Connect with us

ದೇಶ

ಬೆಳಕಿನ ಹಬ್ಬ ದೀಪಾವಳಿ

Published

on

ದೀಪಾವಳಿ ಎಂದರೆ ಹೆಸರೇ ಹೇಳುವಂತೆ ಬೆಳಕಿನ ಹಬ್ಬ, ದೀಪಗಳ ಹಬ್ಬ. ದೀಪಾವಳಿ ಹಬ್ಬ ಐದು ದಿನಗಳು ಸಂಭ್ರಮದ ಸಡಗರದ ಹಬ್ಬ.ದೀಪಾವಳಿ ಹಬ್ಬದಂದು ಮನೆಯ ತುಂಬ ಮತ್ತು ಸುತ್ತ ಮುತ್ತಾ ಹಣತೆಗಳನ್ನು ಹಚ್ಚಿ ಅದರ ನಗುವಿನಲ್ಲಿ ಎಲ್ಲರೂ ನಗುತ್ತಾ ಸಂಭ್ರಮಿಸುವುದಾಗಿದೆ.
ದೀಪಯತಿ ಸ್ವಂ ಪರಚ ಇತಿ ದೀಪ: ಅಂದರೆ ತಾನು ಬೆಳಗಿ ಇತರರನ್ನು ಬೆಳಗಿಸುವ ಶಕ್ತಿ ಕೇವಲ ದೀಪಕ್ಕೆ ಮಾತ್ರವಿದೆ.
ʻʻತಮಸೋಮಾ ಜ್ಯೋತಿರ್ಗಮಯʻʻ ಎಂಬ ಅರ್ಥದಂತೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ದಿಕ್ಕಿಗೆ ನಮ್ಮನ್ನು ಕೊಂಡೊಯ್ಯುವುದೇ ದೀಪವಾಗಿದೆ.ಆಶ್ವಯುಜದ ಮಾಸದ ಕಡೇ ಮೂರು ದಿನಗಳು ಮತ್ತು ಕಾರ್ತಿಕ ಮಾಸದ ಆರಂಭದ ಎರಡು ದಿನಗಳ ಅದ್ಧೂರಿಯ ಆಚರಣೆಯೇ ದೀಪಾವಳಿ
ಮೊದಲನೆಯ ದಿನ: ನೀರು ತುಂಬುವ ಹಬ್ಬ
ದೀಪಾವಳಿ ಹಬ್ಬದ ಆರಂಭವಾಗುವುದೇ ಆಶ್ವಯುಜ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ದಿನದಂದು. ಹಳೆ ಮೈಸೂರು ಭಾಗದಲ್ಲಿ ಇದನ್ನು ನೀರು ತುಂಬುವ ಹಬ್ಬ ಎನ್ನುತ್ತಾರೆ. ಈ ದಿನದಂದು ಮನೆಯ ಹೆಂಗಳೆಯರು ತಮ್ಮ ಸ್ನಾನಗೃಹಗಳಲ್ಲಿ ಇರುವ ಹಂಡೆ, ಕೊಳಗಗಳನ್ನು ಚೆನ್ನಾಗಿ ಶುಭ್ರಗೊಳಿಸಿ ಅದಕ್ಕೆ ಸುದ್ದೇ ಮತ್ತು ಕೆಮ್ಮಣ್ಣುಗಳಿಂದ ಅಲಂಕರಿಸಿದರೆ, ಗಂಡು ಮಕ್ಕಳು ಸ್ನಾನಗೃಹದಲ್ಲಿ ಇರುವ ಎಲ್ಲಾ ಪಾತ್ರೆಗಳಿಗೂ ನೀರು ತುಂಬಿಸಿಡುತ್ತಾರೆ.
ಇನ್ನು ಉತ್ತರದ ಭಾರತಾದ್ಯಂತ ಈ ದಿನವನ್ನು ಧನ್ವಂತರಿ ತ್ರಯೋದಶಿ ಅಥವಾ ಧನ್ ತೆರಸ್ ಎಂದು ಕರೆಯಲಾಗುತ್ತದೆ. ಈ ದಿನ ಗುರು ಧನ್ವಂತರಿಯವರ ಹುಟ್ಟಿದ ದಿನವಾಗಿರುವುದರಿಂದ ವಿಶೇಷವಾಗಿ ಸಮೃದ್ಧಿ ಮತ್ತು ಬುದ್ಧಿಯ ಪ್ರತೀಕವಾದ ಲಕ್ಷ್ಮೀ ಮತ್ತು ಗಣೇಶನನ್ನು ಪೂಜಿಸಿ ಹೊಸ ಬಟ್ಟೆ, ಪಾತ್ರೆ, ಬಂಗಾರ, ಬೆಳ್ಳಿಯನ್ನು ಖರೀದಿಸಿದರೆ , ಜೀವನ ಸುಖಮಯವಾಗಿರುತ್ತದೆ ಎಂಬ ನಂಬಿಕೆಯಿದೆ.
ಎರಡನೇ ದಿನ: ನರಕ ಚತುರ್ದಶಿ
ದೀಪಾವಳಿಯ ಎರಡನೇ ದಿನವಾದ ನರಕ ಚತುರ್ದಶಿಯಂದು, ಶ್ರೀಕೃಷ್ಣ ಪರಮಾತ್ಮ ನರಕಾಸುರನನ್ನು ವಧಿಸಿ, ಜಗತ್ತನ್ನು ಕಾಪಾಡಿದ ದಿನವೆಂದು ಆಚರಿಸಲಾಗುತ್ತದೆ. ಹಿಂದಿನ ದಿನ ಸಿಂಗಾರಗೊಂಡ ಹಂಡೆಗಳಿಗೆ ಬೆಳಗಿನ ಜಾವವೇ ಉರಿ ಹಾಕಿ ನೀರನ್ನು ಕೊತ ಕೊತನೆ ಕುದಿಸಿ ಮನೆಯಲ್ಲಿ ಎಲ್ಲರಿರು ಅಭ್ಯಂಜನ ಮಾಡಿ ಬೆಳಗಿನ ಜಾವವೇ ಪಟಾಕಿಗಳನ್ನು ಮನೆಯ ಮುಂದೆ ಹೊಡೆಯುವುದರ ಮೂಲಕ ನೆರೆಹೊರೆಯವರೊಂದಿಗೆ ನರಕಾಸುರನನ್ನು ವಧಿಸಿ ಲೋಕವನ್ನು ಕಾಪಾಡಿದ ಶ್ರೀಕೃಷ್ಣನ ಸಾಹಸವನ್ನು ಕೊಂಡಾಡುತ್ತಾರೆ. ಇಂದಿನಿಂದ ಮನೆಯ ಮುಂದೆ ಮತ್ತು ಸುತ್ತ ಮುತ್ತ ಹಣತೆಗಳೊಂದಿಗೆ ದೀಪವನ್ನು ಬೆಳಗಿ ಬಂಧು ಮಿತ್ರರಿಗೆ ಉಡುಗೊರೆಗಳೊಂದಿಗೆ ಸಿಹಿಯನ್ನು ಹಂಚುತ್ತಾ ಸಂಭ್ರಮಿಸುತ್ತಾರೆ.
ಮೂರನೇ ದಿನ: ಅಮಾವಾಸ್ಯೆ
