ಬೆಂಗಳೂರು
ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ- ಬಿ ವೈ ನಿಜಯೇಂದ್ರ ಟೀಕೆ

ಬೆಂಗಳೂರು: ವಕ್ಫ್ ಕಾಯಿದೆಯಿಂದ ಹಲವಾರು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ, ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು,
ಈ ಬಗ್ಗೆ ಮಾತನಾಡಿದ ಅವರು ತಲತಲಾಂತರದಿಂದ ಇದ್ದ ಪಿತ್ತಾರ್ಜಿತ ಆಸ್ತಿಯನ್ನು ರಾತೋರಾತ್ರಿ ವಕ್ಫ್ ಪ್ರಾಪರ್ಟಿ ಎಂದು ಘೋಷಿಸಿದರೆ, ರೈತರು ಬೀದಿಗೆ ಬಂದು ಏನು ಮಾಡಬೇಕು, ಈ ಬಗ್ಗೆ ಸುಮ್ಮನೆ ಕೂರುವ ಮಾತೇ ಇಲ್ಲ, ಈ ಬಗ್ಗೆ ಹೋರಾಟ ಮಾಡುತ್ತೇವೆ, ರೈತರಿಗೆ ಧ್ವನಿಗೂಡಿಸುತ್ತೇವೆ ಎಂದರು.
ರಾಜ್ಯ ಸರ್ಕಾರದಿಂದಾಗುತ್ತಿರುವ ಅನ್ಯಾಯವನ್ನು ಖಂಡಿಸಿ ಬಿಜೆಪಿ ಧ್ವನಿ ಎತ್ತಿದರೆ, ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಾರೆ, ಅದೇ ಸುಮ್ಮನಿದರೆ ರೈತರ ಜಮೀನನ್ನು ತಿಂದು ತೆಗುತ್ತಾರೆ ಎಂದು ಟೀಕಿಸಿದರು,
ಈ ರೀತಿ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ,ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತ ಬರುತ್ತಿದೆ, ಅದೇನಿಟ್ಟಿನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಆರೋಪಿಸಿದರು,
ಮಾಜಿ ಉಪ ಮುಖ್ಯಮಂತ್ರಿ ಮತ್ತು ಹಿರಿಯಾರಾದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ತಂಡ ಈಗಾಗಲೇ ಬಿಜಾಪುರ ತಲುಪಿದೆ, ಬಿಜಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ಕೊಟ್ಟು ರೈತರನ್ನು ಸಂಪರ್ಕಿಸಿ ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು,
ಬಿಜೆಪಿ ವಿಚಾರ ಸ್ಪಷ್ಟವಾಗಿದೆ, ರಾಜ್ಯ ಸರಕಾರ ರೈತರಿಗೆ ತೊಂದರೆ ಕೊಡುವ ಮಾಡುತ್ತಿದ್ದು, ಬಿಜೆಪಿ ರೈತರ ಪರ ಇದೆ, ನಾವು ಅವರ ಜೊತೆಯಲ್ಲಿದ್ದೇವೆ ರೈತರ ಸಮಸ್ಯೆ ಪರಿಹಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು,