Connect with us

ಬೆಂಗಳೂರು

RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

Published

on

ಬೆಂಗಳೂರು: ಆರ್‌ಎಸ್‌ಎಸ್ ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ (RSS) ಅಂದ್ರೆ ‘ರೂಮರ್ಸ್‌ ಸ್ಪ್ರೆಡ್ಡಿಂಗ್ ಸಂಘ್’. ಅವರು ಕಳ್ಳನನ್ನು ಸುಳ್ಳ ಮಾಡ್ತಾರೆ, ಸುಳ್ಳನನ್ನು ಸತ್ಯವಂತ ಮಾಡ್ತಾರೆ. ಬಡವರು, ಅಮಾಯಕರನ್ನು ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಾರೆ ಎಂದು ಟೀಕಿಸಿದರು.

ಎಬಿವಿಪಿಯವರು ಮೊದಲು ಮುಸ್ಲಿಮರ ಬಗ್ಗೆ ಹೇಳೋದಿಲ್ಲ. ಶೂದ್ರ ಹುಡುಗರು ಸಿಕ್ಕಿದರೆ ಮೊದಲು ರಾಷ್ಟ್ರ ಕಟ್ಟಬೇಕು ಅಂತಾರೆ. ಆಮೇಲೆ ನಿಧಾನವಾಗಿ ಅವರ ತಲೆಯಲ್ಲಿ ಮುಸ್ಲಿಂ ದ್ವೇಷದ ಗೊಬ್ಬರ ತುಂಬುತ್ತಾರೆ. ದೇಶಭಕ್ತರು ಎನ್ನುವ ಆರ್‌ಎಸ್‌ಎಸ್‌ನವರು ತ್ರಿವರ್ಣ ಧ್ವಜಕ್ಕೆ ಗೌರವ ಕೊಡಲ್ಲ. 52 ವರ್ಷ ಆರ್‌ಎಸ್‌ಎಸ್ ಕಚೇರಿ ಮೇಲೆ ಧ್ವಜ ಹಾರಿಸಿಲ್ಲ. ನಾವೆಲ್ಲ ಸಾಫ್ಟ್ ಹಿಂದುತ್ವದವರಲ್ಲ, ನಾವೆಲ್ಲ ಹಿಂದೂಗಳು. ನಮ್ಮ ಕಾಂಗ್ರೆಸ್‌ನಲ್ಲಿ ಕೆಲವರು ಸಾಫ್ಟ್ ಹಿಂದುತ್ವವಾದಿಗಳಿದ್ದಾರೆ ಎಂದರು.

ಬಿಜೆಪಿಯ ದೀನ್ ದಯಾಳ್ ಉಪಾಧ್ಯಾಯವರನ್ನು ಕೊಂದವರು ಯಾರು? ಅವರ ಕೊಲೆ ಮಾಡಿದ್ದು, ಯಾರು ಅಂತಾ ಸಂಘಪರಿವಾರ ಹೇಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೊಲೆ ಆಗಿದ್ದು ಜನ ಸಂಘದ ಕಡೆಯೇ ತೋರಿಸುತ್ತದೆ. ಇದರ ಬಗ್ಗೆ ಯಾರೂ ಸ್ಪಷ್ಟವಾಗಿ ಹೇಳುತ್ತಲೇ ಇಲ್ಲ ಬಿಜೆಪಿಯವರು. ಆರ್‌ಎಸ್‌ಎಸ್ ಕಾಲಾಳುಗಳೆಲ್ಲ ಬಡವರೇ. ಅಧಿಕಾರ, ಸಂಪತ್ತು ಪಡೆಯುವವರು ಬೇರೆ, ಜೈಲಿಗೆ ಹೋಗುವವರು ಬೇರೆಯೇ. ಸಂಘ ಪರಿವಾರದ ಸಹವಾಸದಿಂದ ಹೋರಾಟ ಮಾಡಿದವರು ಒಂದೋ ಜೈಲಿಗೆ ಹೋಗಬೇಕು, ಇಲ್ಲ ಸ್ಮಶಾನ ಸೇರಬೇಕು. ಬೊಮ್ಮಾಯಿ ಮಗ, ಯಡಿಯೂರಪ್ಪ ಮಗ ಏನಾದರೂ ಬೀದಿಯಲ್ಲಿ ಹೋರಾಟ ಮಾಡಿದ್ರಾ? ಹೋರಾಟ ಮಾಡೋದೆಲ್ಲ ಪುನೀತ್ ಕೆರೆಹಳ್ಳಿ ಥರದವರು. ಬಿಸಿಸಿಐ ಅಧ್ಯಕ್ಷ ಆಗೋದು ಜಯ್ ಶಾ ಎಂದು ಟಾಂಗ್ ಕೊಟ್ಟರು.

ರಾಷ್ಟ್ರ ಇವತ್ತು ಕವಲು ದಾರಿಯಲ್ಲಿದೆ. ಗಾಂಧೀಯವರ ಚಿಂತನೆ ಪರಿಪಾಲನೆ ಒಂದೆಡೆ. ಗೋಡ್ಸೆ ವೈಭವೀಕರಿಸುವುದು ಮತ್ತೊಂದು ಕಡೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೋಚುತ್ತಿದ್ದರು. ರಾಜ ಮಹಾರಾಜರು ಆಸ್ತಿ ಸಂಪಾದಿಸುತ್ತಿದ್ದರು. ಚರ್ಚಿಲ್ ಭಾರತಕ್ಕೆ ಸ್ವಾತಂತ್ರ‍್ಯ ಕೊಟ್ಟಿದ್ದೇವೆ. ಆದರೆ ಅವರು ಹಸಿವಿನಿಂದ ಸಾಯ್ತಾರೆ ಎಂದಿದ್ದರು. ಆದರೆ ಭವ್ಯ ಭಾರತ ಕಟ್ಟುವ ಕೆಲಸ ಆಗಿದೆ. ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಕ್ಕಿವೆ ಎಂದು ತಿಳಿಸಿದರು.

ಹಿಂದೂ ರಾಷ್ಟ್ರ ಕಟ್ಟುವ ಮಾತನಾಡ್ತಾರೆ. ಇವತ್ತು ಪರಿಸ್ಥಿತಿ ಎಲ್ಲಿಗೆ ಹೋಗಿದೆ ನೋಡ್ತಿದ್ದೇವೆ. ನಾನು ಎಬಿವಿಪಿ, ಆರ್‌ಎಸ್‌ಎಸ್ ವಿರುದ್ಧ ಇದ್ದವನು. ವಿದ್ಯಾರ್ಥಿ ಸಂಘಟನೆಯಿಂದಲೇ ಬೆಳೆದವನು. ಕಾಂಗ್ರೆಸ್‌ನಲ್ಲಿ ಆಗ ಮೂರು ಗುಂಪು ಇದ್ದವು. ಅರಸು ಅವರದ್ದು ಒಂದು, ಗುಂಡೂರಾವ್ ಮತ್ತೊಂದು. ಉಳಿದವರದ್ದು ಇನ್ನೊಂದು ಗುಂಪು ಇತ್ತು. ಆದರೂ ನಮ್ಮದು ಕಾಂಗ್ರೆಸ್ ಗುಂಪು ಅಷ್ಟೇ. ಎಂದೂ ನಿಯಮ, ಸಿದ್ಧಾಂತ ಬಿಟ್ಟು ಹೋಗಲಿಲ್ಲ ಎಂದರು.

ಸುಳ್ಳು ಇತಿಹಾಸವನ್ನ ಹೇಳಿಕೊಂಡು ಓಡಾಡ್ತಾರೆ. ಹಿಂದೆ ಎಬಿವಿಪಿ ಇಂದಿನಷ್ಟು ಕೆಟ್ಟದ್ದಾಗಿರಲಿಲ್ಲ. ಹಿಂದೂ, ಮುಸ್ಲಿಂ ಅಂತಾ ಇವತ್ತು ತಂದಿಟ್ಟಿದ್ದಾರೆ. ಗೋಲ್ವಾಲ್ಕರ್ ಬಂಚ್ ಆಫ್ ಥಾಟ್ಸ್ ಬರೆದಿದ್ದರು. ಅದರಲ್ಲಿ ಹಿಂದೂ, ಜಾತಿಯ ಬಗ್ಗೆ ಬರೆದಿದ್ದರು. ಚಿಂತನಗಂಗಾದಲ್ಲಿ 175ನೇ ಪೇಜ್‌ನಲ್ಲಿದೆ. ಅದರಲ್ಲಿ ದ್ವೇಷದ ಬಗ್ಗೆ ಉಲ್ಲೇಖಿಸಿದ್ದಾರೆ. ಕ್ರಿಶ್ಚಿಯನ್, ಮುಸ್ಲಿಮರ ಬಗ್ಗೆ ದ್ವೇಷ ಸಾಧಿಸಿದ್ದರು. ಸ್ವಾತಂತ್ರಕ್ಕಾಗಿ ಪ್ರಾಣಕೊಟ್ಟವರು ಅಲ್ಪಸಂಖ್ಯಾತರು, ಮುಸ್ಲಿಮರು, ಸಿಖ್ಖರು ಹೆಚ್ಚು ತ್ಯಾಗ ಮಾಡಿದ್ದವರು. ನಾವು ಸಾಫ್ಟ್ ಹಿಂದುತ್ವವಾದಿಗಳಲ್ಲ. ನಾವು ಹಿಂದೂಗಳೇ, ಆದರೆ ಹಿಂದುತ್ವವಾದಿಗಳಲ್ಲ. 10 ವರ್ಷ ಆಯ್ತು ಆಯೋಗ್ಯರು ಅಧಿಕಾರದಲ್ಲಿ ಕುಳಿತು. ಸುಭಾಷ್ ಚಂದ್ರಬೋಸ್ ಸಾವಿನ ತನಿಖೆ ಮಾಡಲಿಲ್ಲ. ಸುಭಾಷ್ ಚಂದ್ರರು, ಶಾಸ್ತ್ರಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಾನು ಹೇಳುವುದು ಸಾಕಷ್ಟಿದೆ. ಈಗ ಮಾತನಾಡಿದರೆ ಚುನಾವಣೆ ಮೇಲೆ ಎಫೆಕ್ಟ್ ಆಗಬಹುದು. ಹಾಗಾಗಿ ಮುಂದೆ ಮಾತನಾಡ್ತೇನೆ ಎಂದರು.

ದೇಶ

“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.

ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.

ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

ದೇಶ

16 ವರ್ಷದ ಸೂಪರ್‌ಹಿಟ್ ಜೋಡಿಗೆ ಭವ್ಯ ಗೌರವ: ‘ಕ್ರೇಜಿ-ಬ್ರಹ್ಮ’ ಕಾರ್ಯಕ್ರಮ

Published

on

ಬೆಂಗಳೂರು: ಕನ್ನಡ ಚಿತ್ರರಂಗದ ಅದ್ಭುತ ಜೋಡಿಯಾದ V. Ravichandran ಹಾಗೂ Hamsalekha ಅವರ ಸಿನಿ ಪಯಣವನ್ನು ಸಂಭ್ರಮಿಸುವ ಸಲುವಾಗಿ ಮೇ 30ರಂದು ‘ಕ್ರೇಜಿ-ಬ್ರಹ್ಮ’ ರೀಯೂನಿಯನ್ ಮೆಗಾ ಈವೆಂಟ್ ಆಯೋಜಿಸಲಾಗಿದೆ.

ಕೆಂಗೇರಿ ಬಳಿಯ ಜೆ.ಕೆ. ಗ್ರ್ಯಾಂಡ್ ಅರೆನಾದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆಯಿದೆ. ಪ್ರಸ್ತುತ್ ಇನ್ನೋವೇಟಿವ್ ಕ್ರಿಯೇಷನ್ಸ್ ಮತ್ತು ಸೊಲ್ಯೂಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ಹಾಗೂ ಕಲಾಲೂಹ ಸಂಸ್ಥಾಪಕಿ ಡಾ. ಚೇತನಾ ಆರ್.ಎಸ್. ಈ ಅದ್ಧೂರಿ ಸಮಾರಂಭವನ್ನು ಆಯೋಜಿಸಿದ್ದಾರೆ.