ಪಿತೃ ಪಕ್ಷದಲ್ಲಿ ಪಿತೃತರ್ಪಣ ಕೊಡಲು ಸಾಧ್ಯವಾಗದಿದ್ದವರು ಈ ದಿನ ತಮ್ಮ ಪಿತೃಗಳಿಗೆ ತರ್ಪಣ ಕೊಟ್ಟು ತಮ್ಮ ಪಿತೃ ಋಣವನ್ನು ತೀರಿಸಿಕೊಳ್ಳುತ್ತಾರೆ. ಈ ದಿನ ಬಹುತೇಕರ ಮನೆಗಳಲ್ಲಿ ಕಜ್ಜಾಯವನ್ನು ಮಾಡಿ ದೇವರ ನೈವೇದ್ಯ ಮಾಡಿದರೆ, ಯಥಾ ಪ್ರಕಾರ ಮಕ್ಕಳು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸುತ್ತಾರೆ.ಈ ಅಮವಾಸ್ಯೆ ಉತ್ತರ ಭಾರತೀಯರು ಅದರಲ್ಲೂ ವ್ಯಾಪಾರಿಗಳಿಗೆ ಬಹಳ ವೀಶೇಷ. ಅಂದಿನ ರಾತ್ರಿ ಮನೆಯಲ್ಲಿನ ದರಿದ್ರ ಲಕ್ಷ್ಮಿಯನ್ನು ಹೊರಹಾಕುವ ಉದ್ದೇಶದಿಂದ ಲಕ್ಷ್ಮೀ ಪೂಜೆಯನ್ನು ಮಾಡಿ, ತಮ್ಮ ಮನೆಯಲ್ಲಿ ಹಾಗೂ ತಮ್ಮ ಅಂಗಡಿಗಳಲ್ಲಿ ಲಕ್ಷ್ಮಿಯ ವಿಗ್ರಹವನ್ನಿಟ್ಟು ಅದಕ್ಕೆ ತಮ್ಮಲ್ಲಿದ್ದ ಎಲ್ಲಾ ರೀತಿಯ ಆಭರಣಗಳು ಮತ್ತು ಧನಕನಕಾದಿಗಳಿಂದ ಸಿಂಗರಿಸಿ ಪೂಜಿಸಿ ಬಗೆ ಬಗೆಯ ಸಿಹಿ ತಿಂಡಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಅನೇಕ ವ್ಯಾಪಾರಿಗಳು ತಮ್ಮ ವ್ಯವಹಾರದ ಲೆಕ್ಕ ಪತ್ರಗಳನ್ನು ಅಂದಿನಿಂದ ಪುನರಾರಂಭಿಸುವುದು ನಡೆದುಕೊಂಡು ಬಂದಿರುವುದು ವಾಡಿಕೆಯಾಗಿದೆ .
ಇದೇ ದಿನ ಶ್ರೀ ಕೃಷ್ಣನು ದೇಹತ್ಯಾಗ ಮಾಡಿದ ದಿನವೆಂದೂ ಮತ್ತು ತನ್ನ ಪರಮ ಶಿಷ್ಯ ನಚೀಕೇತನಿಗೆ ಆತ್ಮ ಸಾಕ್ಷಾತ್ಕಾರವಾದ ದಿನವೆಂದೂ ಪ್ರತೀತೆಯಲ್ಲಿದೆ.
ನಾಲ್ಕನೇ ದಿನ: ಬಲಿಪಾಡ್ಯಮಿ
ದೀಪಾವಳಿಯ ನಾಲ್ಕನೇ ದಿನವೇ ಬಲಿಪಾಡ್ಯಮಿ. ಪುರಾಣದ ಪ್ರಕಾರ ರಾಕ್ಷಸರ ರಾಜ ಬಲಿಯ ಉಪಟಳವನ್ನು ತಾಳಾಲಾರದೆ, ಭಗವಾನ್ ವಿಷ್ಣು ಪುಟ್ಟ ವಾಮನಾವತಾರದಲ್ಲಿ ಬಂದು ಮೂರು ಹೆಜ್ಜೆಗಳಷ್ಟು ಜಾಗವನ್ನು ಬೇಡಿ, ವಾಮನ ಮೂರ್ತಿ ಬೃಹದಾಕಾರವಾಗಿ ಒಂದು ಹೆಜ್ಜೆಯನ್ನು ಇಡೀ ಭೂಮಂಡಲದ ಮೇಲೂ ಮತ್ತೊಂದನ್ನು ಆಕಾಶದ ಮೇಲೆ ಇಟ್ಟು ಮೂರನೇಯದನ್ನು ಎಲ್ಲಿ ಇಡಲಿ? ಎಂದು ಬಲಿ ಚಕ್ರವರ್ತಿಯನ್ನೇ ಕೇಳಿದಾಗ, ಈತ ಸಾಮಾನ್ಯ ಬಾಲಕನಲ್ಲ. ಸಾಕ್ಷಾತ್ ಭಗವಂತನೇ ಈ ರೂಪದಲ್ಲಿ ಬಂದಿರುವುದನ್ನು ಅರಿತು, ಭಗವಂತನ ಲೀಲೆಯ ಪ್ರಕಾರವೇ ಎಲ್ಲವೂ ನಡೆಯಲಿ ಎಂಬ ಇಚ್ಛೆಯಿಂದ, ಮೂರನೇ ಹೆಜ್ಜೆಯನ್ನು ತನ್ನ ತಲೆಯ ಮೇಲೆ ಇಡಲು ಕೋರಿಕೊಳ್ಳುತ್ತಾನೆ. ಆಗ ಬೃಹದಾಕಾರದ ವಾಮನ ಬಲಿ ತಲೆಯಮೇಲೆ ಪಾದವನ್ನಿಟ್ಟು ಬಲಿಯನ್ನು ಪಾತಾಳ ಲೋಕ್ಕೆಕ್ಕೆ ತಳ್ಳಿದ ದಿನವಿದು. ರಾಕ್ಷಸ ರಾಜನಾದರೂ ವಿಷ್ಣುವಿನ ಪರಮ ಭಕ್ತನಾಗಿದ್ದ ಕಾರಣ, ಕಾರ್ತಿಕ ಮಾಸದ ಮೊದಲ ದಿನದಂದು ಮಾತ್ರವೇ ಪಾತಾಳ ಲೋಕದಿಂದ ಬಲಿ ಭೂಲೋಕಕ್ಕೆ ಬಂದು ತನ್ನ ಪ್ರಜೆಗಳ ಸುಖಃ ದುಃಖಗಳನ್ನು ವಿಚಾರಿಸಿ ರಾಜ್ಯವನ್ನಾಳುವ ವರವನ್ನು ಭಗವಾನ್ ವಿಷ್ಣು ಬಲಿ ಚಕ್ರವರ್ತಿಗೆ ದಯಪಾಲಿಸುತ್ತಾರೆ. ಅದರ ಪ್ರಯುಕ್ತವೇ ಜನರು ದೀಪಾವಳಿಯ ನಾಲ್ಕನೇಯ ದಿನದಂದು ಬಲಿಚಕ್ರವರ್ತಿಯನ್ನು ಪೂಜಿಸಿ ಮನೆ ಮನೆಗಳಲ್ಲಿ ದೀಪದಿಂದ ಅಲಂಕರಿಸಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸುತ್ತಾರೆ.
ಹಳೆಯ ಮೈಸೂರಿನ ಬಹುತೇಕ ಮನೆಗಳಲ್ಲಿ ಅಂದು ಗೋವಿನ ಸಗಣಿಯಿಂದ ದೇವರ ಮನೆಯಲ್ಲಿ ಬಲೀಂದ್ರನ ಕೋಟೆ ಕಟ್ಟಿ, ಅದರ ಮೇಲೆ ಕುಂಬಳ ಹೂವು, ಇಲ್ಲವೇ ಚೆಂಡು ಹೂವು, ಅಥವಾ ಹುಚ್ಚೆಳ್ಳು ಹೂವು ಅದೂ ಇಲ್ಲದಿದ್ದಲ್ಲಿ ಕಾಸ್ಮಾಲ್ಸು ಹೂವು. ಒಟ್ಟಿನಲ್ಲಿ ಕೇಸರೀ ಬಣ್ಣದ ಯಾವುದಾದರೂ ಹೂವಿನ ಅಲಂಕಾರದ ಜೊತೆ ರಾಗಿ ತೆನೆಯನ್ನು ಸಗಣಿ ಕೋಟೆಯ ಸುತ್ತಲೂ ಇರಿಸಿ ಪೂಜೆಮಾಡುವುದು ಸಂಪ್ರದಾಯವಾಗಿದೆ. ಪುರಾಣದ ಪ್ರಕಾರ ಇದೇ ದಿನ ಶ್ರೀ ಕೃಷ್ಣನು ತನ್ನ ಕಿರು ಬೆರಳಿನಲ್ಲಿ ಗೋವರ್ಧನಗಿರಿಯನ್ನು ಎತ್ತಿದ್ದಾಗಿ ನಂಬಿರುವುದರಿಂದ, ಈ ದಿನ ಗೋವಿನ ಪೂಜೆ ಹಾಗೂ ಗೋವರ್ಧನನ ಪೂಜೆಗೆ ಹೆಚ್ಚಿನ ಮಹತ್ವವಿದ್ದು ಮನೆಗಳ್ಳಲ್ಲಿರುವ ದನಕರುಗಳಿಗೆ ಸ್ನಾನ ಮಾಡಿಸಿ, ಕೊಂಬಿಗೆ ಸೇವಂತಿಗೆ, ಚಂಡು ಹೂಗಳಿಂದ ಅಲಂಕರಿಸಿ ಪೂಜಿಸುವುದು ವಾಡಿಕೆ. ಹಲವಾರು ಕಡೆ ಎತ್ತುಗಳ ಮೆರವಣಿಗೆಯನ್ನೂ ಮಾಡುವ ಸಂಪ್ರದಾಯವಿದೆ.
ಐದನೇ ದಿನ: ಸೋದರ ಬಿದಿಗೆ ಅಥವಾ ಬಾಯಿ ದೂಜ್
ಈ ದಿನ ಯಮ ತನ್ನ ತಂಗಿ ಯಮಿಯ ಮನೆಗೆ ಭೇಟಿ ಕೊಡುತ್ತಾನೆಂಬ ನಂಬಿಕೆ ಇರುವುದರಿಂದ, ಬಹುತೇಕ ಸಹೋದರರು ಎಲ್ಲೇ ಇದ್ದರೂ ಈ ದಿನ ತಮ್ಮ ಸಹೋದರಿಯರ ಮನೆಗೆ ಭೇಟಿ ನೀಡುತ್ತಾರೆ. ಹಾಗೆ ಮನೆಗೆ ಬಂದ ಸಹೋದರನಿಗೆ, ಸಹೋದರ ತಿಲಕವಿಟ್ಟು, ಸಿಹಿ ತಿನ್ನಿಸಿ, ಆರತಿ ಎತ್ತುವ ಸಂಪ್ರದಾಯವಿದೆ.ಇನ್ನು ಮಹಾರಾಷ್ಟ ಮತ್ತು ಅನೇಕ ಉತ್ತರ ಭಾರತದಲ್ಲಿ ಇದೇ ಹಬ್ಬವನ್ನು ಭಾಯಿ ದೂಜ್ ಎಂದು ಕರೆದು ಮೇಲೆ ತಿಳಿಸಿದಂತೆಯೇ ಸಹೋದರನನ್ನು ಸತ್ಕರಿಸುವ ಸಂಪ್ರದಾಯವಿದೆ.
ನಾವುಗಳು ಈ ಸಂಸ್ಕೃತಿಯ ಸೊಬಗನ್ನು ಅರಿತು ಶ್ರದ್ಧಾಭಕ್ತಿಯಿಂದ ಆಚರಿಸಿದರೆ ಈ ಸಂಭ್ರಮ ಸಡಗರದ ಹಬ್ಬಗಳು ಅರ್ಥಪೂರ್ಣವೆನಿಸುತ್ತವೆ ಮತ್ತು ಸಂಭ್ರಮದ, ಸಡಗರದ ವಾತಾವರಣ ಮನಗಳಲ್ಲಿ ಮತ್ತು ಮನೆಗಳಲ್ಲಿ ಧನಾತ್ಮಕ ತರಂಗಗಳನ್ನು ಹೆಚ್ಚಿಸುತ್ತವೆ.

ದೇಶ

ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್

Published

on

ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.

ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.

ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Continue Reading

ದೇಶ

ಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಮೂರು ವರ್ಷಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆಯ ವಿಚಾರಕ್ಕೆ ಕೊನೆಗೂ ಅಂತಿಮ ರೂಪ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯ ಬಳಿಕ ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಪ್ರಸ್ತುತ ಮುಖ್ಯಮಂತ್ರಿ Siddaramaiah ಅವರು ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆ ದಟ್ಟವಾಗಿದ್ದು, ಶುಕ್ರವಾರ ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯ ನಡುವೆಯೇ ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಉಪಹಾರ ಕೂಟ ಆಯೋಜಿಸಲಾಗಿದ್ದು, ಸಚಿವರು ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ಬಳಿಕ ಸಿದ್ದರಾಮಯ್ಯ ಬೆಂಗಳೂರಿಗೆ ಮರಳಿದ್ದರೆ, ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದಿದ್ದರು. ಆದರೆ ಇಂದಿನ ಸಭೆಗಾಗಿ ಡಿಕೆಶಿ ಹಾಗೂ ಅವರ ಆಪ್ತರು ಬೆಳಗ್ಗೆಯೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಹೈಕಮಾಂಡ್ ಅವರು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಮಹತ್ವದ ಜವಾಬ್ದಾರಿ ನೀಡುವ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಹೊಸ ರಾಜಕೀಯ ಸಮತೋಲನಕ್ಕಾಗಿ ವಿವಿಧ ಸಮುದಾಯಗಳ ನಾಲ್ವರು ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸೂತ್ರವೂ ಚರ್ಚೆಯಲ್ಲಿದೆ. ಸಿಎಂ ರೇಸ್‌ನಲ್ಲಿದ್ದ ಹಲವು ಪ್ರಮುಖ ನಾಯಕರ ಹೆಸರುಗಳು ಡಿಸಿಎಂ ಹುದ್ದೆಗೆ ಕೇಳಿಬರುತ್ತಿವೆ.

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಕುರಿತು ಆಂತರಿಕ ಒಪ್ಪಂದವಾಗಿತ್ತು ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಈಗ ಆ ಸೂತ್ರ ಜಾರಿಯಾಗುತ್ತಿರುವುದಾಗಿ ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.

Continue Reading

ಕ್ರೀಡೆ

“That’s a silly question!”: ಆರ್‌ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ

Published

on

ಧರ್ಮಶಾಲಾ: Gujarat Titans ತಂಡದ ಆಟಗಾರ Glenn Phillips, ಐಪಿಎಲ್ 2026ರ ಕ್ವಾಲಿಫೈಯರ್-1ರಲ್ಲಿ Royal Challengers Bengaluru ವಿರುದ್ಧ ಸೋತ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪಂದ್ಯದಲ್ಲಿ ಆಡಿದ 11 ಸದಸ್ಯರ ಬಳಗದಲ್ಲಿ ಫಿಲಿಪ್ಸ್ ಸ್ಥಾನ ಪಡೆದಿರಲಿಲ್ಲ. ಆದರೂ ಗುಜರಾತ್ ಟೈಟಾನ್ಸ್ ತಂಡ ಅವರನ್ನು ಸುದ್ದಿಗೋಷ್ಠಿಗೆ ಕಳುಹಿಸಿತ್ತು. ಈ ವೇಳೆ ಪತ್ರಕರ್ತರೊಬ್ಬರು, 255 ರನ್‌ಗಳ ಬೃಹತ್ ಗುರಿ ಬೆನ್ನಟ್ಟುವಾಗ ಜಿಟಿ ತಂಡ ಮಾನಸಿಕವಾಗಿ ಮೊದಲೇ ಸೋಲನ್ನು ಒಪ್ಪಿಕೊಂಡಿತ್ತೇ ಎಂದು ಪ್ರಶ್ನಿಸಿದರು.

