Connect with us

ಬೆಂಗಳೂರು

ಕುಮಾರಸ್ವಾಮಿಯ ಕಣ್ಣೀರಿನ ನಾಟಕ ಶುರುವಾಗುತ್ತೆ- ಡಿ ಕೆ ಸುರೇಶ್ ವ್ಯಂಗ್ಯ

ಬೆಂಗಳೂರು: ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು ಇನ್ಮುಂದೆ ಕುಮಾರಸ್ವಾಮಿ ಅವರಿಂದ ಕಣ್ಣೀರು ನಾಟಕ ಪ್ರಾರಂಭವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು,
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾಟಕ ಮಾಡಿ ನಿಖಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂಬ ಮಾಧ್ಯಮದವರು ಪ್ರಶ್ನೆಗೆ ಅದನ್ನಯ ಮಾಧ್ಯಮದವರೇ ಹೇಳಬೇಕು, ಸದ್ಯದಲ್ಲೇ ನಟಕ ಪ್ರಾರಂಭವಾಗುತ್ತದೆ ನೋಡಿ ಎಂದರು, ಅವರಿಗೆ ಕಣ್ಣೀರು ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೂ ಹಾಕುತ್ತಾರೆ ಎಂದು ಕಿಚಾಯಿಸಿದರು,
ನಿಖಿಲ್ ಅವರಿಗೆ ಚನ್ನಪಟ್ಟಣ ಟೆಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು, ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ, ಇದರ ಮುಂದುವರಿದ ಭಾಗವಿದು, ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದ ಸತ್ಯ ಕಾರ್ಯಕರ್ತರ ಒತ್ತಡದಿಂದ ನಿಖಿಲ್ ಗೆ ಟಿಕೆಟ್ ನೀಡಲಾಗಿದೆ ಎಂಬ ಮಾತು ಸುಳ್ಳು ಎಲ್ಲವೂ ಕುಮಾರಸ್ವಾಮಿಯವರೇ ತೀರ್ಮಾನ ಮಾಡುವುದು, ಸುಮ್ಮನೆ ಬೆಂಬಲಿಗರ ಒತ್ತಡ ಎಂದು ಹೇಳುತ್ತಾರೆ ಎಂದರು,

ದೇಶ

ರುಚಿಯ ಜೊತೆಗೆ ಆರೋಗ್ಯದ ಖಜಾನೆ ಈ ನೇರಲೆ!

ಇಂಡಿಯನ್ ಬ್ಲ್ಯಾಕ್ ಬೆರ್ರಿ ಅಥವಾ ಜಾಮೂನ್ ಈ ನಮ್ಮ ನೇರಲೆ. ಈ ಋತುವಿನಲ್ಲಿ ನೇರಳೆ ಹಣ್ಣು ಮಾರುಕಟ್ಟೆಯಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಇವುಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಅವು ಟೇಸ್ಟಿ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ನೇರಳೆ ಹಣ್ಣು ಮಾತ್ರವಲ್ಲ ಅದರ ಎಲೆಗಳು ವಿವಿಧ ರೋಗಗಳನ್ನು ಸಹ ಗುಣಪಡಿಸುತ್ತವೆ.ಅನೇಕ ಆರೋಗ್ಯ ಪ್ರಯೋಜನಗಳ ಹೊರತಾಗಿಯೂ, ನೇರಳೆ ಹಣ್ಣು ಕೆಲವು ಅಡ್ಡ ಪರಿಣಾಮಗಳನ್ನು ಹೊಂದಿದೆ. ಅಡ್ಡಪರಿಣಾಮಗಳು ಎಲ್ಲಾ ವರ್ಗದ ಜನರ ಮೇಲೆ ಪರಿಣಾಮ ಬೀರುವುದಿಲ್ಲ. ಕೆಲವು ಆರೋಗ್ಯ ಸಮಸ್ಯೆಗಳಿರುವವರು ಮಾತ್ರ ನೇರಳೆ ಹಣ್ಣು‌ಗಳನ್ನು ಮಿತವಾಗಿ ಸೇವಿಸಬೇಕು ಅಥವಾ ಸಂಪೂರ್ಣವಾಗಿ ತ್ಯಜಿಸಬೇಕು.
ಆಯುರ್ವೇದ ವೈದ್ಯರು ಜಾಮೂನ್‌ನ ಆಯುರ್ವೇದ ಗುಣಲಕ್ಷಣಗಳನ್ನು ಮತ್ತು ಅದನ್ನು ತಿನ್ನುವ ಪ್ರಯೋಜನಗಳನ್ನು ಹಂಚಿಕೊಂಡಿದ್ದಾರೆ. ಐಬಿಎಸ್, ಅತಿಸಾರ, ಅತಿಯಾದ ರಕ್ತಸ್ರಾವ , ಲ್ಯುಕೋರಿಯಾ , ವಾಕರಿಕೆ ಮತ್ತು ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ನೇರಳೆ ಹಣ್ಣು ಅಮೃತವಾಗಿದೆ.
ಹೃದಯದ ಆರೋಗ್ಯಕ್ಕೂ ಒಳ್ಳೆಯದು ಜೊತೆಗೆ ಮಧುಮೇಹಿಗಳಿಗೂ ಈ ಹಣ್ಣು ಬಹಳ ಪ್ರಯೋಜನಕಾರಿಯಾಗಿದೆ. ನೇರಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ತಿಳಿದ ನಂತರ ಅನೇಕ ಜನರು ಅದನ್ನು ಅತಿಯಾಗಿ ಸೇವಿಸಲು ಪ್ರಾರಂಭಿಸುತ್ತಾರೆ. ಆದರೆ ಹಾಗೆ ಮಾಡುವುದು ಅಪಾಯಕಾರಿಯಾಗಬಹುದು.
ಮಲಬದ್ಧತೆ ನೇರಳೆ ಹಣ್ಣು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಮಲಬದ್ಧತೆ ಉಂಟಾಗುತ್ತದೆ. ಆದ್ದರಿಂದ, ಮಲಬದ್ಧತೆಯಿಂದ ಬಳಲುತ್ತಿರುವ ಜನರು ಹೆಚ್ಚು ದೂರವಿದ್ದರೆ ಉತ್ತಮ.
ಚರ್ಮದ ಸಮಸ್ಯೆಗಳಿಂದ ಬಳಲುತ್ತಿರುವ ಜನರು: ನಿಮ್ಮ ಮುಖದ ಮೇಲೆ ಮೊಡವೆ ಅಥವಾ ಚರ್ಮದ ಗಡ್ಡೆಗಳಂತಹ ಸಮಸ್ಯೆಗಳಿದ್ದರೆ ನೇರಳೆ ಹಣ್ಣುಗಳನ್ನು ತಪ್ಪಿಸಿ. ಇವುಗಳನ್ನು ಅತಿಯಾಗಿ ತಿನ್ನುವುದರಿಂದ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು.ರಕ್ತದಲ್ಲಿನ ಸಕ್ಕರೆ ಕೊರತೆ ನೇರಳೆ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ನೀವು ಮಧುಮೇಹದಿಂದ ಬಳಲುತ್ತಿದ್ದರೆ. ನೀವು ಹೆಚ್ಚು ನೇರಳೆ ಹಣ್ಣು ತಿನ್ನಬಾರದು. ಹೆಚ್ಚು ನೇರಳೆ ಹಣ್ಣು ತಿನ್ನುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕುಸಿಯಬಹುದು.
ನೇರಳೆ ಹಣ್ಣನ್ನು ಮಾತ್ರವಲ್ಲದೆ ಅದರ ಬೀಜಗಳು, ತೊಗಟೆ ಮತ್ತು ಎಲೆಗಳನ್ನು ವಿವಿಧ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇಡೀ ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಫ್ಲೇವನಾಯ್ಡ್‌ಗಳ ಜೊತೆಗೆ ಜಾಮೂನ್ ಉತ್ಕರ್ಷಣ ನಿರೋಧಕಗಳ ಶ್ರೀಮಂತ ಮೂಲವಾಗಿದೆ.
ಆಯುರ್ವೇದದ ಪ್ರಕಾರ ಜಾಮೂನ್ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದಲ್ಲದೆ, ಈ ಹಣ್ಣನ್ನು ತಿಂದ ನಂತರ ಮತ್ತು ಮೊದಲು ಕನಿಷ್ಠ ಒಂದು ಗಂಟೆಯವರೆಗೆ ಹಾಲನ್ನು ಕುಡಿಯಬಾರದು. ಒಂದು ವೇಳೆ ಹಾಗೆ ಮಾಡಿದರೆ ಪ್ರಯೋಜನಗಳ ಬದಲಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

