Connect with us

ದೇಶ

ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಿಳಿಸಿ : ಸಚಿವ ರಾಮಲಿಂಗಾರೆಡ್ಡಿ

Published

on

ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಉಪು ಚುನಾವಣೆ ಕಾಂಗ್ರೆಸ್ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರಿಂದ ಕಾಂಗ್ರೆಸ್ ಅಭ್ಯರ್ಥಿಯಾದ ಸಿ..ಪಿ.ಯೋಗೇಶ್ವರ್ ರವರ ಪರ ಭರ್ಜರಿ ಪ್ರಚಾರ ನಡೆಸಿದರು,

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ಅನೇಕ ಜನಪ್ರಿಯ ಯೋಜನೆಗಳನ್ನು ಮತದಾರರು ಸದುಪಯೋಗಪಡಿಸಿಕೊಂಡಿದ್ದಾರೆ ಹಾಗೂ ರಾಮನಗರ ಜಿಲ್ಲೆ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಅನೇಕ ಯೋಜನೆಗಳನ್ನು ಜಾರಿಗೆ ತರಲು ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮಿಸುತ್ತಿದ್ದಾರೆ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಸಹಕರಿಸಿದ್ದಾರೆ ಎಂದು ಹೇಳಿದರು,

ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಹೆಚ್ಚಿನ ಸಾಲವನ್ನು ಹೊರಿಸಿದೆ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ ಬಿಜೆಪಿ ದುರಾಡಳಿತದಿಂದ ನಿರುದ್ಯೋಗ ಹೆಚ್ಚಾಗುತ್ತಿದೆ ಬಿಜೆಪಿ ಅಧಿಕಾರದಲ್ಲಿ ಮುಂದುವರೆದರೆ ದೇಶವು ಸಾಲದ ಸುಳಿಯಲ್ಲಿ ಸಿಲುಕಿ ಜನರು ಸಂಕಷ್ಟಕ್ಕೆ ಈಡಾಗುತ್ತಾರೆ, ಮತದಾರರು ಈ ಬಾರಿ ಸೂಕ್ತ ನಿರ್ಧಾರ ಕೈಗೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು,

ಕಾಂಗ್ರೆಸ್ ಪಕ್ಷ ಯಾವಾಗಲೂ ಜನರ ಪರ ಇರುವಂತಹ ಪಕ್ಷ ಅದರಲ್ಲೂ ವಿಶೇಷವಾಗಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಸಿ.ಪಿ ಯೋಗೇಶ್ವರ್ ಅವರು ಸ್ಥಳೀಯ ಮಟ್ಟದಲ್ಲಿ ಅನೇಕ ಅಭಿವೃದ್ಧಿಗಳನ್ನ ಮಾಡಿ ನೀರಾವರಿ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಿದ್ದಾರೆ ಈ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಸಹ ನೀಡಿದೆ ಆದ್ದರಿಂದ ನಿಮ್ಮ ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕೆಂದು ಸ್ಥಳೀಯ ಮತದಾರರಲ್ಲಿ ಮನವಿ ಮಾಡಿಕೊಂಡರು,
ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯನ್ನು ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಿಳಿಸಿ ಮತ ಪಡೆಯಲು ಎಲ್ಲರೂ ಹೆಚ್ಚಿನ ಆಸಕ್ತಿ ವಹಿಸಿ ಶ್ರಮಿಸಬೇಕೆಂದು ತಿಳಿಸಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರಾಮಗಳಾದ ಎಸ್.ಎಮ್. ದೊಡ್ಡಿ, ಮಳೂರು ಪಟ್ಟಣ್ಣ, ಸುಳ್ಳೇರಿ, ಕುಕ್ಕೂರು, ಕುಕ್ಕೂರುದೊಡ್ಡಿ, ಮಾರ್ಚನಹಳ್ಳಿ, ತಿಟ್ಟಮಾರನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಿದರು.

