Connect with us

ದೇಶ

ಮದುವೆ ವಯಸ್ಸಲ್ಲಿ ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಪದವೀಧರ ಯುವತಿಯರು!

ದಾವಣಗೆರೆ: ಈ ಕಾಲದಲ್ಲಿ ಮದುವೆ ಬಗ್ಗೆ ಕನಸು ಕಾಣುವ ಯುವತಿಯರ ಬದಲಿಗೆ, ಸ್ವಲ್ಪ ಡಿಫರೆಂಟ್​ ಎಂಬಂತೆ ಇಲ್ಲಿ ಇಬ್ಬರು ಜೈನ್ ಸಮುದಾಯದ ಯುವತಿಯರು ಸನ್ಯಾಸತ್ವ ಪಡೆಯಲು ಮುಂದಾಗಿದ್ದಾರೆ.

ದಾವಣಗೆರೆಯ 26 ವರ್ಷದ ಮಾನಸಿ ಕುಮಾರಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್​ನ ಮುಮುಕ್ಷ ಭಕ್ತಿ ಕುಮಾರಿ ಕುಟುಂಬ, ಆಸ್ತಿ, ಸಂಪತ್ತು ತ್ಯಜಿಸಿ ಸನ್ಯಾಸತ್ವಕ್ಕೆ ಮುಂದಾಗಿದ್ದಾರೆ. ಮದುಮಗಳಂತೆ ಇಬ್ಬರೂ ಚಿನ್ನಾಭರಣ ಧರಿಸಿ ತಯಾರಾಗಿದ್ದರು. ಇವರಿಗೆ ವಿಶೇಷವಾಗಿ ಮೆರವಣಿಗೆ ಮಾಡಿ ಸನ್ಯಾಸತ್ವದ ಕಾರ್ಯಕ್ರಮ ಕೂಡ ಮಾಡಲಾಯಿತು. ಸನ್ಯಾಸತ್ವ ಕಾರ್ಯಕ್ರಮದಲ್ಲಿ ರುಚಿ ರುಚಿಯಾದ ಊಟ ಕೂಡ ಹಾಕಿಸಲಾಯಿತು.

ಮಹಾವೀರರ ಸಂದೇಶಕ್ಕೆ ಮನಸೋತು ಸನ್ಯಾಸತ್ವ: ಹೌದು ಜೈನ ಧರ್ಮದ 24ನೇ ಅಂದರೇ ಕೊನೆಯ ತೀರ್ಥಂಕರರಾಗಿರುವ ಭಗವಾನ್ ಮಹಾವೀರ್​​ ಅವರು ಅಹಿಂಸ ಪರಮೋಧರ್ಮ ಸಂದೇಶ ಕೇಳಿ ಈ ಇಬ್ಬರು ಯುವತಿಯರು ಸನ್ಯಾಸತ್ವಕ್ಕೆ ಮುಂದಾಗಿದ್ದಾರೆ. ಅಹಿಂಸಾ ಜೀವನ ಪ್ರಯೋಗ ಮಾಡಲು ಹೋಗಿ ಮನಸೋತು ಈ ಸನ್ಯಾಸತ್ವ ದೀಕ್ಷೆಗೆ ಮುಂದಾಗಿದ್ದೇನೆ ಎಂದು ಮಾನಸಿ ಕುಮಾರಿ ಹೇಳಿಕೊಂಡಿದ್ದಾರೆ.

ಪದವೀಧರರಾಗಿರುವ ಯುವತಿಯರು: ಸನ್ಯಾಸತ್ವಕ್ಕೆ ಮುಂದಾಗಿರುವ ಯುವತಿಯರು ಜೈನ​ ಸಮುದಾಯದವರಾಗಿದ್ದು, ಉನ್ನತ ಪದವೀಧರರಾಗಿದ್ದಾರೆ. ಯುವತಿ ಮಾನಸಿ ಕುಮಾರಿ ಮಾಸ್ಟರ್​ ಆಫ್ ಸೈಕಾಲಜಿ ಪದವೀಧರೆ. ಗೋಕಾಕ್ ಮೂಲದ ಮುಮುಕ್ಷ ಭಕ್ತಿ ಕುಮಾರಿ ಬಿಎ, ಎಲ್ಎಲ್ ಬಿ ಪದವೀಧರೆ. ಆದರೂ ತಮ್ಮ ಆಸ್ತಿ ಪಾಸ್ತಿ, ಸಂಪತ್ತು ಅಲ್ಲದೆ, ಇಡೀ ಕುಟುಂಬವನ್ನು ತ್ಯಜಿಸಿ ಈ ನಿರ್ಧಾರ ಮಾಡಿದ್ದಾರೆ. ‌ಮುಂದಿನ ತಿಂಗಳು 17ರಂದು ಜಾರ್ಖಂಡ್ ರುಜುಬಾಲಿಕ ಎಂಬಲ್ಲಿ ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ನಡೆಸಲಾಗಿದೆ.‌

ಯುವತಿಯರಿಗೆ ದಾವಣಗೆರೆಯಲ್ಲಿ ಅದ್ಧೂರಿ ಮೆರವಣಿಗೆ‌: ಸನ್ಯಾಸತ್ವ ಸ್ವೀಕರಿಸಲು ಮುಂದಾಗಿರುವ ಯುವತಿಯರಿಗೆ ದಾವಣಗೆರೆಯಲ್ಲಿ ಅದ್ಧೂರಿ ಮೆರವಣಿಗೆ ಕೂಡ ಮಾಡಲಾಯಿತು. ಇಬ್ಬರು ಕುಟುಂಬಸ್ಥರು ಹಾಗೂ ಜೈನ ಸಮುದಾಯದಿಂದ ಔತಣ ಕೂಟ ಆಯೋಜಿಸಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆಯ ಪ್ರಮುಖ ಬೀದಿಗಳಲ್ಲಿ ಯುವತಿಯರ ಮೆರವಣಿಗೆ ಮಾಡಲಾಗಿದ್ದು, ಯುವತಿಯರ ದೀಕ್ಷಾ ಮೆರವಣಿಗೆಯಲ್ಲಿ ಜೈನ ಸಮಾಜದ ಬಂಧುಗಳು ಕುಟುಂಬಸ್ಥರು ಭಾಗಿಯಾಗಿದ್ದರು.‌

ದಾವಣಗೆರೆಯಲ್ಲಿ ಒಟ್ಟು 64 ಜನ ಯುವತಿಯರು – ಯುವಕರು ಸನ್ಯಾಸ ಧೀಕ್ಷೆ: ದಾವಣಗೆರೆಯಲ್ಲಿ ಜೈನ ಸನ್ಯಾಸದತ್ತ ಯುವಕ, ಯುವತಿಯರು ಹೆಚ್ಚು ಆಸಕ್ತರಾಗಿದ್ದಾರೆ. ಇದುವರೆಗೆ ದಾವಣಗೆರೆಯಲ್ಲಿ‌ ಒಟ್ಟು 64 ಜನ ಯುವತಿ, ಯುವಕರು ಸನ್ಯಾಸ ಧೀಕ್ಷೆ ಪಡೆದು ಸನ್ಯಾಸಿ ಜೀವನದಲ್ಲಿ ಮಗ್ನರಾಗಿದ್ದಾರೆ.‌

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending