Connect with us

ಬೆಂಗಳೂರು

ಚನ್ನಪಟ್ಟಣ ಉಪ ಚುನಾವಣೆ: ‘ಸೈನಿಕ’ನ ‘ಚಕ್ರವ್ಯೂಹ’ ಭೇದಿಸುತ್ತಾರಾ ನಿಖಿಲ್ ಕುಮಾರಸ್ವಾಮಿ?

ಬೆಂಗಳೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಗಿದೆ. 36 ವರ್ಷದ ನಿಖಿಲ್ ಅವರು ಕಾಂಗ್ರೆಸ್‌ನ ಮಾಜಿ ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಸೆಣೆಸಾಡಲಿದ್ದಾರೆ. ಯೋಗೇಶ್ವರ್ ಅವರು ಈ ವಾರದ ಆರಂಭದಲ್ಲಿ ಬಿಜೆಪಿ ಎಂಎಲ್ ಸಿಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು.

ಮೈತ್ರಿಕೂಟದ ಪಾಲುದಾರರಾದ ಜೆಡಿಎಸ್ ಮತ್ತು ಬಿಜೆಪಿ ಸರಣಿ ಸಭೆ ನಡೆಸಿದ ನಂತರ ಅಳೆದು-ತೂಗಿ ಜೆಡಿಎಸ್ ಯುವ ಘಟಕದ ಮುಖ್ಯಸ್ಥ ನಿಖಿಲ್ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ನೂರಕ್ಕೆ ನೂರರಷ್ಟು ನಿಖಿಲ್ ಗೆಲ್ಲುತ್ತಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಉಭಯ ಪಕ್ಷಗಳ ನಾಯಕರ ಜತೆ ಚರ್ಚೆ ನಡೆಸಿದ ಬಳಿಕ ಯಡಿಯೂರಪ್ಪ ನಿಖಿಲ್ ಕುಮಾರ ಸ್ವಾಮಿಯನ್ನು ಚನ್ನಪಟ್ಟಣ ಅಭ್ಯರ್ಥಿ ಎಂದು ಘೋಷಿಸಿದರು.

ಬಿಜೆಪಿ ಮತ್ತು ಜೆಡಿಎಸ್‌ನ ಎಲ್ಲಾ ಪ್ರಮುಖ ನಾಯಕರು ಒಟ್ಟಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬದಲಾದ ಯೋಗೇಶ್ವರ ಅವರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಪಕ್ಷಾಂತರಿಗಳ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ಜೆಡಿಎಸ್ ಚನ್ನಪಟ್ಟಣ ಮುಖಂಡರ ಮತ್ತು ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ನಿಖಿಲ್ ಸ್ಪರ್ಧಿಸಲು ಬಯಸಿರಲಿಲ್ಲ,ಪಕ್ಷದ ಕಾರ್ಯಕರ್ತನನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕೆಂದು ಬಯಸಿದ್ದರು. ಆದರೆ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಅಭ್ಯರ್ಥಿಯಾಗಬೇಕೆಂದು ಒತ್ತಡ ಹೇರುತ್ತಿದ್ದರು ಹೀಗಾಗಿ ಅಭ್ಯರ್ಥಿಯಾಗಲು ನಿಖಿಲ್ ಮುಂದಾದರು. ಶುಕ್ರವಾರ ನಿಖಿಲ್ ನಾಮಪತ್ರ ಸಲ್ಲಿಸಲಿರುವ ಕಾರಣ ನಾನು ಚನ್ನಪಟ್ಟಣಕ್ಕೆ ಹೋಗುತ್ತೇನೆ ಮತ್ತು ಅಲ್ಲಿಯೇ ಬೀಡು ಬಿಟ್ಟು ವಿಸ್ತೃತ ಪ್ರಚಾರ ಮಾಡುತ್ತೇನೆ ಎಂದು ದೇವೇಗೌಡ ಹೇಳಿದರು.

ತಮ್ಮ ಭಾವ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಯೋಗೇಶ್ವರ್ ಅವರನ್ನು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಆಫರ್ ನೀಡಿದ್ದರು ಎಂದು ಕುಮಾರಸ್ವಾಮಿ ಸಮರ್ಥಿಸಿಕೊಂಡರು, ಸೀಟು ಬಿಟ್ಟುಕೊಡಲು ನಾನು ಸಿದ್ಧನಾಗಿದ್ದೆ ಎಂದು ಹೇಳಿದರು. “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಅಭ್ಯರ್ಥಿಯ ಗೆಲುವು ಹೆಚ್ಚು ಮಹತ್ವದ್ದಾಗಿರುವುದರಿಂದ ಟಿಕೆಟ್ ವಿಷಯವು ಈಗ ಅಪ್ರಸ್ತುತವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಸೇರಿದಂತೆ ಬಿಜೆಪಿ ನಾಯಕರು ಚನ್ನಪಟ್ಟಣದಿಂದ ನಿಖಿಲ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. “ನಿಖಿಲ್ ಅವರ ಕಡೆ ಸಹಾನುಭೂತಿಯ ಅಂಶವಿದೆ ಎಂದು ಅಶೋಕ್ ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

Trending