ಮಾಜಿ ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್, ಕೆಪಿಸಿಸಿ ಉಪಾಧ್ಯಕ್ಷರಾದ ಕೃಷ್ಣಂ ರಾಜು, ಬಿಎಂಐಸಿ ಅಧ್ಯಕ್ಷರಾದ ರಘುನಂದನ್ ರಾಮಣ್ಣ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್, ಬಿಬಿಎಂಪಿ ಮಾಜಿ ಸದಸ್ಯರಾದ ನಾಗರಾಜು, ಜಿ ಮಂಜುನಾಥ್ ರವರು ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಎ.
ಸಲೀಂ,ಎ.ಆನಂದ್, ಚಂದ್ರಶೇಖರ್ ಹಾಗೂ ಸ್ಥಳೀಯ ಮುಖಂಡರು ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದರು,

ಅಪರಾಧ

ಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ

Published

on

ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸೌಧ ಲೇಔಟ್‌ ಸಮೀಪದ ಯರಪ್ಪನಹಳ್ಳಿ ಗ್ರಾಮದ ಕ್ವಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್‌ಗಳನ್ನು ಪತ್ತೆಹಚ್ಚಿದ್ದಾರೆ.

ಪೊಲೀಸರ ಪ್ರಕಾರ, ವೆಂಕಟೇಶ್ವರ ಗ್ರಾನೈಟ್ಸ್ ಕ್ರಶರ್‌ಗೆ ಸೇರಿದ ಕ್ವಾರಿಯಲ್ಲಿ ಕಲ್ಲುಬಂಡೆಗಳನ್ನು ಸ್ಫೋಟಿಸಲು ಬಳಸುವ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೊನೇಟರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಆವಲಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿ ಈ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ವಾರಿ ಮಾಲೀಕರಾದ ವೆಂಕಟರಮಣರೆಡ್ಡಿ ಹಾಗೂ ಉಸ್ತುವಾರಿ ಲೋಕೇಶ್‌ರೆಡ್ಡಿ ಅವರು ಸರ್ಕಾರದಿಂದ ಅಗತ್ಯವಾದ ಪರವಾನಗಿ ಪಡೆಯದೇ ಈ ಸ್ಪೋಟಕಗಳನ್ನು ಸಂಗ್ರಹಿಸಿ ಬಳಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಜೊತೆಗೆ, ಸುರಕ್ಷತಾ ನಿಯಮಗಳನ್ನು ಪಾಲಿಸದೇ ರಾತ್ರಿ ವೇಳೆ ಕಲ್ಲುಬಂಡೆಗಳನ್ನು ಸ್ಫೋಟಿಸುತ್ತಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಶರ್ ಮಾಲೀಕರು, ಉಸ್ತುವಾರಿ ಹಾಗೂ ಕ್ವಾರಿಯಲ್ಲಿ ಸ್ಫೋಟಕ ಬಳಕೆಯಲ್ಲಿ ತೊಡಗಿದ್ದ ವಿಕಾಸ್, ತೋಹಿದ್ ಮತ್ತು ಸಂದೀಪ್ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ಸ್ಫೋಟಕಗಳ ಕಾಯಿದೆ 1884 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಸ್ಪೋಟಕಗಳನ್ನು ಕೇವಲ ಕಲ್ಲುಬಂಡೆ ಸ್ಫೋಟಕ್ಕೆ ಮಾತ್ರ ಬಳಸಲಾಗಿತ್ತೇ ಅಥವಾ ಬೇರೆ ದುರುದ್ದೇಶವಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ, ವೈಟ್‌ಫೀಲ್ಡ್ ಉಪ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ಥಳೀಯ ಪ್ರದೇಶದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.