Continue Reading

ಬೆಂಗಳೂರು

ಇನ್ನು ಮುಂದೆ ತುಮಕೂರು ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್

ತುಮಕೂರು: ತುಮಕೂರು ಜಿಲ್ಲೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾರ್ಪಡಿಸುವ ಸಿದ್ಧತೆಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಖಚಿತಪಡಿಸಿದರು,
ತುಮಕೂರು ಜಿಲ್ಲೆ ಎಂದರೆ ಎಲ್ಲೋ ಇದೆ ಎಂಬ ಭಾವನೆ ಮೂಡುತ್ತದೆ, ಬೆಂಗಳೂರು ನಗರ ಈಗಾಗಲೇ ನೆಲಮಂಗಲದಿಂದ ಹೊರಕ್ಕೆ ಬೆಳವಣಿಗೆ ಕಂಡಿದೆ, ಅಲ್ಲಿಂದ 30 ಕಿಲೋ ಮೀಟರ್ ಬಂದರೆ ತುಮಕೂರು ತಲಪಬಹುದು, ಹಾಗಾಗಿ ನಗರ ವ್ಯಾಪ್ತಿ ವಿಸ್ತಾರ ಮಾಡಿದರೆ ಅನುಕೂಲವಾಗುತ್ತದೆ ಎಂದು ನುಡಿದರು, ಈಗಾಗಲೇ 14 ಗ್ರಾಮ ಪಂಚಾಯಿತಿಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಕಗೆ ಸೇರಿಸಲು ಪ್ರಸ್ತಾವ ಸಿದ್ಧಪಡಿಸಲಾಗಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ,

ಮುಂದಿನ ದಿನಗಳಲ್ಲಿ ತುಮಕೂರು ನಗರವೂ ತನ್ನ ವ್ಯಾಪ್ತಿಯನ್ನು ನಿಸ್ತರಿಸಿಕೊಳ್ಳಲಿದೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಒಳ್ಳೆಯ ಯೋಜನೆ ರೂಪಿಸಿದ್ದಾರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿದ್ದಾರೆ, ಈ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ, ಬೆಂಗಳೂರು ದಕ್ಷಿಣ ಎಂದ ತಕ್ಷಣ ಅದರ ಸ್ವರೂಪ ಬದಲಾಗುತ್ತದೆ, ಅದೇರೀತಿ ತುಮಕೂರು ಜಿಲ್ಲೆಯನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿ.ಪರಮೇಶ್ವರ್ ನುಡಿದಿದ್ದಾರೆ,

Continue Reading

ಬೆಂಗಳೂರು

ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ.​ 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ. ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.

ಅಲ್ಲದೇ ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ

Continue Reading

Trending