Connect with us

ಬೆಂಗಳೂರು

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರು: ”ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಳು ಮಾಡುವ ಹುನ್ನಾರ ನಡೆದಿದೆ. ಸಿ.ಪಿ.ಯೋಗೇಶ್ವರ್ ಅವರು ಮೇಲೆ ಇದ್ದಾರೆ. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ” ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಸಂಜೆ ಮಂಡ್ಯ ಜಿಲ್ಲೆಯಿಂದ ಮರಳಿದ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ಯೋಗೇಶ್ವರ್​​ಗೆ ಜೆಡಿಎಸ್ ಚಿಹ್ನೆ ಅಡಿ ನಿಲ್ಲಿಸಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿ, ”ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಬೇರೆ ಬೇರೆ ಪಕ್ಷಗಳ ಮುಖಂಡರ ಜೊತೆ, ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆಯೂ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠರು ಗಮನಿಸುತ್ತಿದ್ದಾರೆ” ಎಂದು ಹೇಳಿದರು.

ಇನ್ನೂ ನಿರ್ಧಾರ ಮಾಡಿಲ್ಲ: ”ಚನ್ನಪಟ್ಟಣ ವಿಚಾರವಾಗಿ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈಗಾಗಲೇ ಬಿಜೆಪಿ ವರಿಷ್ಠ ನಾಯಕರೇ ಹಲವು ಬಾರಿ ಹೇಳಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆ ನೀವೇ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರ ಎನ್ನುವುದು ಅವರಿಗೆ ಗೊತ್ತಿದೆ. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣದಲ್ಲಿ ನಾವು ಘೋಷಣೆ ಮಾಡುತ್ತೇವೆ. ಚನ್ನಪಟ್ಟಣ ವಿಚಾರದಲ್ಲಿ ಇನ್ನೂ ನಾವು ಯಾವುದೇ ನಿರ್ಧಾರ ಮಾಡಿಲ್ಲ” ಎಂದರು.

ನನ್ನ ವರ್ಚಸ್ಸು ಕುಗ್ಗಿಸುವ ಹುನ್ನಾರ: ”ಕಾಂಗ್ರೆಸ್ ನಾಯಕರಲ್ಲಿ ಏನಾದರೂ ಮಾಡಿ ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸಬೇಕು ಅನ್ನುವುದು ಕೆಲವರ ಉದ್ದೇಶ. ನಾನು ಎಲ್ಲಾ ಬಿಜೆಪಿ ನಾಯಕರ ಬಗ್ಗೆ ಹೀಗೆ ಹೇಳುತ್ತಿಲ್ಲ. ಕೆಲವರಿಗೆ ಈ ಮೈತ್ರಿಯನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತಿದೆ” ಎಂದು ದೂರಿದರು.

”ಮೈತ್ರಿಯನ್ನು ಹಾಳು ಮಾಡಲು ಕೆಲವರು ಹೀಗೆ ಮಾಡುತ್ತಿರಬಹುದು. ನನ್ನ ಗಮನಕ್ಕೂ ಹಲವಾರು ವಿಚಾರಗಳು ಬರುತ್ತಿವೆ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿಯನ್ನು ಈಗಾಗಲೇ ಎರಡು ಬಾರಿ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಅವರು ಏತಕ್ಕೆ ಭೇಟಿ ಮಾಡಿದ್ದರು ಎಂಬುದು ನನಗೆ ಬೇಕಿಲ್ಲ” ಎಂದು ಹೇಳಿದರು.

ಬಿಜೆಪಿಯ ಕೆಲವರು ಕಾಂಗ್ರೆಸ್ ಜೊತೆ ಶಾಮೀಲು: ”ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ, ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ – ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ” ಎಂದು ಕುಮಾರಸ್ವಾಮಿ ಕಿಡಿಕಾರಿದರು.

”ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜೊತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರೊಂದಿಗೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ?” ಎಂದು ಪ್ರಶ್ನಿಸಿದರು.

ಇಂತಹ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ‌ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ” ಎಂದರು.

ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ: ನಿಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ”ಇಲ್ಲಿವರೆಗೂ ಎಲ್ಲೂ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂದು ನಾನು ಹೇಳಿಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ನೂರು ಬಾರಿ ಹೇಳಿದ್ದಾರೆ. ಚುನಾವಣೆಯಲ್ಲಿ ನಿಲ್ಲಲ್ಲ.. ಇನ್ನು ಮೂರು ವರ್ಷ ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೆ ಎಂದು ನಾನೇನಾದರೂ ಹೇಳಿದ್ದೀನಾ? ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಎಂದು ನಾನು ಹೇಳಿರುವುದು. ಅದು ಬಿಜೆಪಿಯಿಂದ ಅಥವಾ ಜೆಡಿಎಸ್​ನಿಂದ ಆದರೂ ಆಗಬಹುದು ಅಂತ ಅಷ್ಟೇ. ಅಭ್ಯರ್ಥಿ ನಿಲ್ಲಿಸಲೇಬೇಕಲ್ವಾ? ಪಲಾಯನ ಮಾಡೋಕಾಗುತ್ತಾ?” ಎಂದು ಪ್ರತಿಕ್ರಿಯಿಸಿದರು.

”ಯಾವುದೇ ಕಾರಣಕ್ಕೂ ಕಾಂಗ್ರೆಸ್ ಇಲ್ಲಿ ಲಾಭ ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲಯುತವಾಗಿಲ್ಲ. ಆ ಪಕ್ಷಕ್ಕೆ ಅಲ್ಲಿ ಕಾರ್ಯಕರ್ತರ ಪಡೆಯೇ ಇಲ್ಲ. ಹಣದ ಮುಖಾಂತರ ಅಧಿಕಾರದ ದುರುಪಯೋಗದ ಮೂಲಕ ರಾಜಕಾರಣ ಮಾಡಬೇಕು ಅಷ್ಟೆ. ಕಳೆದ 25 ವರ್ಷಗಳಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಈಗ ಕಾಂಗ್ರೆಸ್​​ನ ಕುತಂತ್ರಕ್ಕೆ ಕೆಲವರು ಬಲಿಯಾಗಲು ಹೊರಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

Trending