Continue Reading

ದೇಶ

ಅಣ್ವಸ್ತ್ರ ಶಕ್ತಿಯಲ್ಲಿ ಭಾರತ ಹೊಸ ಮೈಲಿಗಲ್ಲು? ಅಂತಾರಾಷ್ಟ್ರೀಯ ವರದಿ ಬಹಿರಂಗ

Published

on

ನವದೆಹಲಿ: ಜಾಗತಿಕ ಅಣ್ವಸ್ತ್ರ ಶಕ್ತಿಯ ಕುರಿತ ಹೊಸ ವರದಿಯೊಂದು ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಸ್ಟಾಕ್‌ಹೋಮ್ ಅಂತಾರಾಷ್ಟ್ರೀಯ ಶಾಂತಿ ಸಂಶೋಧನಾ ಸಂಸ್ಥೆ (Stockholm International Peace Research Institute) ನೀಡಿರುವ ಅಂದಾಜಿನ ಪ್ರಕಾರ, ಭಾರತ ಇದೇ ಮೊದಲ ಬಾರಿ 12 ನಿಯೋಜಿತ ಪರಮಾಣು ಸಿಡಿತಲೆಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ, ಭಾರತ ಒಟ್ಟು ಪರಮಾಣು ಸಿಡಿತಲೆಗಳ ಸಂಖ್ಯೆಯನ್ನು ನಿರ್ವಹಿಸುತ್ತಿದ್ದು, ಅದರಲ್ಲಿ 12 ಸಿಡಿತಲೆಗಳನ್ನು ಈಗಾಗಲೇ ನಿಯೋಜಿತ (deployed) ಸ್ಥಿತಿಯಲ್ಲಿ ಇರಿಸಿದೆ ಎಂದು ಹೇಳಲಾಗಿದೆ. ಈ ನಿಯೋಜಿತ ಸಿಡಿತಲೆಗಳು ತಕ್ಷಣವೇ ಶತ್ರುಗಳ ಮೇಲೆ ದಾಳಿ ಮಾಡಲು ಸಿದ್ಧ ಸ್ಥಿತಿಯಲ್ಲಿ ಇರುತ್ತವೆ ಎಂಬುದು ವರದಿಯ ಪ್ರಮುಖ ಅಂಶವಾಗಿದೆ.

ಇದಕ್ಕೆ ವಿರುದ್ಧವಾಗಿ ಚೀನಾದ ಅಣ್ವಸ್ತ್ರ ಶಕ್ತಿ ಕೂಡ ವೇಗವಾಗಿ ವೃದ್ಧಿಯಾಗಿದೆ. 2024ರಲ್ಲಿ ಚೀನಾ ಸುಮಾರು 24 ಸಿಡಿತಲೆಗಳನ್ನು ಹೊಂದಿದ್ದರೆ, ಈಗ ಆ ಸಂಖ್ಯೆ 34ಕ್ಕೆ ಏರಿಕೆಯಾಗಿದೆ ಎಂದು ವರದಿ ಸೂಚಿಸುತ್ತದೆ. ಈ ಬೆಳವಣಿಗೆ ಜಾಗತಿಕ ಭದ್ರತಾ ಸಮತೋಲನದ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

ವರದಿಯಲ್ಲಿ ಮತ್ತೊಂದು ಪ್ರಮುಖ ಅಂಶವೆಂದರೆ ಸಂಗ್ರಹಿತ (stored) ಅಣ್ವಸ್ತ್ರಗಳು ಮತ್ತು ನಿಯೋಜಿತ (deployed) ಅಣ್ವಸ್ತ್ರಗಳ ನಡುವಿನ ವ್ಯತ್ಯಾಸ. ಸಂಗ್ರಹಿತ ಶಸ್ತ್ರಾಸ್ತ್ರಗಳನ್ನು ತಕ್ಷಣ ಬಳಕೆ ಮಾಡಲು ಸಾಧ್ಯವಿಲ್ಲ; ಅವುಗಳನ್ನು ನಿರ್ದಿಷ್ಟ ವ್ಯವಸ್ಥೆಗೆ ತರಬೇಕಾಗುತ್ತದೆ. ಆದರೆ ನಿಯೋಜಿತ ಸಿಡಿತಲೆಗಳು ಈಗಾಗಲೇ ಕ್ಷಿಪಣಿ ವ್ಯವಸ್ಥೆಯಲ್ಲಿ ಅಳವಡಿಸಲ್ಪಟ್ಟಿದ್ದು, ತಕ್ಷಣ ಬಳಕೆ ಸಾಧ್ಯವಾಗುವ ಸ್ಥಿತಿಯಲ್ಲಿ ಇರುತ್ತವೆ.

ಈ ಹಿನ್ನೆಲೆಯಲ್ಲಿ, ಭಾರತವು ತನ್ನ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುತ್ತಿದೆ ಎಂಬುದಾಗಿ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದೇ ಸಮಯದಲ್ಲಿ ಜಾಗತಿಕ ಶಾಂತಿ ಮತ್ತು ಅಣ್ವಸ್ತ್ರ ನಿಯಂತ್ರಣದ ಕುರಿತು ಚರ್ಚೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯೂ ಇದೆ.

ಈ ವರದಿ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ದಕ್ಷಿಣ ಏಷ್ಯಾದ ಭದ್ರತಾ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

ಅಪರಾಧ

ಬಿಟ್‌ಕಾಯಿನ್ ಹಗರಣ: ನಲಪಾಡ್‌ಗೆ ಎಸ್‌ಐಟಿ ಚಾರ್ಜ್‌ಶೀಟ್ ಶಾಕ್

Published

on

ಬೆಂಗಳೂರು: 6 ವರ್ಷಗಳ ಹಿಂದಿನ ಬಿಟ್‌ಕಾಯಿನ್ ಹಗರಣವು (Karnataka Bitcoin Scam) ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ Mohammed Nalapad ಅವರಿಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.

ವಿಶೇಷ ತನಿಖಾ ದಳ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಲಪಾಡ್ ಕೂಡ ಈ ಹಗರಣದಲ್ಲಿ ಪಾಲುದಾರರಾಗಿದ್ದು ಹಣದ ಲಾಭ ಪಡೆದಿದ್ದಾರೆ ಎಂಬುದನ್ನು ಉಲ್ಲೇಖಿಸಿದೆ. ಹಗರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಹ್ಯಾಕರ್ ಶ್ರೀಕೃಷ್ಣ @ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರೊಂದಿಗೆ ನಲಪಾಡ್ ನಂಟು ಹೊಂದಿದ್ದರೆಂಬ ಅಂಶವೂ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ.

ಎಸ್‌ಐಟಿ ಆರೋಪಗಳ ಪ್ರಕಾರ, ಬಿಟ್‌ಕಾಯಿನ್ ನಗದೀಕರಣಕ್ಕಾಗಿ ನಲಪಾಡ್ ಅವರು ಹ್ಯಾಕರ್ ಶ್ರೀಕಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ಮುಂಬೈ ಮೂಲದ ಸ್ನೇಹಿತ ಹಾಗೂ ಖಂಡೇವಾಲ ಮೂಲಕ ಹವಾಲಾ ಜಾಲದ ಮೂಲಕ ಹಣವನ್ನು ನಗದೀಕರಿಸಿರುವ ಆರೋಪವೂ ಇದೆ. ಈ ಪ್ರಕ್ರಿಯೆಯಲ್ಲಿ ಕಮಿಷನ್ ರೂಪದಲ್ಲಿ ನಲಪಾಡ್‌ಗೂ ಹಣ ಸಂದಾಯವಾಗಿರುವುದಾಗಿ ತನಿಖಾ ವರದಿಯಲ್ಲಿ ಹೇಳಲಾಗಿದೆ.

ಇದೀಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಸುಮಾರು 16 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಈ ನಡುವೆ, Enforcement Directorate ಹಾಗೂ Special Investigation Team Karnataka ತನಿಖೆ ಮುಂದುವರೆಸುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

Continue Reading

Trending