1980 ಮತ್ತು 90ರ ದಶಕದಲ್ಲಿ ರವಿಚಂದ್ರನ್ ನಟನೆಯ ಹಾಗೂ ನಿರ್ದೇಶನದ ಸಿನಿಮಾಗಳಿಗೆ ಹಂಸಲೇಖ ಸಂಗೀತ ನೀಡಿದ್ದ ಹಾಡುಗಳು ಭಾರೀ ಜನಪ್ರಿಯತೆ ಪಡೆದಿದ್ದವು. ಸುಮಾರು 16 ವರ್ಷಗಳ ಕಾಲ ಈ ಜೋಡಿ ಕನ್ನಡ ಸಿನಿರಂಗದಲ್ಲಿ ಅಚ್ಚಳಿಯದ ಗುರುತು ಮೂಡಿಸಿತ್ತು.

ಕಾರ್ಯಕ್ರಮಕ್ಕೆ ಸಾಮಾನ್ಯ ಹಾಗೂ ವಿ.ಐ.ಪಿ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬುಕ್ ಮೈ ಶೋ ಮೂಲಕ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ಪಾರ್ಕಿಂಗ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಮಾರಂಭದ ಕುರಿತು ಮಾತನಾಡಿದ ಹಂಸಲೇಖ, “ಇದು ಎಲ್ಲರಿಗೂ ಒಂದು ಈವೆಂಟ್ ಆಗಿರಬಹುದು. ಆದರೆ ನಮ್ಮಿಬ್ಬರಿಗೆ ಇದೊಂದು ವಿಶೇಷ ವಿದ್ಯಮಾನ. ರವಿಚಂದ್ರನ್ ಅವರ ಕಟೌಟ್ ನೋಡಿ ತುಂಬಾ ಖುಷಿಯಾಯಿತು. ಪಕ್ಕದಲ್ಲೇ ನನ್ನ ಕಟೌಟ್ ಕೂಡ ಹಾಕಿದ್ದಾರೆ. ಕಾರ್ಯಕ್ರಮ ಇನ್ನೂ ಅದ್ಭುತವಾಗಿರುತ್ತದೆ” ಎಂದು ಹೇಳಿದರು.

ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, “ನನ್ನ ಹಾಗೂ ಹಂಸಲೇಖ ಅವರ ಕಾಂಬಿನೇಶನ್‌ನಲ್ಲಿ ನೂರಾರು ಸೂಪರ್ ಹಿಟ್ ಹಾಡುಗಳು ಬಂದಿವೆ. ‘ಪ್ರೇಮಲೋಕ’ದಿಂದ ಆರಂಭವಾದ ನಮ್ಮ ಜೋಡಿ ಇಂದಿಗೂ ಜನಮನದಲ್ಲಿ ಜೀವಂತವಾಗಿದೆ. ನಾವು ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡದೇ ಇರಬಹುದು. ಆದರೆ ನನ್ನ ಮನಸ್ಸಿನಲ್ಲಿ ಅವರು, ಅವರ ಮನಸ್ಸಿನಲ್ಲಿ ನಾನು ಸದಾ ಇರುತ್ತೇವೆ. ಒಂದೇ ದೇಹ ಎರಡು ಜೀವ ಇದ್ದ ಹಾಗೆ” ಎಂದು ಭಾವುಕರಾದರು.

ಇದೇ ವೇಳೆ, ಮೇ 30ರಂದು ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಶಾಲು, ಕೇಕ್ ಹಾಗೂ ಹಾರಗಳನ್ನು ತರಬಾರದು ಎಂದು ರವಿಚಂದ್ರನ್ ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ರವಿಚಂದ್ರನ್ ಮತ್ತು ಹಂಸಲೇಖ ಅವರ 80 ಅಡಿ ಕಟೌಟ್‌ಗಳನ್ನು ಅನಾವರಣಗೊಳಿಸಲಾಗಿದೆ.

Continue Reading

Trending