ಈ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ಲೆನ್ ಫಿಲಿಪ್ಸ್, “That’s a silly question” ಎಂದು ಉತ್ತರಿಸಿದರು. ಯಾವುದೇ ತಂಡವೂ ಮೈದಾನಕ್ಕಿಳಿಯುವ ಮೊದಲು ಸೋಲನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

250ಕ್ಕೂ ಅಧಿಕ ರನ್‌ಗಳ ಗುರಿ ಬೆನ್ನಟ್ಟುವಾಗ ಸ್ಕೋರ್‌ಬೋರ್ಡ್ ಒತ್ತಡ ಹೆಚ್ಚಾಗಿರುತ್ತದೆ. Punjab Kings ತಂಡದಂತಹ ಕೆಲವೇ ತಂಡಗಳು ಇಂತಹ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿವೆ. ಆದರೆ ಅದು ಸುಲಭದ ಕೆಲಸವಲ್ಲ ಎಂದು ಫಿಲಿಪ್ಸ್ ತಂಡದ ಪರವಾಗಿ ಮಾತನಾಡಿದರು.

ಪಂದ್ಯದಲ್ಲಿ ಆಡದಿದ್ದರೂ ತಂಡದ ಆಂತರಿಕ ತಂತ್ರಗಳು ಮತ್ತು ನಿರ್ಧಾರಗಳ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಫಿಲಿಪ್ಸ್ ಸ್ವಲ್ಪ ತಡಕಾಡಿದಂತೂ ಕಂಡುಬಂದಿತು. “ನಾವು ಈವರೆಗೆ ಉತ್ತಮ ಕ್ರಿಕೆಟ್ ಆಡಿದ್ದೇವೆ. ಮುಂದಿನ ಪಂದ್ಯಕ್ಕೆ ತಂಡ ಸಿದ್ಧವಾಗಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ” ಎಂದರು.

ಇದೇ ವೇಳೆ Rajat Patidar ಅವರ ಬ್ಯಾಟಿಂಗ್‌ನ್ನು ಫಿಲಿಪ್ಸ್ ಮುಕ್ತಕಂಠದಿಂದ ಶ್ಲಾಘಿಸಿದರು. “ಪಾಟೀದಾರ್ ಯಾವುದೇ ಭಯವಿಲ್ಲದೆ ಆಡುವ ಅದ್ಭುತ ಬ್ಯಾಟರ್. ಪಂದ್ಯದ ಪರಿಸ್ಥಿತಿ ಏನೇ ಇದ್ದರೂ ತಮ್ಮ ನೈಸರ್ಗಿಕ ಆಕ್ರಮಣಕಾರಿ ಶೈಲಿಗೆ ಬದ್ಧರಾಗಿರುತ್ತಾರೆ” ಎಂದು ಹೇಳಿದರು.

ಕ್ವಾಲಿಫೈಯರ್-1ರಲ್ಲಿ ಸೋತಿದ್ದರೂ ಗುಜರಾತ್ ಟೈಟಾನ್ಸ್‌ಗೆ ಇನ್ನೂ ಫೈನಲ್ ಪ್ರವೇಶಿಸುವ ಅವಕಾಶ ಉಳಿದಿದೆ. ಈಗ ಕ್ವಾಲಿಫೈಯರ್-2ರಲ್ಲಿ Sunrisers Hyderabad ಮತ್ತು Rajasthan Royals ನಡುವಿನ ಪಂದ್ಯದ ವಿಜೇತ ತಂಡವನ್ನು ಜಿಟಿ ಎದುರಿಸಲಿದೆ.

Continue Reading

Trending