್ಕಾಗಿ ಪ್ರಾಣಕೊಟ್ಟವರು ಅಲ್ಪಸಂಖ್ಯಾತರು, ಮುಸ್ಲಿಮರು, ಸಿಖ್ಖರು ಹೆಚ್ಚು ತ್ಯಾಗ ಮಾಡಿದ್ದವರು. ನಾವು ಸಾಫ್ಟ್ ಹಿಂದುತ್ವವಾದಿಗಳಲ್ಲ. ನಾವು ಹಿಂದೂಗಳೇ, ಆದರೆ ಹಿಂದುತ್ವವಾದಿಗಳಲ್ಲ. 10 ವರ್ಷ ಆಯ್ತು ಆಯೋಗ್ಯರು ಅಧಿಕಾರದಲ್ಲಿ ಕುಳಿತು. ಸುಭಾಷ್ ಚಂದ್ರಬೋಸ್ ಸಾವಿನ ತನಿಖೆ ಮಾಡಲಿಲ್ಲ. ಸುಭಾಷ್ ಚಂದ್ರರು, ಶಾಸ್ತ್ರಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಾನು ಹೇಳುವುದು ಸಾಕಷ್ಟಿದೆ. ಈಗ ಮಾತನಾಡಿದರೆ ಚುನಾವಣೆ ಮೇಲೆ ಎಫೆಕ್ಟ್ ಆಗಬಹುದು. ಹಾಗಾಗಿ ಮುಂದೆ ಮಾತನಾಡ್ತೇನೆ ಎಂದರು.

ಬೆಂಗಳೂರು

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.

ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.

ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.

ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.

ಪ್ರವೇಶ ಶುಲ್ಕ:

  • ಸಾಮಾನ್ಯ ದಿನ: ₹80
  • ರಜಾದಿನಗಳು ಮತ್ತು ವಾರಾಂತ್ಯ: ₹100

ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending